ಡಾ.ಡಿ.ಆರ್ ನಾಗರಾಜ್ ಬಳಗ, ವಾಯ್ಸ್ ಆಫ್ ಆಕ್ಷನ್ ಟ್ರಸ್ಟ್, ಸೌಭಾಗ್ಯ ಸೇವಾ ಟ್ರಸ್ಟ್ ಸಹಯೋಗದೊಂದಿಗೆ ದೊಡ್ಡಬಳ್ಳಾಪುರ ತಾಲೂಕಿನ ಕಂಟನಕುಂಟೆ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲಾ ಆವರಣದಲ್ಲಿ ಮಕ್ಕಳ ಮನೋವಿಕಸನಕ್ಕಾಗಿ “ಚಿಲಿಪಿಲಿ” ಹೆಸರಿನಡಿ ಶಿಬಿರವನ್ನು ಆಯೋಜನೆ ಮಾಡಲಾಗಿತ್ತು.
ಸುಮಾರು 70-80 ಮಕ್ಕಳು ಸ್ವಯಂ ಪ್ರೇರಿತರಾಗಿ ಭಾಗವಹಿಸಿದ್ದರು. ಆಧುನಿಕ ಜಗತ್ತಿನಲ್ಲಿ ಮಕ್ಕಳು ಯಾಂತ್ರಿಕ ಜೀವನದ ಜಂಜಾಟದಲ್ಲಿ ಸಿಲುಕಿಕೊಂಡು ಒದ್ದಾಡುತ್ತಿದ್ದಾರೆ. ಈ ಹಿನ್ನೆಲೆ ಈ ಶಿಬಿರದಲ್ಲಿ ಯಾಂತ್ರಿಕ ಜೀವನದಿಂದ ಹೊರಬಂದು ತಮ್ಮ ಮನೋವಿಕಸನ ಬೆಳೆಸಿಕೊಂಡು ನೈಸರ್ಗಿಕ ಜೀವನ ನಡೆಸುವುದು ಹೇಗೆ…? ತಮ್ಮ ಜೀವನಾನುಭವ ಹೆಚ್ಚಿಸಿಕೊಳ್ಳುವುದು ಹೇಗೆ…? ಹೊಸ ಸಂಗತಿಗಳ ಅಧ್ಯಯನ, ಹೊಸ ಸ್ನೇಹಿತರು, ಹೊಸ ಹೊಸ ವಿಚಾರಗಳನ್ನು ಮಕ್ಕಳಿಗೆ ತಿಳಿಸಿಕೊಡಲಾಯಿತು.
ಕಲೆ, ಸಾಹಿತ್ಯ, ಕೃಷಿ, ಮಕ್ಕಳ ಹಕ್ಕು, ಶಿಕ್ಷಣ, ಮಕ್ಕಳ ಮನೋವಿಕಸನ, ಹಾಡು, ನೃತ್ಯ, ನಾಟಕ, ಚಿತ್ರಕಲೆ, ವಿಜ್ಙಾನ ಪ್ರಾತ್ಯಕ್ಷಿತೆ ತಯಾರಿಕೆ, ಗೊಂಬೆ ತಯಾರಿಕೆ, ಟ್ರಕ್ಕಿಂಗ್, ಶಿಲ್ಪಗಳ ತಯಾರಿಕೆ, ಮಕ್ಕಳಿಗೆ ಕಾನೂನು ತಿಳಿವಳಿಕೆಯನ್ನು ಒಳಗೊಂಡಂತೆ ಹಲವಾರು ವಿನೂತನ ರೀತಿಯ ಕಾರ್ಯಚಟುವಟಿಕೆಗಳನ್ನು ಆಯಾಯ ಕ್ಷೇತ್ರಗಳಲ್ಲಿ ಪರಿಣಿತಿ ಹೊಂದಿರುವ ಸಂಪನ್ಮೂಲ ವ್ಯಕ್ತಿಗಳು ಮಕ್ಕಳಿಗೆ ಅರಿವು ಮೂಡಿಸಿದರು.
ಬೆಂಗಳೂರು ಗ್ರಾಮಾಂತರ: ಬೂತ್ ಮಟ್ಟದ ಅಧಿಕಾರಿ (ಬಿಎಲ್ಒ) ಕೆಲಸವನ್ನು ಅಂಗನವಾಡಿ ನೌಕರರಿಗೆ ನೀಡುವುದನ್ನು ತಕ್ಷಣವೇ ಸ್ಥಗಿತಗೊಳಿಸಬೇಕು ಎಂದು ರಾಜ್ಯ ಅಂಗನವಾಡಿ…
ಟ್ರಂಪ್ ಕಾರ್ಡ್....... ವಿಶ್ವದ ಕ್ರೀಡಾ ಸಂಸ್ಕೃತಿಯ ಘನತೆಗೆ ಚ್ಯುತಿ ತಂದ ಡೊನಾಲ್ಡ್ ಟ್ರಂಪ್... ವಿಶ್ವದ ಕ್ರೀಡಾ ಸಂಸ್ಕೃತಿಗೆ ಅವಮಾನ ಮಾಡಿದ,…
ದೊಡ್ಡಬಳ್ಳಾಪುರ: ತಾಲೂಕಿನ ಚಿಕ್ಕಮಧುರೆ ಗ್ರಾಮದ ಶನಿಮಹಾತ್ಮ ದೇವಾಲಯದ ಬಳಿ ಕಳೆದ ರಾತ್ರಿ ಸಂಭವಿಸಿದ ಕ್ಯಾಂಟರ್ ಅಪಘಾತದಲ್ಲಿ ರಸ್ತೆಬದಿಯ ಮೂರು-ನಾಲ್ಕು ಅಂಗಡಿಗಳು…
ಹಾಲಿನ ಖರೀದಿ ದರವನ್ನು ಪ್ರತಿ ಲೀಟರ್ಗೆ ರೂ. 10 ಹೆಚ್ಚಿಸಬೇಕು ಹಾಗೂ ಹಾಲು ಉತ್ಪಾದಕರಿಗೆ ನೀಡುತ್ತಿರುವ ಪ್ರೋತ್ಸಾಹಧನವನ್ನು ಹೆಚ್ಚಿಸಬೇಕು ಎಂದು…
ದೊಡ್ಡಬಳ್ಳಾಪುರ: ತಾಲೂಕಿನ ಅನಿಬೆಸೆಂಟ್ ಪಾರ್ಕ್ನಲ್ಲಿರುವ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿ ಕೇಂದ್ರವನ್ನು ಉನ್ನತೀಕರಿಸುವ ಕಾಮಗಾರಿಗೆ ಶಾಸಕ ಧೀರಜ್ ಮುನಿರಾಜ್…
ದೇವನಹಳ್ಳಿ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಕೋಡಗುರ್ಕಿ ಗ್ರಾಮದ ಸಮೀಪದ ಪ್ರಖ್ಯಾತ ಪ್ರೆಸ್ಟೀಜ್ ಗಾಲ್ಫ್ಶೈರ್ ರೆಸಾರ್ಟ್ ವಿಲ್ಲಾಸ್ ಆವರಣದಲ್ಲಿ…