ಮಕ್ಕಳ ನಡುವೆ ಕಾಣಿಸಿಕೊಂಡ 5 ಅಡಿ ನಾಗರಹಾವು: ಉರಗ ರಕ್ಷಕರಿಂದ ಸುರಕ್ಷಿತ ರಕ್ಷಣೆ: ಮಕ್ಕಳು ಸುರಕ್ಷಿತ

ಬೆಂಗಳೂರು: ಹೆಸರಘಟ್ಟ ಹೋಬಳಿಯ ತೋಟಗೆರೆ ಗ್ರಾಮದಲ್ಲಿ ಗುರುವಾರ ರಾತ್ರಿ ಸುಮಾರು 10.50ರ ವೇಳೆಗೆ ಮನೆಯೊಳಗೆ ನುಗ್ಗಿದ್ದ ಸುಮಾರು 5 ಅಡಿ ಉದ್ದದ ನಾಗರಹಾವನ್ನು ಸುರಕ್ಷಿತವಾಗಿ ರಕ್ಷಿಸಿ ಅರಣ್ಯಕ್ಕೆ ಬಿಡಲಾಗಿದೆ.

ಮನೆಯೊಳಗೆ ಮಕ್ಕಳು ಮಲಗಿದ್ದ ವೇಳೆ ಅವರ ಸಮೀಪವೇ ನಾಗರಹಾವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಕುಟುಂಬದವರು ತಕ್ಷಣ ಸಂರಕ್ಷಣಾ ಕರೆ ನೀಡಿದ್ದಾರೆ.

 ಮಾಹಿತಿ ಪಡೆದ ಕಾನು ವನ್ಯಜೀವಿ ಸಂರಕ್ಷಣಾ ಪ್ರತಿಷ್ಠಾನದ ಉರಗ ರಕ್ಷಕ ಪ್ರಶಾಂತ್ ಸ್ಥಳಕ್ಕೆ ಧಾವಿಸಿ,  ಮೊದಲು ಮಕ್ಕಳನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಿದರು.

ಬಳಿಕ ನಾಗರಹಾವನ್ನು ಯಾವುದೇ ಹಾನಿಯಾಗದಂತೆ ಸುರಕ್ಷಿತವಾಗಿ ಸೆರೆಹಿಡಿದು, ಅರಣ್ಯ ಪ್ರದೇಶಕ್ಕೆ ಕೊಂಡೊಯ್ದು ಬಿಡುಗಡೆ ಮಾಡಿದರು.

ಸಮಯೋಚಿತವಾಗಿ ಕಾರ್ಯನಿರ್ವಹಿಸಿದ ಉರಗ ರಕ್ಷಕರಿಂದ ಸಂಭವಿಸಬಹುದಾಗಿದ್ದ ಅನಾಹುತ ತಪ್ಪಿದೆ.

ಮಳೆಗಾಲದ ಸಂದರ್ಭದಲ್ಲಿ ಹಾವುಗಳು ಆಹಾರ ಮತ್ತು ಆಶ್ರಯ ಅರಸಿ ಮನೆಗಳ ಸುತ್ತಮುತ್ತ ಕಾಣಿಸಿಕೊಳ್ಳುವ ಸಾಧ್ಯತೆ ಹೆಚ್ಚಿರುವುದರಿಂದ ಸಾರ್ವಜನಿಕರು ಎಚ್ಚರಿಕೆಯಿಂದ ಇರಬೇಕು. ಹಾವು ಕಂಡುಬಂದರೆ ಅದನ್ನು ಹಿಡಿಯಲು ಅಥವಾ ಕೊಲ್ಲಲು ಯತ್ನಿಸದೆ, ತಕ್ಷಣ ಅರಣ್ಯ ಇಲಾಖೆ ಅಥವಾ ತರಬೇತಿ ಪಡೆದ ಉರಗ ರಕ್ಷಕರಿಗೆ ಮಾಹಿತಿ ನೀಡುವಂತೆ ಮನವಿ ಮಾಡಲಾಗಿದೆ.

Ramesh Babu

Journalist

Recent Posts

ವಿಬಿ ಜಿ ರಾಮ್ ಜಿ: ಆ.15 ರಿಂದ ಜಾಬ್ ಕಾರ್ಡ್ ಮೇಳ

ಗ್ರಾಮೀಣರಿಗೆ ಸ್ಥಳೀಯವಾಗಿ ಉದ್ಯೋಗ ಒದಗಿಸುವ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಯೋಜನೆಯಡಿ (ವಿಬಿ…

59 minutes ago

ತೂಬಗೆರೆ ಸೊಸೈಟಿ ಅಧ್ಯಕ್ಷರಾಗಿ ವಾಸುದೇವ್, ಉಪಾಧ್ಯಕ್ಷರಾಗಿ ಸತ್ಯನಾರಾಯಣಸ್ವಾಮಿ ಅವಿರೋಧ ಆಯ್ಕೆ

ದೊಡ್ಡಬಳ್ಳಾಪುರ: ತಾಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಎನ್‌ಡಿಎ ಬೆಂಬಲಿತ ನಿರ್ದೇಶಕ ಟಿ.ಜಿ.…

7 hours ago

80ರ ಹೊಸ್ತಿಲಲ್ಲಿ ಭಾರತ…..

ಅಂತೂ ಇಂತೂ, ಹಾಗೂ ಹೀಗೂ ಸ್ವಾತಂತ್ರ್ಯ ಪಡೆದ ನಂತರದ 79 ವರ್ಷಗಳನ್ನು ಪೂರೈಸಿದ್ದೇವೆ. ಬಹುತೇಕ ಒಂದು ಪೀಳಿಗೆ ಅಂತ್ಯವಾಗಿ ಮುಂದಿನ…

13 hours ago

ಆಹಾರ ಭದ್ರತೆಯಲ್ಲಿ ಯಾವುದೇ ಲೋಪವಾಗದಿರಲಿ- ಆಹಾರ ಆಯೋಗ ಅಧ್ಯಕ್ಷ ಡಾ.ಹೆಚ್ ಕೃಷ್ಣ

ಜಿಲ್ಲೆಯಲ್ಲಿ ಸಾರ್ವಜನಿಕ ವಿತರಣಾ ವ್ಯವಸ್ಥೆಯಲ್ಲಿ ವಿತರಿಸುವ ಮಕ್ಕಳಿಗೆ, ಮಹಿಳೆಯರಿಗೆ ದುರ್ಬಲರಿಗೆ, ಹಿರಿಯರಿಗೆ ಆಹಾರ ವಿತರಣೆಯಲ್ಲಿ ಯಾವುದೇ ರೀತಿಯ ಲೋಪದೋಷ ಕಂಡು…

14 hours ago

ನಾಳೆ(ಆ.14) ತೂಬಗೆರೆ ಸೊಸೈಟಿಗೆ ಅಧ್ಯಕ್ಷ, ಉಪಾಧ್ಯಕ್ಷರ ಚುನಾವಣೆ

ದೊಡ್ಡಬಳ್ಳಾಪುರ: ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘದ (ಎಂ.ಪಿ.ಆರ್.ಎ.ಸಿ.ಎಸ್.) ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಗಳಿಗೆ…

1 day ago

“ನನಗೆ ನೀರು ಬೇಕು, ಮಾತಾಡಲ್ಲ” — ಬಾಯಿಗೆ ಪ್ಲಾಸ್ಟರ್ ಹಾಕಿದ ವಾಟಾಳ್ ನಾಗರಾಜ್

ಬೆಂಗಳೂರು: ಕಾವೇರಿ ನದಿ ನೀರಿನ ವಿಚಾರವಾಗಿ ಕರ್ನಾಟಕ ಬಂದ್‌ಗೆ ಕರೆ ನೀಡಿದ್ದ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಅವರನ್ನು ಪೊಲೀಸರು…

1 day ago