ಮಕ್ಕಳ ಮನೋವಿಕಸನಕ್ಕಾಗಿ “ಚಿಲಿಪಿಲಿ” ಶಿಬಿರ: ಯಾಂತ್ರಿಕತೆಗೆ ಗುಡ್ ಬೈ: ಮಕ್ಕಳ ಸ್ವಾಭಾವಿಕ ಜೀವನಕ್ಕೆ ಒತ್ತು

ಡಾ.ಡಿ.ಆರ್ ನಾಗರಾಜ್ ಬಳಗ, ವಾಯ್ಸ್ ಆಫ್ ಆಕ್ಷನ್ ಟ್ರಸ್ಟ್, ಸೌಭಾಗ್ಯ ಸೇವಾ ಟ್ರಸ್ಟ್ ಸಹಯೋಗದೊಂದಿಗೆ ದೊಡ್ಡಬಳ್ಳಾಪುರ ತಾಲೂಕಿನ ಕಂಟನಕುಂಟೆ  ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲಾ ಆವರಣದಲ್ಲಿ ಮಕ್ಕಳ ಮನೋವಿಕಸನಕ್ಕಾಗಿ “ಚಿಲಿಪಿಲಿ” ಹೆಸರಿನಡಿ ಶಿಬಿರವನ್ನು ಆಯೋಜನೆ ಮಾಡಲಾಗಿತ್ತು.

ಶಿಬಿರವು ವಸತಿ ಹಾಗೂ ವಸತಿಯೇತರ ಸೌಕರ್ಯವನ್ನು ಹೊಂದಿದ್ದು, ಆರನೇ ತರಗತಿಯಿಂದ 9ನೇ ತರಗತಿಯಲ್ಲಿ ಓದುತ್ತಿರುವ ಸುಮಾರು 70-80 ಮಕ್ಕಳು ಸ್ವಯಂ ಪ್ರೇರಿತರಾಗಿ ಭಾಗವಹಿಸಿದ್ದರು.

ಸುಮಾರು 70-80 ಮಕ್ಕಳು ಸ್ವಯಂ ಪ್ರೇರಿತರಾಗಿ  ಭಾಗವಹಿಸಿದ್ದರು. ಆಧುನಿಕ ಜಗತ್ತಿನಲ್ಲಿ ಮಕ್ಕಳು ಯಾಂತ್ರಿಕ ಜೀವನದ‌ ಜಂಜಾಟದಲ್ಲಿ ಸಿಲುಕಿಕೊಂಡು ಒದ್ದಾಡುತ್ತಿದ್ದಾರೆ. ಈ ಹಿನ್ನೆಲೆ ಈ ಶಿಬಿರದಲ್ಲಿ ಯಾಂತ್ರಿಕ ಜೀವನದಿಂದ ಹೊರಬಂದು ತಮ್ಮ ಮನೋವಿಕಸನ ಬೆಳೆಸಿಕೊಂಡು ನೈಸರ್ಗಿಕ ಜೀವನ ನಡೆಸುವುದು ಹೇಗೆ…? ತಮ್ಮ ಜೀವನಾನುಭವ ಹೆಚ್ಚಿಸಿಕೊಳ್ಳುವುದು ಹೇಗೆ…? ಹೊಸ ಸಂಗತಿಗಳ ಅಧ್ಯಯನ, ಹೊಸ ಸ್ನೇಹಿತರು, ಹೊಸ‌ ಹೊಸ ವಿಚಾರಗಳನ್ನು ಮಕ್ಕಳಿಗೆ ತಿಳಿಸಿಕೊಡಲಾಯಿತು.

ಶಿಬಿರದಲ್ಲಿ ಮಕ್ಕಳಿಗೆ ಅತ್ಯಂತ ಅಗತ್ಯವಾದ ಸ್ವಾತಂತ್ರ್ಯದ ಪರಿಚಯ. ತಾವಾಗಿಯೇ ತಮ್ಮ ಕೆಲಸಗಳನ್ನು ಹೇಗೆ ಮಾಡಿಕೊಳ್ಳಬೇಕು ಎಂಬುದರ ಅರಿವು, ಹೊಸ ಹೊಸ ಜವಾಬ್ದಾರಿಗಳ ಕುರಿತು ತಿಳಿಸಿಕೊಡಲಾಯಿತು.

ಕಲೆ, ಸಾಹಿತ್ಯ, ಕೃಷಿ, ಮಕ್ಕಳ ಹಕ್ಕು, ಶಿಕ್ಷಣ, ಮಕ್ಕಳ ಮನೋವಿಕಸನ, ಹಾಡು, ನೃತ್ಯ, ನಾಟಕ, ಚಿತ್ರಕಲೆ, ವಿಜ್ಙಾನ ಪ್ರಾತ್ಯಕ್ಷಿತೆ ತಯಾರಿಕೆ, ಗೊಂಬೆ ತಯಾರಿಕೆ, ಟ್ರಕ್ಕಿಂಗ್, ಶಿಲ್ಪಗಳ ತಯಾರಿಕೆ, ಮಕ್ಕಳಿಗೆ ಕಾನೂನು ತಿಳಿವಳಿಕೆಯನ್ನು ಒಳಗೊಂಡಂತೆ ಹಲವಾರು ವಿನೂತನ ರೀತಿಯ ಕಾರ್ಯಚಟುವಟಿಕೆಗಳನ್ನು ಆಯಾಯ ಕ್ಷೇತ್ರಗಳಲ್ಲಿ ಪರಿಣಿತಿ ಹೊಂದಿರುವ ಸಂಪನ್ಮೂಲ ವ್ಯಕ್ತಿಗಳು ಮಕ್ಕಳಿಗೆ ಅರಿವು ಮೂಡಿಸಿದರು.

ಡಾ.ಡಿ.ಆರ್.ನಾಗರಾಜ್‌ ಬಳಗದ ಸದಸ್ಯ ಹಾಗೂ ಉಪನ್ಯಾಸಕ ಪ್ರಕಾಶ್ ಮಂಟೇದ ಮತಾನಾಡಿ, ಶಿಬಿರದ ಮುಖ್ಯ ಉದ್ದೇಶ ಮಕ್ಕಳ ಮನೋವಿಕಸನ ಬೆಳವಣಿಗೆ. ಪ್ರಸ್ತುತ ಸಂದರ್ಭದಲ್ಲಿ ಮಕ್ಕಳು ಮೊಬೈಲ್ ತಮ್ಮ ಪ್ರಪಂಚ ಅಂದುಕೊಂಡಿದ್ದಾರೆ. ಅದನ್ನು ಬಿಟ್ಟು ನಾವು ಇರಲಾರೆವು ಎಂಬ ಮನೋಭಾವನೆ ಮಕ್ಕಳಲ್ಲಿ ಇದೆ. ಒಂದು ರೀತಿಯಲ್ಲಿ ಯಾಂತ್ರಿಕ ಜೀವನ ನಡೆಸುತ್ತಿದ್ದಾರೆ. ಅದರಿಂದ ಹೊರತರಲು ಚಿಲಿಪಿಲಿ ಶಿಬಿರವನ್ನು ಆಯೋಜನೆ ಮಾಡಲಾಗಿತ್ತು. ಈ‌ ಶಿಬಿರದಲ್ಲಿ ಮಾನವೀಯ ಮೌಲ್ಯಗಳೊಂದಿಗೆ ಸಮಾಜದಲ್ಲಿ ಮೌಲ್ಯಯುತ ಜೀವನವನ್ನು ಕಟ್ಟಿಕೊಡಲು, ಒತ್ತಡವಿಲ್ಲದ ಜೀವನವನ್ನು ಮುನ್ನಡೆಸಲು, ಪರಸ್ಪರ ಪ್ರೀತಿ, ವಿಶ್ವಾಸದಿಂದ ಇರುವ ಕುರಿತು ಮಕ್ಕಳಿಗೆ ತಿಳಿಸಿಕೊಡಲಾಯಿತು. ಚಿಲಿಪಿಲಿ ಶಿಬಿರದಲ್ಲಿ ಮಕ್ಕಳು ಲವಲವಿಕೆಯಿಂದ ಭಾಗವಹಿಸಿ ಶಿಬಿರದ ಸದುಪಯೋಗ ಪಡೆಸಿಕೊಂಡರು ಎಂದರು.

ಈ ವೇಳೆ ಡಾ.ಡಿ.ಆರ್.ನಾಗರಾಜ್‌ ಬಳಗದ ಸದಸ್ಯ ಹಾಗೂ ಶಿಬಿರದ ಸಂಯೋಜಕ ವೆಂಕಟೇಶ್ ಕೊನಘಟ್ಟ, ವಾಯ್ಸ್‌ ಆಫ್‌ ಆಕ್ಷನ್‌ ಟ್ರಸ್ಟಿನ ಸದಸ್ಯ ಹಾಗೂ ಶಿಬಿರದ ನಿರ್ದೇಶಕ ಕಾಂತರಾಜು, ಡಾ.ಆರ್.ಡಿ.ಆರ್.ನಾಗರಾಜ್‌ ಬಳಗ ಕಾರ್ಯದರ್ಶಿ ಹಾಗೂ ವಕೀಲ ದಯಾನಂದಗೌಡ ಹೆಚ್. ಎನ್‌, ಪೊಲೀಸ್ ಚಂದ್ರ ಶೇಖರ್ ಸೇರಿದಂತೆ ಇತರರು ಶಿಬಿರ ಯಶಸ್ಸಿಗೆ ಸಹಕರಿಸಿದರು.

Ramesh Babu

Journalist

Recent Posts

ಬಿಎಲ್‌ಒ ಕೆಲಸ ಬೇಡ: ಅಂಗನವಾಡಿಗಳಲ್ಲೇ ಎಲ್‌ಕೆಜಿ–ಯುಕೆಜಿ ಆರಂಭಕ್ಕೆ ಅಂಗನವಾಡಿ ನೌಕರರ ಸಂಘ ಒತ್ತಾಯ

ಬೆಂಗಳೂರು ಗ್ರಾಮಾಂತರ: ಬೂತ್ ಮಟ್ಟದ ಅಧಿಕಾರಿ (ಬಿಎಲ್‌ಒ) ಕೆಲಸವನ್ನು ಅಂಗನವಾಡಿ ನೌಕರರಿಗೆ ನೀಡುವುದನ್ನು ತಕ್ಷಣವೇ ಸ್ಥಗಿತಗೊಳಿಸಬೇಕು ಎಂದು ರಾಜ್ಯ ಅಂಗನವಾಡಿ…

14 hours ago

ಟ್ರಂಪ್ ಕಾರ್ಡ್…….

ಟ್ರಂಪ್ ಕಾರ್ಡ್....... ವಿಶ್ವದ ಕ್ರೀಡಾ ಸಂಸ್ಕೃತಿಯ ಘನತೆಗೆ ಚ್ಯುತಿ ತಂದ ಡೊನಾಲ್ಡ್ ಟ್ರಂಪ್... ವಿಶ್ವದ ಕ್ರೀಡಾ ಸಂಸ್ಕೃತಿಗೆ ಅವಮಾನ ಮಾಡಿದ,…

23 hours ago

ಚಿಕ್ಕಮಧುರೆ ಶನಿಮಹಾತ್ಮ ದೇವಾಲಯ ಬಳಿ ಕ್ಯಾಂಟರ್ ಪಲ್ಟಿ: ರಸ್ತೆಬದಿಯ ಅಂಗಡಿಗಳು ಜಖಂ

ದೊಡ್ಡಬಳ್ಳಾಪುರ: ತಾಲೂಕಿನ ಚಿಕ್ಕಮಧುರೆ ಗ್ರಾಮದ ಶನಿಮಹಾತ್ಮ ದೇವಾಲಯದ ಬಳಿ ಕಳೆದ ರಾತ್ರಿ ಸಂಭವಿಸಿದ ಕ್ಯಾಂಟರ್ ಅಪಘಾತದಲ್ಲಿ ರಸ್ತೆಬದಿಯ ಮೂರು-ನಾಲ್ಕು ಅಂಗಡಿಗಳು…

1 day ago

ಹಾಲಿನ ಖರೀದಿ ದರ ಹೆಚ್ಚಳಕ್ಕೆ ರೈತರ ಬೃಹತ್ ಪ್ರತಿಭಟನೆ

ಹಾಲಿನ ಖರೀದಿ ದರವನ್ನು ಪ್ರತಿ ಲೀಟರ್‌ಗೆ ರೂ. 10 ಹೆಚ್ಚಿಸಬೇಕು ಹಾಗೂ ಹಾಲು ಉತ್ಪಾದಕರಿಗೆ ನೀಡುತ್ತಿರುವ ಪ್ರೋತ್ಸಾಹಧನವನ್ನು ಹೆಚ್ಚಿಸಬೇಕು ಎಂದು…

1 day ago

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿ ಕೇಂದ್ರ ಉನ್ನತೀಕರಣಕ್ಕೆ ಗುದ್ದಲಿ ಪೂಜೆ

ದೊಡ್ಡಬಳ್ಳಾಪುರ: ತಾಲೂಕಿನ ಅನಿಬೆಸೆಂಟ್ ಪಾರ್ಕ್‌ನಲ್ಲಿರುವ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿ ಕೇಂದ್ರವನ್ನು ಉನ್ನತೀಕರಿಸುವ ಕಾಮಗಾರಿಗೆ ಶಾಸಕ ಧೀರಜ್ ಮುನಿರಾಜ್…

1 day ago

ಪ್ರೆಸ್ಟೀಜ್ ಗಾಲ್ಫ್‌ಶೈರ್ ರೆಸಾರ್ಟ್ ವಿಲ್ಲಾಸ್‌ನಲ್ಲಿ ಕರಡಿಗಳ ಪ್ರತ್ಯಕ್ಷ: ನಂದಿಬೆಟ್ಟ ಸಮೀಪ ವನ್ಯಜೀವಿಗಳ ಓಡಾಟದಿಂದ ಆತಂಕ

ದೇವನಹಳ್ಳಿ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಕೋಡಗುರ್ಕಿ ಗ್ರಾಮದ ಸಮೀಪದ ಪ್ರಖ್ಯಾತ ಪ್ರೆಸ್ಟೀಜ್ ಗಾಲ್ಫ್‌ಶೈರ್ ರೆಸಾರ್ಟ್ ವಿಲ್ಲಾಸ್ ಆವರಣದಲ್ಲಿ…

1 day ago