ಮಕ್ಕಳು ಬಾಲ ನಟ, ನಟಿಯಾಗಿ ನಟಿಸಲು ಜಿಲ್ಲಾಧಿಕಾರಿ ಅನುಮತಿ ಕಡ್ಡಾಯ

ಬೆಂಗಳೂರು ಗ್ರಾಮಾಂತರ ಜಿಲ್ಲೆ ವ್ಯಾಪ್ತಿಗೆ ಸಂಬಂಧಿಸಿದ ಬಾಲ ಹಾಗೂ ಕಿಶೋರ ಕಾರ್ಮಿಕ (ನಿಷೇಧ ಮತ್ತು ನಿಯಂತ್ರಣ) ಕಾಯ್ದೆ 1986ರ ಕರ್ನಾಟಕ ನಿಯಮಗಳು 2ಸಿ ರಲ್ಲಿ ಒಬ್ಬ ಕಲಾವಿದನಾಗಿ ಕೆಲಸ ಮಾಡಬೇಕಾದ ಮಗು (1) ಕಲಂ 3ರ ನಿಬಂಧನೆಗಳ ವಿಷಯದಲ್ಲಿ ಮೇಲ್ಕಂಡ ಪರಿಸ್ಥಿತಿಗಳಿಗೆ/ನಿಯಮಗಳಿಗೆ ಒಳಪಟ್ಟಂತೆ ಮಗುವನ್ನು ಕಲಾವಿದನಾಗಿ ನಟನಾ ಕೆಲಸ ಮಾಡಲು ಇಚ್ಛಿಸಿದ್ದಲ್ಲಿ ಇನ್ನೂ ಮುಂದೆ ಕಡ್ಡಾಯವಾಗಿ ಜಿಲ್ಲಾಧಿಕಾರಿಗಳ ಅನುಮತಿಯನ್ನು ಪಡೆಯಬೇಕಾಗಿರುತ್ತದೆ.

ಬಾಲ ಹಾಗೂ ಕಿಶೋರ ಕಾರ್ಮಿಕ (ನಿಷೇಧ ಮತ್ತು ನಿಯಂತ್ರಣ) ಕಾಯ್ದೆ 1986ರ ತಿದ್ದುಪಡಿ ಕಾಯ್ದೆ 2016 ರನ್ವಯ ಮಕ್ಕಳ ಶಿಕ್ಷಣದ ಹಕ್ಕಿಗೆ ಮಾರಕವಾಗದಂತೆ ಬಾಲ ನಟಿ/ನಟಿಯಾಗಿ ನಟನಾ ಕೆಲಸ ನಿರ್ವಹಿಸುವ ಚಟುವಟಿಕೆಗಳನ್ನು ಹೊರತುಪಡಿಸಿ, ಕಾಯ್ದೆಯ ಎಲ್ಲಾ ಉದ್ಯೋಗ ಮತ್ತು ಪ್ರಕ್ರಿಯೆಯಲ್ಲಿ 14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳನ್ನು ಕೆಲಸಕ್ಕೆ ನಿಯೋಜಿಸಿಕೊಳ್ಳುವುದನ್ನು ಸಂಪೂರ್ಣವಾಗಿ ನಿಷೇಧಿಸಿದೆ.

ಕಾಯ್ದೆಯು 14-18ರ ವಯಸ್ಸಿನ ಕಿಶೋರ ಕಾರ್ಮಿಕರನ್ನು ಅಪಾಯಕಾರಿ ಉದ್ದಿಮೆಗಳಲ್ಲಿ ಕಿಶೋರಾವಸ್ಥೆಯ ಮಕ್ಕಳನ್ನು ಕೆಲಸಕ್ಕೆ ನಿಯೋಜಿಸಿಕೊಳ್ಳುವುದನ್ನು ಸಂಪೂರ್ಣವಾಗಿ ನಿಷೇಧಿಸಿದೆ.

ಮಕ್ಕಳನ್ನು ಕೆಲಸಕ್ಕೆ ನಿಯೋಜಿಸಿಕೊಂಡಲ್ಲಿ ತಪ್ಪಿತಸ್ಥ ಮಾಲೀಕರಿಗೆ 06 ತಿಂಗಳಿಂದ 02 ವರ್ಷಗಳವರೆಗೆ ಜೈಲು ಶಿಕ್ಷೆ ಹಾಗೂ ರೂ.20,000/- ರಿಂದ ರೂ.50,000/-ರವರೆಗೆ ದಂಡ ಅಥವಾ ಎರಡನ್ನೂ ವಿಧಿಸಲು ಅವಕಾಶವಿರುತ್ತದೆ. ಪುನರಾವರ್ತಿತ ಅಪರಾಧಕ್ಕೆ 01 ವರ್ಷದಿಂದ 03 ವರ್ಷಗಳವರೆಗೆ ಜೈಲು ಶಿಕ್ಷೆ ವಿಧಿಸಲು ಅವಕಾಶವಿರುತ್ತದೆ. ಬಾಲ ಹಾಗೂ ಕಿಶೋರ ಕಾರ್ಮಿಕ (ನಿಷೇಧ ಮತ್ತು ನಿಯಂತ್ರಣ) ಕಾಯ್ದೆ 1986ರ ಕರ್ನಾಟಕ ನಿಯಮಗಳು ‘2ಸಿ’ ರಲ್ಲಿ ಒಬ್ಬ ಕಲಾವಿದನಾಗಿ ಕೆಲಸ ಮಾಡಬೇಕಾದ ಮಗು (01) ಕಲಂ 3ರ ನಿಬಂಧನೆಗಳನ್ವಯ ಈ ಕೆಳಗಿನ ಪರಿಸ್ಥಿತಿಗಳಿಗೆ/ನಿಯಮಗಳಿಗೆ ಒಳಪಟ್ಟಂತೆ ಮಗು ಕಲಾವಿದನಾಗಿ ಕೆಲಸ ಮಾಡಲು ಅನುಮತಿಸಬಹುದಾಗಿದೆ.

ಯಾವುದೇ ಮಗುವನ್ನು ಒಂದು ದಿನದಲ್ಲಿ 05 ಗಂಟೆಗಳಿಗಿಂತ ಹೆಚ್ಚಿನ ಅವಧಿಗೆ ನಟನಾ ಕೆಲಸಕ್ಕೆ ನಿಯೋಜಿಸುವಂತಿಲ್ಲ ಮತ್ತು ವಿಶ್ರಾಂತಿ ಇಲ್ಲದೆ 03 ಗಂಟೆಗಳಿಗಿಂತ ಹೆಚ್ಚು ಕೆಲಸ ಮಾಡಿಸುವಂತಿಲ್ಲ. ಶ್ರವಣ ಮತ್ತು ದೃಶ್ಯ ಮಾದ್ಯಮದ ಯಾವುದೇ ನಿರ್ಮಾಪಕರು ನಿರ್ಮಿಸಿದ ಅಥವಾ ಯಾವುದೇ ವಾಣಿಜ್ಯ ಪರ ಕಾರ್ಯಕ್ರಮದಲ್ಲಿ ಮಗು ಭಾಗವಹಿಸುವುದಿದ್ದರೆ ಆ ಚಟುವಟಿಕೆ ನಡೆಯುವ ಪ್ರದೇಶದ ಜಿಲ್ಲಾ ದಂಡಾಧಿಕಾರಿಗಳ ಪೂರ್ವಾನುಮತಿ ಪಡೆದು ಭಾಗವಹಿಸುವಂತೆ ಮಾಡುವುದು ಮತ್ತು ಚಟುವಟಿಕೆ ಪ್ರಾರಂಭಿಸುವ ಪೂರ್ವದಲ್ಲಿ ನಮೂನೆ “ಸಿ” ಯಲ್ಲಿ ಜಿಲ್ಲಾ ದಂಡಾಧಿಕಾರಿಗಳಿಗೆ ಮುಚ್ಚಳಿಕೆ ಪತ್ರ ಸಲ್ಲಿಸುವುದು. ಭಾಗವಹಿಸುವ ಮಕ್ಕಳ ಪಟ್ಟಿ, ಪೋಷಕರ ಅಥವಾ ಪಾಲಕರ ಒಪ್ಪಿಗೆ ಪತ್ರಸಲ್ಲಿಸುವುದು.

ಮಗುವಿನ ಸಂರಕ್ಷಣೆಗೆ ಸಂಬಂಧಿಸಿದಂತೆ, ನಿರ್ಮಾಪಕರ ಅಥವಾ ಸಮಾರಂಭದ ಆಯೋಜಕರ ಹೆಸರಗಳನ್ನು ಒದಗಿಸುವುದು. ಮಕ್ಕಳನ್ನು ಬಳಸಿ ಸಂಪೂರ್ಣ ಚಿತ್ರೀಕರಣ ಮಾಡುವ ಸಂದರ್ಭದಲ್ಲಿ ಮಕ್ಕಳ ದುರುಪಯೋಗ ಪ್ರಕರಣ, ನಿರ್ಲಕ್ಷ್ಯ ಅಥವಾ ಶೋಷಣೆ ನಡೆಯದಂತೆ ಸೂಕ್ತ ಮುಂಜಾಗ್ರತ ಕ್ರಮಗಳನ್ನು ಕೈಗೊಂಡಿರಬೇಕು.

ಕಲಂ ‘ಬಿ’ ಯಲ್ಲಿ ಉಲ್ಲೇಖಿಸಿರುವ ಮುಚ್ಚಳಿಕೆಯು 06 ತಿಂಗಳವರೆಗೆ ಮಾನ್ಯವಾಗಿರುತ್ತದೆ. ಶಿಕ್ಷಣಕ್ಕೆ ಸಂಬಂಧಿಸಿದ ನಿಬಂಧನಗೆಳನ್ನು ಸುರಕ್ಷತೆ ಮತ್ತು ಮಕ್ಕಳ ದುರುಪಯೋಗ ತಡೆ ಕುರಿತಾದ ಮಾನ್ಯತೆ ಪಡೆದ ಮಾರ್ಗಸೂಚಿಗಳು ಮತ್ತು ಇಂತಹ ಉದ್ದೇಶಗಳಿಗಾಗಿ ಸೂಕ್ತ ಸರ್ಕಾರವು ನಿಗಧಿತವಾಗಿ ಹೊರಡಿಸಿರುವ ಈ ಕೆಳಕಂಡ ಸುರಕ್ಷತಾ ನೀತಿಗಳನ್ನು ಅಳವಡಿಸಿಕೊಂಡಿರುವ ಬಗ್ಗೆ ಸ್ಪಷ್ಟವಾಗಿ ತಿಳಿಸುವುದು.

ಮಗುವಿನ ದೈಹಿಕ ಮತ್ತು ಮಾನಸಿಕ ಆರೋಗ್ಯಕ್ಕೆ ಅಗತ್ಯವಿರುವ ಸೌಲಭ್ಯಗಳನ್ನು ಒದಗಿಸಲು ಖಾತ್ರಿಪಡಿಸುವುದು.

ಮಗುವಿನ ಸಕಾಲಿಕ ಪೌಷ್ಠಿಕ ಆಹಾರ ಒದಗಿಸುವುದು. ದೈನಂದಿನ ಅಗತ್ಯಗಳಿಗೆ ಸಾಕಾಗುವಷ್ಟು ಸಾಮಾಗ್ರಿಗಳು, ಸ್ವಚ್ಚ ಮತ್ತು ಸುರಕ್ಷಿತವಾದ ಆಶ್ರಯ ಒದಗಿಸುವುದು. ಶಿಕ್ಷಣದ ಹಕ್ಕು ಸಂರಕ್ಷಣೆ, ಲೈಂಗಿಕ ಅಪರಾಧಗಳಿಂದ ರಕ್ಷಣೆ ಒಳಗೊಂಡಂತೆ ಮಕ್ಕಳ ರಕ್ಷಣೆ ಕುರಿತಾಗಿ ಕಾಲ ಕಾಲಕ್ಕೆ ಜಾರಿಯಲ್ಲಿರುವ ಎಲ್ಲಾ ಕಾನೂನುಗಳ ಪಾಲನೆ ಮಾಡುವುದು.

ಮಗು ಶಾಲೆಯ ಪಾಠ ಪ್ರವಚನಗಳಿಗೆ ಗೈರಾಗದಂತೆ ಶಿಕ್ಷಣದಲ್ಲಿ ನಿರಂತರವಾಗಿ ಮುಂದುವರೆಯಲು ಅಗತ್ಯವಿರುವ ಎಲ್ಲಾ ಸೌಲಭ್ಯಗಳನ್ನು ಒದಗಿಸುವುದು. ಯಾವುದೇ ಮಗು ನಿರಂತರವಾಗಿ 27 ದಿನಗಳಿಗಿಂತ ಹೆಚ್ಚಿನ ದಿನಗಳು ನಟನಾ ಕೆಲಸದಲ್ಲಿ ತೊಡಗಲು ಅವಕಾಶ ನೀಡಬಾರದು.

ಮಗುವಿನ ರಕ್ಷಣೆ, ಪೋಷಣೆ ಮತ್ತು ಹಿತಾಸಕ್ತಿಯನ್ನು ಕಾಪಾಡಲು ನಿರ್ಮಾಣ ಅಥವಾ ಕಾರ್ಯಕ್ರಮದಲ್ಲಿ ತೊಡಗಿರುವ ಪ್ರತಿ 05 ಮಕ್ಕಳಿಗೆ ಒಬ್ಬರಂತೆ ಜವಬ್ದಾರಿ ವ್ಯಕ್ತಿಯನ್ನು ನೇಮಿಸುವುದು. ನಿರ್ಮಾಣ ಅಥವಾ ಕಾರ್ಯಕ್ರಮದಿಂದ ಮಗುವಿಗೆ ಬರುವ ಒಟ್ಟು ಆದಾಯದ ಕನಿಷ್ಠ ಶೇ.20% ನ್ನು ರಾಷ್ಟ್ರೀಕೃತ ಬ್ಯಾಂಕಿನಲ್ಲಿ ಮಗುವಿನ ಹೆಸರಿನಲ್ಲಿ ನಿಶ್ಚಿತ ಠೇವಣಿ ಖಾತೆ ತೆರೆದು ಇಡವುದು ಅದನ್ನು ಮಗು ಪ್ರಾಯಸ್ಥನಾದಾಗ ಪಡೆಯಲು ಅವಕಾಶ ಕಲ್ಪಿಸುವುದು.

ಯಾವುದೇ ಮಗುವಿನ ಒಪ್ಪಿಗೆ ಮತ್ತು ಇಚ್ಛೆಗೆ ವಿರುದ್ಧವಾಗಿ ಯಾವುದೇ ಧ್ವನಿ, ದೃಶ್ಯ ಮತ್ತು ಕ್ರೀಡಾ ಚಟುವಟಿಕೆ ಅನೌಪಾಚಾರಿಕ ಮನರಂಜನಾ ಚಟುವಟಿಕೆ ಒಳಗೊಂಡಂತೆ ಅವುಗಳನ್ನು ಭಾಗವಹಿಸುವಂತೆ ಮಾಡಬಾರದು. ಮಕ್ಕಳ ಶೈಕ್ಷಣಿಕ ಹಿತದೃಷ್ಟಿಯಿಂದ ಇಂಥದ್ದೊಂದು ನಿರ್ಧಾರ ಮಾಡಿದ್ದು, ಬಾಲ ನಟರು, ನಟಿಯರ ಪಾತ್ರಕ್ಕಾಗಿ ಮಕ್ಕಳನ್ನು ಬಳಸಿಕೊಳ್ಳಲು ಇಚ್ಚಿಸುವ ಸಿನಿಮಾ ನಿರ್ದೇಶಕರು, ನಿರ್ಮಾಪಕರು, ಆಯೋಜಕರು ಜಿಲ್ಲಾಧಿಕಾರಿಗಳಿಂದ ಅನುಮತಿ ಪತ್ರ ಪಡೆಯುವುದು ಕಡ್ಡಾಯ.

ಮುಂದಿನ ದಿನಗಳಲ್ಲಿ ಮಕ್ಕಳನ್ನು ಚಿತ್ರಕತೆಗೆ ಜಿಲ್ಲಾಧಿಕಾರಿ ಅನುಮತಿ ಇಲ್ಲದೆ ಬಳಸಿಕೊಂಡಿದ್ದೇ ಆದಲ್ಲಿ ಕಾನೂನು ಉಲ್ಲಂಘನೆಯಾಗುತ್ತದೆ. ಕಾನೂನು ಉಲ್ಲಂಘಿಸುವ ಸಿನಿಮಾ ಹಾಗೂ ಧಾರಾವಾಹಿ ಜವಾಬ್ದಾರಿ ಹೊತ್ತ ಆಯೋಜಕರು, ನಿರ್ಮಾಪಕರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ.

ಹೆಚ್ಚಿನ ಮಾಹಿತಿಗಾಗಿ  ಸಂಬಂಧಪಟ್ಟ ಕಾರ್ಮಿಕ ಅಧಿಕಾರಿಗಳ ಕಚೇರಿ ಹಾಗೂ ಜಿಲ್ಲಾ ಬಾಲಕಾರ್ಮಿಕ ಯೋಜನೆಯ ಕಚೇರಿಯನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಬಾಲಕಾರ್ಮಿಕ ಯೋಜನೆಯ ಅಧ್ಯಕ್ಷರು ಹಾಗೂ ಜಿಲ್ಲಾಧಿಕಾರಿಗಳಾದ ಡಾ.ಎನ್ ಶಿವಶಂಕರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Ramesh Babu

Journalist

Recent Posts

ಅಣ್ಣನ ಮೂವರು ಮಕ್ಕಳ ಮೇಲೆ ತಮ್ಮನಿಂದ ಕ್ರೂರವಾಗಿ ಹಲ್ಲೆ: ಇಬ್ಬರು ಮಕ್ಕಳು ಸ್ಥಳದಲ್ಲೇ ಸಾವು: ಒಬ್ಬ ಬಾಲಕ ಜೀವನ್ಮರಣ ಹೋರಾಟ

ಅಣ್ಣನ ಮೂವರು ಮಕ್ಕಳ ಮೇಲೆ ತಮ್ಮನೇ ಕ್ರೂರವಾಗಿ ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನ ಕಮ್ಮಸಂದ್ರದಲ್ಲಿ ನಡೆದಿದೆ. ಘಟನೆಯಲ್ಲಿ 9 ವರ್ಷದ…

5 hours ago

ನಟ ಪ್ರಥಮ್ ಮೇಲೆ ದುಷ್ಕರ್ಮಿಗಳಿಂದ ಹಲ್ಲೆ ಆರೋಪ: ಹಲ್ಲೆ ಎಲ್ಲಿ ಆಯ್ತು…? ಘಟನೆ ಬಗ್ಗೆ ನಟ ಪ್ರಥಮ್ ಏನಂದ್ರು… ಗೊತ್ತಾ….? ಸಂಪೂರ್ಣ ಮಾಹಿತಿ ಇಲ್ಲಿದೆ ಓದಿ….

ಜು.22ರ ಮಂಗಳವಾರ ದೊಡ್ಡಬಳ್ಳಾಪುರದ ರಾಮಯ್ಯನಪಾಳ್ಯ ಸಮೀಪವಿರುವ ಶ್ರೀ ಆದಿಶಕ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಪೂಜೆಗೆಂದು ಬಿಗ್ ಬಾಸ್ ವಿನ್ನರ್ ನಟ…

20 hours ago

ಈ ವರ್ಷ ಕೇಂದ್ರ ಸರ್ಕಾರ ಸರಬರಾಜು ಮಾಡಿರುವ ರಸಗೊಬ್ಬರ ಸಾಕಾಗುತ್ತಿಲ್ಲ- ಸಿಎಂ ಸಿದ್ದರಾಮಯ್ಯ

ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಜಾತಿ ಸಮೀಕ್ಷೆ ಅನಿವಾರ್ಯವಾಗಿದ್ದು, ಈ ದಿಸೆಯಲ್ಲಿ ದೇಶದ ಪ್ರತಿ ನಾಗರಿಕನ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ,…

1 day ago

ಹಣ ಕೇಂದ್ರೀಕೃತ ಸಮಾಜಕ್ಕೆ ಬದಲಾಗಿ ಮನುಷ್ಯತ್ವ ಕೇಂದ್ರಿತ ಸಮಾಜ ನಿರ್ಮಾಣವಾಗಲಿ…..

ಬದಲಾವಣೆ......... ರೋಗಗಳ ಆವಾಸಸ್ಥಾನವಾಗುತ್ತಿರುವ ಆಸ್ಪತ್ರೆಗಳು...... ರೋಗಿಗಳ ತವರುಮನೆಯಂತಾಗುತ್ತಿರುವ ಮೆಡಿಕಲ್ ಲ್ಯಾಬೋರೇಟರಿಗಳು..... ಅನಾಗರಿಕ ಸಮಾಜ ನಿರ್ಮಾಣಕ್ಕೆ ಕಾರಣವಾಗುತ್ತಿರುವ ಶಿಕ್ಷಣ ಸಂಸ್ಥೆಗಳು........ ಭ್ರಷ್ಟಾಚಾರದ…

1 day ago

ವಿದೇಶದಲ್ಲಿ ಡೆವಿಲ್ ಸಿನಿಮಾ ಶೂಟಿಂಗ್ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆದ ನಟ ದರ್ಶನ್

ನಟ ದರ್ಶನ್ ವಿದೇಶದಲ್ಲಿ ಡೆವಿಲ್ ಸಿನಿಮಾ ಶೂಟಿಂಗ್ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆಗಿದ್ದಾರೆ. ಥಾಯ್ಲೆಂಡ್ ನಿಂದ ತಡ ರಾತ್ರಿ 11:45…

1 day ago

ಭೀಮನ ಅಮವಾಸ್ಯೆ ದಿನದಂದು ಪತಿ ಕಾಲಿಗೆ ಪೂಜೆ ಮಾಡಿದ್ದ ಪತ್ನಿ ರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಸಾವು

ನಿನ್ನೆ(ಜು.24 ಗುರುವಾರ) ಭೀಮನ ಅಮವಾಸ್ಯೆ ಹಿನ್ನೆಲೆ ಪತಿ ಕಾಲಿಗೆ ಪೂಜೆ ಮಾಡಿದ್ದ ಪತ್ನಿ ರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಘಟನೆ…

2 days ago