ಮಕ್ಕಳು ಮಾದಕ ವ್ಯಸನ ಮತ್ತು ದುಶ್ಚಟಗಳಿಂದ ದೂರವಿರಬೇಕು- ಬಲಿಷ್ಠ ರಾಷ್ಟ್ರವನ್ನು ಕಟ್ಟುವ ಕೆಲಸ ಮಾಡಬೇಕು- ಭಾರತ ಸೇವಾದಳದ ತಾಲೂಕು ಘಟಕದ ನೂತನ ಅಧ್ಯಕ್ಷ ಆರ್.ವಿ.ಮಹೇಶ್ ಕುಮಾರ್

ಭಾರತ ಸೇವಾದಳದ ಬೆಂಗಳೂರು ಗ್ರಾಮಾಂತರ ಜಿಲ್ಲಾ ಸಮಿತಿ ಹಾಗೂ ರಾಜ್ಯ ಸಮಿತಿ ನನ್ನನ್ನು ತಾಲೂಕು ಸಮಿತಿಯ ಅಧ್ಯಕ್ಷರನ್ನಾಗಿ ಮಾಡಿದ್ದಾರೆ ಅವರಿಗೆ ನಾನು ಅಭಿನಂದನೆ ಸಲ್ಲಿಸುವೆ ಎಂದು ಭಾರತ ಸೇವಾದಳದ ತಾಲೂಕು ಘಟಕದ ನೂತನ ಅಧ್ಯಕ್ಷ ಆರ್.ವಿ.ಮಹೇಶ್ ಕುಮಾರ್ ಅವರು ತಿಳಿಸಿದರು.

ನಗರದ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಭಾರತ ಸೇವಾದಳ ತಾಲೂಕು ಸಮಿತಿ ಹಾಗೂ ಶಾಲಾ ಶಿಕ್ಷಣ ಇಲಾಖೆ ಉಪ ನಿರ್ದೇಶಕರ ಕಚೇರಿ, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸಹಯೋಗದಲ್ಲಿ ಮಕ್ಕಳಿಗೆ ಉಚಿತ ಸಮವಸ್ತ್ರ ವಿತರಣೆ ಕಾರ್ಯಕ್ರಮ ನಡೆಸಲಾಯಿತು. ಈ ವೇಳೆ ಮಾತನಾಡಿದ ಅವರು, ಭಾರತ ಸೇವಾದಳ ಶಾಲಾ ಮಕ್ಕಳಿಗೆ ಶಿಕ್ಷಣದ ಜೊತೆಗೆ ರಾಷ್ಟ್ರಗೀತೆ, ರಾಷ್ಟ್ರಧ್ವಜ, ರಾಷ್ಟ್ರಪಕ್ಷಿ ರಾಷ್ಟ್ರಲಾಂಚನ, ರಾಷ್ಟ್ರಭಕ್ತಿಯ ಬಗ್ಗೆ ಅರಿವು ಮೂಡಿಸುವ ಕೆಲಸವನ್ನು ಮಾಡುತ್ತಿದೆ, ರಾಷ್ಟ್ರವನ್ನು ಪ್ರತಿಬಿಂಬಿಸುವುದೇ ಧ್ವಜ, ಕೇಸರಿ ತ್ಯಾಗ, ಹಸಿರು ಸಂವೃದ್ಧಿ, ಬಿಳಿ ಶಾಂತಿಯ ಪ್ರತೀಕವಾಗಿದೆ. ಈ ಮೂರು ಗುಣಗಳನ್ನು ನಾವೆಲ್ಲರು ಮೈಗೂಡಿಸಿಕೊಳ್ಳಬೇಕು ಎಂದರು.

ದೇಶದಲ್ಲಿ ಇಂದು ಮಾದಕ ವಸ್ತುಗಳ ಜಾಲ ಬೃಹತ್ತಾಗಿ ಬೆಳೆದಿದೆ, ಯುವ ಪೀಳಿಗೆ ಮಾದಕ ವ್ಯಸನಿಗಳಾಗುತ್ತಿದ್ದಾರೆ, ಪೋಷಕರು ಮದ್ಯಪಾನದಿಂದ ದೂರವಾಗಿ ಮಕ್ಕಳಿಗೆ ಮಾರ್ಗದರ್ಶಕರಂತೆ ಇರಬೇಕಿದೆ, ಮಕ್ಕಳು ಮಾದಕ ವ್ಯಸನ ಮತ್ತು ದುಶ್ಚಟಗಳಿಂದ ದೂರ ಇದ್ದು ಬಲಿಷ್ಠ ರಾಷ್ಟ್ರವನ್ನು ಕಟ್ಟುವ ಕೆಲಸ ಮಾಡಬೇಕು ಎಂದರು.

ಕಾರ್ಯಕ್ರಮದಲ್ಲಿ ಭಾರತ ಸೇವಾದಳ ತಾಲೂಕು ಅಧ್ಯಕ್ಷರಾಗಿ ನೂತನವಾಗಿ ಆಯ್ಕೆಯಾದ ಆರ್.ವಿ.ಮಹೇಶ್ ಕುಮಾರ್ ಮತ್ತು ಪ್ರಧಾನ ಕಾರ್ಯದರ್ಶಿ ಹಮಾಮ್ ವೆಂಕಟೇಶ್ ಅವರನ್ನು ಸನ್ಮಾನಿಸಲಾಗಿತು.

ಕಾರ್ಯಕ್ರಮದಲ್ಲಿ ತಾಲ್ಲೂಕು ಪ್ರಧಾನ ಕಾರ್ಯದರ್ಶಿ ಹಮಾಮ್ ವೆಂಕಟೇಶ್, ರಾಜ್ಯ ಸಮಿತಿಯ ರವಿಕುಮಾರ್, ನೆಲಮಂಗಲದ ಹೊನ್ನಸಿದ್ದಯ್ಯ, ಹೊಸಕೋಟೆ ತಾಲೂಕು ಅಧ್ಯಕ್ಷರಾದ ಹರೀಶ್, ಕಾಂಗ್ರೆಸ್ ಸೇವಾದಳದ ಅಧ್ಯಕ್ಷರಾದ ಕಾಂತರಾಜು ಎಂ, ದೇವನಹಳ್ಳಿ, ನೆಲಮಂಗಲ, ದೊಡ್ಡಬಳ್ಳಾಪುರ ಮತ್ತು ಹೊಸಕೋಟೆ ತಾಲೂಕು ಸಮಿತಿಯ ಪದಾಧಿಕಾರಿಗಳು ಉಪಸ್ಥಿತರಿದ್ದರು.

Ramesh Babu

Journalist

Recent Posts

ವಿಬಿ ಜಿ ರಾಮ್ ಜಿ: ಆ.15 ರಿಂದ ಜಾಬ್ ಕಾರ್ಡ್ ಮೇಳ

ಗ್ರಾಮೀಣರಿಗೆ ಸ್ಥಳೀಯವಾಗಿ ಉದ್ಯೋಗ ಒದಗಿಸುವ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಯೋಜನೆಯಡಿ (ವಿಬಿ…

13 hours ago

ತೂಬಗೆರೆ ಸೊಸೈಟಿ ಅಧ್ಯಕ್ಷರಾಗಿ ವಾಸುದೇವ್, ಉಪಾಧ್ಯಕ್ಷರಾಗಿ ಸತ್ಯನಾರಾಯಣಸ್ವಾಮಿ ಅವಿರೋಧ ಆಯ್ಕೆ

ದೊಡ್ಡಬಳ್ಳಾಪುರ: ತಾಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಎನ್‌ಡಿಎ ಬೆಂಬಲಿತ ನಿರ್ದೇಶಕ ಟಿ.ಜಿ.…

19 hours ago

80ರ ಹೊಸ್ತಿಲಲ್ಲಿ ಭಾರತ…..

ಅಂತೂ ಇಂತೂ, ಹಾಗೂ ಹೀಗೂ ಸ್ವಾತಂತ್ರ್ಯ ಪಡೆದ ನಂತರದ 79 ವರ್ಷಗಳನ್ನು ಪೂರೈಸಿದ್ದೇವೆ. ಬಹುತೇಕ ಒಂದು ಪೀಳಿಗೆ ಅಂತ್ಯವಾಗಿ ಮುಂದಿನ…

1 day ago

ಆಹಾರ ಭದ್ರತೆಯಲ್ಲಿ ಯಾವುದೇ ಲೋಪವಾಗದಿರಲಿ- ಆಹಾರ ಆಯೋಗ ಅಧ್ಯಕ್ಷ ಡಾ.ಹೆಚ್ ಕೃಷ್ಣ

ಜಿಲ್ಲೆಯಲ್ಲಿ ಸಾರ್ವಜನಿಕ ವಿತರಣಾ ವ್ಯವಸ್ಥೆಯಲ್ಲಿ ವಿತರಿಸುವ ಮಕ್ಕಳಿಗೆ, ಮಹಿಳೆಯರಿಗೆ ದುರ್ಬಲರಿಗೆ, ಹಿರಿಯರಿಗೆ ಆಹಾರ ವಿತರಣೆಯಲ್ಲಿ ಯಾವುದೇ ರೀತಿಯ ಲೋಪದೋಷ ಕಂಡು…

1 day ago

ನಾಳೆ(ಆ.14) ತೂಬಗೆರೆ ಸೊಸೈಟಿಗೆ ಅಧ್ಯಕ್ಷ, ಉಪಾಧ್ಯಕ್ಷರ ಚುನಾವಣೆ

ದೊಡ್ಡಬಳ್ಳಾಪುರ: ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘದ (ಎಂ.ಪಿ.ಆರ್.ಎ.ಸಿ.ಎಸ್.) ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಗಳಿಗೆ…

2 days ago

“ನನಗೆ ನೀರು ಬೇಕು, ಮಾತಾಡಲ್ಲ” — ಬಾಯಿಗೆ ಪ್ಲಾಸ್ಟರ್ ಹಾಕಿದ ವಾಟಾಳ್ ನಾಗರಾಜ್

ಬೆಂಗಳೂರು: ಕಾವೇರಿ ನದಿ ನೀರಿನ ವಿಚಾರವಾಗಿ ಕರ್ನಾಟಕ ಬಂದ್‌ಗೆ ಕರೆ ನೀಡಿದ್ದ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಅವರನ್ನು ಪೊಲೀಸರು…

2 days ago