ಡಾ.ಡಿ.ಆರ್ ನಾಗರಾಜ್ ಬಳಗ, ವಾಯ್ಸ್ ಆಫ್ ಆಕ್ಷನ್ ಟ್ರಸ್ಟ್, ಸೌಭಾಗ್ಯ ಸೇವಾ ಟ್ರಸ್ಟ್ ಸಹಯೋಗದೊಂದಿಗೆ ದೊಡ್ಡಬಳ್ಳಾಪುರ ತಾಲೂಕಿನ ಕಂಟನಕುಂಟೆ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲಾ ಆವರಣದಲ್ಲಿ ಮಕ್ಕಳ ಮನೋವಿಕಸನಕ್ಕಾಗಿ “ಚಿಲಿಪಿಲಿ” ಹೆಸರಿನಡಿ ಶಿಬಿರವನ್ನು ಆಯೋಜನೆ ಮಾಡಲಾಗಿತ್ತು.
ಸುಮಾರು 70-80 ಮಕ್ಕಳು ಸ್ವಯಂ ಪ್ರೇರಿತರಾಗಿ ಭಾಗವಹಿಸಿದ್ದರು. ಆಧುನಿಕ ಜಗತ್ತಿನಲ್ಲಿ ಮಕ್ಕಳು ಯಾಂತ್ರಿಕ ಜೀವನದ ಜಂಜಾಟದಲ್ಲಿ ಸಿಲುಕಿಕೊಂಡು ಒದ್ದಾಡುತ್ತಿದ್ದಾರೆ. ಈ ಹಿನ್ನೆಲೆ ಈ ಶಿಬಿರದಲ್ಲಿ ಯಾಂತ್ರಿಕ ಜೀವನದಿಂದ ಹೊರಬಂದು ತಮ್ಮ ಮನೋವಿಕಸನ ಬೆಳೆಸಿಕೊಂಡು ನೈಸರ್ಗಿಕ ಜೀವನ ನಡೆಸುವುದು ಹೇಗೆ…? ತಮ್ಮ ಜೀವನಾನುಭವ ಹೆಚ್ಚಿಸಿಕೊಳ್ಳುವುದು ಹೇಗೆ…? ಹೊಸ ಸಂಗತಿಗಳ ಅಧ್ಯಯನ, ಹೊಸ ಸ್ನೇಹಿತರು, ಹೊಸ ಹೊಸ ವಿಚಾರಗಳನ್ನು ಮಕ್ಕಳಿಗೆ ತಿಳಿಸಿಕೊಡಲಾಯಿತು.
ಕಲೆ, ಸಾಹಿತ್ಯ, ಕೃಷಿ, ಮಕ್ಕಳ ಹಕ್ಕು, ಶಿಕ್ಷಣ, ಮಕ್ಕಳ ಮನೋವಿಕಸನ, ಹಾಡು, ನೃತ್ಯ, ನಾಟಕ, ಚಿತ್ರಕಲೆ, ವಿಜ್ಙಾನ ಪ್ರಾತ್ಯಕ್ಷಿತೆ ತಯಾರಿಕೆ, ಗೊಂಬೆ ತಯಾರಿಕೆ, ಟ್ರಕ್ಕಿಂಗ್, ಶಿಲ್ಪಗಳ ತಯಾರಿಕೆ, ಮಕ್ಕಳಿಗೆ ಕಾನೂನು ತಿಳಿವಳಿಕೆಯನ್ನು ಒಳಗೊಂಡಂತೆ ಹಲವಾರು ವಿನೂತನ ರೀತಿಯ ಕಾರ್ಯಚಟುವಟಿಕೆಗಳನ್ನು ಆಯಾಯ ಕ್ಷೇತ್ರಗಳಲ್ಲಿ ಪರಿಣಿತಿ ಹೊಂದಿರುವ ಸಂಪನ್ಮೂಲ ವ್ಯಕ್ತಿಗಳು ಮಕ್ಕಳಿಗೆ ಅರಿವು ಮೂಡಿಸಿದರು.
ಕೋಲಾರ: ಸಾರ್ವಜನಿಕರು ತಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ತಾಲೂಕು ಕಚೇರಿಗೆ ಅಲೆದಾಡುವುದನ್ನು ತಪ್ಪಿಸಿ, ಸ್ಥಳದಲ್ಲಿಯೇ ಸೇವೆ ಒದಗಿಸುವ ನಿಟ್ಟಿನಲ್ಲಿ ಪ್ರಜಾ ಸೇವಾ…
ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್ಪಿಂಗ್ ಅವರು ಎರಡು ದಿನಗಳ ಭಾರತ ಭೇಟಿಗಾಗಿ ಶನಿವಾರ ಮಧ್ಯಾಹ್ನ ರಾಷ್ಟ್ರ ರಾಜಧಾನಿ ನವದೆಹಲಿಗೆ…
ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಮಧುರೆ ದೇವಾಲಯದ ಸಮೀಪ ಹೊಸದಾಗಿ ನಿರ್ಮಿಸಿರುವ ಮೇಲ್ಸೇತುವೆ ವಾಹನ ಸವಾರರಿಗೆ ತೀವ್ರ ತೊಂದರೆ ಉಂಟುಮಾಡುತ್ತಿದೆ.…
ಬೆಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಹಾಗೂ ರೇಬೀಸ್ ಸೋಂಕಿನ ಆತಂಕಕ್ಕೆ ಕಡಿವಾಣ ಹಾಕಲು ಪಶುಪಾಲನಾ ಇಲಾಖೆ ಬೃಹತ್…
ಕೋಲಾರ: 2028ರಲ್ಲಿ ರಾಜ್ಯದಲ್ಲಿ ಎನ್ಡಿಎ ಸರ್ಕಾರ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಖಚಿತ. ಸಾಮಾಜಿಕ ಜಾಲತಾಣ ಈಗ ಪರಿಣಾಮಕಾರಿಯಾಗಿದೆ. ಅದನ್ನು…
ಕೋಲಾರ : ಗಣೇಶ ಮೂರ್ತಿ ವಿಸರ್ಜನೆ ಸಂದರ್ಭದಲ್ಲಿ ಯಾವುದೇ ರೀತಿಯ ಅನಾಹುತ, ಅಹಿತಕರ ಘಟನೆಗಳು ಸಂಭವಿಸದಂತೆ ಗ್ರಾಮೀಣ ಪ್ರದೇಶಗಳಲ್ಲಿ ಕರಪತ್ರಗಳ…