ಹಾಸನ ಜಿಲ್ಲೆಯಲ್ಲಿ ವ್ಯಕ್ತಿಯೋರ್ವ ಅಮಾನವೀಯವಾಗಿ ನಡೆದುಕೊಂಡಿದ್ದಾನೆ. ಮಕ್ಕಳಿದ್ದ ಆಟೋವನ್ನು ನ್ಯೂಟ್ರಲ್ ಮಾಡಿ ಯುವಕ ಹಿಂದೆ ತಳ್ಳಿದ ಘಟನೆ ಹಾಸನ ಜಿಲ್ಲೆ ಬೇಲೂರು ಪಟ್ಟಣದ ನೆಹರು ನಗರದಲ್ಲಿ ನಡೆದಿದೆ.
ಕೂಡಲೇ ಓಡಿ ಬಂದ ಚಾಲಕ ಆಟೋವನ್ನು ಹಿಡಿದು ನಿಲ್ಲಿಸಿದ್ದು, ದುರ್ಘಟನೆ ತಪ್ಪಿದೆ. ಶುಕ್ರವಾರ ಬೆಳಗ್ಗೆ ಅಂಗಡಿಯಲ್ಲಿ ದಿನಸಿ ಖರೀದಿಸಲು ಚಾಲಕ ಆಟೋವನ್ನು ರಸ್ತೆ ಬದಿ ನಿಲ್ಲಿಸಿ ತೆರಳಿದ್ದರು. ಆಟೋದಲ್ಲಿ ಮಕ್ಕಳಿದ್ದರು. ರಸ್ತೆ ಬದಿಯ ಪಾರ್ಕಿಂಗ್ ಸ್ಥಳದಲ್ಲಿ ಯುವಕ ಬೈಕ್ ನಿಲ್ಲಿಸಿದ್ದನು. ಬೈಕ್ ಹಿಂದೆ ಆಟೋ ಪಾರ್ಕ್ ಮಾಡಲಾಗಿತ್ತು.
ಇದರಿಂದ ಬೈಕ್ ತೆಗೆಯಲಾಗದೆ ವ್ಯಕ್ತಿ ಪರದಾಡಿದ್ದಾನೆ. ಆಗ, ಸಿಟ್ಟಿನಿಂದ ಯುವಕ ಆಟೋ ಬಳಿ ಹೋಗಿ ಮಕ್ಕಳನ್ನು ನೋಡಿಯೂ ನ್ಯೂಟ್ರಲ್ ಮಾಡಿ ಹಿಂದೆ ತಳ್ಳಿದ್ದಾನೆ.
ಆಟೋ ವೇಗವಾಗಿ ಹಿಂದೆ ಚಲಿಸೋದನ್ನು ಕಂಡು ಸ್ಥಳದಲ್ಲಿದ್ದವರು ಗಾಬರಿಯಲ್ಲಿ ಕೂಗಾಡಿದ್ದು, ಕೂಡಲೆ ಸ್ಥಳಕ್ಕೆ ಬಂದ ಚಾಲಕ ಆಟೋ ನಿಲ್ಲಿಸಿದ್ದಾನೆ. ಘಟನೆಯ ಸಂಪೂರ್ಣ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು ವೀಡಿಯೋ ಪರಿಶೀಲನೆ ನಡೆಸಿದ ಪೊಲೀಸರು ಯುವಕನನ್ನು ಕರೆಸಿ ವಾರ್ನಿಂಗ್ ನೀಡಿ ಕಳುಹಿಸಿದ್ದಾರೆ.
ವಾಹನ ಸವಾರರು ವಾಹನ ಪಾರ್ಕಿಂಗ್ ವೇಳೆ ನಿಯಮ ಪಾಲನೆ ಮಾಡುವಂತೆಯೂ ಎಚ್ಚರಿಸಿದ್ದಾರೆ. ಬೇಲೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಬೆಂಗಳೂರು ಗ್ರಾಮಾಂತರ: ಬೂತ್ ಮಟ್ಟದ ಅಧಿಕಾರಿ (ಬಿಎಲ್ಒ) ಕೆಲಸವನ್ನು ಅಂಗನವಾಡಿ ನೌಕರರಿಗೆ ನೀಡುವುದನ್ನು ತಕ್ಷಣವೇ ಸ್ಥಗಿತಗೊಳಿಸಬೇಕು ಎಂದು ರಾಜ್ಯ ಅಂಗನವಾಡಿ…
ಟ್ರಂಪ್ ಕಾರ್ಡ್....... ವಿಶ್ವದ ಕ್ರೀಡಾ ಸಂಸ್ಕೃತಿಯ ಘನತೆಗೆ ಚ್ಯುತಿ ತಂದ ಡೊನಾಲ್ಡ್ ಟ್ರಂಪ್... ವಿಶ್ವದ ಕ್ರೀಡಾ ಸಂಸ್ಕೃತಿಗೆ ಅವಮಾನ ಮಾಡಿದ,…
ದೊಡ್ಡಬಳ್ಳಾಪುರ: ತಾಲೂಕಿನ ಚಿಕ್ಕಮಧುರೆ ಗ್ರಾಮದ ಶನಿಮಹಾತ್ಮ ದೇವಾಲಯದ ಬಳಿ ಕಳೆದ ರಾತ್ರಿ ಸಂಭವಿಸಿದ ಕ್ಯಾಂಟರ್ ಅಪಘಾತದಲ್ಲಿ ರಸ್ತೆಬದಿಯ ಮೂರು-ನಾಲ್ಕು ಅಂಗಡಿಗಳು…
ಹಾಲಿನ ಖರೀದಿ ದರವನ್ನು ಪ್ರತಿ ಲೀಟರ್ಗೆ ರೂ. 10 ಹೆಚ್ಚಿಸಬೇಕು ಹಾಗೂ ಹಾಲು ಉತ್ಪಾದಕರಿಗೆ ನೀಡುತ್ತಿರುವ ಪ್ರೋತ್ಸಾಹಧನವನ್ನು ಹೆಚ್ಚಿಸಬೇಕು ಎಂದು…
ದೊಡ್ಡಬಳ್ಳಾಪುರ: ತಾಲೂಕಿನ ಅನಿಬೆಸೆಂಟ್ ಪಾರ್ಕ್ನಲ್ಲಿರುವ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿ ಕೇಂದ್ರವನ್ನು ಉನ್ನತೀಕರಿಸುವ ಕಾಮಗಾರಿಗೆ ಶಾಸಕ ಧೀರಜ್ ಮುನಿರಾಜ್…
ದೇವನಹಳ್ಳಿ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಕೋಡಗುರ್ಕಿ ಗ್ರಾಮದ ಸಮೀಪದ ಪ್ರಖ್ಯಾತ ಪ್ರೆಸ್ಟೀಜ್ ಗಾಲ್ಫ್ಶೈರ್ ರೆಸಾರ್ಟ್ ವಿಲ್ಲಾಸ್ ಆವರಣದಲ್ಲಿ…