ಮಕ್ಕಳು ತಮ್ಮ ಸೃಜನಶೀಲ ಪ್ರತಿಭೆ ಹೊರಹಾಕಲು ವಸ್ತುಪ್ರದರ್ಶನ ಅತ್ಯುತ್ತಮ ವೇದಿಕೆ: ಧನಂಜಯ

ಶಾಲೆಗಳಲ್ಲಿ ಏರ್ಪಡಿಸುವ ವಸ್ತು ಪ್ರದರ್ಶನಗಳು ಮಕ್ಕಳು ತಮ್ಮ ಸೃಜನಶೀಲ ಪ್ರತಿಭೆಯನ್ನು ಹೊರಹಾಕಲು ಒಳ್ಳೆಯ ವೇದಿಕೆಯಾಗಿರುತ್ತವೆ ಎಂದು ನಂದಿ ಹಿಲ್ ವೂ ಇಂಟರ್ ನ್ಯಾಷನಲ್ ಸ್ಕೂಲ್ ನ ಕಾರ್ಯದರ್ಶಿ ಧನಂಜಯ ಹೇಳಿದರು.

ತಾಲೂಕಿನ ತೂಬಗೆರೆ ಹೋಬಳಿಯ ದುರ್ಗೇನಹಳ್ಳಿ ಬಳಿ‌ ಇರುವ ನಂದಿ ಹಿಲ್ ವೂ ಇಂಟರ್ನ್ಯಾಷನಲ್ ಸ್ಕೂಲ್ ನಲ್ಲಿ ಏರ್ಪಡಿಸಲಾಗಿದ್ದ ಗಣಿತ, ಕಲಾ ಮತ್ತು ವಿಜ್ಞಾನ ವಸ್ತು ಪ್ರದರ್ಶನ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ವಿದ್ಯಾರ್ಥಿಗಳಲ್ಲಿರುವ ಪ್ರತಿಭೆಗಳನ್ನು ಗುರುತಿಸಿ ಪ್ರೋತ್ಸಾಹಿಸಲು ಈ ವಸ್ತುಪ್ರದರ್ಶನಗಳು ಸಹಕಾರಿಯಾಗಲಿವೆ ಎಂದರು.

ಪಠ್ಯದಲ್ಲಿರುವ ಬರುವ ವಿಷಯಗಳನ್ನು ಪ್ರಾಯೋಗಿಕವಾಗಿ ವಸ್ತು ಪ್ರದರ್ಶನದಲ್ಲಿ ತೋರಿಸಬಹುದು. ಮಕ್ಕಳು ವಸ್ತು ಪ್ರದರ್ಶನದಲ್ಲಿ ಉತ್ಸುಹಕರಾಗಿ ಪಾಲ್ಗೊಳ್ಳುವುದರಿಂದ ಪಠ್ಯದಲ್ಲಿರುವ ವಿಷಯಗಳು ಚೆನ್ನಾಗಿ ಮನದಟ್ಟಾಗುತ್ತವೆ ಎಂದರು.

ಶಾಲೆಯ ಎಲ್.ಕೆ.ಜಿ ವಿದ್ಯಾರ್ಥಿಗಳಿಂದ 8ನೇ ತಗತಿಯ ಮಕ್ಕಳು ಸುತ್ತಾಮುತ್ತ ಸಿಗುವ ಕಚ್ಛಾ ವಸ್ತುಗಳನ್ನ ಬಳಸಿ ತಮ್ಮ ಪುಟ್ಟ ಪುಟ್ಟ ಕೈಗಳಿಂದ ಗಣಿತ, ಕಲಾ ಮತ್ತು ವಿಜ್ಞಾನ ಮಾದರಿಗಳನ್ನು ತಯಾರಿಸಿ ವಸ್ತು ಪ್ರದರ್ಶನ ಕಾರ್ಯಕ್ರಮದಲ್ಲಿ ಪಾಲ್ಗೊಂಡಿರುವುದು ಸಂತಸದ ಸಂಗತಿ ಎಂದು ಶಾಲೆಯ ಪ್ರಾಂಶುಪಾಲರಾದ ಭಾವನಾ ಹೇಳಿದರು.

ವಸ್ತುಪ್ರದರ್ಶನದಲ್ಲಿ ರಾಷ್ಟ್ರೀಯ ಲಾಂಛನ, ಮಳೆ ನೀರು ಕೊಯ್ಲು, ವಿವಿಧ ರೀತಿಯ ಮನೆಗಳ ಕಲಾಕೃತಿ, ಮನುಷ್ಯನ ದೇಹ, ಮೆದುಳು, ಹೃದಯ, ಕಣ್ಣು, ವಿವಿಧ ಜೀವಿಗಳ ಕಲಾಕೃತಿಗಳು‌ ಸೇರಿದಂತೆ ಗಣಿತ, ಕಲಾ ಮತ್ತು ವಿಜ್ಞಾನ ಮಾದರಿಗಳು‌ ನೋಡುಗರ ಕಣ್ಮನ‌ ಸೆಳೆಯಿತು.

ಈ ವೇಳೆ ಶಾಲಾ ಅಧ್ಯಕ್ಷರಾದ ವರಲಕ್ಷ್ಮಿ, ಪೋಷಕರು ಸೇರಿದಂತೆ ಶಿಕ್ಷಕರು, ಸಿಬ್ಬಂದಿ ಉಪಸ್ಥಿತರಿದ್ದರು.

Ramesh Babu

Journalist

Recent Posts

ಇಬ್ಬರು ಏರೋಸ್ಪೇಸ್ ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಕಾಲೇಜಲ್ಲಿ ಶೋಕಿ ಮಾಡೋ ಖಯಾಲಿ: ಆದ್ರೆ ಜೇಬಲ್ಲಿ ಕಾಂಚಾಣ ಇಲ್ಲ: ಕಾಸಿಗಾಗಿ ಏನು ಮಾಡಿದ್ರು ಗೊತ್ತಾ……

ಕಾಲೇಜಿನಲ್ಲಿ ಶೋಕಿಗಾಗಿ ಮನೆಗಳ್ಳತನಕ್ಕೆ ಇಳಿದಿದ್ದ ಇಬ್ಬರು ಎಂಜಿನಿಯರಿಂಗ್ ವಿದ್ಯಾರ್ಥಿಗಳನ್ನ (Aerospace Engineering Student) ಚಿಕ್ಕಬಳ್ಳಾಪುರ ಪೊಲೀಸರು ಬಂಧಿಸಿದ್ದಾರೆ. ಚೇತನ್ ಹಾಗೂ…

10 hours ago

ಕನ್ನಡ ರಾಜ್ಯೋತ್ಸವ ಪ್ರಯುಕ್ತ ಹೀಲಿನ್ ಆಸ್ಪತ್ರೆಯಲ್ಲಿ ಉಚಿತ ಆರೋಗ್ಯ ತಪಸಣಾ ಶಿಬಿರ

ಕನ್ನಡ ರಾಜ್ಯೋತ್ಸವ ಅಂಗವಾಗಿ ದೊಡ್ಡಬಳ್ಳಾಪುರದ ಹೀಲಿನ್ ಆಸ್ಪತ್ರೆ ವತಿಯಿಂದ ಉಚಿತ ಆರೋಗ್ಯ ತಪಸಣಾ ಶಿಬಿರವನ್ನು ಆಸ್ಪತ್ರೆಯಲ್ಲೇ ಆಯೋಜನೆ ಮಾಡಲಾಗಿತ್ತು. ಸಾರ್ವಜನಿಕರಿಗೆ…

11 hours ago

ದೇಶದ ಅತ್ಯುತ್ತಮ ಪೊಲೀಸ್ ಠಾಣಾ ಪ್ರಶಸ್ತಿಗೆ ರಾಯಚೂರಿನ ಕವಿತಾಳ ಪೊಲೀಸ್ ಠಾಣೆ ಆಯ್ಕೆ

ಕೇಂದ್ರ ಸಚಿವಾಲಯ ನೀಡುವ ಅತ್ಯುತ್ತಮ ಪೊಲೀಸ್ ಠಾಣಾ ಪ್ರಶಸ್ತಿಗೆ ಕರ್ನಾಟಕದ ರಾಯಚೂರು ಜಿಲ್ಲೆಯ ಸಿರವಾರ ತಾಲೂಕಿನ ಕವಿತಾಳ ಪೊಲೀಸ್ ಠಾಣೆ…

16 hours ago

ನಾಯಿ, ಹಾವು/ ಇತರೆ ಪ್ರಾಣಿಗಳ ದಾಳಿ ಪ್ರಕರಣಗಳಲ್ಲಿ ಚಿಕಿತ್ಸೆ ನೀಡುವ ಬಗ್ಗೆ ಸರ್ಕಾರಿ- ಖಾಸಗಿ ಆಸ್ಪತ್ರೆಗಳು ಅನುಸರಿಸಬೇಕಾದ ಕ್ರಮಗಳು

ನಮ್ಮ‌ ದೇಶದ ಸರ್ವೋಚ್ಚ ನ್ಯಾಯಾಲಯವು, ನಾಯಿ ಕಡಿತಕ್ಕೆ ಚಿಕಿತ್ಸೆ ನೀಡುವ ಬಗ್ಗೆ ಸರ್ಕಾರಿ- ಖಾಸಗಿ ಆಸ್ಪತ್ರೆಗಳು ಅನುಸರಿಸಬೇಕಾದ ಕ್ರಮಗಳಿಗೆ ಸಂಬಂಧಿಸಿದಂತೆ…

18 hours ago

ಜಗತ್ತಿನಲ್ಲಿ ಅತ್ಯಂತ ವೇಗವಾಗಿ ಚಲಿಸುವುದು ಮನಸ್ಸು….ಮನಸ್ಸಿನ ದಾರಿಯಲ್ಲಿ ಅನಂತ ಪಯಣ….

ಜಗತ್ತಿನಲ್ಲಿ ಅತ್ಯಂತ ವೇಗವಾಗಿ ಚಲಿಸುವುದು ಮನಸ್ಸು. ಕ್ಷಣ ಮಾತ್ರದಲ್ಲಿ ಲೆಕ್ಕಕ್ಕೂ ಸಿಗದಷ್ಟು ದೂರ ಚಲಿಸಬಲ್ಲದು. ಬೆಳಕಿನ ವೇಗವೂ ಅದಕ್ಕೆ ಸಾಟಿಯಲ್ಲ.....…

20 hours ago

ನಿರ್ಜನ ಪ್ರದೇಶದಲ್ಲಿ ದೊರೆತಿದ್ದ ನವಜಾತ ಶಿಶುವಿನ ಆರೋಗ್ಯ ಸ್ಥಿರ: ಜಿಲ್ಲಾ ಸರ್ಕಾರಿ ದತ್ತು ಕೇಂದ್ರಕ್ಕೆ ಹಸ್ತಾಂತರ

ತಾಲ್ಲೂಕಿನ ಹಾಡೋನಹಳ್ಳಿ ಗ್ರಾಮದ ನಿರ್ಜನ ಪ್ರದೇಶದಲ್ಲಿ ಒಂದು ವಾರದ ಹಿಂದೆ ದೊರೆತ ಐದು ದಿನಗಳ ನವಜಾತ ಶಿಶುವಿನ ಜೀವ ಉಳಿಸುವಲ್ಲಿ…

22 hours ago