ಮಕ್ಕಳ ರಕ್ಷಣಾ ನೀತಿ ಅನುಷ್ಠಾನಕ್ಕೆ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಅಧ್ಯಕ್ಷ ಶಶಿಧರ್ ಕೋಸಂಬೆ ಸೂಚನೆ

ವಸತಿ ನಿಲಯಗಳಲ್ಲಿ ಕಡ್ಡಾಯವಾಗಿ ಮಕ್ಕಳ ರಕ್ಷಣಾ ನೀತಿಯನ್ನು ಅನುಷ್ಠಾನ ಮಾಡುವಂತೆ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷ ಶಶಿಧರ್ ಕೋಸಂಬೆ ಸೂಚಿಸಿದರು.

ದೊಡ್ಡಬಳ್ಳಾಪುರ ತಾಲೂಕಿನ ತಾಯಿ ಮತ್ತು ಮಕ್ಕಳ ಆಸ್ಪತ್ರೆ, ಹಾಸ್ಟೆಲ್, ಚನ್ನದೇವಿ ಅಗ್ರಹಾರ ಗ್ರಾಪಂ ಸೇರಿದಂತೆ ವಿವಿಧ ಕಡೆಗಳಿಗೆ ಭೇಟಿ ಪರಿಶೀಲಿಸಿ ಅವರು ಮಾತನಾಡಿದರು.

ದೊಡ್ಡಬಳ್ಳಾಪುರದ ಕೊಡಿಗೇಹಳ್ಳಿಯಲ್ಲಿರುವ ಸಮಾಜ ಕಲ್ಯಾಣ ಇಲಾಖೆಯ ವಸತಿ ನಿಲಯಕ್ಕೆ ಭೇಟಿ ಪರಿಶೀಲಿಸಲಾಯಿತು. ಈ ವೇಳೆ ವಸತಿ ನಿಲಯಗಳಲ್ಲಿ ಉತ್ತಮ ಸೌಲಭ್ಯವಿದ್ದರೂ ಕೂಡ ಮಕ್ಕಳ ರಕ್ಷಣಾ ನೀತಿ ಅನುಷ್ಠಾನವಾಗದಿರುವುದು ಗಮನಕ್ಕೆ ಬಂದಿದ್ದು, ಆದಷ್ಟು ಬೇಗ ಮಕ್ಕಳ ರಕ್ಷಣಾ ನೀತಿಯನ್ನು ಅನುಷ್ಠನ ಮಾಡಲು ಸೂಚನೆ ನೀಡಿದರು.

ಇನ್ನೂ ವಸತಿ ನಿಲಯಗಳಲ್ಲಿ ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ವಾಲ್ ಫ್ಯಾನ್ ಅಳವಡಿಸಲು ಸೂಚನೆ ನೀಡಿದ್ದು, ಮಕ್ಕಳ ಸಹಾಯವಾಣಿಯ ಬಗ್ಗೆ ಜಾಗೃತಿ ಮೂಡಿಸಲು ಸೂಚನೆ ನೀಡಿದರು.

ದೊಡ್ಡಬಳ್ಳಾಪುರ ತಾಲೂಕಿನ ಚನ್ನದೇವಿ ಅಗ್ರಹಾರ ಗ್ರಾಪಂ ವ್ಯಾಪ್ತಿಯ ಕೋಡಿಪಾಳ್ಯದಲ್ಲಿ 50 ವರ್ಷಕ್ಕೂ ಹೆಚ್ಚಿನ ಸಮಯದಿಂದ ಗುಡಿಸಲಲ್ಲಿ ಮೂಲಸೌಕರ್ಯ ಇಲ್ಲದೇ ಸಮಸ್ಯೆ ಅನುಭವಿಸುತ್ತಿರುವ ಬಗ್ಗೆ ಹಾಗೂ ಮಕ್ಕಳ ಗ್ರಾಮ ಸಭೆ ಸಮಯದಲ್ಲಿ ಇಲ್ಲಿನ ಮಕ್ಕಳು ಆಧಾರ್ ಕಾರ್ಡ್, ರೇಷನ್ ಕಾರ್ಡ್, ಬೆಡ್‌ಶೀಟ್ ಸೇರಿದಂತೆ ವಿವಿಧ ಸಮಸ್ಯೆಗಳು ಇರುವ ಬಗ್ಗೆ ಗ್ರಾಪಂಗೆ ಮನವಿ ಮಾಡಿರುವ ಬಗ್ಗೆ ಯುವಸಂಚಲನ ಟ್ರಸ್ಟ್ ಮಕ್ಕಳ ಆಯೋಗಕ್ಕೆ ದೂರು ಸಲ್ಲಿಸಿದ್ದರು. ಈ ಬಗ್ಗೆ ಗಮನಿಸಿದ ಆಯೋಗದ ಅಧ್ಯಕ್ಷರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.

ಜನರ ಸಮಸ್ಯೆಗಳನ್ನು ಕೂಡ ಅಲಿಸಿದ ಅವರು ಗ್ರಾಪಂನಲ್ಲಿ ಸಭೆ ನಡೆಸಿ ಶೀಘ್ರವಾಗಿ ಗ್ರಾಮಸಭೆ ನಡೆಸಿ ಅಲ್ಲಿನ ಜನರ ಸಮಸ್ಯೆ, ಮಕ್ಕಳ ಸಮಸ್ಯೆಗಳನ್ನು ಬಗೆಹರಿಸುವಂತೆ ಸೂಚನೆಯನ್ನು ನೀಡಿದರು.

ಅಲ್ಲಿನ ಆಧಾರ್ ಕಾರ್ಡ್, ಯುಡಿಐಡಿ ಕಾರ್ಡ್ ಇಲ್ಲದ ಮಕ್ಕಳ ಮಾಹಿತಿ ಪಡೆದು ಅವರಿಗೆ ಸಮರ್ಪಕ ವ್ಯವಸ್ಥೆ ಕಲ್ಪಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದರು.

ದೊಡ್ಡಬಳ್ಳಾಪುರ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಆವರಣದಲ್ಲಿರುವ ಸಖಿ ಒನ್ ಸ್ಟಾಪ್ ಸೆಂಟರ್‌ನಲ್ಲಿ ಎನ್‌ಜಿಒ ವತಿಯಿಂದ ತೆರೆಯಲಾಗಿರುವ ಅಂಗನವಾಡಿ ಕೇಂದ್ರವನ್ನು ಶೀಘ್ರವಾಗಿ ಸ್ಥಳಾಂತರಿಸಬೇಕು ಎಂದು ಸೂಚನೆ ನೀಡಿದರು.

ಜತೆಗೆ ಜಿಲ್ಲೆಯಲ್ಲಿನ ಅಪೌಷ್ಟಿಕ, ತೀವ್ರ ಅಪೌಷ್ಟಿಕ ಮಕ್ಕಳನ್ನು ಆಸ್ಪತ್ರೆಗೆ ದಾಖಲಿಸಿ ಅವರಿಗೆ ಸೂಕ್ತವಾದ ಚಿಕಿತ್ಸೆಯನ್ನು ನೀಡಬೇಕು ಎಂದು ಸೂಚನೆ ನೀಡಿದರು. ಜತೆಗೆ ಮಕ್ಕಳ ಚಿಕಿತ್ಸಾ ವಿವರಗಳನ್ನು ಪರಿಶೀಲಿಸಿದರು.

ದೊಡ್ಡಬಳ್ಳಾಪುರಕ್ಕೆ ಭೇಟಿ ನೀಡಿದ ರಾಜ್ಯಮಕ್ಕಳ ಆಯೋಗದ ಅಧ್ಯಕ್ಷರಾದ ಶಶಿಧರ್ ಕೋಸಂಬೆ ಅವರು ತಾಲೂಕಿನ ಚನ್ನದೇವಿ ಅಗ್ರಹಾರ ಅಂಗನವಾಡಿ, ಆಸ್ಪತ್ರೆ ಆವರಣದಲ್ಲಿರುವ ಅಂಗನವಾಡಿ, ತಾಯಿ ಮತ್ತು ಮಕ್ಕಳ ಆಸ್ಪತ್ರೆಯ ಮಕ್ಕಳ ವಾರ್ಡ್ ನಲ್ಲಿರುವ ಮಕ್ಕಳನ್ನು ಭೇಟಿ ಮಾಡಿ ಆರೋಗ್ಯ, ನೀಡಲಾಗುತ್ತಿರುವ ಊಟ, ಆರೈಕೆ ಸೇರಿದಂತೆ ವಿವಿಧ ವಿಷಯಗಳ ಬಗ್ಗೆ ಮಾಹಿತಿ ಪಡೆದರು. ಪೋಷಕರೊಂದಿಗೂ ಕೂಡ ಚರ್ಚೆ ನಡೆಸಿದರು.

ಈ ವೇಳೆಯಲ್ಲಿ ದೊಡ್ಡಬಳ್ಳಾಪುರ ತಹಶೀಲ್ದಾರ್ ಮಲ್ಲಪ್ಪ, ಇಒ ಮುನಿರಾಜು, ಜಿಲ್ಲಾ ಮಕ್ಕಳ ರಕ್ಷಣಾ ಅಧಿಕಾರಿ ಅನಿತಾಲಕ್ಷ್ಮಿ, ತಾಲೂಕು ಆರೋಗ್ಯಾಧಿಕಾರಿ ಡಾ. ಶಾರದಾ, ಸಾರ್ವಜನಿಕ ಆಸ್ಪತ್ರೆಯ ವೈದ್ಯಾಧಿಕಾರಿ ಡಾ. ರಮೇಶ್,
ವಿವಿಧ ಇಲಾಖೆಗಳ ಅಧಿಕಾರಿಗಳು, ಗ್ರಾಪಂ ಅಧಿಕಾರಿಗಳು, ವಿವಿಧ ಇಲಾಖೆಯ ಸಿಬ್ಬಂದಿ ಹಾಜರಿದ್ದರು.

Ramesh Babu

Journalist

Recent Posts

ಒಂದೇ ರಾತ್ರಿ ಎರಡು ಕಡೆ ಶ್ರೀಗಂಧದ ಮರಗಳ ಕಳವು

ದೊಡ್ಡಬಳ್ಳಾಪುರ: ಒಂದೇ ರಾತ್ರಿ ಎರಡು ಸ್ಥಳಗಳಲ್ಲಿ ಶ್ರೀಗಂಧದ ಮರಗಳನ್ನು ಕಳ್ಳರು ಕತ್ತರಿಸಿ ಕದ್ದೊಯ್ದಿರುವ ಘಟನೆ ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣಾ…

5 hours ago

ಬೈಕ್‌ಗೆ ಟಿಟಿ ವಾಹನ ಡಿಕ್ಕಿ ಪ್ರಕರಣ: ಇಬ್ಬರು ಯುವತಿಯರ ದುರ್ಮರಣ – ಮೃತರ ಕಣ್ಣು ದಾನ ಮಾಡಿ ಸಾರ್ಥಕತೆ ಮೆರೆದ ಕುಟುಂಬಸ್ಥರು

ದೊಡ್ಡಬಳ್ಳಾಪುರ: ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದ ಓಬದೇನಹಳ್ಳಿ ರಸ್ತೆಯ ಕಾಂತಿ ಸ್ವೀಟ್ಸ್ ಮುಂಭಾಗ ಸೋಮವಾರ ಬೆಳಗ್ಗೆ ಸಂಭವಿಸಿದ ಭೀಕರ ರಸ್ತೆ…

6 hours ago

ಬೈಕ್ ಗೆ ಟಿಟಿ ವಾಹನ ಡಿಕ್ಕಿ: ಮಹಿಳೆ ಸಾವು: ಮತ್ತೋರ್ವ ಯುವತಿಗೆ ಗಂಭೀರ ಗಾಯ

ಬಾಶೆಟ್ಟಿಹಳ್ಳಿ ಬಳಿ ಭೀಕರ ಅಪಘಾತವಾಗಿ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮತ್ತೋರ್ವ ಯುವತಿಗೆ ಗಂಭೀರವಾಗಿ ಗಾಯಗೊಂಡಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ‌ ಬಾಶೆಟ್ಟಿಹಳ್ಳಿ ಕೈಗಾರಿಕಾ…

11 hours ago

ಹೆಣ್ಣು ಕೊಟ್ಟ ಮಾವನನ್ನೇ ಕೊಲೆಗೈದ ಅಳಿಯ

ದೊಡ್ಡಬಳ್ಳಾಪುರ: ಕ್ಷುಲ್ಲಕ ಕಾರಣಕ್ಕೆ ಹೆಣ್ಣು ಕೊಟ್ಟ ಮಾವನನ್ನೇ ಅಳಿಯ ಕೊಲೆಗೈದ ಘಟನೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ನೇರಳೇಘಟ್ಟ…

13 hours ago

ಕರ್ನಾಟಕದ ಮುಖ್ಯಮಂತ್ರಿ  ಡಿಕೆ ಶಿವಕುಮಾರ್ ಅವರಿಗೊಂದು ಬಹಿರಂಗ ಪತ್ರ..

ಗೌರವಾನ್ವಿತ ಮುಖ್ಯಮಂತ್ರಿ ಶ್ರೀ ಡಿಕೆ ಶಿವಕುಮಾರ್ ಅವರೇ, ಪ್ರಜಾಪ್ರಭುತ್ವ ಎಂಬ ಪರಿಕಲ್ಪನೆಯ ಅತ್ಯದ್ಭುತ ಫಲಿತಾಂಶವೆಂದರೆ ಯಾವುದೋ ಹಳ್ಳಿಯಲ್ಲಿ, ಎಲ್ಲಿಯೋ ಹುಟ್ಟಿದ…

16 hours ago

ಕರ್ನಾಟಕ ಹೆಚ್ಚು ತೆರಿಗೆ ನೀಡುತ್ತಿದ್ದು, ಇಲ್ಲಿಗೆ ಹೆಚ್ಚು ಅನುದಾನ ಬರಬೇಕೆಂಬ ತತ್ವ- ಚಿಂತನೆ ಸರಿಯಲ್ಲ. ಇದೆಲ್ಲವನ್ನು ಹಣಕಾಸು ಆಯೋಗ ನಿರ್ಧರಿಸುತ್ತದೆ- ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ದೇವನಹಳ್ಳಿ: ಭಾರತಮಾಲಾ ಪರಿಯೋಜನೆಯಡಿ ಅತ್ಯಾಧುನಿಕ ತಂತ್ರಜ್ಞಾನದೊಂದಿಗೆ ನಿರ್ಮಾಣಗೊಳ್ಳುತ್ತಿರುವ ಬೆಂಗಳೂರು–ಚೆನ್ನೈ ಎಕ್ಸ್‌ಪ್ರೆಸ್‌ವೇ ದೇಶದ ಎರಡು ಪ್ರಮುಖ ಆರ್ಥಿಕ ಶಕ್ತಿ ಕೇಂದ್ರಗಳಾದ ಬೆಂಗಳೂರು…

1 day ago