ಮಕ್ಕಳ ಮನೋವಿಕಸನಕ್ಕಾಗಿ “ಚಿಲಿಪಿಲಿ” ಶಿಬಿರ: ಯಾಂತ್ರಿಕತೆಗೆ ಗುಡ್ ಬೈ: ಮಕ್ಕಳ ಸ್ವಾಭಾವಿಕ ಜೀವನಕ್ಕೆ ಒತ್ತು

ಡಾ.ಡಿ.ಆರ್ ನಾಗರಾಜ್ ಬಳಗ, ವಾಯ್ಸ್ ಆಫ್ ಆಕ್ಷನ್ ಟ್ರಸ್ಟ್, ಸೌಭಾಗ್ಯ ಸೇವಾ ಟ್ರಸ್ಟ್ ಸಹಯೋಗದೊಂದಿಗೆ ದೊಡ್ಡಬಳ್ಳಾಪುರ ತಾಲೂಕಿನ ಕಂಟನಕುಂಟೆ  ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲಾ ಆವರಣದಲ್ಲಿ ಮಕ್ಕಳ ಮನೋವಿಕಸನಕ್ಕಾಗಿ “ಚಿಲಿಪಿಲಿ” ಹೆಸರಿನಡಿ ಶಿಬಿರವನ್ನು ಆಯೋಜನೆ ಮಾಡಲಾಗಿತ್ತು.

ಶಿಬಿರವು ವಸತಿ ಹಾಗೂ ವಸತಿಯೇತರ ಸೌಕರ್ಯವನ್ನು ಹೊಂದಿದ್ದು, ಆರನೇ ತರಗತಿಯಿಂದ 9ನೇ ತರಗತಿಯಲ್ಲಿ ಓದುತ್ತಿರುವ ಸುಮಾರು 70-80 ಮಕ್ಕಳು ಸ್ವಯಂ ಪ್ರೇರಿತರಾಗಿ ಭಾಗವಹಿಸಿದ್ದರು.

ಸುಮಾರು 70-80 ಮಕ್ಕಳು ಸ್ವಯಂ ಪ್ರೇರಿತರಾಗಿ  ಭಾಗವಹಿಸಿದ್ದರು. ಆಧುನಿಕ ಜಗತ್ತಿನಲ್ಲಿ ಮಕ್ಕಳು ಯಾಂತ್ರಿಕ ಜೀವನದ‌ ಜಂಜಾಟದಲ್ಲಿ ಸಿಲುಕಿಕೊಂಡು ಒದ್ದಾಡುತ್ತಿದ್ದಾರೆ. ಈ ಹಿನ್ನೆಲೆ ಈ ಶಿಬಿರದಲ್ಲಿ ಯಾಂತ್ರಿಕ ಜೀವನದಿಂದ ಹೊರಬಂದು ತಮ್ಮ ಮನೋವಿಕಸನ ಬೆಳೆಸಿಕೊಂಡು ನೈಸರ್ಗಿಕ ಜೀವನ ನಡೆಸುವುದು ಹೇಗೆ…? ತಮ್ಮ ಜೀವನಾನುಭವ ಹೆಚ್ಚಿಸಿಕೊಳ್ಳುವುದು ಹೇಗೆ…? ಹೊಸ ಸಂಗತಿಗಳ ಅಧ್ಯಯನ, ಹೊಸ ಸ್ನೇಹಿತರು, ಹೊಸ‌ ಹೊಸ ವಿಚಾರಗಳನ್ನು ಮಕ್ಕಳಿಗೆ ತಿಳಿಸಿಕೊಡಲಾಯಿತು.

ಶಿಬಿರದಲ್ಲಿ ಮಕ್ಕಳಿಗೆ ಅತ್ಯಂತ ಅಗತ್ಯವಾದ ಸ್ವಾತಂತ್ರ್ಯದ ಪರಿಚಯ. ತಾವಾಗಿಯೇ ತಮ್ಮ ಕೆಲಸಗಳನ್ನು ಹೇಗೆ ಮಾಡಿಕೊಳ್ಳಬೇಕು ಎಂಬುದರ ಅರಿವು, ಹೊಸ ಹೊಸ ಜವಾಬ್ದಾರಿಗಳ ಕುರಿತು ತಿಳಿಸಿಕೊಡಲಾಯಿತು.

ಕಲೆ, ಸಾಹಿತ್ಯ, ಕೃಷಿ, ಮಕ್ಕಳ ಹಕ್ಕು, ಶಿಕ್ಷಣ, ಮಕ್ಕಳ ಮನೋವಿಕಸನ, ಹಾಡು, ನೃತ್ಯ, ನಾಟಕ, ಚಿತ್ರಕಲೆ, ವಿಜ್ಙಾನ ಪ್ರಾತ್ಯಕ್ಷಿತೆ ತಯಾರಿಕೆ, ಗೊಂಬೆ ತಯಾರಿಕೆ, ಟ್ರಕ್ಕಿಂಗ್, ಶಿಲ್ಪಗಳ ತಯಾರಿಕೆ, ಮಕ್ಕಳಿಗೆ ಕಾನೂನು ತಿಳಿವಳಿಕೆಯನ್ನು ಒಳಗೊಂಡಂತೆ ಹಲವಾರು ವಿನೂತನ ರೀತಿಯ ಕಾರ್ಯಚಟುವಟಿಕೆಗಳನ್ನು ಆಯಾಯ ಕ್ಷೇತ್ರಗಳಲ್ಲಿ ಪರಿಣಿತಿ ಹೊಂದಿರುವ ಸಂಪನ್ಮೂಲ ವ್ಯಕ್ತಿಗಳು ಮಕ್ಕಳಿಗೆ ಅರಿವು ಮೂಡಿಸಿದರು.

ಡಾ.ಡಿ.ಆರ್.ನಾಗರಾಜ್‌ ಬಳಗದ ಸದಸ್ಯ ಹಾಗೂ ಉಪನ್ಯಾಸಕ ಪ್ರಕಾಶ್ ಮಂಟೇದ ಮತಾನಾಡಿ, ಶಿಬಿರದ ಮುಖ್ಯ ಉದ್ದೇಶ ಮಕ್ಕಳ ಮನೋವಿಕಸನ ಬೆಳವಣಿಗೆ. ಪ್ರಸ್ತುತ ಸಂದರ್ಭದಲ್ಲಿ ಮಕ್ಕಳು ಮೊಬೈಲ್ ತಮ್ಮ ಪ್ರಪಂಚ ಅಂದುಕೊಂಡಿದ್ದಾರೆ. ಅದನ್ನು ಬಿಟ್ಟು ನಾವು ಇರಲಾರೆವು ಎಂಬ ಮನೋಭಾವನೆ ಮಕ್ಕಳಲ್ಲಿ ಇದೆ. ಒಂದು ರೀತಿಯಲ್ಲಿ ಯಾಂತ್ರಿಕ ಜೀವನ ನಡೆಸುತ್ತಿದ್ದಾರೆ. ಅದರಿಂದ ಹೊರತರಲು ಚಿಲಿಪಿಲಿ ಶಿಬಿರವನ್ನು ಆಯೋಜನೆ ಮಾಡಲಾಗಿತ್ತು. ಈ‌ ಶಿಬಿರದಲ್ಲಿ ಮಾನವೀಯ ಮೌಲ್ಯಗಳೊಂದಿಗೆ ಸಮಾಜದಲ್ಲಿ ಮೌಲ್ಯಯುತ ಜೀವನವನ್ನು ಕಟ್ಟಿಕೊಡಲು, ಒತ್ತಡವಿಲ್ಲದ ಜೀವನವನ್ನು ಮುನ್ನಡೆಸಲು, ಪರಸ್ಪರ ಪ್ರೀತಿ, ವಿಶ್ವಾಸದಿಂದ ಇರುವ ಕುರಿತು ಮಕ್ಕಳಿಗೆ ತಿಳಿಸಿಕೊಡಲಾಯಿತು. ಚಿಲಿಪಿಲಿ ಶಿಬಿರದಲ್ಲಿ ಮಕ್ಕಳು ಲವಲವಿಕೆಯಿಂದ ಭಾಗವಹಿಸಿ ಶಿಬಿರದ ಸದುಪಯೋಗ ಪಡೆಸಿಕೊಂಡರು ಎಂದರು.

ಈ ವೇಳೆ ಡಾ.ಡಿ.ಆರ್.ನಾಗರಾಜ್‌ ಬಳಗದ ಸದಸ್ಯ ಹಾಗೂ ಶಿಬಿರದ ಸಂಯೋಜಕ ವೆಂಕಟೇಶ್ ಕೊನಘಟ್ಟ, ವಾಯ್ಸ್‌ ಆಫ್‌ ಆಕ್ಷನ್‌ ಟ್ರಸ್ಟಿನ ಸದಸ್ಯ ಹಾಗೂ ಶಿಬಿರದ ನಿರ್ದೇಶಕ ಕಾಂತರಾಜು, ಡಾ.ಆರ್.ಡಿ.ಆರ್.ನಾಗರಾಜ್‌ ಬಳಗ ಕಾರ್ಯದರ್ಶಿ ಹಾಗೂ ವಕೀಲ ದಯಾನಂದಗೌಡ ಹೆಚ್. ಎನ್‌, ಪೊಲೀಸ್ ಚಂದ್ರ ಶೇಖರ್ ಸೇರಿದಂತೆ ಇತರರು ಶಿಬಿರ ಯಶಸ್ಸಿಗೆ ಸಹಕರಿಸಿದರು.

Ramesh Babu

Journalist

Recent Posts

ಆಘಾತದಲ್ಲಿ ಮಡಿದ ಬೆಸ್ಕಾಂ ಸಿಬ್ಬಂದಿ ಕುಟುಂಬಕ್ಕೆ ತಲಾ 1 ಕೋಟಿ ರೂ. ಪರಿಹಾರ ವಿತರಿಸಿದ ಇಂಧನ ಸಚಿವ ಜಾರ್ಜ್‌

ಕರ್ತವ್ಯದ ವೇಳೆ ಮಡಿದ ಬೆಸ್ಕಾಂನ ಮೂವರು ಸಿಬ್ಬಂದಿಯ ಕುಟುಂಬಸ್ಥರಿಗೆ ಇಂಧನ ಸಚಿವ ಕೆ.ಜೆ ಜಾರ್ಜ್‌ ತಲಾ ಒಂದು ಕೋಟಿ ರೂ.…

4 hours ago

ಎಸ್ಮಾ ಜಾರಿ ಮಾಡಿದರೂ ಬಗ್ಗಲ್ಲ.. ಜಗ್ಗಲ್ಲ.. ಡಿಸಿಎಂ ಡಿಕೆಶಿಗೆ ಶಾಸಕ ಧೀರಜ್ ಮುನಿರಾಜು ಸವಾಲ್

ಬೆಂಗಳೂರಿನ ಕಸವನ್ನು ವಿಲೇವಾರಿ ಮಾಡಲು ಮಹದೇವಪುರ ಮತ್ತು ಮೀಟಗಾನಹಳ್ಳಿಯ ವಿಲೇವಾರಿ ಘಟಕಗಳ ಗ್ರಾಮಸ್ಥರು ವಿರೋಧ ವ್ಯಕ್ತಪಡಿಸಿದ್ದ ಹಿನ್ನೆಲೆ ಅಲ್ಲಿನ ಕಸದ…

5 hours ago

ಭಾರತ ರಾಷ್ಟ್ರೀಯ ಟ್ರೇಡ್ ಯೂನಿಯನ್ ಕಾಂಗ್ರೆಸ್ ಯೂತ್ ವಿಭಾಗದ ಜಿಲ್ಲಾಧ್ಯಕ್ಷರಾಗಿ ಮೊಹಮ್ಮದ್ ನಿಸಾರ್ ನೇಮಕ

ದೊಡ್ಡಬಳ್ಳಾಪುರ : ಭಾರತ ರಾಷ್ಟ್ರೀಯ ಟ್ರೇಡ್ ಯೂನಿಯನ್ (ಇಂಟಕ್ ) ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಯೂತ್ ವಿಭಾಗದ ಜಿಲ್ಲಾಧ್ಯಕ್ಷರಾಗಿ ಮೊಹಮ್ಮದ್…

6 hours ago

ಅಂಗವಿಕಲ ಅಭ್ಯರ್ಥಿಗಳಿಗೆ ಉಚಿತ ಪರೀಕ್ಷಾ ಪೂರ್ವ ತರಬೇತಿ

ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆ, ಅಂಗವಿಕಲರ ವಿಶೇಷ ಉದ್ಯೋಗ ವಿನಿಮಯ ಕಚೇರಿ, ಪೀಣ್ಯ, ಬೆಂಗಳೂರು 'ಅಧ್ಯಯನ ವೃತ್ತ' (ಸ್ಟಡಿ…

6 hours ago

ಚಳಿಗಾಲದ ಒಲಿಂಪಿಕ್ಸ್ 2026 ಕ್ರೀಡಾಕೂಟ: 10 ಸಾವಿರ ಕಾಂಡೋಮ್ ಗಳು ಕೇವಲ 3 ದಿನದಲ್ಲಿ ಖಾಲಿ: ಇನ್ನೂ ಹೆಚ್ಚಿನ ಕಾಂಡೋಮ್ ಗಳು ಬೇಕು ಎಂಬ ಬೇಡಿಕೆ

ಚಳಿಗಾಲದ ಒಲಿಂಪಿಕ್ಸ್ 2026 ಕ್ರೀಡಾಕೂಟದಲ್ಲಿ ಪಾಲ್ಗೊಳ್ಳುವವರಿಗಾಗಿ ಕ್ರೀಡಾಗ್ರಾಮದಲ್ಲಿ ಸರಬರಾಜು ಮಾಡಲಾಗಿದ್ದ ಬರೊಬ್ಬರಿ 10 ಸಾವಿರ ಕಾಂಡೋಮ್ ಗಳು ಕೇವಲ 3…

10 hours ago

ಎಸ್ಸೆಸ್ಸೆಲ್ಸಿ ವಿದ್ಯಾರ್ಥಿ ಶಾಲಾ ಕಟ್ಟಡದಿಂದ ಬಿದ್ದು ಸಾ*ವು!

ಚಿತ್ರದುರ್ಗಾ: ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಯೊಬ್ಬ ಶಾಲಾ ಕಟ್ಟಡದ ಮೇಲಿಂದ ಬಿದ್ದು ಅನುಮಾನಸ್ಪದವಾಗಿ ಸಾ*ವನ್ನಪ್ಪಿದ ಘಟನೆ ವರದಿಯಾಗಿದೆ. ಚಿತ್ರದುರ್ಗ ಜಿಲ್ಲೆಯ ಭರಮಸಾಗರ ಗ್ರಾಮದಲ್ಲಿ…

18 hours ago