ಡಾ.ಡಿ.ಆರ್ ನಾಗರಾಜ್ ಬಳಗ, ವಾಯ್ಸ್ ಆಫ್ ಆಕ್ಷನ್ ಟ್ರಸ್ಟ್, ಸೌಭಾಗ್ಯ ಸೇವಾ ಟ್ರಸ್ಟ್ ಸಹಯೋಗದೊಂದಿಗೆ ದೊಡ್ಡಬಳ್ಳಾಪುರ ತಾಲೂಕಿನ ಕಂಟನಕುಂಟೆ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲಾ ಆವರಣದಲ್ಲಿ ಮಕ್ಕಳ ಮನೋವಿಕಸನಕ್ಕಾಗಿ “ಚಿಲಿಪಿಲಿ” ಹೆಸರಿನಡಿ ಶಿಬಿರವನ್ನು ಆಯೋಜನೆ ಮಾಡಲಾಗಿತ್ತು.
ಸುಮಾರು 70-80 ಮಕ್ಕಳು ಸ್ವಯಂ ಪ್ರೇರಿತರಾಗಿ ಭಾಗವಹಿಸಿದ್ದರು. ಆಧುನಿಕ ಜಗತ್ತಿನಲ್ಲಿ ಮಕ್ಕಳು ಯಾಂತ್ರಿಕ ಜೀವನದ ಜಂಜಾಟದಲ್ಲಿ ಸಿಲುಕಿಕೊಂಡು ಒದ್ದಾಡುತ್ತಿದ್ದಾರೆ. ಈ ಹಿನ್ನೆಲೆ ಈ ಶಿಬಿರದಲ್ಲಿ ಯಾಂತ್ರಿಕ ಜೀವನದಿಂದ ಹೊರಬಂದು ತಮ್ಮ ಮನೋವಿಕಸನ ಬೆಳೆಸಿಕೊಂಡು ನೈಸರ್ಗಿಕ ಜೀವನ ನಡೆಸುವುದು ಹೇಗೆ…? ತಮ್ಮ ಜೀವನಾನುಭವ ಹೆಚ್ಚಿಸಿಕೊಳ್ಳುವುದು ಹೇಗೆ…? ಹೊಸ ಸಂಗತಿಗಳ ಅಧ್ಯಯನ, ಹೊಸ ಸ್ನೇಹಿತರು, ಹೊಸ ಹೊಸ ವಿಚಾರಗಳನ್ನು ಮಕ್ಕಳಿಗೆ ತಿಳಿಸಿಕೊಡಲಾಯಿತು.
ಕಲೆ, ಸಾಹಿತ್ಯ, ಕೃಷಿ, ಮಕ್ಕಳ ಹಕ್ಕು, ಶಿಕ್ಷಣ, ಮಕ್ಕಳ ಮನೋವಿಕಸನ, ಹಾಡು, ನೃತ್ಯ, ನಾಟಕ, ಚಿತ್ರಕಲೆ, ವಿಜ್ಙಾನ ಪ್ರಾತ್ಯಕ್ಷಿತೆ ತಯಾರಿಕೆ, ಗೊಂಬೆ ತಯಾರಿಕೆ, ಟ್ರಕ್ಕಿಂಗ್, ಶಿಲ್ಪಗಳ ತಯಾರಿಕೆ, ಮಕ್ಕಳಿಗೆ ಕಾನೂನು ತಿಳಿವಳಿಕೆಯನ್ನು ಒಳಗೊಂಡಂತೆ ಹಲವಾರು ವಿನೂತನ ರೀತಿಯ ಕಾರ್ಯಚಟುವಟಿಕೆಗಳನ್ನು ಆಯಾಯ ಕ್ಷೇತ್ರಗಳಲ್ಲಿ ಪರಿಣಿತಿ ಹೊಂದಿರುವ ಸಂಪನ್ಮೂಲ ವ್ಯಕ್ತಿಗಳು ಮಕ್ಕಳಿಗೆ ಅರಿವು ಮೂಡಿಸಿದರು.
ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…
ದೊಡ್ಡಬಳ್ಳಾಪುರ: ತೋಟದಲ್ಲಿ ಸುಗಂಧರಾಜ ಹೂ ಕೀಳುವಾಗ ಹಾವು ಕಚ್ಚಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಪಚ್ಚಾರ್ಲಳ್ಳಿ…
ಕರ್ನಾಟಕ ಕಂಡ ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಜನಪರ ಯೋಜನೆಗಳು, ಆಶೋತ್ತರಗಳಿಗೆ ನಾವೆಲ್ಲರೂ ಧ್ವನಿಯಾಗಿ ಮುಂದಿನ…
ಮನೆಯಲ್ಲಿ ಆಟವಾಡಿಕೊಂಡು ಕಾಲ ಕಳೆಯುತ್ತಿದ್ದ ಪುಟ್ಟ ಕಂದಮ್ಮಗಳನ್ನು ಪೋಷಕರು ಉತ್ತಮ ಶಿಕ್ಷಣ ದೊರೆಯಲಿ ಎಂಬ ಆಶಯದಿಂದ ಅಂಗನವಾಡಿ ಕೇಂದ್ರಕ್ಕೆ ಕಳುಹಿಸುತ್ತಿದ್ದಾರೆ.…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗ್ರಾಮ ಪಂಚಾಯಿತಿಗಳ ಚುನಾವಣೆಗೆ ಮೀಸಲಾತಿ ಪ್ರಕಟವಾಗುತ್ತಿದ್ದಂತೆ ಗ್ರಾಮೀಣ ಭಾಗದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಯಾವ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮೂಲಕ ಹಾದುಹೋಗುವ ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಗಳ ಸರ್ವೀಸ್ ರಸ್ತೆಗಳು ದಿನದಿಂದ ದಿನಕ್ಕೆ ಭಾರಿ…