ಡಾ.ಡಿ.ಆರ್ ನಾಗರಾಜ್ ಬಳಗ, ವಾಯ್ಸ್ ಆಫ್ ಆಕ್ಷನ್ ಟ್ರಸ್ಟ್, ಸೌಭಾಗ್ಯ ಸೇವಾ ಟ್ರಸ್ಟ್ ಸಹಯೋಗದೊಂದಿಗೆ ದೊಡ್ಡಬಳ್ಳಾಪುರ ತಾಲೂಕಿನ ಕಂಟನಕುಂಟೆ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲಾ ಆವರಣದಲ್ಲಿ ಮಕ್ಕಳ ಮನೋವಿಕಸನಕ್ಕಾಗಿ “ಚಿಲಿಪಿಲಿ” ಹೆಸರಿನಡಿ ಶಿಬಿರವನ್ನು ಆಯೋಜನೆ ಮಾಡಲಾಗಿತ್ತು.
ಸುಮಾರು 70-80 ಮಕ್ಕಳು ಸ್ವಯಂ ಪ್ರೇರಿತರಾಗಿ ಭಾಗವಹಿಸಿದ್ದರು. ಆಧುನಿಕ ಜಗತ್ತಿನಲ್ಲಿ ಮಕ್ಕಳು ಯಾಂತ್ರಿಕ ಜೀವನದ ಜಂಜಾಟದಲ್ಲಿ ಸಿಲುಕಿಕೊಂಡು ಒದ್ದಾಡುತ್ತಿದ್ದಾರೆ. ಈ ಹಿನ್ನೆಲೆ ಈ ಶಿಬಿರದಲ್ಲಿ ಯಾಂತ್ರಿಕ ಜೀವನದಿಂದ ಹೊರಬಂದು ತಮ್ಮ ಮನೋವಿಕಸನ ಬೆಳೆಸಿಕೊಂಡು ನೈಸರ್ಗಿಕ ಜೀವನ ನಡೆಸುವುದು ಹೇಗೆ…? ತಮ್ಮ ಜೀವನಾನುಭವ ಹೆಚ್ಚಿಸಿಕೊಳ್ಳುವುದು ಹೇಗೆ…? ಹೊಸ ಸಂಗತಿಗಳ ಅಧ್ಯಯನ, ಹೊಸ ಸ್ನೇಹಿತರು, ಹೊಸ ಹೊಸ ವಿಚಾರಗಳನ್ನು ಮಕ್ಕಳಿಗೆ ತಿಳಿಸಿಕೊಡಲಾಯಿತು.
ಕಲೆ, ಸಾಹಿತ್ಯ, ಕೃಷಿ, ಮಕ್ಕಳ ಹಕ್ಕು, ಶಿಕ್ಷಣ, ಮಕ್ಕಳ ಮನೋವಿಕಸನ, ಹಾಡು, ನೃತ್ಯ, ನಾಟಕ, ಚಿತ್ರಕಲೆ, ವಿಜ್ಙಾನ ಪ್ರಾತ್ಯಕ್ಷಿತೆ ತಯಾರಿಕೆ, ಗೊಂಬೆ ತಯಾರಿಕೆ, ಟ್ರಕ್ಕಿಂಗ್, ಶಿಲ್ಪಗಳ ತಯಾರಿಕೆ, ಮಕ್ಕಳಿಗೆ ಕಾನೂನು ತಿಳಿವಳಿಕೆಯನ್ನು ಒಳಗೊಂಡಂತೆ ಹಲವಾರು ವಿನೂತನ ರೀತಿಯ ಕಾರ್ಯಚಟುವಟಿಕೆಗಳನ್ನು ಆಯಾಯ ಕ್ಷೇತ್ರಗಳಲ್ಲಿ ಪರಿಣಿತಿ ಹೊಂದಿರುವ ಸಂಪನ್ಮೂಲ ವ್ಯಕ್ತಿಗಳು ಮಕ್ಕಳಿಗೆ ಅರಿವು ಮೂಡಿಸಿದರು.
ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಶಾಸಕ ಯಶ್ಪಾಲ್…
ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೃಷಿ ಚಟುವಟಿಕೆಗಳು ಈ ಬಾರಿ ತೀವ್ರ ಹಿನ್ನಡೆ ಅನುಭವಿಸಿವೆ. ಸಾಮಾನ್ಯಕ್ಕಿಂತ…
ಸ್ಪರ್ಧೆ ಇರಲಿ, ಆದರೆ ಬದುಕೇ ಸ್ಪರ್ಧೆಯಾಗುವುದು ಬೇಡ..... ಎಲ್ಲಿ ಜೀವನ ನಡೆವುದೋ ಅದೇ ನನ್ನೂರು, ಯಾರು ಸ್ನೇಹದಿ ಬರುವರೋ ಅವರೇ…
ರಾಜಾನುಕುಂಟೆ: ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯ ರಾಜಾನುಕುಂಟೆ ಸಮೀಪ ಶುಕ್ರವಾರ ಮುಂಜಾನೆ ವೇಗವಾಗಿ ಬಂದ ವಾಹನವೊಂದು ಜಿಂಕೆಗೆ ಡಿಕ್ಕಿ ಹೊಡೆದ ಪರಿಣಾಮ…
ದೊಡ್ಡಬಳ್ಳಾಪುರದ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿಯ ವಿವಿಧ ಕಾಮಗಾರಿಗಳಲ್ಲಿ ನಡೆದಿದೆ ಎನ್ನಲಾದ ಕೋಟ್ಯಂತರ ರೂಪಾಯಿ ಅಕ್ರಮಗಳ ಕುರಿತು ಲೋಕಾಯುಕ್ತ ಪೊಲೀಸರು ಕಳೆದ…
ಆಗಸ್ಟ್ 2ರಂದು ನಡೆಯಲಿರುವ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆಗೆ ಸಂಬಂಧಿಸಿದಂತೆ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ. ಕೆ.ಎನ್. ಅನುರಾಧ…