ಹಾಸನ ಜಿಲ್ಲೆಯಲ್ಲಿ ವ್ಯಕ್ತಿಯೋರ್ವ ಅಮಾನವೀಯವಾಗಿ ನಡೆದುಕೊಂಡಿದ್ದಾನೆ. ಮಕ್ಕಳಿದ್ದ ಆಟೋವನ್ನು ನ್ಯೂಟ್ರಲ್ ಮಾಡಿ ಯುವಕ ಹಿಂದೆ ತಳ್ಳಿದ ಘಟನೆ ಹಾಸನ ಜಿಲ್ಲೆ ಬೇಲೂರು ಪಟ್ಟಣದ ನೆಹರು ನಗರದಲ್ಲಿ ನಡೆದಿದೆ.
ಕೂಡಲೇ ಓಡಿ ಬಂದ ಚಾಲಕ ಆಟೋವನ್ನು ಹಿಡಿದು ನಿಲ್ಲಿಸಿದ್ದು, ದುರ್ಘಟನೆ ತಪ್ಪಿದೆ. ಶುಕ್ರವಾರ ಬೆಳಗ್ಗೆ ಅಂಗಡಿಯಲ್ಲಿ ದಿನಸಿ ಖರೀದಿಸಲು ಚಾಲಕ ಆಟೋವನ್ನು ರಸ್ತೆ ಬದಿ ನಿಲ್ಲಿಸಿ ತೆರಳಿದ್ದರು. ಆಟೋದಲ್ಲಿ ಮಕ್ಕಳಿದ್ದರು. ರಸ್ತೆ ಬದಿಯ ಪಾರ್ಕಿಂಗ್ ಸ್ಥಳದಲ್ಲಿ ಯುವಕ ಬೈಕ್ ನಿಲ್ಲಿಸಿದ್ದನು. ಬೈಕ್ ಹಿಂದೆ ಆಟೋ ಪಾರ್ಕ್ ಮಾಡಲಾಗಿತ್ತು.
ಇದರಿಂದ ಬೈಕ್ ತೆಗೆಯಲಾಗದೆ ವ್ಯಕ್ತಿ ಪರದಾಡಿದ್ದಾನೆ. ಆಗ, ಸಿಟ್ಟಿನಿಂದ ಯುವಕ ಆಟೋ ಬಳಿ ಹೋಗಿ ಮಕ್ಕಳನ್ನು ನೋಡಿಯೂ ನ್ಯೂಟ್ರಲ್ ಮಾಡಿ ಹಿಂದೆ ತಳ್ಳಿದ್ದಾನೆ.
ಆಟೋ ವೇಗವಾಗಿ ಹಿಂದೆ ಚಲಿಸೋದನ್ನು ಕಂಡು ಸ್ಥಳದಲ್ಲಿದ್ದವರು ಗಾಬರಿಯಲ್ಲಿ ಕೂಗಾಡಿದ್ದು, ಕೂಡಲೆ ಸ್ಥಳಕ್ಕೆ ಬಂದ ಚಾಲಕ ಆಟೋ ನಿಲ್ಲಿಸಿದ್ದಾನೆ. ಘಟನೆಯ ಸಂಪೂರ್ಣ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು ವೀಡಿಯೋ ಪರಿಶೀಲನೆ ನಡೆಸಿದ ಪೊಲೀಸರು ಯುವಕನನ್ನು ಕರೆಸಿ ವಾರ್ನಿಂಗ್ ನೀಡಿ ಕಳುಹಿಸಿದ್ದಾರೆ.
ವಾಹನ ಸವಾರರು ವಾಹನ ಪಾರ್ಕಿಂಗ್ ವೇಳೆ ನಿಯಮ ಪಾಲನೆ ಮಾಡುವಂತೆಯೂ ಎಚ್ಚರಿಸಿದ್ದಾರೆ. ಬೇಲೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ದೊಡ್ಡಬಳ್ಳಾಪುರ ನಗರದ ಕೊಂಗಾಡಿಯಪ್ಪ ಮುಖ್ಯರಸ್ತೆ ತ್ಯಾಗರಾಜ ನಗರ ಆನೆಬಯಲು ಡೌನಿನ ರಸ್ತೆಯಲ್ಲಿ ಕಳೆದ 15 ದಿನಗಳಿಂದ ಒಳಚರಂಡಿಯ ಮ್ಯಾನ್ ಹೋಲ್…
ಶಿಕ್ಷಣ ಕ್ಷೇತ್ರದ ಬಗ್ಗೆ ಪರೀಕ್ಷೆಗಳ ಫಲಿತಾಂಶಗಳು ಪ್ರಕಟವಾಗುತ್ತಿರುವ ಈ ಸಂದರ್ಭದಲ್ಲಿ....... ಶಿಕ್ಷಣ... ಜ್ಞಾನಾರ್ಜನೆಗಾಗಿಯೇ, ಉದ್ಯೋಗಕ್ಕಾಗಿಯೇ, ಬದುಕಿಗಾಗಿಯೇ, ಸಾಧನೆಗಾಗಿಯೇ, ಪೋಷಕರ ಒತ್ತಾಯಕ್ಕಾಗಿಯೇ,…
ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಅನುಮಾನಾಸ್ಪದ ರೀತಿಯಲ್ಲಿ ಕಾರಿನಲ್ಲೇ ಮಹಿಳೆ ಸುಟ್ಟುಭಸ್ಮವಾಗಿರುವ ಘಟನೆ ಇಂದು ಮಧ್ಯಾಹ್ನ ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ…
ದೊಡ್ಡಬಳ್ಳಾಪುರ: ಶ್ರೀ ತೊಗಟವೀರ ಕ್ಷತ್ರಿಯ ಸಮಾಜ ಸೇವಾ ಸಂಘದ ವತಿಯಿಂದ ನಗರದ ಶ್ರೀ ಕೊಂಗಾಡಿಯಪ್ಪ ಕಾಲೇಜು ರಸ್ತೆಯಲ್ಲಿರುವ ಶ್ರೀ ಅಭಯ…
ಶ್ರೀ ರಾಮಾಂಜನೇಯ ಸ್ವಾಮಿ ಸೇವಾ ಸಮಿತಿ ಅಭಿವೃದ್ಧಿ ಟ್ರಸ್ಟ್ ವತಿಯಿಂದ ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಹೋಬಳಿಯ ಗಂಗಸಂದ್ರ ಗ್ರಾಮದಲ್ಲಿ ಮೇ.6,…
ಸಿಗ್ಮಂಡ್ ಫ್ರಾಯ್ಡ್ ಎಂಬುವವನನ್ನು ಪ್ರಖ್ಯಾತ ಮನಶಾಸ್ತ್ರಜ್ಞ ಎಂದು ಕರೆಯಲಾಗುತ್ತದೆ. ಪಾಶ್ಚಾತ್ಯ ಸಂಸ್ಕೃತಿಯ ಹಿನ್ನಲೆಯ ಆತನ ವಿಚಾರಗಳು ವಿಶ್ವವ್ಯಾಪಿ ಮನ್ನಣೆ ಪಡೆದಿವೆ.....…