ಮಕ್ಕಳ ಮನೋವಿಕಸನಕ್ಕಾಗಿ “ಚಿಲಿಪಿಲಿ” ಶಿಬಿರ: ಯಾಂತ್ರಿಕತೆಗೆ ಗುಡ್ ಬೈ: ಮಕ್ಕಳ ಸ್ವಾಭಾವಿಕ ಜೀವನಕ್ಕೆ ಒತ್ತು

ಡಾ.ಡಿ.ಆರ್ ನಾಗರಾಜ್ ಬಳಗ, ವಾಯ್ಸ್ ಆಫ್ ಆಕ್ಷನ್ ಟ್ರಸ್ಟ್, ಸೌಭಾಗ್ಯ ಸೇವಾ ಟ್ರಸ್ಟ್ ಸಹಯೋಗದೊಂದಿಗೆ ದೊಡ್ಡಬಳ್ಳಾಪುರ ತಾಲೂಕಿನ ಕಂಟನಕುಂಟೆ  ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲಾ ಆವರಣದಲ್ಲಿ ಮಕ್ಕಳ ಮನೋವಿಕಸನಕ್ಕಾಗಿ “ಚಿಲಿಪಿಲಿ” ಹೆಸರಿನಡಿ ಶಿಬಿರವನ್ನು ಆಯೋಜನೆ ಮಾಡಲಾಗಿತ್ತು.

ಶಿಬಿರವು ವಸತಿ ಹಾಗೂ ವಸತಿಯೇತರ ಸೌಕರ್ಯವನ್ನು ಹೊಂದಿದ್ದು, ಆರನೇ ತರಗತಿಯಿಂದ 9ನೇ ತರಗತಿಯಲ್ಲಿ ಓದುತ್ತಿರುವ ಸುಮಾರು 70-80 ಮಕ್ಕಳು ಸ್ವಯಂ ಪ್ರೇರಿತರಾಗಿ ಭಾಗವಹಿಸಿದ್ದರು.

ಸುಮಾರು 70-80 ಮಕ್ಕಳು ಸ್ವಯಂ ಪ್ರೇರಿತರಾಗಿ  ಭಾಗವಹಿಸಿದ್ದರು. ಆಧುನಿಕ ಜಗತ್ತಿನಲ್ಲಿ ಮಕ್ಕಳು ಯಾಂತ್ರಿಕ ಜೀವನದ‌ ಜಂಜಾಟದಲ್ಲಿ ಸಿಲುಕಿಕೊಂಡು ಒದ್ದಾಡುತ್ತಿದ್ದಾರೆ. ಈ ಹಿನ್ನೆಲೆ ಈ ಶಿಬಿರದಲ್ಲಿ ಯಾಂತ್ರಿಕ ಜೀವನದಿಂದ ಹೊರಬಂದು ತಮ್ಮ ಮನೋವಿಕಸನ ಬೆಳೆಸಿಕೊಂಡು ನೈಸರ್ಗಿಕ ಜೀವನ ನಡೆಸುವುದು ಹೇಗೆ…? ತಮ್ಮ ಜೀವನಾನುಭವ ಹೆಚ್ಚಿಸಿಕೊಳ್ಳುವುದು ಹೇಗೆ…? ಹೊಸ ಸಂಗತಿಗಳ ಅಧ್ಯಯನ, ಹೊಸ ಸ್ನೇಹಿತರು, ಹೊಸ‌ ಹೊಸ ವಿಚಾರಗಳನ್ನು ಮಕ್ಕಳಿಗೆ ತಿಳಿಸಿಕೊಡಲಾಯಿತು.

ಶಿಬಿರದಲ್ಲಿ ಮಕ್ಕಳಿಗೆ ಅತ್ಯಂತ ಅಗತ್ಯವಾದ ಸ್ವಾತಂತ್ರ್ಯದ ಪರಿಚಯ. ತಾವಾಗಿಯೇ ತಮ್ಮ ಕೆಲಸಗಳನ್ನು ಹೇಗೆ ಮಾಡಿಕೊಳ್ಳಬೇಕು ಎಂಬುದರ ಅರಿವು, ಹೊಸ ಹೊಸ ಜವಾಬ್ದಾರಿಗಳ ಕುರಿತು ತಿಳಿಸಿಕೊಡಲಾಯಿತು.

ಕಲೆ, ಸಾಹಿತ್ಯ, ಕೃಷಿ, ಮಕ್ಕಳ ಹಕ್ಕು, ಶಿಕ್ಷಣ, ಮಕ್ಕಳ ಮನೋವಿಕಸನ, ಹಾಡು, ನೃತ್ಯ, ನಾಟಕ, ಚಿತ್ರಕಲೆ, ವಿಜ್ಙಾನ ಪ್ರಾತ್ಯಕ್ಷಿತೆ ತಯಾರಿಕೆ, ಗೊಂಬೆ ತಯಾರಿಕೆ, ಟ್ರಕ್ಕಿಂಗ್, ಶಿಲ್ಪಗಳ ತಯಾರಿಕೆ, ಮಕ್ಕಳಿಗೆ ಕಾನೂನು ತಿಳಿವಳಿಕೆಯನ್ನು ಒಳಗೊಂಡಂತೆ ಹಲವಾರು ವಿನೂತನ ರೀತಿಯ ಕಾರ್ಯಚಟುವಟಿಕೆಗಳನ್ನು ಆಯಾಯ ಕ್ಷೇತ್ರಗಳಲ್ಲಿ ಪರಿಣಿತಿ ಹೊಂದಿರುವ ಸಂಪನ್ಮೂಲ ವ್ಯಕ್ತಿಗಳು ಮಕ್ಕಳಿಗೆ ಅರಿವು ಮೂಡಿಸಿದರು.

ಡಾ.ಡಿ.ಆರ್.ನಾಗರಾಜ್‌ ಬಳಗದ ಸದಸ್ಯ ಹಾಗೂ ಉಪನ್ಯಾಸಕ ಪ್ರಕಾಶ್ ಮಂಟೇದ ಮತಾನಾಡಿ, ಶಿಬಿರದ ಮುಖ್ಯ ಉದ್ದೇಶ ಮಕ್ಕಳ ಮನೋವಿಕಸನ ಬೆಳವಣಿಗೆ. ಪ್ರಸ್ತುತ ಸಂದರ್ಭದಲ್ಲಿ ಮಕ್ಕಳು ಮೊಬೈಲ್ ತಮ್ಮ ಪ್ರಪಂಚ ಅಂದುಕೊಂಡಿದ್ದಾರೆ. ಅದನ್ನು ಬಿಟ್ಟು ನಾವು ಇರಲಾರೆವು ಎಂಬ ಮನೋಭಾವನೆ ಮಕ್ಕಳಲ್ಲಿ ಇದೆ. ಒಂದು ರೀತಿಯಲ್ಲಿ ಯಾಂತ್ರಿಕ ಜೀವನ ನಡೆಸುತ್ತಿದ್ದಾರೆ. ಅದರಿಂದ ಹೊರತರಲು ಚಿಲಿಪಿಲಿ ಶಿಬಿರವನ್ನು ಆಯೋಜನೆ ಮಾಡಲಾಗಿತ್ತು. ಈ‌ ಶಿಬಿರದಲ್ಲಿ ಮಾನವೀಯ ಮೌಲ್ಯಗಳೊಂದಿಗೆ ಸಮಾಜದಲ್ಲಿ ಮೌಲ್ಯಯುತ ಜೀವನವನ್ನು ಕಟ್ಟಿಕೊಡಲು, ಒತ್ತಡವಿಲ್ಲದ ಜೀವನವನ್ನು ಮುನ್ನಡೆಸಲು, ಪರಸ್ಪರ ಪ್ರೀತಿ, ವಿಶ್ವಾಸದಿಂದ ಇರುವ ಕುರಿತು ಮಕ್ಕಳಿಗೆ ತಿಳಿಸಿಕೊಡಲಾಯಿತು. ಚಿಲಿಪಿಲಿ ಶಿಬಿರದಲ್ಲಿ ಮಕ್ಕಳು ಲವಲವಿಕೆಯಿಂದ ಭಾಗವಹಿಸಿ ಶಿಬಿರದ ಸದುಪಯೋಗ ಪಡೆಸಿಕೊಂಡರು ಎಂದರು.

ಈ ವೇಳೆ ಡಾ.ಡಿ.ಆರ್.ನಾಗರಾಜ್‌ ಬಳಗದ ಸದಸ್ಯ ಹಾಗೂ ಶಿಬಿರದ ಸಂಯೋಜಕ ವೆಂಕಟೇಶ್ ಕೊನಘಟ್ಟ, ವಾಯ್ಸ್‌ ಆಫ್‌ ಆಕ್ಷನ್‌ ಟ್ರಸ್ಟಿನ ಸದಸ್ಯ ಹಾಗೂ ಶಿಬಿರದ ನಿರ್ದೇಶಕ ಕಾಂತರಾಜು, ಡಾ.ಆರ್.ಡಿ.ಆರ್.ನಾಗರಾಜ್‌ ಬಳಗ ಕಾರ್ಯದರ್ಶಿ ಹಾಗೂ ವಕೀಲ ದಯಾನಂದಗೌಡ ಹೆಚ್. ಎನ್‌, ಪೊಲೀಸ್ ಚಂದ್ರ ಶೇಖರ್ ಸೇರಿದಂತೆ ಇತರರು ಶಿಬಿರ ಯಶಸ್ಸಿಗೆ ಸಹಕರಿಸಿದರು.

Ramesh Babu

Journalist

Recent Posts

ಜನರನ್ನು ತಾಲೂಕು ಕಚೇರಿಗೆ ಅಲೆದಾಟ ತಪ್ಪಿಸಿ ಸ್ಥಳದಲ್ಲೇ ಸಮಸ್ಯೆ ಪರಿಹರಿಸಿ- ಶಾಸಕ ಕೊತ್ತೂರು ಮಂಜುನಾಥ್

ಕೋಲಾರ: ಸಾರ್ವಜನಿಕರು ತಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ತಾಲೂಕು ಕಚೇರಿಗೆ ಅಲೆದಾಡುವುದನ್ನು ತಪ್ಪಿಸಿ, ಸ್ಥಳದಲ್ಲಿಯೇ ಸೇವೆ ಒದಗಿಸುವ ನಿಟ್ಟಿನಲ್ಲಿ ಪ್ರಜಾ ಸೇವಾ…

1 hour ago

ಭಾರತಕ್ಕೆ ಕ್ಸಿ ಜಿನ್‌ಪಿಂಗ್ ಭೇಟಿ: ಮೋದಿ–ಕ್ಸಿ ದ್ವಿಪಕ್ಷೀಯ ಮಾತುಕತೆ ಇಂದು

ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರು ಎರಡು ದಿನಗಳ ಭಾರತ ಭೇಟಿಗಾಗಿ ಶನಿವಾರ ಮಧ್ಯಾಹ್ನ ರಾಷ್ಟ್ರ ರಾಜಧಾನಿ ನವದೆಹಲಿಗೆ…

5 hours ago

ಮಧುರೆ ದೇವಾಲಯದ ಬಳಿ ಮೇಲ್ಸೇತುವೆ ಅವ್ಯವಸ್ಥೆ: ಮೇಲಕ್ಕೆ ಚಾಚಿರುವ ಕಂಬಿಗಳಿಂದ ವಾಹನ ಸವಾರರಿಗೆ ತೊಂದರೆ

ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಮಧುರೆ ದೇವಾಲಯದ ಸಮೀಪ ಹೊಸದಾಗಿ ನಿರ್ಮಿಸಿರುವ ಮೇಲ್ಸೇತುವೆ ವಾಹನ ಸವಾರರಿಗೆ ತೀವ್ರ ತೊಂದರೆ ಉಂಟುಮಾಡುತ್ತಿದೆ.…

12 hours ago

ನಾಯಿ ಕಡಿತದ ಆತಂಕಕ್ಕೆ ಲಸಿಕೆಯ ಕವಚ: ರೇಬೀಸ್ ನಿಯಂತ್ರಣಕ್ಕೆ 32 ಸಾವಿರ ಲಸಿಕೆ

ಬೆಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಹಾಗೂ ರೇಬೀಸ್ ಸೋಂಕಿನ ಆತಂಕಕ್ಕೆ ಕಡಿವಾಣ ಹಾಕಲು ಪಶುಪಾಲನಾ ಇಲಾಖೆ ಬೃಹತ್…

13 hours ago

2028ರ ಚುನಾವಣೆಗೆ ಜಾಲತಾಣವೇ ಅಸ್ತ್ರ- ಸಿಎಂಆರ್ ಶ್ರೀನಾಥ್

ಕೋಲಾರ: 2028ರಲ್ಲಿ ರಾಜ್ಯದಲ್ಲಿ ಎನ್‌ಡಿಎ ಸರ್ಕಾರ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಖಚಿತ. ಸಾಮಾಜಿಕ ಜಾಲತಾಣ ಈಗ ಪರಿಣಾಮಕಾರಿಯಾಗಿದೆ. ಅದನ್ನು…

1 day ago

ಗಣೇಶ ವಿಸರ್ಜನೆ ವೇಳೆ ಮುಂಜಾಗ್ರತೆ ವಹಿಸಲು ರೈತ ಸಂಘ ಒತ್ತಾಯ: ಕೃಷಿ ಹೊಂಡ, ಕೆರೆ-ಕುಂಟೆಗಳಲ್ಲಿ ವಿಸರ್ಜನೆಗೆ ಕಡಿವಾಣ ಹಾಕಿ: ಜಿಲ್ಲಾಧಿಕಾರಿಗೆ ಮನವಿ

ಕೋಲಾರ : ಗಣೇಶ ಮೂರ್ತಿ ವಿಸರ್ಜನೆ ಸಂದರ್ಭದಲ್ಲಿ ಯಾವುದೇ ರೀತಿಯ ಅನಾಹುತ, ಅಹಿತಕರ ಘಟನೆಗಳು ಸಂಭವಿಸದಂತೆ ಗ್ರಾಮೀಣ ಪ್ರದೇಶಗಳಲ್ಲಿ ಕರಪತ್ರಗಳ…

1 day ago