ಮಕ್ಕಳ ಮನೋವಿಕಸನಕ್ಕಾಗಿ “ಚಿಲಿಪಿಲಿ” ಶಿಬಿರ: ಯಾಂತ್ರಿಕತೆಗೆ ಗುಡ್ ಬೈ: ಮಕ್ಕಳ ಸ್ವಾಭಾವಿಕ ಜೀವನಕ್ಕೆ ಒತ್ತು

ಡಾ.ಡಿ.ಆರ್ ನಾಗರಾಜ್ ಬಳಗ, ವಾಯ್ಸ್ ಆಫ್ ಆಕ್ಷನ್ ಟ್ರಸ್ಟ್, ಸೌಭಾಗ್ಯ ಸೇವಾ ಟ್ರಸ್ಟ್ ಸಹಯೋಗದೊಂದಿಗೆ ದೊಡ್ಡಬಳ್ಳಾಪುರ ತಾಲೂಕಿನ ಕಂಟನಕುಂಟೆ  ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲಾ ಆವರಣದಲ್ಲಿ ಮಕ್ಕಳ ಮನೋವಿಕಸನಕ್ಕಾಗಿ “ಚಿಲಿಪಿಲಿ” ಹೆಸರಿನಡಿ ಶಿಬಿರವನ್ನು ಆಯೋಜನೆ ಮಾಡಲಾಗಿತ್ತು.

ಶಿಬಿರವು ವಸತಿ ಹಾಗೂ ವಸತಿಯೇತರ ಸೌಕರ್ಯವನ್ನು ಹೊಂದಿದ್ದು, ಆರನೇ ತರಗತಿಯಿಂದ 9ನೇ ತರಗತಿಯಲ್ಲಿ ಓದುತ್ತಿರುವ ಸುಮಾರು 70-80 ಮಕ್ಕಳು ಸ್ವಯಂ ಪ್ರೇರಿತರಾಗಿ ಭಾಗವಹಿಸಿದ್ದರು.

ಸುಮಾರು 70-80 ಮಕ್ಕಳು ಸ್ವಯಂ ಪ್ರೇರಿತರಾಗಿ  ಭಾಗವಹಿಸಿದ್ದರು. ಆಧುನಿಕ ಜಗತ್ತಿನಲ್ಲಿ ಮಕ್ಕಳು ಯಾಂತ್ರಿಕ ಜೀವನದ‌ ಜಂಜಾಟದಲ್ಲಿ ಸಿಲುಕಿಕೊಂಡು ಒದ್ದಾಡುತ್ತಿದ್ದಾರೆ. ಈ ಹಿನ್ನೆಲೆ ಈ ಶಿಬಿರದಲ್ಲಿ ಯಾಂತ್ರಿಕ ಜೀವನದಿಂದ ಹೊರಬಂದು ತಮ್ಮ ಮನೋವಿಕಸನ ಬೆಳೆಸಿಕೊಂಡು ನೈಸರ್ಗಿಕ ಜೀವನ ನಡೆಸುವುದು ಹೇಗೆ…? ತಮ್ಮ ಜೀವನಾನುಭವ ಹೆಚ್ಚಿಸಿಕೊಳ್ಳುವುದು ಹೇಗೆ…? ಹೊಸ ಸಂಗತಿಗಳ ಅಧ್ಯಯನ, ಹೊಸ ಸ್ನೇಹಿತರು, ಹೊಸ‌ ಹೊಸ ವಿಚಾರಗಳನ್ನು ಮಕ್ಕಳಿಗೆ ತಿಳಿಸಿಕೊಡಲಾಯಿತು.

ಶಿಬಿರದಲ್ಲಿ ಮಕ್ಕಳಿಗೆ ಅತ್ಯಂತ ಅಗತ್ಯವಾದ ಸ್ವಾತಂತ್ರ್ಯದ ಪರಿಚಯ. ತಾವಾಗಿಯೇ ತಮ್ಮ ಕೆಲಸಗಳನ್ನು ಹೇಗೆ ಮಾಡಿಕೊಳ್ಳಬೇಕು ಎಂಬುದರ ಅರಿವು, ಹೊಸ ಹೊಸ ಜವಾಬ್ದಾರಿಗಳ ಕುರಿತು ತಿಳಿಸಿಕೊಡಲಾಯಿತು.

ಕಲೆ, ಸಾಹಿತ್ಯ, ಕೃಷಿ, ಮಕ್ಕಳ ಹಕ್ಕು, ಶಿಕ್ಷಣ, ಮಕ್ಕಳ ಮನೋವಿಕಸನ, ಹಾಡು, ನೃತ್ಯ, ನಾಟಕ, ಚಿತ್ರಕಲೆ, ವಿಜ್ಙಾನ ಪ್ರಾತ್ಯಕ್ಷಿತೆ ತಯಾರಿಕೆ, ಗೊಂಬೆ ತಯಾರಿಕೆ, ಟ್ರಕ್ಕಿಂಗ್, ಶಿಲ್ಪಗಳ ತಯಾರಿಕೆ, ಮಕ್ಕಳಿಗೆ ಕಾನೂನು ತಿಳಿವಳಿಕೆಯನ್ನು ಒಳಗೊಂಡಂತೆ ಹಲವಾರು ವಿನೂತನ ರೀತಿಯ ಕಾರ್ಯಚಟುವಟಿಕೆಗಳನ್ನು ಆಯಾಯ ಕ್ಷೇತ್ರಗಳಲ್ಲಿ ಪರಿಣಿತಿ ಹೊಂದಿರುವ ಸಂಪನ್ಮೂಲ ವ್ಯಕ್ತಿಗಳು ಮಕ್ಕಳಿಗೆ ಅರಿವು ಮೂಡಿಸಿದರು.

ಡಾ.ಡಿ.ಆರ್.ನಾಗರಾಜ್‌ ಬಳಗದ ಸದಸ್ಯ ಹಾಗೂ ಉಪನ್ಯಾಸಕ ಪ್ರಕಾಶ್ ಮಂಟೇದ ಮತಾನಾಡಿ, ಶಿಬಿರದ ಮುಖ್ಯ ಉದ್ದೇಶ ಮಕ್ಕಳ ಮನೋವಿಕಸನ ಬೆಳವಣಿಗೆ. ಪ್ರಸ್ತುತ ಸಂದರ್ಭದಲ್ಲಿ ಮಕ್ಕಳು ಮೊಬೈಲ್ ತಮ್ಮ ಪ್ರಪಂಚ ಅಂದುಕೊಂಡಿದ್ದಾರೆ. ಅದನ್ನು ಬಿಟ್ಟು ನಾವು ಇರಲಾರೆವು ಎಂಬ ಮನೋಭಾವನೆ ಮಕ್ಕಳಲ್ಲಿ ಇದೆ. ಒಂದು ರೀತಿಯಲ್ಲಿ ಯಾಂತ್ರಿಕ ಜೀವನ ನಡೆಸುತ್ತಿದ್ದಾರೆ. ಅದರಿಂದ ಹೊರತರಲು ಚಿಲಿಪಿಲಿ ಶಿಬಿರವನ್ನು ಆಯೋಜನೆ ಮಾಡಲಾಗಿತ್ತು. ಈ‌ ಶಿಬಿರದಲ್ಲಿ ಮಾನವೀಯ ಮೌಲ್ಯಗಳೊಂದಿಗೆ ಸಮಾಜದಲ್ಲಿ ಮೌಲ್ಯಯುತ ಜೀವನವನ್ನು ಕಟ್ಟಿಕೊಡಲು, ಒತ್ತಡವಿಲ್ಲದ ಜೀವನವನ್ನು ಮುನ್ನಡೆಸಲು, ಪರಸ್ಪರ ಪ್ರೀತಿ, ವಿಶ್ವಾಸದಿಂದ ಇರುವ ಕುರಿತು ಮಕ್ಕಳಿಗೆ ತಿಳಿಸಿಕೊಡಲಾಯಿತು. ಚಿಲಿಪಿಲಿ ಶಿಬಿರದಲ್ಲಿ ಮಕ್ಕಳು ಲವಲವಿಕೆಯಿಂದ ಭಾಗವಹಿಸಿ ಶಿಬಿರದ ಸದುಪಯೋಗ ಪಡೆಸಿಕೊಂಡರು ಎಂದರು.

ಈ ವೇಳೆ ಡಾ.ಡಿ.ಆರ್.ನಾಗರಾಜ್‌ ಬಳಗದ ಸದಸ್ಯ ಹಾಗೂ ಶಿಬಿರದ ಸಂಯೋಜಕ ವೆಂಕಟೇಶ್ ಕೊನಘಟ್ಟ, ವಾಯ್ಸ್‌ ಆಫ್‌ ಆಕ್ಷನ್‌ ಟ್ರಸ್ಟಿನ ಸದಸ್ಯ ಹಾಗೂ ಶಿಬಿರದ ನಿರ್ದೇಶಕ ಕಾಂತರಾಜು, ಡಾ.ಆರ್.ಡಿ.ಆರ್.ನಾಗರಾಜ್‌ ಬಳಗ ಕಾರ್ಯದರ್ಶಿ ಹಾಗೂ ವಕೀಲ ದಯಾನಂದಗೌಡ ಹೆಚ್. ಎನ್‌, ಪೊಲೀಸ್ ಚಂದ್ರ ಶೇಖರ್ ಸೇರಿದಂತೆ ಇತರರು ಶಿಬಿರ ಯಶಸ್ಸಿಗೆ ಸಹಕರಿಸಿದರು.

Ramesh Babu

Journalist

Recent Posts

ರಾಹುಲ್ ಗಾಂಧಿ ಕುರಿತು ಅವಹೇಳನಕಾರಿ ಹೇಳಿಕೆ ಖಂಡನೆ: ಶಾಸಕ ಯಶ್ ಪಾಲ್ ಆನಂದ್ ಸುವರ್ಣ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಕಾಂಗ್ರೆಸ್ ಪ್ರತಿಭಟನೆ

ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಶಾಸಕ ಯಶ್ಪಾಲ್…

1 hour ago

ಮಳೆ ಕೈಕೊಟ್ಟು ಮುಂಗಾರು ಬಿತ್ತನೆ ಕುಂಠಿತ: ಶೇ.66ರಷ್ಟು ಮಳೆ ಕೊರತೆ; ಗುರಿಯ ಶೇ.3ರಷ್ಟು ಮಾತ್ರ ಬಿತ್ತನೆ ಪೂರ್ಣ

ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೃಷಿ ಚಟುವಟಿಕೆಗಳು ಈ ಬಾರಿ ತೀವ್ರ ಹಿನ್ನಡೆ ಅನುಭವಿಸಿವೆ. ಸಾಮಾನ್ಯಕ್ಕಿಂತ…

5 hours ago

ಇರುವುದೊಂದೇ ಬದುಕು, ಅದನ್ನು ಅರ್ಥಪೂರ್ಣವಾಗಿ ಸಾರ್ಥಕ ಪಡಿಸಿಕೊಳ್ಳಿ…….

ಸ್ಪರ್ಧೆ ಇರಲಿ, ಆದರೆ ಬದುಕೇ ಸ್ಪರ್ಧೆಯಾಗುವುದು ಬೇಡ..... ಎಲ್ಲಿ ಜೀವನ ನಡೆವುದೋ ಅದೇ ನನ್ನೂರು, ಯಾರು ಸ್ನೇಹದಿ ಬರುವರೋ ಅವರೇ…

7 hours ago

ಜಿಂಕೆಗೆ ವಾಹನ ಡಿಕ್ಕಿ; ಸ್ಥಳದಲ್ಲೇ ಸಾವು

ರಾಜಾನುಕುಂಟೆ: ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯ ರಾಜಾನುಕುಂಟೆ ಸಮೀಪ ಶುಕ್ರವಾರ ಮುಂಜಾನೆ ವೇಗವಾಗಿ ಬಂದ ವಾಹನವೊಂದು ಜಿಂಕೆಗೆ ಡಿಕ್ಕಿ ಹೊಡೆದ ಪರಿಣಾಮ…

7 hours ago

ಬಾಶೆಟ್ಟಿಹಳ್ಳಿ ಕೋಟ್ಯಂತರ ಹಗರಣ ಆರೋಪ: ಶಾಸಕರು ಮೌನ ಏಕೆ ಎಂದು ಸ್ಥಳೀಯರ ಪ್ರಶ್ನೆ

ದೊಡ್ಡಬಳ್ಳಾಪುರದ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿಯ ವಿವಿಧ ಕಾಮಗಾರಿಗಳಲ್ಲಿ ನಡೆದಿದೆ ಎನ್ನಲಾದ ಕೋಟ್ಯಂತರ ರೂಪಾಯಿ ಅಕ್ರಮಗಳ ಕುರಿತು ಲೋಕಾಯುಕ್ತ ಪೊಲೀಸರು ಕಳೆದ…

18 hours ago

ಅಗಸ್ಟ್ 2ರ ಪೊಲೀಸ್ ಕಾನ್‌ಸ್ಟೇಬಲ್ ಪರೀಕ್ಷೆ: ಸಿದ್ಧತೆ ಪರಿಶೀಲಿಸಿದ ಜಿಲ್ಲಾಧಿಕಾರಿ, ಎಸ್ಪಿ

ಆಗಸ್ಟ್ 2ರಂದು ನಡೆಯಲಿರುವ ಪೊಲೀಸ್ ಕಾನ್‌ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆಗೆ ಸಂಬಂಧಿಸಿದಂತೆ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ. ಕೆ.ಎನ್. ಅನುರಾಧ…

19 hours ago