ಮಕ್ಕಳು ಮಾದಕ ವ್ಯಸನ ಮತ್ತು ದುಶ್ಚಟಗಳಿಂದ ದೂರವಿರಬೇಕು- ಬಲಿಷ್ಠ ರಾಷ್ಟ್ರವನ್ನು ಕಟ್ಟುವ ಕೆಲಸ ಮಾಡಬೇಕು- ಭಾರತ ಸೇವಾದಳದ ತಾಲೂಕು ಘಟಕದ ನೂತನ ಅಧ್ಯಕ್ಷ ಆರ್.ವಿ.ಮಹೇಶ್ ಕುಮಾರ್

ಭಾರತ ಸೇವಾದಳದ ಬೆಂಗಳೂರು ಗ್ರಾಮಾಂತರ ಜಿಲ್ಲಾ ಸಮಿತಿ ಹಾಗೂ ರಾಜ್ಯ ಸಮಿತಿ ನನ್ನನ್ನು ತಾಲೂಕು ಸಮಿತಿಯ ಅಧ್ಯಕ್ಷರನ್ನಾಗಿ ಮಾಡಿದ್ದಾರೆ ಅವರಿಗೆ ನಾನು ಅಭಿನಂದನೆ ಸಲ್ಲಿಸುವೆ ಎಂದು ಭಾರತ ಸೇವಾದಳದ ತಾಲೂಕು ಘಟಕದ ನೂತನ ಅಧ್ಯಕ್ಷ ಆರ್.ವಿ.ಮಹೇಶ್ ಕುಮಾರ್ ಅವರು ತಿಳಿಸಿದರು.

ನಗರದ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಭಾರತ ಸೇವಾದಳ ತಾಲೂಕು ಸಮಿತಿ ಹಾಗೂ ಶಾಲಾ ಶಿಕ್ಷಣ ಇಲಾಖೆ ಉಪ ನಿರ್ದೇಶಕರ ಕಚೇರಿ, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸಹಯೋಗದಲ್ಲಿ ಮಕ್ಕಳಿಗೆ ಉಚಿತ ಸಮವಸ್ತ್ರ ವಿತರಣೆ ಕಾರ್ಯಕ್ರಮ ನಡೆಸಲಾಯಿತು. ಈ ವೇಳೆ ಮಾತನಾಡಿದ ಅವರು, ಭಾರತ ಸೇವಾದಳ ಶಾಲಾ ಮಕ್ಕಳಿಗೆ ಶಿಕ್ಷಣದ ಜೊತೆಗೆ ರಾಷ್ಟ್ರಗೀತೆ, ರಾಷ್ಟ್ರಧ್ವಜ, ರಾಷ್ಟ್ರಪಕ್ಷಿ ರಾಷ್ಟ್ರಲಾಂಚನ, ರಾಷ್ಟ್ರಭಕ್ತಿಯ ಬಗ್ಗೆ ಅರಿವು ಮೂಡಿಸುವ ಕೆಲಸವನ್ನು ಮಾಡುತ್ತಿದೆ, ರಾಷ್ಟ್ರವನ್ನು ಪ್ರತಿಬಿಂಬಿಸುವುದೇ ಧ್ವಜ, ಕೇಸರಿ ತ್ಯಾಗ, ಹಸಿರು ಸಂವೃದ್ಧಿ, ಬಿಳಿ ಶಾಂತಿಯ ಪ್ರತೀಕವಾಗಿದೆ. ಈ ಮೂರು ಗುಣಗಳನ್ನು ನಾವೆಲ್ಲರು ಮೈಗೂಡಿಸಿಕೊಳ್ಳಬೇಕು ಎಂದರು.

ದೇಶದಲ್ಲಿ ಇಂದು ಮಾದಕ ವಸ್ತುಗಳ ಜಾಲ ಬೃಹತ್ತಾಗಿ ಬೆಳೆದಿದೆ, ಯುವ ಪೀಳಿಗೆ ಮಾದಕ ವ್ಯಸನಿಗಳಾಗುತ್ತಿದ್ದಾರೆ, ಪೋಷಕರು ಮದ್ಯಪಾನದಿಂದ ದೂರವಾಗಿ ಮಕ್ಕಳಿಗೆ ಮಾರ್ಗದರ್ಶಕರಂತೆ ಇರಬೇಕಿದೆ, ಮಕ್ಕಳು ಮಾದಕ ವ್ಯಸನ ಮತ್ತು ದುಶ್ಚಟಗಳಿಂದ ದೂರ ಇದ್ದು ಬಲಿಷ್ಠ ರಾಷ್ಟ್ರವನ್ನು ಕಟ್ಟುವ ಕೆಲಸ ಮಾಡಬೇಕು ಎಂದರು.

ಕಾರ್ಯಕ್ರಮದಲ್ಲಿ ಭಾರತ ಸೇವಾದಳ ತಾಲೂಕು ಅಧ್ಯಕ್ಷರಾಗಿ ನೂತನವಾಗಿ ಆಯ್ಕೆಯಾದ ಆರ್.ವಿ.ಮಹೇಶ್ ಕುಮಾರ್ ಮತ್ತು ಪ್ರಧಾನ ಕಾರ್ಯದರ್ಶಿ ಹಮಾಮ್ ವೆಂಕಟೇಶ್ ಅವರನ್ನು ಸನ್ಮಾನಿಸಲಾಗಿತು.

ಕಾರ್ಯಕ್ರಮದಲ್ಲಿ ತಾಲ್ಲೂಕು ಪ್ರಧಾನ ಕಾರ್ಯದರ್ಶಿ ಹಮಾಮ್ ವೆಂಕಟೇಶ್, ರಾಜ್ಯ ಸಮಿತಿಯ ರವಿಕುಮಾರ್, ನೆಲಮಂಗಲದ ಹೊನ್ನಸಿದ್ದಯ್ಯ, ಹೊಸಕೋಟೆ ತಾಲೂಕು ಅಧ್ಯಕ್ಷರಾದ ಹರೀಶ್, ಕಾಂಗ್ರೆಸ್ ಸೇವಾದಳದ ಅಧ್ಯಕ್ಷರಾದ ಕಾಂತರಾಜು ಎಂ, ದೇವನಹಳ್ಳಿ, ನೆಲಮಂಗಲ, ದೊಡ್ಡಬಳ್ಳಾಪುರ ಮತ್ತು ಹೊಸಕೋಟೆ ತಾಲೂಕು ಸಮಿತಿಯ ಪದಾಧಿಕಾರಿಗಳು ಉಪಸ್ಥಿತರಿದ್ದರು.

Ramesh Babu

Journalist

Recent Posts

ಮೇಕೆದಾಟು ಯೋಜನೆ ಶೀಘ್ರ ಜಾರಿಗೆ ಸಚಿವರ ದೃಢ ಸಂಕಲ್ಪ: ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ

ಮೇಕೆದಾಟು ಯೋಜನೆಯ ಶೀಘ್ರ ಜಾರಿಗಾಗಿ ಜಲಸಂಪನ್ಮೂಲ ಸಚಿವರು ತೀವ್ರ ಒಲವು ತೋರಿದ್ದು, ಕಾಮಗಾರಿಗೆ ಇನ್ನಷ್ಟು ವೇಗ ನೀಡುವ ನಿಟ್ಟಿನಲ್ಲಿ ರಾಜ್ಯದ…

14 minutes ago

ಶ್ರೀರಂಗವನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ

ತೂಬಗೆರೆ: ಹೋಬಳಿಯ ಯದ್ದಲಹಳ್ಳಿ ಸಮೀಪದ ಶ್ರೀರಂಗವನದಲ್ಲಿರುವ ಶ್ರೀ ವೇಣುಗೋಪಾಲಕೃಷ್ಣ ದೇವಸ್ಥಾನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಅಂಗವಾಗಿ ವಿಶೇಷ ಪೂಜೆ, ಅಭಿಷೇಕ ಹಾಗೂ…

21 minutes ago

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ-2026: ಹಕ್ಕು,ಆಕ್ಷೇಪಣೆ ಸಲ್ಲಿಕೆಗೆ ಸೆ. 23 ವರೆಗೆ ಅವಕಾಶ-ಡಿಸಿ ಅನುರಾಧ

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಕರಡು ಮತದಾರ ಪಟ್ಟಿ ಪ್ರಕಟಗೊಂಡಿದ್ದು ಮತದಾರರ ಪಟ್ಟಿಯಲ್ಲಿ ಹೆಸರಿಲ್ಲದ ಅರ್ಹ ಮತದಾರರು ಮತಗಟ್ಟೆ…

3 hours ago

ರೈಲು ಡಿಕ್ಕಿಗೆ ಅಪರಿಚಿತ ವ್ಯಕ್ತಿ ಬಲಿ

ದೊಡ್ಡಬಳ್ಳಾಪುರ: ರೈಲಿಗೆ ಸಿಲುಕಿ ಗಂಭೀರವಾಗಿ ಗಾಯಗೊಂಡಿದ್ದ ಅಪರಿಚಿತ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ರೈಲು ನಿಲ್ದಾಣದ ಸಮೀಪ…

6 hours ago

ಮಳೆ ಕೊರತೆ ನೀಗಿಸಲು ಸರ್ಕಾರದ ಮಾಸ್ಟರ್ ಪ್ಲ್ಯಾನ್: ಎಚ್.ಎ.ಎಲ್‌ನಲ್ಲಿ ಮೋಡ ಬಿತ್ತನೆಗೆ ಜಲ ಸಂಪನ್ಮೂಲ ಸಚಿವರಿಂದ ಚಾಲನೆ

ರಾಜ್ಯದಲ್ಲಿ ಎದುರಾಗಿರುವ ಮಳೆ‌ ಕೊರತೆ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ಎದುರಿಸುವ ಸಲುವಾಗಿ, ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ 'ಮೋಡ…

6 hours ago

ಕಡಿದಾದ ತಿರುವಿನಲ್ಲಿ ನಿಯಂತ್ರಣ ತಪ್ಪಿದ ಸಿಮೆಂಟ್ ಲಾರಿ; ಚಾಲಕ ಸ್ಥಳದಲ್ಲೇ ಸಾವು ಗುಂಡಮ್ಮಗೆರೆ–ಹೊಸಹಳ್ಳಿ ರಸ್ತೆಯಲ್ಲಿ ಮುಂಜಾನೆ ದುರಂತ | ರಸ್ತೆಗೆ ಚೆಲ್ಲಾಪಿಲ್ಲಿಯಾದ ಸಿಮೆಂಟ್ ಮೂಟೆಗಳು

  ದೊಡ್ಡಬಳ್ಳಾಪುರ: ಕಡಿದಾದ ತಿರುವಿನಲ್ಲಿ ಸಿಮೆಂಟ್ ಮೂಟೆಗಳನ್ನು ಸಾಗಿಸುತ್ತಿದ್ದ ಲಾರಿಯೊಂದು ನಿಯಂತ್ರಣ ತಪ್ಪಿ ಪಲ್ಟಿಯಾದ ಪರಿಣಾಮ ಚಾಲಕ ಸ್ಥಳದಲ್ಲೇ ಮೃತಪಟ್ಟಿರುವ…

10 hours ago