ಮಕ್ಕಳ ಭವಿಷ್ಯ ರೂಪಿಸುವಲ್ಲಿ ಶಿಕ್ಷಕರ ಕೊಡುಗೆ ಅಪಾರ: ಜಿಲ್ಲಾ ಉಸ್ತುವಾರಿ ಸಚಿವ ಕೆ.ಹೆಚ್.ಮುನಿಯಪ್ಪ

ಮಕ್ಕಳ ಭವಿಷ್ಯ ರೂಪಿಸುವುದು ಶಿಕ್ಷಕರ ಕೈಯಲ್ಲಿರುತ್ತದೆ, ದೇಶದ ಅಭಿವೃದ್ಧಿಗಾಗಿ ಮಕ್ಕಳು ಪುಟ್ಟ ಹೆಜ್ಜೆಯಿಂದ ದಿಟ್ಟ ಹೆಜ್ಜೆ ಇಡುವವರೆಗೂ ಶಿಕ್ಷಕರ ಕೊಡುಗೆ ಅಪಾರವಾದದ್ದು ಎಂದು ಅಹಾರ, ನಾಗರಿಕ ಪೂರೈಕೆ ಹಾಗೂ ಗ್ರಾಹಕ ವ್ಯವಹಾರಗಳ ಸಚಿವರು ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರು ಹೇಳಿದರು.

ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯಿತಿ, ದೇವನಹಳ್ಳಿ ತಾಲ್ಲೂಕು ಆಡಳಿತ, ತಾಲ್ಲೂಕು ಪಂಚಾಯಿತಿ, ಶಾಲಾ ಶಿಕ್ಷಣ ಇಲಾಖೆ ವತಿಯಿಂದ ದೇವನಹಳ್ಳಿ ಟೌನ್ ನ ಅಂಬೇಡ್ಕರ್ ಭವನದಲ್ಲಿ  ಭಾರತರತ್ನ ಡಾ.ಸರ್ವೆಪಲ್ಲಿ ರಾಧಾಕೃಷ್ಣನ್ ರವರ ಜನ್ಮದಿನಾಚರಣೆಯ ಅಂಗವಾಗಿ ಏರ್ಪಡಿಸಲಾಗಿದ್ದ ತಾಲ್ಲೂಕು ಮಟ್ಟದ ಶಿಕ್ಷಕರ ದಿನಾಚರಣೆಯನ್ನು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿ ಅವರು ಮಾತನಾಡಿದರು.

ಭಾರತ ರತ್ನ ಸರ್ವೆಪಲ್ಲಿ ರಾಧಾಕೃಷ್ಣನ್ ಅವರು ಸ್ವಾತಂತ್ರ್ಯ ಹೋರಾಟಗಾರರು, ಶಿಕ್ಷಕರು, ರಾಷ್ಟ್ರಪತಿಗಳಾಗಿ ಬಹಳಷ್ಟು ಸೇವೆ ಸಲ್ಲಿಸಿದ್ದಾರೆ. ಸಾವಿತ್ರಿ ಬಾಯಿ ಪುಲೆ ಅವರು ಭಾರತದ ಮೊದಲ ಮಹಿಳಾ ಶಿಕ್ಷಕಿ. ಹೆಣ್ಣು ಕಲಿತರೆ ಶಾಲೆಯೊಂದು ತೆರೆದಂತೆ ಎನ್ನುವ ನಾಣ್ಣುಡಿಯೇ ಇದೆ. ಹೆಣ್ಣು ಮಕ್ಕಳು, ಸದೃಢರು ಸಬಲರು. ಹೆಣ್ಣು ಮಕ್ಕಳ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು. ದೇಶವನ್ನು ಕಟ್ಟುವುದು ಮುಂದಿನ ಪ್ರಜೆಗಳಾದ ಮಕ್ಕಳು. ಮಕ್ಕಳಿಗೆ ಶಿಕ್ಷಕರು ಹೇಗೆ ಪಾಠ ಕಲಿಸುತ್ತೀರಿ ಅನ್ನುವುದು ಮುಖ್ಯ. ಶಾಲೆಯ ಮಕ್ಕಳನ್ನು ನಿಮ್ಮ ಮಕ್ಕಳಂತೆ ಭಾವಿಸಿ. ಬಸವಣ್ಣನವರ  ಕಾಯಕವೇ ಕೈಲಾಸ ಎಂಬಂತೆ ಕರ್ತವ್ಯ ನಿಷ್ಠೆ ಇರಬೇಕು, ದೇಶದ ಭವಿಷ್ಯ ಶಿಕ್ಷಕರ ಕೈಲಿದೆ. ಮಕ್ಕಳಿಗೆ ಸಂಸ್ಕಾರ, ಜ್ಞಾನ ನೀಡಿ ವಿದ್ಯಾರ್ಥಿಗಳನ್ನು ಬೆಳೆಸಬೇಕು ಎಂದರು.

ಅಕ್ಟೋಬರ್ 02 ರ ಗಾಂಧಿ ಜಯಂತಿ ದಿನ 10 ಶಾಲೆಗಳನ್ನು ಮಾದರಿ ಶಾಲೆಗಳನ್ನಾಗಿ ಮಾಡಲಾಗುವುದು. ತಾಲ್ಲೂಕಿನ ಶಾಲೆಗಳಿಗೆ ಮೊದಲ ಹಂತದಲ್ಲಿ ಕುಡಿಯುವ ನೀರು ಶೌಚಾಲಯಕ್ಕೆ ಆದ್ಯತೆ ನೀಡಿ, ಶಾಲಾ ಕಟ್ಟಡ, ಆಟದ ಮೈದಾನ, ಕಾಂಪೌಂಡ್ ನ್ನು ಹಂತ ಹಂತವಾಗಿ ನಿರ್ಮಿಸಲಾಗುವುದು ಎಂದು ಹೇಳಿದರು. ದೇವನಹಳ್ಳಿ ಯಲ್ಲಿರುವ ಗುರುಭವನಕ್ಕೆ 1000 ಆಸನ ವ್ಯವಸ್ಥೆ ಒಳಗೊಂಡ ಭವನ ನಿರ್ಮಾಣಕ್ಕೆ  10 ಲಕ್ಷ ರೂ.ಗಳನ್ನು ಶಾಸಕರ ಅನುದಾನದಲ್ಲಿ ನೀಡಲಾಗುವುದು ಎಂದು ಹೇಳಿದರು.

ಬೆಂಗಳೂರು ಗ್ರಾಮಾಂತರ ಜಿಲ್ಲೆ ಪದವೀಧರರ ಕ್ಷೇತ್ರ ಶಾಸಕರಾದ ಅ.ದೇವೇಗೌಡ ಅವರು ಮಾತನಾಡಿ ಮನುಷ್ಯ ನಾಗರಿಕನಾಗಬೇಕಾದರೆ ಶಿಕ್ಷಣದ ಪಾತ್ರ ಅಪಾರವಾಗಿರುತ್ತದೆ. ಶಿಕ್ಷಣ ಎಂದರೆ ವಿದ್ಯಾರ್ಥಿಯ ವ್ಯಕ್ತಿತ್ವ ರೂಪಿಸುವುದು. ಶಿಕ್ಷಣದ ಗೌರವ ಕಾಪಾಡುವುದು ನಮ್ಮೆಲ್ಲರ ಜವಾಬ್ದಾರಿ. ತಂದೆ ತಾಯಿಯ ನಂತರ ಮಕ್ಕಳ  ಜೀವನ ರೂಪಿಸುವುದು ಶಿಕ್ಷಕರೇ ಎಂದು ಅವರು ಹೇಳಿದರು.

ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರ ಶಾಸಕರಾದ ಪ್ರದೀಪ್ ಈಶ್ವರ್ ಅವರು ಮಾತನಾಡಿ ಮಕ್ಕಳಿಗೆ ಪಾಠದ ಜೊತೆಗೆ , ಧೈರ್ಯ, ಆತ್ಮಸ್ಥೈರ್ಯ, ಸೋಲು ಗೆಲುವನ್ನು ಸಮಾನವಾಗಿ ಸ್ವೀಕರಿಸುವ ಮನೋಬಲ ಬೆಳೆಸಿ. ಸಾಧನೆಗಳ ಬಗ್ಗೆ ಪ್ರೊತ್ಸಾಹದ ಮಾತುಗಳನ್ನಾಡಿ. ಶಾಲೆಯಲ್ಲಿ ಹೇಳುವ ಪಾಠವನ್ನು ನಿಜ ಜೀವನದಲ್ಲಿ ಅಳವಡಿಸಿಕೊಂಡರೆ ಉತ್ತಮ ಪ್ರಜೆಗಳಾಗುತ್ತಾರೆ. ಮಕ್ಕಳ ಭವಿಷ್ಯ ರೂಪಿಸುವಲ್ಲಿ ಶಿಕ್ಷಕರ ಜವಾಬ್ದಾರಿ ಹೆಚ್ಚಿರುತ್ತದೆ ಎಂದು ಅವರು ಹೇಳಿದರು.

ಇದೆ ಸಂದರ್ಭದಲ್ಲಿ ನಿವೃತ್ತ ಶಿಕ್ಷಕರಿಗೆ ಹಾಗೂ ಉತ್ತಮ ಶಿಕ್ಷಕರಿಗೆ ಸನ್ಮಾನಿಸಲಾಯಿತು.

ಕಾರ್ಯಕ್ರಮದಲ್ಲಿ ದೇವನಹಳ್ಳಿ ತಹಶೀಲ್ದಾರ್ ಶಿವರಾಜ್, ಕಾರ್ಯನಿರ್ವಾಹಕ ಅಧಿಕಾರಿ ಶ್ರೀನಾಥ್ ಗೌಡ, ಶಾಲಾ ಸಾಕ್ಷರತಾ ಹಾಗೂ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ಶ್ರೀಕಂಠ, ತಾಲೂಕು ಶಿಕ್ಷಣಾಧಿಕಾರಿ ಸುಮ, ಪುರಸಭೆ ಮುಖ್ಯಾಧಿಕಾರಿ ದೊಡ್ಡ ಮಲ್ಲಯ್ಯ, ಶಿಕ್ಷಕರ ಸಂಘದ ಅಧ್ಯಕ್ಷ, ಉಪಾಧ್ಯಕ್ಷ, ಶಾಲಾ ಶಿಕ್ಷಕರು, ನಿವೃತ್ತ ಶಿಕ್ಷಕರು, ಜನಪ್ರತಿನಿಧಿಗಳು ಉಪಸ್ಥಿತರಿದ್ದರು.

Ramesh Babu

Journalist

Recent Posts

ಸೆ.7ರಂದು ದೊಡ್ಡಬಳ್ಳಾಪುರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ಅಡಚಣೆ

ದೊಡ್ಡಬಳ್ಳಾಪುರ: ನಗರದಲ್ಲಿ ವಿದ್ಯುತ್ ಕಾಮಗಾರಿ ಕೈಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 7ರಂದು ದೊಡ್ಡಬಳ್ಳಾಪುರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. 66/11…

4 hours ago

ಗ್ರಾಮೀಣ ಪ್ರದೇಶದ ಕುಟುಂಬಗಳಿಗೆ ಉದ್ಯೋಗ ಭದ್ರತೆ : ಪಿಡಿಒ ಮುದ್ದಲಿಂಗಯ್ಯ

ಚಿಕ್ಕನಾಯಕನಹಳ್ಳಿ : ಗ್ರಾಮೀಣ ಪ್ರದೇಶದ ಕುಟುಂಬಗಳಿಗೆ ಉದ್ಯೋಗ ಭದ್ರತೆ ಒದಗಿಸುವಲ್ಲಿ ಹಾಗೂ ಆರ್ಥಿಕವಾಗಿ ಸಬಲಗೊಳಿಸುವಲ್ಲಿ 'ವಿಬಿ-ಜಿ ರಾಮ್ ಜಿ' ಯೋಜನೆಯು ಗ್ರಾಮಸ್ಥರಿಗೆ…

15 hours ago

ಬೆನಕನಹಳ್ಳ ಅಭಿವೃದ್ಧಿಗೆ ಮೂಲಸೌಕರ್ಯ ಅಗತ್ಯ: ನಿಸರ್ಗ ನಾರಾಯಣಸ್ವಾಮಿ

ದೊಡ್ಡಬಳ್ಳಾಪುರ: ಪುರಾತನ ದೇವಾಲಯಗಳು, ಧಾರ್ಮಿಕ ಮಹತ್ವ ಹಾಗೂ ಪ್ರಕೃತಿ ಸೌಂದರ್ಯದ ಸಂಗಮವಾಗಿರುವ ಬೆನಕನಹಳ್ಳವನ್ನು ಸಮರ್ಪಕ ಮೂಲಸೌಕರ್ಯಗಳೊಂದಿಗೆ ಅಭಿವೃದ್ಧಿಪಡಿಸಿದರೆ ಪ್ರಮುಖ ಧಾರ್ಮಿಕ…

16 hours ago

ಮೇಕೆ ವಿಚಾರಕ್ಕೆ ಗಲಾಟೆ; ವ್ಯಕ್ತಿಯ ಕೊಲೆ: ಮೂವರಿಗೆ ಶಿಕ್ಷೆ ಮುಖ್ಯ ಆರೋಪಿಗೆ ಜೀವಾವಧಿ ಶಿಕ್ಷೆ, ಇಬ್ಬರಿಗೆ ಜೈಲು ಶಿಕ್ಷೆ ಹಾಗೂ ದಂಡ

ದೊಡ್ಡಬಳ್ಳಾಪುರ: ಮೇಕೆ ಮಗುಗೆ ಗುದ್ದಿದ ವಿಚಾರವಾಗಿ ಉಂಟಾದ ಗಲಾಟೆ ಕೊಲೆಯಲ್ಲಿ ಅಂತ್ಯಗೊಂಡ ಪ್ರಕರಣದಲ್ಲಿ ಮೂವರು ಆರೋಪಿಗಳನ್ನು ಅಪರಾಧಿಗಳೆಂದು ತೀರ್ಪು ನೀಡಿರುವ…

17 hours ago

ಕಾನೂನು ತೊಡಕಿಲ್ಲದ ಅರ್ಜಿಗಳು ನಿಗದಿತ ಕಾಲಮಿತಿಯೊಳಗೆ ವಿಲೇವಾರಿ- ಸಚಿವ ಕೆ.ಎಚ್ ಮುನಿಯಪ್ಪ

ಪ್ರಜಾ ಸೇವಾ ಆಂದೋಲದ ಮೂಲಕ ಜನರಿಂದ ಸ್ವೀಕರಿಸುವ ಅರ್ಜಿಗಳಿಗೆ ಕಾನೂನು ವ್ಯಾಪ್ತಿ ಹೊರತುಪಡಿಸಿ ಉಳಿದ ಅರ್ಜಿಗಳಿಗೆ ನಿಗದಿತ ಕಾಲಮಿತಿಯೊಳಗೆ ಪರಿಹಾರ…

19 hours ago

ಸಾಹಿತ್ಯ ಪರಿಷತ್ ಚುನಾವಣೆ…..

ಸಾಹಿತ್ಯ ಪರಿಷತ್ ಚುನಾವಣೆ..... ನನ್ನ ಮತ........? ಕನ್ನಡ ಸಾಹಿತ್ಯ ಪರಿಷತ್ತಿನ ಚುನಾವಣೆ ಕನ್ನಡದ ಅಸ್ಮಿತೆಗೊಂದು ಸವಾಲು. ಭ್ರಷ್ಟರ ವಿರುದ್ಧ ಪ್ರಾಮಾಣಿಕರು,…

1 day ago