ಭಾರತ ಸೇವಾದಳದ ಬೆಂಗಳೂರು ಗ್ರಾಮಾಂತರ ಜಿಲ್ಲಾ ಸಮಿತಿ ಹಾಗೂ ರಾಜ್ಯ ಸಮಿತಿ ನನ್ನನ್ನು ತಾಲೂಕು ಸಮಿತಿಯ ಅಧ್ಯಕ್ಷರನ್ನಾಗಿ ಮಾಡಿದ್ದಾರೆ ಅವರಿಗೆ ನಾನು ಅಭಿನಂದನೆ ಸಲ್ಲಿಸುವೆ ಎಂದು ಭಾರತ ಸೇವಾದಳದ ತಾಲೂಕು ಘಟಕದ ನೂತನ ಅಧ್ಯಕ್ಷ ಆರ್.ವಿ.ಮಹೇಶ್ ಕುಮಾರ್ ಅವರು ತಿಳಿಸಿದರು.
ನಗರದ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಭಾರತ ಸೇವಾದಳ ತಾಲೂಕು ಸಮಿತಿ ಹಾಗೂ ಶಾಲಾ ಶಿಕ್ಷಣ ಇಲಾಖೆ ಉಪ ನಿರ್ದೇಶಕರ ಕಚೇರಿ, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸಹಯೋಗದಲ್ಲಿ ಮಕ್ಕಳಿಗೆ ಉಚಿತ ಸಮವಸ್ತ್ರ ವಿತರಣೆ ಕಾರ್ಯಕ್ರಮ ನಡೆಸಲಾಯಿತು. ಈ ವೇಳೆ ಮಾತನಾಡಿದ ಅವರು, ಭಾರತ ಸೇವಾದಳ ಶಾಲಾ ಮಕ್ಕಳಿಗೆ ಶಿಕ್ಷಣದ ಜೊತೆಗೆ ರಾಷ್ಟ್ರಗೀತೆ, ರಾಷ್ಟ್ರಧ್ವಜ, ರಾಷ್ಟ್ರಪಕ್ಷಿ ರಾಷ್ಟ್ರಲಾಂಚನ, ರಾಷ್ಟ್ರಭಕ್ತಿಯ ಬಗ್ಗೆ ಅರಿವು ಮೂಡಿಸುವ ಕೆಲಸವನ್ನು ಮಾಡುತ್ತಿದೆ, ರಾಷ್ಟ್ರವನ್ನು ಪ್ರತಿಬಿಂಬಿಸುವುದೇ ಧ್ವಜ, ಕೇಸರಿ ತ್ಯಾಗ, ಹಸಿರು ಸಂವೃದ್ಧಿ, ಬಿಳಿ ಶಾಂತಿಯ ಪ್ರತೀಕವಾಗಿದೆ. ಈ ಮೂರು ಗುಣಗಳನ್ನು ನಾವೆಲ್ಲರು ಮೈಗೂಡಿಸಿಕೊಳ್ಳಬೇಕು ಎಂದರು.
ದೇಶದಲ್ಲಿ ಇಂದು ಮಾದಕ ವಸ್ತುಗಳ ಜಾಲ ಬೃಹತ್ತಾಗಿ ಬೆಳೆದಿದೆ, ಯುವ ಪೀಳಿಗೆ ಮಾದಕ ವ್ಯಸನಿಗಳಾಗುತ್ತಿದ್ದಾರೆ, ಪೋಷಕರು ಮದ್ಯಪಾನದಿಂದ ದೂರವಾಗಿ ಮಕ್ಕಳಿಗೆ ಮಾರ್ಗದರ್ಶಕರಂತೆ ಇರಬೇಕಿದೆ, ಮಕ್ಕಳು ಮಾದಕ ವ್ಯಸನ ಮತ್ತು ದುಶ್ಚಟಗಳಿಂದ ದೂರ ಇದ್ದು ಬಲಿಷ್ಠ ರಾಷ್ಟ್ರವನ್ನು ಕಟ್ಟುವ ಕೆಲಸ ಮಾಡಬೇಕು ಎಂದರು.
ಕಾರ್ಯಕ್ರಮದಲ್ಲಿ ಭಾರತ ಸೇವಾದಳ ತಾಲೂಕು ಅಧ್ಯಕ್ಷರಾಗಿ ನೂತನವಾಗಿ ಆಯ್ಕೆಯಾದ ಆರ್.ವಿ.ಮಹೇಶ್ ಕುಮಾರ್ ಮತ್ತು ಪ್ರಧಾನ ಕಾರ್ಯದರ್ಶಿ ಹಮಾಮ್ ವೆಂಕಟೇಶ್ ಅವರನ್ನು ಸನ್ಮಾನಿಸಲಾಗಿತು.
ಕಾರ್ಯಕ್ರಮದಲ್ಲಿ ತಾಲ್ಲೂಕು ಪ್ರಧಾನ ಕಾರ್ಯದರ್ಶಿ ಹಮಾಮ್ ವೆಂಕಟೇಶ್, ರಾಜ್ಯ ಸಮಿತಿಯ ರವಿಕುಮಾರ್, ನೆಲಮಂಗಲದ ಹೊನ್ನಸಿದ್ದಯ್ಯ, ಹೊಸಕೋಟೆ ತಾಲೂಕು ಅಧ್ಯಕ್ಷರಾದ ಹರೀಶ್, ಕಾಂಗ್ರೆಸ್ ಸೇವಾದಳದ ಅಧ್ಯಕ್ಷರಾದ ಕಾಂತರಾಜು ಎಂ, ದೇವನಹಳ್ಳಿ, ನೆಲಮಂಗಲ, ದೊಡ್ಡಬಳ್ಳಾಪುರ ಮತ್ತು ಹೊಸಕೋಟೆ ತಾಲೂಕು ಸಮಿತಿಯ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಹೊಸಕೋಟೆ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲ್ಲೂಕಿನ ಸೂಲಿಬೆಲೆ ಗ್ರಾಮದಲ್ಲಿ ತಡರಾತ್ರಿ ರೌಡಿ ಶೀಟರ್ನನ್ನು ದುಷ್ಕರ್ಮಿಗಳು ನಡುರಸ್ತೆಯಲ್ಲೇ ಬರ್ಬರವಾಗಿ ಹತ್ಯೆ…
ಕಾಕ್ರೋಚ್ ಜನತಾ ಪಾರ್ಟಿ...... ಸಾಮಾಜಿಕ ಜಾಲತಾಣದ ಹೊಸ ರಾಜಕೀಯ ಚಳುವಳಿ ಎಂದು ಕಳೆದ ಐದಾರು ವಾರಗಳಿಂದ ಇಡೀ ದೇಶದಾದ್ಯಂತ ಬಹುದೊಡ್ಡ…
ಗಣೇಶ್ ಕುಮಾರ್ ಮತ್ತು ಪೂರ್ಣಿಮಾ ಅವರ ಪೋಷಕತ್ವದಲ್ಲಿ, ಕೇಶವ ಮತ್ತು ಸುಷ್ಮಾ ದಂಪತಿಯ ಪುತ್ರಿ ಅದ್ವಿತಾ ಅವರ ಜನ್ಮದಿನವನ್ನು ಬಿಸವನಹಳ್ಳಿ…
ದೊಡ್ಡಬಳ್ಳಾಪುರ: ಹಿಂದೂಪುರ–ಯಲಹಂಕ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರಿಗೆ ದಿಢೀರನೆ ನಾಯಿ ಅಡ್ಡ ಬಂದ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ…
ಕೆ.ಎಚ್ ಮುನಿಯಪ್ಪನವರು ಏಳು ಬಾರಿ ಲೋಕಸಭಾ ಸದಸ್ಯರಾಗಿ, ಎರಡು ಬಾರಿ ಕೇಂದ್ರ ಸಚಿವರಾಗಿ, ಅಪಾರ ಅನುಭವ ಹಾಗೂ ಅವರ ಹಿರಿತನಕ್ಕೆ…
ಸಾಮಾನ್ಯ ಜನರಿಗೆ ವಾಸ್ತು ಸೂತ್ರಗಳ ಅನ್ವಯ ಜ್ಞಾನವನ್ನು ನೀಡುವ ಸಲುವಾಗಿ ಶ್ರೀ ಪೂತಮಾನಸ ಜ್ಯೋತಿಷ್ಯಾಲಯ ವತಿಯಿಂದ ಸುಕನ್ಯ ಮತ್ತು ಎಸ್.ಕೃಷ್ಣಮೂರ್ತಿ…