ಮಕ್ಕಳು ತಮ್ಮ ಸೃಜನಶೀಲ ಪ್ರತಿಭೆ ಹೊರಹಾಕಲು ವಸ್ತುಪ್ರದರ್ಶನ ಅತ್ಯುತ್ತಮ ವೇದಿಕೆ: ಧನಂಜಯ

ಶಾಲೆಗಳಲ್ಲಿ ಏರ್ಪಡಿಸುವ ವಸ್ತು ಪ್ರದರ್ಶನಗಳು ಮಕ್ಕಳು ತಮ್ಮ ಸೃಜನಶೀಲ ಪ್ರತಿಭೆಯನ್ನು ಹೊರಹಾಕಲು ಒಳ್ಳೆಯ ವೇದಿಕೆಯಾಗಿರುತ್ತವೆ ಎಂದು ನಂದಿ ಹಿಲ್ ವೂ ಇಂಟರ್ ನ್ಯಾಷನಲ್ ಸ್ಕೂಲ್ ನ ಕಾರ್ಯದರ್ಶಿ ಧನಂಜಯ ಹೇಳಿದರು.

ತಾಲೂಕಿನ ತೂಬಗೆರೆ ಹೋಬಳಿಯ ದುರ್ಗೇನಹಳ್ಳಿ ಬಳಿ‌ ಇರುವ ನಂದಿ ಹಿಲ್ ವೂ ಇಂಟರ್ನ್ಯಾಷನಲ್ ಸ್ಕೂಲ್ ನಲ್ಲಿ ಏರ್ಪಡಿಸಲಾಗಿದ್ದ ಗಣಿತ, ಕಲಾ ಮತ್ತು ವಿಜ್ಞಾನ ವಸ್ತು ಪ್ರದರ್ಶನ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ವಿದ್ಯಾರ್ಥಿಗಳಲ್ಲಿರುವ ಪ್ರತಿಭೆಗಳನ್ನು ಗುರುತಿಸಿ ಪ್ರೋತ್ಸಾಹಿಸಲು ಈ ವಸ್ತುಪ್ರದರ್ಶನಗಳು ಸಹಕಾರಿಯಾಗಲಿವೆ ಎಂದರು.

ಪಠ್ಯದಲ್ಲಿರುವ ಬರುವ ವಿಷಯಗಳನ್ನು ಪ್ರಾಯೋಗಿಕವಾಗಿ ವಸ್ತು ಪ್ರದರ್ಶನದಲ್ಲಿ ತೋರಿಸಬಹುದು. ಮಕ್ಕಳು ವಸ್ತು ಪ್ರದರ್ಶನದಲ್ಲಿ ಉತ್ಸುಹಕರಾಗಿ ಪಾಲ್ಗೊಳ್ಳುವುದರಿಂದ ಪಠ್ಯದಲ್ಲಿರುವ ವಿಷಯಗಳು ಚೆನ್ನಾಗಿ ಮನದಟ್ಟಾಗುತ್ತವೆ ಎಂದರು.

ಶಾಲೆಯ ಎಲ್.ಕೆ.ಜಿ ವಿದ್ಯಾರ್ಥಿಗಳಿಂದ 8ನೇ ತಗತಿಯ ಮಕ್ಕಳು ಸುತ್ತಾಮುತ್ತ ಸಿಗುವ ಕಚ್ಛಾ ವಸ್ತುಗಳನ್ನ ಬಳಸಿ ತಮ್ಮ ಪುಟ್ಟ ಪುಟ್ಟ ಕೈಗಳಿಂದ ಗಣಿತ, ಕಲಾ ಮತ್ತು ವಿಜ್ಞಾನ ಮಾದರಿಗಳನ್ನು ತಯಾರಿಸಿ ವಸ್ತು ಪ್ರದರ್ಶನ ಕಾರ್ಯಕ್ರಮದಲ್ಲಿ ಪಾಲ್ಗೊಂಡಿರುವುದು ಸಂತಸದ ಸಂಗತಿ ಎಂದು ಶಾಲೆಯ ಪ್ರಾಂಶುಪಾಲರಾದ ಭಾವನಾ ಹೇಳಿದರು.

ವಸ್ತುಪ್ರದರ್ಶನದಲ್ಲಿ ರಾಷ್ಟ್ರೀಯ ಲಾಂಛನ, ಮಳೆ ನೀರು ಕೊಯ್ಲು, ವಿವಿಧ ರೀತಿಯ ಮನೆಗಳ ಕಲಾಕೃತಿ, ಮನುಷ್ಯನ ದೇಹ, ಮೆದುಳು, ಹೃದಯ, ಕಣ್ಣು, ವಿವಿಧ ಜೀವಿಗಳ ಕಲಾಕೃತಿಗಳು‌ ಸೇರಿದಂತೆ ಗಣಿತ, ಕಲಾ ಮತ್ತು ವಿಜ್ಞಾನ ಮಾದರಿಗಳು‌ ನೋಡುಗರ ಕಣ್ಮನ‌ ಸೆಳೆಯಿತು.

ಈ ವೇಳೆ ಶಾಲಾ ಅಧ್ಯಕ್ಷರಾದ ವರಲಕ್ಷ್ಮಿ, ಪೋಷಕರು ಸೇರಿದಂತೆ ಶಿಕ್ಷಕರು, ಸಿಬ್ಬಂದಿ ಉಪಸ್ಥಿತರಿದ್ದರು.

Ramesh Babu

Journalist

Recent Posts

ಭಾರತಕ್ಕೆ ಕ್ಸಿ ಜಿನ್‌ಪಿಂಗ್ ಭೇಟಿ: ಮೋದಿ–ಕ್ಸಿ ದ್ವಿಪಕ್ಷೀಯ ಮಾತುಕತೆ ಇಂದು

ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರು ಎರಡು ದಿನಗಳ ಭಾರತ ಭೇಟಿಗಾಗಿ ಶನಿವಾರ ಮಧ್ಯಾಹ್ನ ರಾಷ್ಟ್ರ ರಾಜಧಾನಿ ನವದೆಹಲಿಗೆ…

1 hour ago

ಮಧುರೆ ದೇವಾಲಯದ ಬಳಿ ಮೇಲ್ಸೇತುವೆ ಅವ್ಯವಸ್ಥೆ: ಮೇಲಕ್ಕೆ ಚಾಚಿರುವ ಕಂಬಿಗಳಿಂದ ವಾಹನ ಸವಾರರಿಗೆ ತೊಂದರೆ

ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಮಧುರೆ ದೇವಾಲಯದ ಸಮೀಪ ಹೊಸದಾಗಿ ನಿರ್ಮಿಸಿರುವ ಮೇಲ್ಸೇತುವೆ ವಾಹನ ಸವಾರರಿಗೆ ತೀವ್ರ ತೊಂದರೆ ಉಂಟುಮಾಡುತ್ತಿದೆ.…

9 hours ago

ನಾಯಿ ಕಡಿತದ ಆತಂಕಕ್ಕೆ ಲಸಿಕೆಯ ಕವಚ: ರೇಬೀಸ್ ನಿಯಂತ್ರಣಕ್ಕೆ 32 ಸಾವಿರ ಲಸಿಕೆ

ಬೆಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಹಾಗೂ ರೇಬೀಸ್ ಸೋಂಕಿನ ಆತಂಕಕ್ಕೆ ಕಡಿವಾಣ ಹಾಕಲು ಪಶುಪಾಲನಾ ಇಲಾಖೆ ಬೃಹತ್…

10 hours ago

2028ರ ಚುನಾವಣೆಗೆ ಜಾಲತಾಣವೇ ಅಸ್ತ್ರ- ಸಿಎಂಆರ್ ಶ್ರೀನಾಥ್

ಕೋಲಾರ: 2028ರಲ್ಲಿ ರಾಜ್ಯದಲ್ಲಿ ಎನ್‌ಡಿಎ ಸರ್ಕಾರ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಖಚಿತ. ಸಾಮಾಜಿಕ ಜಾಲತಾಣ ಈಗ ಪರಿಣಾಮಕಾರಿಯಾಗಿದೆ. ಅದನ್ನು…

23 hours ago

ಗಣೇಶ ವಿಸರ್ಜನೆ ವೇಳೆ ಮುಂಜಾಗ್ರತೆ ವಹಿಸಲು ರೈತ ಸಂಘ ಒತ್ತಾಯ: ಕೃಷಿ ಹೊಂಡ, ಕೆರೆ-ಕುಂಟೆಗಳಲ್ಲಿ ವಿಸರ್ಜನೆಗೆ ಕಡಿವಾಣ ಹಾಕಿ: ಜಿಲ್ಲಾಧಿಕಾರಿಗೆ ಮನವಿ

ಕೋಲಾರ : ಗಣೇಶ ಮೂರ್ತಿ ವಿಸರ್ಜನೆ ಸಂದರ್ಭದಲ್ಲಿ ಯಾವುದೇ ರೀತಿಯ ಅನಾಹುತ, ಅಹಿತಕರ ಘಟನೆಗಳು ಸಂಭವಿಸದಂತೆ ಗ್ರಾಮೀಣ ಪ್ರದೇಶಗಳಲ್ಲಿ ಕರಪತ್ರಗಳ…

23 hours ago

ರೈಲಿಗೆ ಸಿಲುಕಿ ಅಪರಿಚಿತ ವ್ಯಕ್ತಿ ಸಾವು

ದೊಡ್ಡಬಳ್ಳಾಪುರ: ಒಡ್ಡರಹಳ್ಳಿ ಹಾಗೂ ದೊಡ್ಡಬಳ್ಳಾಪುರ ರೈಲು ನಿಲ್ದಾಣಗಳ ನಡುವಿನ ಡಿ ಕ್ರಾಸ್ ರೈಲ್ವೆ ಬ್ರಿಡ್ಜ್ ಸಮೀಪ ಶುಕ್ರವಾರ (ಸೆ.11) ಮಧ್ಯಾಹ್ನ…

23 hours ago