ಮಕ್ಕಳ ಮನೋವಿಕಸನಕ್ಕಾಗಿ “ಚಿಲಿಪಿಲಿ” ಶಿಬಿರ: ಯಾಂತ್ರಿಕತೆಗೆ ಗುಡ್ ಬೈ: ಮಕ್ಕಳ ಸ್ವಾಭಾವಿಕ ಜೀವನಕ್ಕೆ ಒತ್ತು

ಡಾ.ಡಿ.ಆರ್ ನಾಗರಾಜ್ ಬಳಗ, ವಾಯ್ಸ್ ಆಫ್ ಆಕ್ಷನ್ ಟ್ರಸ್ಟ್, ಸೌಭಾಗ್ಯ ಸೇವಾ ಟ್ರಸ್ಟ್ ಸಹಯೋಗದೊಂದಿಗೆ ದೊಡ್ಡಬಳ್ಳಾಪುರ ತಾಲೂಕಿನ ಕಂಟನಕುಂಟೆ  ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲಾ ಆವರಣದಲ್ಲಿ ಮಕ್ಕಳ ಮನೋವಿಕಸನಕ್ಕಾಗಿ “ಚಿಲಿಪಿಲಿ” ಹೆಸರಿನಡಿ ಶಿಬಿರವನ್ನು ಆಯೋಜನೆ ಮಾಡಲಾಗಿತ್ತು.

ಶಿಬಿರವು ವಸತಿ ಹಾಗೂ ವಸತಿಯೇತರ ಸೌಕರ್ಯವನ್ನು ಹೊಂದಿದ್ದು, ಆರನೇ ತರಗತಿಯಿಂದ 9ನೇ ತರಗತಿಯಲ್ಲಿ ಓದುತ್ತಿರುವ ಸುಮಾರು 70-80 ಮಕ್ಕಳು ಸ್ವಯಂ ಪ್ರೇರಿತರಾಗಿ ಭಾಗವಹಿಸಿದ್ದರು.

ಸುಮಾರು 70-80 ಮಕ್ಕಳು ಸ್ವಯಂ ಪ್ರೇರಿತರಾಗಿ  ಭಾಗವಹಿಸಿದ್ದರು. ಆಧುನಿಕ ಜಗತ್ತಿನಲ್ಲಿ ಮಕ್ಕಳು ಯಾಂತ್ರಿಕ ಜೀವನದ‌ ಜಂಜಾಟದಲ್ಲಿ ಸಿಲುಕಿಕೊಂಡು ಒದ್ದಾಡುತ್ತಿದ್ದಾರೆ. ಈ ಹಿನ್ನೆಲೆ ಈ ಶಿಬಿರದಲ್ಲಿ ಯಾಂತ್ರಿಕ ಜೀವನದಿಂದ ಹೊರಬಂದು ತಮ್ಮ ಮನೋವಿಕಸನ ಬೆಳೆಸಿಕೊಂಡು ನೈಸರ್ಗಿಕ ಜೀವನ ನಡೆಸುವುದು ಹೇಗೆ…? ತಮ್ಮ ಜೀವನಾನುಭವ ಹೆಚ್ಚಿಸಿಕೊಳ್ಳುವುದು ಹೇಗೆ…? ಹೊಸ ಸಂಗತಿಗಳ ಅಧ್ಯಯನ, ಹೊಸ ಸ್ನೇಹಿತರು, ಹೊಸ‌ ಹೊಸ ವಿಚಾರಗಳನ್ನು ಮಕ್ಕಳಿಗೆ ತಿಳಿಸಿಕೊಡಲಾಯಿತು.

ಶಿಬಿರದಲ್ಲಿ ಮಕ್ಕಳಿಗೆ ಅತ್ಯಂತ ಅಗತ್ಯವಾದ ಸ್ವಾತಂತ್ರ್ಯದ ಪರಿಚಯ. ತಾವಾಗಿಯೇ ತಮ್ಮ ಕೆಲಸಗಳನ್ನು ಹೇಗೆ ಮಾಡಿಕೊಳ್ಳಬೇಕು ಎಂಬುದರ ಅರಿವು, ಹೊಸ ಹೊಸ ಜವಾಬ್ದಾರಿಗಳ ಕುರಿತು ತಿಳಿಸಿಕೊಡಲಾಯಿತು.

ಕಲೆ, ಸಾಹಿತ್ಯ, ಕೃಷಿ, ಮಕ್ಕಳ ಹಕ್ಕು, ಶಿಕ್ಷಣ, ಮಕ್ಕಳ ಮನೋವಿಕಸನ, ಹಾಡು, ನೃತ್ಯ, ನಾಟಕ, ಚಿತ್ರಕಲೆ, ವಿಜ್ಙಾನ ಪ್ರಾತ್ಯಕ್ಷಿತೆ ತಯಾರಿಕೆ, ಗೊಂಬೆ ತಯಾರಿಕೆ, ಟ್ರಕ್ಕಿಂಗ್, ಶಿಲ್ಪಗಳ ತಯಾರಿಕೆ, ಮಕ್ಕಳಿಗೆ ಕಾನೂನು ತಿಳಿವಳಿಕೆಯನ್ನು ಒಳಗೊಂಡಂತೆ ಹಲವಾರು ವಿನೂತನ ರೀತಿಯ ಕಾರ್ಯಚಟುವಟಿಕೆಗಳನ್ನು ಆಯಾಯ ಕ್ಷೇತ್ರಗಳಲ್ಲಿ ಪರಿಣಿತಿ ಹೊಂದಿರುವ ಸಂಪನ್ಮೂಲ ವ್ಯಕ್ತಿಗಳು ಮಕ್ಕಳಿಗೆ ಅರಿವು ಮೂಡಿಸಿದರು.

ಡಾ.ಡಿ.ಆರ್.ನಾಗರಾಜ್‌ ಬಳಗದ ಸದಸ್ಯ ಹಾಗೂ ಉಪನ್ಯಾಸಕ ಪ್ರಕಾಶ್ ಮಂಟೇದ ಮತಾನಾಡಿ, ಶಿಬಿರದ ಮುಖ್ಯ ಉದ್ದೇಶ ಮಕ್ಕಳ ಮನೋವಿಕಸನ ಬೆಳವಣಿಗೆ. ಪ್ರಸ್ತುತ ಸಂದರ್ಭದಲ್ಲಿ ಮಕ್ಕಳು ಮೊಬೈಲ್ ತಮ್ಮ ಪ್ರಪಂಚ ಅಂದುಕೊಂಡಿದ್ದಾರೆ. ಅದನ್ನು ಬಿಟ್ಟು ನಾವು ಇರಲಾರೆವು ಎಂಬ ಮನೋಭಾವನೆ ಮಕ್ಕಳಲ್ಲಿ ಇದೆ. ಒಂದು ರೀತಿಯಲ್ಲಿ ಯಾಂತ್ರಿಕ ಜೀವನ ನಡೆಸುತ್ತಿದ್ದಾರೆ. ಅದರಿಂದ ಹೊರತರಲು ಚಿಲಿಪಿಲಿ ಶಿಬಿರವನ್ನು ಆಯೋಜನೆ ಮಾಡಲಾಗಿತ್ತು. ಈ‌ ಶಿಬಿರದಲ್ಲಿ ಮಾನವೀಯ ಮೌಲ್ಯಗಳೊಂದಿಗೆ ಸಮಾಜದಲ್ಲಿ ಮೌಲ್ಯಯುತ ಜೀವನವನ್ನು ಕಟ್ಟಿಕೊಡಲು, ಒತ್ತಡವಿಲ್ಲದ ಜೀವನವನ್ನು ಮುನ್ನಡೆಸಲು, ಪರಸ್ಪರ ಪ್ರೀತಿ, ವಿಶ್ವಾಸದಿಂದ ಇರುವ ಕುರಿತು ಮಕ್ಕಳಿಗೆ ತಿಳಿಸಿಕೊಡಲಾಯಿತು. ಚಿಲಿಪಿಲಿ ಶಿಬಿರದಲ್ಲಿ ಮಕ್ಕಳು ಲವಲವಿಕೆಯಿಂದ ಭಾಗವಹಿಸಿ ಶಿಬಿರದ ಸದುಪಯೋಗ ಪಡೆಸಿಕೊಂಡರು ಎಂದರು.

ಈ ವೇಳೆ ಡಾ.ಡಿ.ಆರ್.ನಾಗರಾಜ್‌ ಬಳಗದ ಸದಸ್ಯ ಹಾಗೂ ಶಿಬಿರದ ಸಂಯೋಜಕ ವೆಂಕಟೇಶ್ ಕೊನಘಟ್ಟ, ವಾಯ್ಸ್‌ ಆಫ್‌ ಆಕ್ಷನ್‌ ಟ್ರಸ್ಟಿನ ಸದಸ್ಯ ಹಾಗೂ ಶಿಬಿರದ ನಿರ್ದೇಶಕ ಕಾಂತರಾಜು, ಡಾ.ಆರ್.ಡಿ.ಆರ್.ನಾಗರಾಜ್‌ ಬಳಗ ಕಾರ್ಯದರ್ಶಿ ಹಾಗೂ ವಕೀಲ ದಯಾನಂದಗೌಡ ಹೆಚ್. ಎನ್‌, ಪೊಲೀಸ್ ಚಂದ್ರ ಶೇಖರ್ ಸೇರಿದಂತೆ ಇತರರು ಶಿಬಿರ ಯಶಸ್ಸಿಗೆ ಸಹಕರಿಸಿದರು.

Ramesh Babu

Journalist

Recent Posts

ಪ್ರಧಾನಿ ನರೇಂದ್ರ ಮೋದಿಯನ್ನ ಭೇಟಿಯಾದ ಸಿಎಂ ಸಿದ್ದರಾಮಯ್ಯ:ಬಹುದಿನಗಳಿಂದ ಬಾಕಿಯಿರುವ ಬೇಡಿಕೆಗಳನ್ನು ಈಡೇರಿಸುವಂತೆ ಮನವಿ: ಬೇಡಿಕೆ ಯಾವುದು….?

ದೆಹಲಿಯಲ್ಲಿ ಇಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ರಾಜ್ಯಕ್ಕೆ ಸಂಬಂಧಿಸಿದಂತೆ ಬಹುದಿನಗಳಿಂದ ಬಾಕಿಯಿರುವ ಬೇಡಿಕೆಗಳನ್ನು ಈಡೇರಿಸುವಂತೆ ಮನವಿ ಪತ್ರವನ್ನು…

11 hours ago

ಕಡೇ ಕಾರ್ತೀಕ ಸೋಮವಾರ: ಮೀನಾಕ್ಷಿ ಸಮೇತ ಸ್ವಯಂ ಭುವನೇಶ್ವರ ದೇವಾಲಯದಲ್ಲಿ ಲಕ್ಷ ದೀಪೋತ್ಸವ

ದೂಡ್ಡಬಳ್ಳಾಪುರದ ಮೀನಾಕ್ಷಿ ಸಮೇತ ಸ್ವಯಂ ಭುವನೇಶ್ವರ ಸ್ವಾಮಿಯವರ ದೇವಾಲಯದಲ್ಲಿ ಕಡೇ ಕಾರ್ತೀಕ ಸೋಮವಾರ ಪ್ರಯುಕ್ತ ಈ ದಿನ ಬೆಳಿಗ್ಗೆ ಗಣಪತಿ…

13 hours ago

ನಾಳೆ (ನ.18) ತಾಲೂಕಿನ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ವಿದ್ಯುತ್ ಅಡಚಣೆಯಾಗುವ ಪ್ರದೇಶಗಳ ಪಟ್ಟಿ ಇಲ್ಲಿದೆ ನೋಡಿ….

ದೊಡ್ಡಬಳ್ಳಾಪುರ: ನಾಳೆ (ನ.18) ನಗರದ ಹೊರವಲಯದಲ್ಲಿರುವ 66/11ಕಿವಿ ಡಿ.ಕ್ರಾಸ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣೆ ಕಾರ್ಯವನ್ನು ಹಮ್ಮಿಕೊಳ್ಳಲಾಗಿರುವುದರಿಂದ ತಾಲೂಕಿನ ಹಲವೆಡೆ ವಿದ್ಯುತ್‌…

14 hours ago

18 ದೇವಸ್ಥಾನಗಳಿಗೆ ಕನ್ನ ಹಾಕಿದ್ದ ಖದೀಮರ ಬಂಧನ: ಲಕ್ಷಾಂತರ ಮೌಲ್ಯದ ಬಂಗಾರದ ತಾಳಿ ಬೊಟ್ಟುಗಳು, ಗುಂಡುಗಳು ವಶ

  18 ದೇವಸ್ಥಾನಗಳಲ್ಲಿ ಕಳ್ಳತನ ಮಾಡಿದ್ದ ಮೂವರು ಆರೋಪಿಗಳನ್ನು‌ ಬಂಗಾರಪೇಟೆ ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ ರೂ.1,50,000/-ಮೌಲ್ಯದ ಬಂಗಾರದ ತಾಳಿ ಬೊಟ್ಟುಗಳು,…

20 hours ago

ಮುಂದೆ ಸಾಗುತ್ತಿದ್ದ ಲಾರಿ ಚಾಲಕನ ನಿರ್ಲಕ್ಷ್ಯಕ್ಕೆ ಎಂಬಿಎ ವಿದ್ಯಾರ್ಥಿ ಸಾವು

ದೊಡ್ಡಬಳ್ಳಾಪುರ: ಮುಂದೆ ಸಾಗುತ್ತಿದ್ದ ಲಾರಿ ಚಾಲಕನ ನಿರ್ಲಕ್ಷ್ಯದಿಂದ ಹಿಂಬದಿಯಲ್ಲಿ ಬರುತ್ತಿದ್ದ ಕಾರು ಭೀಕರ ಅಪಘಾತಕ್ಕೆ ಒಳಗಾಗಿ ಎಂಬಿಎ ವಿದ್ಯಾರ್ಥಿ ಸಾವನಪ್ಪಿರುವ…

20 hours ago

ಮೊಬೈಲ್ ನೋಡುತ್ತಾ ಕುಳಿತಿದ್ದ 21 ವರ್ಷದ ಯುವಕನಿಗೆ ಚಾಕು ಇರಿತ: ಚಾಕು ಇರಿತ ವಿಡಿಯೋ ಸಿಸಿಟಿವಿಯಲ್ಲಿ ಸೆರೆ

ತನ್ನ ಪಾಡಿಗೆ ತಾನು ಮೊಬೈಲ್ ನೋಡುತ್ತಾ ಕುಳಿತಿದ್ದ ಯುವಕನಿಗೆ ಚಾಕು ಇರಿದಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ, ದೇವನಹಳ್ಳಿ ತಾಲ್ಲೂಕಿನ…

23 hours ago