ಹಾಸನ ಜಿಲ್ಲೆಯಲ್ಲಿ ವ್ಯಕ್ತಿಯೋರ್ವ ಅಮಾನವೀಯವಾಗಿ ನಡೆದುಕೊಂಡಿದ್ದಾನೆ. ಮಕ್ಕಳಿದ್ದ ಆಟೋವನ್ನು ನ್ಯೂಟ್ರಲ್ ಮಾಡಿ ಯುವಕ ಹಿಂದೆ ತಳ್ಳಿದ ಘಟನೆ ಹಾಸನ ಜಿಲ್ಲೆ ಬೇಲೂರು ಪಟ್ಟಣದ ನೆಹರು ನಗರದಲ್ಲಿ ನಡೆದಿದೆ.
ಕೂಡಲೇ ಓಡಿ ಬಂದ ಚಾಲಕ ಆಟೋವನ್ನು ಹಿಡಿದು ನಿಲ್ಲಿಸಿದ್ದು, ದುರ್ಘಟನೆ ತಪ್ಪಿದೆ. ಶುಕ್ರವಾರ ಬೆಳಗ್ಗೆ ಅಂಗಡಿಯಲ್ಲಿ ದಿನಸಿ ಖರೀದಿಸಲು ಚಾಲಕ ಆಟೋವನ್ನು ರಸ್ತೆ ಬದಿ ನಿಲ್ಲಿಸಿ ತೆರಳಿದ್ದರು. ಆಟೋದಲ್ಲಿ ಮಕ್ಕಳಿದ್ದರು. ರಸ್ತೆ ಬದಿಯ ಪಾರ್ಕಿಂಗ್ ಸ್ಥಳದಲ್ಲಿ ಯುವಕ ಬೈಕ್ ನಿಲ್ಲಿಸಿದ್ದನು. ಬೈಕ್ ಹಿಂದೆ ಆಟೋ ಪಾರ್ಕ್ ಮಾಡಲಾಗಿತ್ತು.
ಇದರಿಂದ ಬೈಕ್ ತೆಗೆಯಲಾಗದೆ ವ್ಯಕ್ತಿ ಪರದಾಡಿದ್ದಾನೆ. ಆಗ, ಸಿಟ್ಟಿನಿಂದ ಯುವಕ ಆಟೋ ಬಳಿ ಹೋಗಿ ಮಕ್ಕಳನ್ನು ನೋಡಿಯೂ ನ್ಯೂಟ್ರಲ್ ಮಾಡಿ ಹಿಂದೆ ತಳ್ಳಿದ್ದಾನೆ.
ಆಟೋ ವೇಗವಾಗಿ ಹಿಂದೆ ಚಲಿಸೋದನ್ನು ಕಂಡು ಸ್ಥಳದಲ್ಲಿದ್ದವರು ಗಾಬರಿಯಲ್ಲಿ ಕೂಗಾಡಿದ್ದು, ಕೂಡಲೆ ಸ್ಥಳಕ್ಕೆ ಬಂದ ಚಾಲಕ ಆಟೋ ನಿಲ್ಲಿಸಿದ್ದಾನೆ. ಘಟನೆಯ ಸಂಪೂರ್ಣ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು ವೀಡಿಯೋ ಪರಿಶೀಲನೆ ನಡೆಸಿದ ಪೊಲೀಸರು ಯುವಕನನ್ನು ಕರೆಸಿ ವಾರ್ನಿಂಗ್ ನೀಡಿ ಕಳುಹಿಸಿದ್ದಾರೆ.
ವಾಹನ ಸವಾರರು ವಾಹನ ಪಾರ್ಕಿಂಗ್ ವೇಳೆ ನಿಯಮ ಪಾಲನೆ ಮಾಡುವಂತೆಯೂ ಎಚ್ಚರಿಸಿದ್ದಾರೆ. ಬೇಲೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…
ದೊಡ್ಡಬಳ್ಳಾಪುರ: ತೋಟದಲ್ಲಿ ಸುಗಂಧರಾಜ ಹೂ ಕೀಳುವಾಗ ಹಾವು ಕಚ್ಚಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಪಚ್ಚಾರ್ಲಳ್ಳಿ…
ಕರ್ನಾಟಕ ಕಂಡ ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಜನಪರ ಯೋಜನೆಗಳು, ಆಶೋತ್ತರಗಳಿಗೆ ನಾವೆಲ್ಲರೂ ಧ್ವನಿಯಾಗಿ ಮುಂದಿನ…
ಮನೆಯಲ್ಲಿ ಆಟವಾಡಿಕೊಂಡು ಕಾಲ ಕಳೆಯುತ್ತಿದ್ದ ಪುಟ್ಟ ಕಂದಮ್ಮಗಳನ್ನು ಪೋಷಕರು ಉತ್ತಮ ಶಿಕ್ಷಣ ದೊರೆಯಲಿ ಎಂಬ ಆಶಯದಿಂದ ಅಂಗನವಾಡಿ ಕೇಂದ್ರಕ್ಕೆ ಕಳುಹಿಸುತ್ತಿದ್ದಾರೆ.…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗ್ರಾಮ ಪಂಚಾಯಿತಿಗಳ ಚುನಾವಣೆಗೆ ಮೀಸಲಾತಿ ಪ್ರಕಟವಾಗುತ್ತಿದ್ದಂತೆ ಗ್ರಾಮೀಣ ಭಾಗದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಯಾವ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮೂಲಕ ಹಾದುಹೋಗುವ ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಗಳ ಸರ್ವೀಸ್ ರಸ್ತೆಗಳು ದಿನದಿಂದ ದಿನಕ್ಕೆ ಭಾರಿ…