ಮಕ್ಕಳು ತಮ್ಮ ಸೃಜನಶೀಲ ಪ್ರತಿಭೆ ಹೊರಹಾಕಲು ವಸ್ತುಪ್ರದರ್ಶನ ಅತ್ಯುತ್ತಮ ವೇದಿಕೆ: ಧನಂಜಯ

ಶಾಲೆಗಳಲ್ಲಿ ಏರ್ಪಡಿಸುವ ವಸ್ತು ಪ್ರದರ್ಶನಗಳು ಮಕ್ಕಳು ತಮ್ಮ ಸೃಜನಶೀಲ ಪ್ರತಿಭೆಯನ್ನು ಹೊರಹಾಕಲು ಒಳ್ಳೆಯ ವೇದಿಕೆಯಾಗಿರುತ್ತವೆ ಎಂದು ನಂದಿ ಹಿಲ್ ವೂ ಇಂಟರ್ ನ್ಯಾಷನಲ್ ಸ್ಕೂಲ್ ನ ಕಾರ್ಯದರ್ಶಿ ಧನಂಜಯ ಹೇಳಿದರು.

ತಾಲೂಕಿನ ತೂಬಗೆರೆ ಹೋಬಳಿಯ ದುರ್ಗೇನಹಳ್ಳಿ ಬಳಿ‌ ಇರುವ ನಂದಿ ಹಿಲ್ ವೂ ಇಂಟರ್ನ್ಯಾಷನಲ್ ಸ್ಕೂಲ್ ನಲ್ಲಿ ಏರ್ಪಡಿಸಲಾಗಿದ್ದ ಗಣಿತ, ಕಲಾ ಮತ್ತು ವಿಜ್ಞಾನ ವಸ್ತು ಪ್ರದರ್ಶನ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ವಿದ್ಯಾರ್ಥಿಗಳಲ್ಲಿರುವ ಪ್ರತಿಭೆಗಳನ್ನು ಗುರುತಿಸಿ ಪ್ರೋತ್ಸಾಹಿಸಲು ಈ ವಸ್ತುಪ್ರದರ್ಶನಗಳು ಸಹಕಾರಿಯಾಗಲಿವೆ ಎಂದರು.

ಪಠ್ಯದಲ್ಲಿರುವ ಬರುವ ವಿಷಯಗಳನ್ನು ಪ್ರಾಯೋಗಿಕವಾಗಿ ವಸ್ತು ಪ್ರದರ್ಶನದಲ್ಲಿ ತೋರಿಸಬಹುದು. ಮಕ್ಕಳು ವಸ್ತು ಪ್ರದರ್ಶನದಲ್ಲಿ ಉತ್ಸುಹಕರಾಗಿ ಪಾಲ್ಗೊಳ್ಳುವುದರಿಂದ ಪಠ್ಯದಲ್ಲಿರುವ ವಿಷಯಗಳು ಚೆನ್ನಾಗಿ ಮನದಟ್ಟಾಗುತ್ತವೆ ಎಂದರು.

ಶಾಲೆಯ ಎಲ್.ಕೆ.ಜಿ ವಿದ್ಯಾರ್ಥಿಗಳಿಂದ 8ನೇ ತಗತಿಯ ಮಕ್ಕಳು ಸುತ್ತಾಮುತ್ತ ಸಿಗುವ ಕಚ್ಛಾ ವಸ್ತುಗಳನ್ನ ಬಳಸಿ ತಮ್ಮ ಪುಟ್ಟ ಪುಟ್ಟ ಕೈಗಳಿಂದ ಗಣಿತ, ಕಲಾ ಮತ್ತು ವಿಜ್ಞಾನ ಮಾದರಿಗಳನ್ನು ತಯಾರಿಸಿ ವಸ್ತು ಪ್ರದರ್ಶನ ಕಾರ್ಯಕ್ರಮದಲ್ಲಿ ಪಾಲ್ಗೊಂಡಿರುವುದು ಸಂತಸದ ಸಂಗತಿ ಎಂದು ಶಾಲೆಯ ಪ್ರಾಂಶುಪಾಲರಾದ ಭಾವನಾ ಹೇಳಿದರು.

ವಸ್ತುಪ್ರದರ್ಶನದಲ್ಲಿ ರಾಷ್ಟ್ರೀಯ ಲಾಂಛನ, ಮಳೆ ನೀರು ಕೊಯ್ಲು, ವಿವಿಧ ರೀತಿಯ ಮನೆಗಳ ಕಲಾಕೃತಿ, ಮನುಷ್ಯನ ದೇಹ, ಮೆದುಳು, ಹೃದಯ, ಕಣ್ಣು, ವಿವಿಧ ಜೀವಿಗಳ ಕಲಾಕೃತಿಗಳು‌ ಸೇರಿದಂತೆ ಗಣಿತ, ಕಲಾ ಮತ್ತು ವಿಜ್ಞಾನ ಮಾದರಿಗಳು‌ ನೋಡುಗರ ಕಣ್ಮನ‌ ಸೆಳೆಯಿತು.

ಈ ವೇಳೆ ಶಾಲಾ ಅಧ್ಯಕ್ಷರಾದ ವರಲಕ್ಷ್ಮಿ, ಪೋಷಕರು ಸೇರಿದಂತೆ ಶಿಕ್ಷಕರು, ಸಿಬ್ಬಂದಿ ಉಪಸ್ಥಿತರಿದ್ದರು.

Ramesh Babu

Journalist

Recent Posts

ರಾಷ್ಟ್ರೀಯ ಸಾಹಿತ್ಯ ಸೌರಭದಲ್ಲಿ ಕವಿ ರವಿಕುಮಾರ್ ಅವರ ‘ಅಂಚಿನ ತೊರೆ’ ಕವನ ಸಂಕಲನ ಲೋಕಾರ್ಪಣೆ

ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…

5 hours ago

ನಾಡಕಚೇರಿ ಸರ್ವರ್ ಪದೇ ಪದೇ ಡೌನ್: ರಾಜ್ಯಾದ್ಯಂತ ಜನರಿಗೆ ಸಂಕಷ್ಟ – ತುರ್ತು ಪರಿಹಾರಕ್ಕೆ ಸರ್ಕಾರ ಮುಂದಾಗಬೇಕಿದೆ

ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…

13 hours ago

ಮಧುರನಹೊಸಹಳ್ಳಿಯಲ್ಲಿ ವಿಜೃಂಭಣೆಯಿಂದ ಆಷಾಡ ಏಕಾದಶಿ ಆಚರಣೆ

ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…

13 hours ago

ಬಾಶೆಟ್ಟಿಹಳ್ಳಿ ಯೂ-ಟರ್ನ್‌ನಲ್ಲಿ ಕೆಟ್ಟು ನಿಂತ ಟ್ರಕ್: ಯಲಹಂಕ–ಹಿಂದೂಪುರ ಹೆದ್ದಾರಿಯಲ್ಲಿ ಭಾರೀ ಟ್ರಾಫಿಕ್ ಜಾಮ್

ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…

1 day ago

ಹೆದ್ದಾರಿ ಸ್ಕೈವಾಕ್‌ಗಳ ಕನಸು ಇನ್ನೂ ಅಪೂರ್ಣ…: ದಾಬಸ್‌ಪೇಟೆ–ಹೊಸಕೋಟೆ ಹೆದ್ದಾರಿಯಲ್ಲಿ ಆಮೆಗತಿಯ ಕಾಮಗಾರಿ: ಜೀವ ಕೈಯಲ್ಲಿ ಹಿಡಿದು ರಸ್ತೆ ದಾಟುವ ಜನರು

ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್‌ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…

2 days ago

ಬೆಂಗಳೂರು ಗ್ರಾಮಾಂತರದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಬಿರುಸು: 15,721 ಮೃತರ ಹೆಸರು ಪತ್ತೆ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (ಎಸ್ಐಆರ್) ಪ್ರಕ್ರಿಯೆ ಬಿರುಸಿನಿಂದ ಸಾಗುತ್ತಿದ್ದು, ಜಿಲ್ಲೆಯಾದ್ಯಂತ ಒಟ್ಟು 15,721 ಮೃತರ…

2 days ago