ಮಕ್ಕಳು ತಮ್ಮ ಸೃಜನಶೀಲ ಪ್ರತಿಭೆ ಹೊರಹಾಕಲು ವಸ್ತುಪ್ರದರ್ಶನ ಅತ್ಯುತ್ತಮ ವೇದಿಕೆ: ಧನಂಜಯ

ಶಾಲೆಗಳಲ್ಲಿ ಏರ್ಪಡಿಸುವ ವಸ್ತು ಪ್ರದರ್ಶನಗಳು ಮಕ್ಕಳು ತಮ್ಮ ಸೃಜನಶೀಲ ಪ್ರತಿಭೆಯನ್ನು ಹೊರಹಾಕಲು ಒಳ್ಳೆಯ ವೇದಿಕೆಯಾಗಿರುತ್ತವೆ ಎಂದು ನಂದಿ ಹಿಲ್ ವೂ ಇಂಟರ್ ನ್ಯಾಷನಲ್ ಸ್ಕೂಲ್ ನ ಕಾರ್ಯದರ್ಶಿ ಧನಂಜಯ ಹೇಳಿದರು.

ತಾಲೂಕಿನ ತೂಬಗೆರೆ ಹೋಬಳಿಯ ದುರ್ಗೇನಹಳ್ಳಿ ಬಳಿ‌ ಇರುವ ನಂದಿ ಹಿಲ್ ವೂ ಇಂಟರ್ನ್ಯಾಷನಲ್ ಸ್ಕೂಲ್ ನಲ್ಲಿ ಏರ್ಪಡಿಸಲಾಗಿದ್ದ ಗಣಿತ, ಕಲಾ ಮತ್ತು ವಿಜ್ಞಾನ ವಸ್ತು ಪ್ರದರ್ಶನ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ವಿದ್ಯಾರ್ಥಿಗಳಲ್ಲಿರುವ ಪ್ರತಿಭೆಗಳನ್ನು ಗುರುತಿಸಿ ಪ್ರೋತ್ಸಾಹಿಸಲು ಈ ವಸ್ತುಪ್ರದರ್ಶನಗಳು ಸಹಕಾರಿಯಾಗಲಿವೆ ಎಂದರು.

ಪಠ್ಯದಲ್ಲಿರುವ ಬರುವ ವಿಷಯಗಳನ್ನು ಪ್ರಾಯೋಗಿಕವಾಗಿ ವಸ್ತು ಪ್ರದರ್ಶನದಲ್ಲಿ ತೋರಿಸಬಹುದು. ಮಕ್ಕಳು ವಸ್ತು ಪ್ರದರ್ಶನದಲ್ಲಿ ಉತ್ಸುಹಕರಾಗಿ ಪಾಲ್ಗೊಳ್ಳುವುದರಿಂದ ಪಠ್ಯದಲ್ಲಿರುವ ವಿಷಯಗಳು ಚೆನ್ನಾಗಿ ಮನದಟ್ಟಾಗುತ್ತವೆ ಎಂದರು.

ಶಾಲೆಯ ಎಲ್.ಕೆ.ಜಿ ವಿದ್ಯಾರ್ಥಿಗಳಿಂದ 8ನೇ ತಗತಿಯ ಮಕ್ಕಳು ಸುತ್ತಾಮುತ್ತ ಸಿಗುವ ಕಚ್ಛಾ ವಸ್ತುಗಳನ್ನ ಬಳಸಿ ತಮ್ಮ ಪುಟ್ಟ ಪುಟ್ಟ ಕೈಗಳಿಂದ ಗಣಿತ, ಕಲಾ ಮತ್ತು ವಿಜ್ಞಾನ ಮಾದರಿಗಳನ್ನು ತಯಾರಿಸಿ ವಸ್ತು ಪ್ರದರ್ಶನ ಕಾರ್ಯಕ್ರಮದಲ್ಲಿ ಪಾಲ್ಗೊಂಡಿರುವುದು ಸಂತಸದ ಸಂಗತಿ ಎಂದು ಶಾಲೆಯ ಪ್ರಾಂಶುಪಾಲರಾದ ಭಾವನಾ ಹೇಳಿದರು.

ವಸ್ತುಪ್ರದರ್ಶನದಲ್ಲಿ ರಾಷ್ಟ್ರೀಯ ಲಾಂಛನ, ಮಳೆ ನೀರು ಕೊಯ್ಲು, ವಿವಿಧ ರೀತಿಯ ಮನೆಗಳ ಕಲಾಕೃತಿ, ಮನುಷ್ಯನ ದೇಹ, ಮೆದುಳು, ಹೃದಯ, ಕಣ್ಣು, ವಿವಿಧ ಜೀವಿಗಳ ಕಲಾಕೃತಿಗಳು‌ ಸೇರಿದಂತೆ ಗಣಿತ, ಕಲಾ ಮತ್ತು ವಿಜ್ಞಾನ ಮಾದರಿಗಳು‌ ನೋಡುಗರ ಕಣ್ಮನ‌ ಸೆಳೆಯಿತು.

ಈ ವೇಳೆ ಶಾಲಾ ಅಧ್ಯಕ್ಷರಾದ ವರಲಕ್ಷ್ಮಿ, ಪೋಷಕರು ಸೇರಿದಂತೆ ಶಿಕ್ಷಕರು, ಸಿಬ್ಬಂದಿ ಉಪಸ್ಥಿತರಿದ್ದರು.

Ramesh Babu

Journalist

Recent Posts

ಘಾಟಿ ಕ್ಷೇತ್ರದಲ್ಲಿ ನಾಗರ ಪಂಚಮಿ ಸಂಭ್ರಮ

ದೊಡ್ಡಬಳ್ಳಾಪುರ: ನಾಗರಾಧನೆಗೆ ಪ್ರಸಿದ್ಧವಾಗಿರುವ ತಾಲೂಕಿನ ಘಾಟಿ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಸೋಮವಾರ ನಾಗರ ಪಂಚಮಿ ಹಬ್ಬವನ್ನು ಭಕ್ತಿಭಾವದಿಂದ ಆಚರಿಸಲಾಯಿತು. ನಾಗರ ಪಂಚಮಿ…

4 hours ago

ದೊಡ್ಡಬಳ್ಳಾಪುರದಲ್ಲಿ ಆ.18ರಂದು ವಿದ್ಯುತ್ ವ್ಯತ್ಯಯ

ದೊಡ್ಡಬಳ್ಳಾಪುರ: ನಗರದ 66/11 ಕೆವಿ ಡಿ.ಕ್ರಾಸ್ ವಿದ್ಯುತ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗಿರುವ ಹಿನ್ನೆಲೆಯಲ್ಲಿ ಆ.18ರಂದು ಬೆಳಿಗ್ಗೆ 10ರಿಂದ…

1 day ago

ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷ, ಸದಸ್ಯರ ನೇಮಕ: ಯೋಜಿತ ನಗರಾಭಿವೃದ್ಧಿಗೆ ಆದ್ಯತೆ- ಸದಸ್ಯ ಎಸ್.ಡಿ. ಮುನಿರಾಜು

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಲಾಗಿದೆ. ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರನ್ನು ಅಧ್ಯಕ್ಷರಾಗಿ,…

1 day ago

ಮಕ್ಕಳೇ ದೇಶದ ಆಸ್ತಿ, ಉತ್ತಮ ಶಿಕ್ಷಣದಿಂದ ಭವಿಷ್ಯ ನಿರ್ಮಾಣ- ಶಿವಕುಮಾರ್

ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…

2 days ago

ಬೆಂಗಳೂರು ಗ್ರಾಮಾಂತರದಲ್ಲಿ ಎರಡು ಪ್ರತ್ಯೇಕ ಅಪಘಾತ: ಇಬ್ಬರು ಸಾವು, ಹಲವರಿಗೆ ಗಾಯ

ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…

2 days ago

ಸ್ವಾತಂತ್ರ್ಯ ದಿನದಂದೇ ಹೆದ್ದಾರಿಯಲ್ಲಿ ಪುಂಡರ ಡೆಡ್ಲಿ ವ್ಹೀಲಿಂಗ್

ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…

2 days ago