ಮಕ್ಕಳ ಮನೋವಿಕಸನಕ್ಕಾಗಿ “ಚಿಲಿಪಿಲಿ” ಶಿಬಿರ: ಯಾಂತ್ರಿಕತೆಗೆ ಗುಡ್ ಬೈ: ಮಕ್ಕಳ ಸ್ವಾಭಾವಿಕ ಜೀವನಕ್ಕೆ ಒತ್ತು

ಡಾ.ಡಿ.ಆರ್ ನಾಗರಾಜ್ ಬಳಗ, ವಾಯ್ಸ್ ಆಫ್ ಆಕ್ಷನ್ ಟ್ರಸ್ಟ್, ಸೌಭಾಗ್ಯ ಸೇವಾ ಟ್ರಸ್ಟ್ ಸಹಯೋಗದೊಂದಿಗೆ ದೊಡ್ಡಬಳ್ಳಾಪುರ ತಾಲೂಕಿನ ಕಂಟನಕುಂಟೆ  ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲಾ ಆವರಣದಲ್ಲಿ ಮಕ್ಕಳ ಮನೋವಿಕಸನಕ್ಕಾಗಿ “ಚಿಲಿಪಿಲಿ” ಹೆಸರಿನಡಿ ಶಿಬಿರವನ್ನು ಆಯೋಜನೆ ಮಾಡಲಾಗಿತ್ತು.

ಶಿಬಿರವು ವಸತಿ ಹಾಗೂ ವಸತಿಯೇತರ ಸೌಕರ್ಯವನ್ನು ಹೊಂದಿದ್ದು, ಆರನೇ ತರಗತಿಯಿಂದ 9ನೇ ತರಗತಿಯಲ್ಲಿ ಓದುತ್ತಿರುವ ಸುಮಾರು 70-80 ಮಕ್ಕಳು ಸ್ವಯಂ ಪ್ರೇರಿತರಾಗಿ ಭಾಗವಹಿಸಿದ್ದರು.

ಸುಮಾರು 70-80 ಮಕ್ಕಳು ಸ್ವಯಂ ಪ್ರೇರಿತರಾಗಿ  ಭಾಗವಹಿಸಿದ್ದರು. ಆಧುನಿಕ ಜಗತ್ತಿನಲ್ಲಿ ಮಕ್ಕಳು ಯಾಂತ್ರಿಕ ಜೀವನದ‌ ಜಂಜಾಟದಲ್ಲಿ ಸಿಲುಕಿಕೊಂಡು ಒದ್ದಾಡುತ್ತಿದ್ದಾರೆ. ಈ ಹಿನ್ನೆಲೆ ಈ ಶಿಬಿರದಲ್ಲಿ ಯಾಂತ್ರಿಕ ಜೀವನದಿಂದ ಹೊರಬಂದು ತಮ್ಮ ಮನೋವಿಕಸನ ಬೆಳೆಸಿಕೊಂಡು ನೈಸರ್ಗಿಕ ಜೀವನ ನಡೆಸುವುದು ಹೇಗೆ…? ತಮ್ಮ ಜೀವನಾನುಭವ ಹೆಚ್ಚಿಸಿಕೊಳ್ಳುವುದು ಹೇಗೆ…? ಹೊಸ ಸಂಗತಿಗಳ ಅಧ್ಯಯನ, ಹೊಸ ಸ್ನೇಹಿತರು, ಹೊಸ‌ ಹೊಸ ವಿಚಾರಗಳನ್ನು ಮಕ್ಕಳಿಗೆ ತಿಳಿಸಿಕೊಡಲಾಯಿತು.

ಶಿಬಿರದಲ್ಲಿ ಮಕ್ಕಳಿಗೆ ಅತ್ಯಂತ ಅಗತ್ಯವಾದ ಸ್ವಾತಂತ್ರ್ಯದ ಪರಿಚಯ. ತಾವಾಗಿಯೇ ತಮ್ಮ ಕೆಲಸಗಳನ್ನು ಹೇಗೆ ಮಾಡಿಕೊಳ್ಳಬೇಕು ಎಂಬುದರ ಅರಿವು, ಹೊಸ ಹೊಸ ಜವಾಬ್ದಾರಿಗಳ ಕುರಿತು ತಿಳಿಸಿಕೊಡಲಾಯಿತು.

ಕಲೆ, ಸಾಹಿತ್ಯ, ಕೃಷಿ, ಮಕ್ಕಳ ಹಕ್ಕು, ಶಿಕ್ಷಣ, ಮಕ್ಕಳ ಮನೋವಿಕಸನ, ಹಾಡು, ನೃತ್ಯ, ನಾಟಕ, ಚಿತ್ರಕಲೆ, ವಿಜ್ಙಾನ ಪ್ರಾತ್ಯಕ್ಷಿತೆ ತಯಾರಿಕೆ, ಗೊಂಬೆ ತಯಾರಿಕೆ, ಟ್ರಕ್ಕಿಂಗ್, ಶಿಲ್ಪಗಳ ತಯಾರಿಕೆ, ಮಕ್ಕಳಿಗೆ ಕಾನೂನು ತಿಳಿವಳಿಕೆಯನ್ನು ಒಳಗೊಂಡಂತೆ ಹಲವಾರು ವಿನೂತನ ರೀತಿಯ ಕಾರ್ಯಚಟುವಟಿಕೆಗಳನ್ನು ಆಯಾಯ ಕ್ಷೇತ್ರಗಳಲ್ಲಿ ಪರಿಣಿತಿ ಹೊಂದಿರುವ ಸಂಪನ್ಮೂಲ ವ್ಯಕ್ತಿಗಳು ಮಕ್ಕಳಿಗೆ ಅರಿವು ಮೂಡಿಸಿದರು.

ಡಾ.ಡಿ.ಆರ್.ನಾಗರಾಜ್‌ ಬಳಗದ ಸದಸ್ಯ ಹಾಗೂ ಉಪನ್ಯಾಸಕ ಪ್ರಕಾಶ್ ಮಂಟೇದ ಮತಾನಾಡಿ, ಶಿಬಿರದ ಮುಖ್ಯ ಉದ್ದೇಶ ಮಕ್ಕಳ ಮನೋವಿಕಸನ ಬೆಳವಣಿಗೆ. ಪ್ರಸ್ತುತ ಸಂದರ್ಭದಲ್ಲಿ ಮಕ್ಕಳು ಮೊಬೈಲ್ ತಮ್ಮ ಪ್ರಪಂಚ ಅಂದುಕೊಂಡಿದ್ದಾರೆ. ಅದನ್ನು ಬಿಟ್ಟು ನಾವು ಇರಲಾರೆವು ಎಂಬ ಮನೋಭಾವನೆ ಮಕ್ಕಳಲ್ಲಿ ಇದೆ. ಒಂದು ರೀತಿಯಲ್ಲಿ ಯಾಂತ್ರಿಕ ಜೀವನ ನಡೆಸುತ್ತಿದ್ದಾರೆ. ಅದರಿಂದ ಹೊರತರಲು ಚಿಲಿಪಿಲಿ ಶಿಬಿರವನ್ನು ಆಯೋಜನೆ ಮಾಡಲಾಗಿತ್ತು. ಈ‌ ಶಿಬಿರದಲ್ಲಿ ಮಾನವೀಯ ಮೌಲ್ಯಗಳೊಂದಿಗೆ ಸಮಾಜದಲ್ಲಿ ಮೌಲ್ಯಯುತ ಜೀವನವನ್ನು ಕಟ್ಟಿಕೊಡಲು, ಒತ್ತಡವಿಲ್ಲದ ಜೀವನವನ್ನು ಮುನ್ನಡೆಸಲು, ಪರಸ್ಪರ ಪ್ರೀತಿ, ವಿಶ್ವಾಸದಿಂದ ಇರುವ ಕುರಿತು ಮಕ್ಕಳಿಗೆ ತಿಳಿಸಿಕೊಡಲಾಯಿತು. ಚಿಲಿಪಿಲಿ ಶಿಬಿರದಲ್ಲಿ ಮಕ್ಕಳು ಲವಲವಿಕೆಯಿಂದ ಭಾಗವಹಿಸಿ ಶಿಬಿರದ ಸದುಪಯೋಗ ಪಡೆಸಿಕೊಂಡರು ಎಂದರು.

ಈ ವೇಳೆ ಡಾ.ಡಿ.ಆರ್.ನಾಗರಾಜ್‌ ಬಳಗದ ಸದಸ್ಯ ಹಾಗೂ ಶಿಬಿರದ ಸಂಯೋಜಕ ವೆಂಕಟೇಶ್ ಕೊನಘಟ್ಟ, ವಾಯ್ಸ್‌ ಆಫ್‌ ಆಕ್ಷನ್‌ ಟ್ರಸ್ಟಿನ ಸದಸ್ಯ ಹಾಗೂ ಶಿಬಿರದ ನಿರ್ದೇಶಕ ಕಾಂತರಾಜು, ಡಾ.ಆರ್.ಡಿ.ಆರ್.ನಾಗರಾಜ್‌ ಬಳಗ ಕಾರ್ಯದರ್ಶಿ ಹಾಗೂ ವಕೀಲ ದಯಾನಂದಗೌಡ ಹೆಚ್. ಎನ್‌, ಪೊಲೀಸ್ ಚಂದ್ರ ಶೇಖರ್ ಸೇರಿದಂತೆ ಇತರರು ಶಿಬಿರ ಯಶಸ್ಸಿಗೆ ಸಹಕರಿಸಿದರು.

Ramesh Babu

Journalist

Recent Posts

ಮಹಿಳೆಯರು ಸ್ವಾವಲಂಬಿಗಳಾಗಿ ಬದುಕಬೇಕು- ಪೊಲೀಸ್ ಸಬ್ ಇನ್ಸ್ಪೆಕ್ಟರ್ ವರಲಕ್ಷ್ಮಿ .ವಿ

ದೊಡ್ಡಬಳ್ಳಾಪುರ: ಮಹಿಳಾ ದಿನ ಕೇವಲ ಒಂದು ದಿನದ ಆಚರಣೆಯಲ್ಲ ಬದಲಾಗಿ ಮಹಿಳೆಯರ ಸಮಾನತೆಗಾಗಿ ನಡೆಯುತ್ತಿರುವ ನಿರಂತರ ಹೋರಾಟದ ಸಂಕೇತ ಎಂದು…

2 hours ago

ಕೇಂದ್ರ ಮೀಸಲು ಪೊಲೀಸ್ ಪಡೆ (CRPF) 87ನೇ ಸ್ಥಾಪನಾ ದಿನಾಚರಣೆ: ಉಚಿತ ಆರೋಗ್ಯ ಶಿಬರ ಮತ್ತು ರಕ್ತದಾನ ಶಿಬಿರ ಆಯೋಜನೆ

ಕೇಂದ್ರ ಮೀಸಲು ಪೊಲೀಸ್ ಪಡೆ (CRPF) 87ನೇ ಸ್ಥಾಪನಾ ದಿನಾಚರಣೆ ಹಿನ್ನೆಲೆ ಕರ್ನಾಟಕ ಮತ್ತು ಕೇರಳ ವಲಯದ CRPF ಬೆಂಗಳೂರು…

2 hours ago

ವಾಣಿಜ್ಯ ಸಿಲಿಂಡರ್‌ಗಳ ಪೂರೈಕೆಯಲ್ಲಿ ವ್ಯತ್ಯಯ: ದೊಡ್ಡಬಳ್ಳಾಪುರಕ್ಕೆ ಕಳೆದ ಒಂದು ವಾರದಿಂದ ಬಾರದ ವಾಣಿಜ್ಯ ಸಿಲಿಂಡರ್ ಗಳು: ನಗರದ ಹೋಟೆಲ್ ಗಳು, ಘಾಟಿ ಕ್ಷೇತ್ರಕ್ಕೂ ತಟ್ಟಿದ ಬಿಸಿ: ಸೌದೆ ಒಲೆ ಮೊರೆ ಹೋದ ಜನ

ಮದ್ಯಪ್ರಾಚ್ಯಗಳ ದೇಶಗಳಲ್ಲಿ ನಡೆಯುತ್ತಿರುವ ಯುದ್ದಗಳಿಂದಾಗಿ ಎಲ್.ಪಿ.ಜಿ ಕೊರತೆ ದೇಶಕ್ಕೆ ಎದುರಾಗಿದೆ. ಹೋಟೆಲ್ ಗಳಲ್ಲಿ ವಾಣಿಜ್ಯ ಸಿಲಿಂಡರ್ ಗಳ ಅಭಾವ ಸೃಷ್ಟಿಯಾಗಿ…

2 hours ago

ಮಧ್ಯಪ್ರಾಚ್ಯದಲ್ಲಿ ಯುದ್ಧ ಹಿನ್ನೆಲೆ: ರಾಜ್ಯದ ಹಲವೆಡೆ ಗ್ಯಾಸ್ ಸಿಲಿಂಡರ್ ಪೂರೈಕೆಯಲ್ಲಿ ಅಭಾವ: ಗೃಹ ಬಳಕೆಯ ಗ್ಯಾಸ್ ಸಿಲಿಂಡರ್ ಸಮಸ್ಯೆ ಇಲ್ಲ- ಆಹಾರ ಸಚಿವ ಕೆ.ಎಚ್. ಮುನಿಯಪ್ಪ

ಮಧ್ಯಪ್ರಾಚ್ಯದಲ್ಲಿ ಯುದ್ಧದ ಹಿನ್ನೆಲೆಯಲ್ಲಿ ರಾಜ್ಯದ ಹಲವೆಡೆ ಗ್ಯಾಸ್ ಸಿಲಿಂಡರ್ ಪೂರೈಕೆಯಲ್ಲಿ ಅಭಾವದ ಪರಿಸ್ಥಿತಿ ಸೃಷ್ಟಿಯಾಗಿರುವ ವರದಿಗಳ ನಡುವೆ ಗೃಹ ಬಳಕೆಯ…

5 hours ago

Arizona’s New Wave of Home‑Buying Assistance: What Buyers Need to Know

The desert sun has always promised a bright future for Arizona residents, but the rising…

12 hours ago

ರಾಜಕೀಯ ಮತ್ತು ಸಾಂಸ್ಕೃತಿಕ ಜನಜೀವನದಲ್ಲಿ ಅತಿಮುಖ್ಯ ಪಾತ್ರವಹಿಸಿದ ಕೆಲವೇ ಪ್ರಮುಖರಲ್ಲಿ ಲಂಕೇಶ್ ಒಬ್ಬರು

ಪಿ. ಲಂಕೇಶ್........ ಮಾರ್ಚ್ 8, 1935, ಜನವರಿ 25, 2000.... ಎರಡು ವೈರುಧ್ಯಗಳ ಚಿಂತನೆಯ ಜನರಲ್ಲಿ ಪ್ರೀತಿ - ದ್ವೇಷ…

13 hours ago