ಮಕ್ಕಳ ರಕ್ಷಣಾ ನೀತಿ ಅನುಷ್ಠಾನಕ್ಕೆ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಅಧ್ಯಕ್ಷ ಶಶಿಧರ್ ಕೋಸಂಬೆ ಸೂಚನೆ

ವಸತಿ ನಿಲಯಗಳಲ್ಲಿ ಕಡ್ಡಾಯವಾಗಿ ಮಕ್ಕಳ ರಕ್ಷಣಾ ನೀತಿಯನ್ನು ಅನುಷ್ಠಾನ ಮಾಡುವಂತೆ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷ ಶಶಿಧರ್ ಕೋಸಂಬೆ ಸೂಚಿಸಿದರು.

ದೊಡ್ಡಬಳ್ಳಾಪುರ ತಾಲೂಕಿನ ತಾಯಿ ಮತ್ತು ಮಕ್ಕಳ ಆಸ್ಪತ್ರೆ, ಹಾಸ್ಟೆಲ್, ಚನ್ನದೇವಿ ಅಗ್ರಹಾರ ಗ್ರಾಪಂ ಸೇರಿದಂತೆ ವಿವಿಧ ಕಡೆಗಳಿಗೆ ಭೇಟಿ ಪರಿಶೀಲಿಸಿ ಅವರು ಮಾತನಾಡಿದರು.

ದೊಡ್ಡಬಳ್ಳಾಪುರದ ಕೊಡಿಗೇಹಳ್ಳಿಯಲ್ಲಿರುವ ಸಮಾಜ ಕಲ್ಯಾಣ ಇಲಾಖೆಯ ವಸತಿ ನಿಲಯಕ್ಕೆ ಭೇಟಿ ಪರಿಶೀಲಿಸಲಾಯಿತು. ಈ ವೇಳೆ ವಸತಿ ನಿಲಯಗಳಲ್ಲಿ ಉತ್ತಮ ಸೌಲಭ್ಯವಿದ್ದರೂ ಕೂಡ ಮಕ್ಕಳ ರಕ್ಷಣಾ ನೀತಿ ಅನುಷ್ಠಾನವಾಗದಿರುವುದು ಗಮನಕ್ಕೆ ಬಂದಿದ್ದು, ಆದಷ್ಟು ಬೇಗ ಮಕ್ಕಳ ರಕ್ಷಣಾ ನೀತಿಯನ್ನು ಅನುಷ್ಠನ ಮಾಡಲು ಸೂಚನೆ ನೀಡಿದರು.

ಇನ್ನೂ ವಸತಿ ನಿಲಯಗಳಲ್ಲಿ ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ವಾಲ್ ಫ್ಯಾನ್ ಅಳವಡಿಸಲು ಸೂಚನೆ ನೀಡಿದ್ದು, ಮಕ್ಕಳ ಸಹಾಯವಾಣಿಯ ಬಗ್ಗೆ ಜಾಗೃತಿ ಮೂಡಿಸಲು ಸೂಚನೆ ನೀಡಿದರು.

ದೊಡ್ಡಬಳ್ಳಾಪುರ ತಾಲೂಕಿನ ಚನ್ನದೇವಿ ಅಗ್ರಹಾರ ಗ್ರಾಪಂ ವ್ಯಾಪ್ತಿಯ ಕೋಡಿಪಾಳ್ಯದಲ್ಲಿ 50 ವರ್ಷಕ್ಕೂ ಹೆಚ್ಚಿನ ಸಮಯದಿಂದ ಗುಡಿಸಲಲ್ಲಿ ಮೂಲಸೌಕರ್ಯ ಇಲ್ಲದೇ ಸಮಸ್ಯೆ ಅನುಭವಿಸುತ್ತಿರುವ ಬಗ್ಗೆ ಹಾಗೂ ಮಕ್ಕಳ ಗ್ರಾಮ ಸಭೆ ಸಮಯದಲ್ಲಿ ಇಲ್ಲಿನ ಮಕ್ಕಳು ಆಧಾರ್ ಕಾರ್ಡ್, ರೇಷನ್ ಕಾರ್ಡ್, ಬೆಡ್‌ಶೀಟ್ ಸೇರಿದಂತೆ ವಿವಿಧ ಸಮಸ್ಯೆಗಳು ಇರುವ ಬಗ್ಗೆ ಗ್ರಾಪಂಗೆ ಮನವಿ ಮಾಡಿರುವ ಬಗ್ಗೆ ಯುವಸಂಚಲನ ಟ್ರಸ್ಟ್ ಮಕ್ಕಳ ಆಯೋಗಕ್ಕೆ ದೂರು ಸಲ್ಲಿಸಿದ್ದರು. ಈ ಬಗ್ಗೆ ಗಮನಿಸಿದ ಆಯೋಗದ ಅಧ್ಯಕ್ಷರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.

ಜನರ ಸಮಸ್ಯೆಗಳನ್ನು ಕೂಡ ಅಲಿಸಿದ ಅವರು ಗ್ರಾಪಂನಲ್ಲಿ ಸಭೆ ನಡೆಸಿ ಶೀಘ್ರವಾಗಿ ಗ್ರಾಮಸಭೆ ನಡೆಸಿ ಅಲ್ಲಿನ ಜನರ ಸಮಸ್ಯೆ, ಮಕ್ಕಳ ಸಮಸ್ಯೆಗಳನ್ನು ಬಗೆಹರಿಸುವಂತೆ ಸೂಚನೆಯನ್ನು ನೀಡಿದರು.

ಅಲ್ಲಿನ ಆಧಾರ್ ಕಾರ್ಡ್, ಯುಡಿಐಡಿ ಕಾರ್ಡ್ ಇಲ್ಲದ ಮಕ್ಕಳ ಮಾಹಿತಿ ಪಡೆದು ಅವರಿಗೆ ಸಮರ್ಪಕ ವ್ಯವಸ್ಥೆ ಕಲ್ಪಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದರು.

ದೊಡ್ಡಬಳ್ಳಾಪುರ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಆವರಣದಲ್ಲಿರುವ ಸಖಿ ಒನ್ ಸ್ಟಾಪ್ ಸೆಂಟರ್‌ನಲ್ಲಿ ಎನ್‌ಜಿಒ ವತಿಯಿಂದ ತೆರೆಯಲಾಗಿರುವ ಅಂಗನವಾಡಿ ಕೇಂದ್ರವನ್ನು ಶೀಘ್ರವಾಗಿ ಸ್ಥಳಾಂತರಿಸಬೇಕು ಎಂದು ಸೂಚನೆ ನೀಡಿದರು.

ಜತೆಗೆ ಜಿಲ್ಲೆಯಲ್ಲಿನ ಅಪೌಷ್ಟಿಕ, ತೀವ್ರ ಅಪೌಷ್ಟಿಕ ಮಕ್ಕಳನ್ನು ಆಸ್ಪತ್ರೆಗೆ ದಾಖಲಿಸಿ ಅವರಿಗೆ ಸೂಕ್ತವಾದ ಚಿಕಿತ್ಸೆಯನ್ನು ನೀಡಬೇಕು ಎಂದು ಸೂಚನೆ ನೀಡಿದರು. ಜತೆಗೆ ಮಕ್ಕಳ ಚಿಕಿತ್ಸಾ ವಿವರಗಳನ್ನು ಪರಿಶೀಲಿಸಿದರು.

ದೊಡ್ಡಬಳ್ಳಾಪುರಕ್ಕೆ ಭೇಟಿ ನೀಡಿದ ರಾಜ್ಯಮಕ್ಕಳ ಆಯೋಗದ ಅಧ್ಯಕ್ಷರಾದ ಶಶಿಧರ್ ಕೋಸಂಬೆ ಅವರು ತಾಲೂಕಿನ ಚನ್ನದೇವಿ ಅಗ್ರಹಾರ ಅಂಗನವಾಡಿ, ಆಸ್ಪತ್ರೆ ಆವರಣದಲ್ಲಿರುವ ಅಂಗನವಾಡಿ, ತಾಯಿ ಮತ್ತು ಮಕ್ಕಳ ಆಸ್ಪತ್ರೆಯ ಮಕ್ಕಳ ವಾರ್ಡ್ ನಲ್ಲಿರುವ ಮಕ್ಕಳನ್ನು ಭೇಟಿ ಮಾಡಿ ಆರೋಗ್ಯ, ನೀಡಲಾಗುತ್ತಿರುವ ಊಟ, ಆರೈಕೆ ಸೇರಿದಂತೆ ವಿವಿಧ ವಿಷಯಗಳ ಬಗ್ಗೆ ಮಾಹಿತಿ ಪಡೆದರು. ಪೋಷಕರೊಂದಿಗೂ ಕೂಡ ಚರ್ಚೆ ನಡೆಸಿದರು.

ಈ ವೇಳೆಯಲ್ಲಿ ದೊಡ್ಡಬಳ್ಳಾಪುರ ತಹಶೀಲ್ದಾರ್ ಮಲ್ಲಪ್ಪ, ಇಒ ಮುನಿರಾಜು, ಜಿಲ್ಲಾ ಮಕ್ಕಳ ರಕ್ಷಣಾ ಅಧಿಕಾರಿ ಅನಿತಾಲಕ್ಷ್ಮಿ, ತಾಲೂಕು ಆರೋಗ್ಯಾಧಿಕಾರಿ ಡಾ. ಶಾರದಾ, ಸಾರ್ವಜನಿಕ ಆಸ್ಪತ್ರೆಯ ವೈದ್ಯಾಧಿಕಾರಿ ಡಾ. ರಮೇಶ್,
ವಿವಿಧ ಇಲಾಖೆಗಳ ಅಧಿಕಾರಿಗಳು, ಗ್ರಾಪಂ ಅಧಿಕಾರಿಗಳು, ವಿವಿಧ ಇಲಾಖೆಯ ಸಿಬ್ಬಂದಿ ಹಾಜರಿದ್ದರು.

Ramesh Babu

Journalist

Recent Posts

ನಿಂತಿದ್ದ ಟಾಟಾ ಏಸ್ ಗೆ ಬೈಕ್ ಡಿಕ್ಕಿ: ಹೆಲ್ಮೆಟ್ ಧರಿಸದ ಕಾರಣ ಬೈಕ್ ಸವಾರ ದುರ್ಮರಣ

ನಿಂತಿದ್ದ ಟಾಟಾ ಏಸ್ ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ದುರ್ಮರಣ ಹೊಂದಿರುವ ಘಟನೆ ಇಂದು ಬೆಳಗ್ಗೆ…

13 hours ago

ಏ.25ರ ರಾತ್ರಿ ಕೋರ್ಟ್ ರಸ್ತೆಯಲ್ಲಿ ಭೀಕರ ಅಪಘಾತದಲ್ಲಿ ಇಬ್ಬರ ಸಾವು ಪ್ರಕರಣ: ಕತ್ತಲಲ್ಲಿ ಪ್ರಯಾಣಿಸುತ್ತಿದ್ದವರ ಬದುಕಲ್ಲಿ ಶಾಶ್ವತ ಕತ್ತಲು ಮೂಡಿಸಿದ ಜವರಾಯ: ಎಚ್ಚೆತ್ತ ನಗರಸಭೆ ಬೀದಿ ದೀಪ ಅಳವಡಿಕೆ

ಏ.25ರ ರಾತ್ರಿ ಕೋರ್ಟ್ ರಸ್ತೆಯಲ್ಲಿ ಭೀಕರ ಅಪಘಾತದಲ್ಲಿ ಇಬ್ಬರು ಯುವಕರು ದಾರುಣವಾಗಿ ಸಾವನ್ನಪ್ಪಿದ್ದರು. ರಸ್ತೆ ಇಕ್ಕೆಲಗಳಲ್ಲಿ ಬೀದಿ ದೀಪಗಳು ಬೆಳಗದ…

14 hours ago

ರಾಷ್ಟ್ರೀಯತೆ ಎಂಬ ಪರಿಕಲ್ಪನೆಯ ಸುತ್ತಾ…….

ದೇಶಭಕ್ತಿ ಮತ್ತು ದೇಶದ್ರೋಹ...... ಇದು ಬ್ರಿಟಿಷರ ಕಾಲದ್ದೇ ಅಥವಾ ಈ ಕಾಲಕ್ಕೂ ಅನ್ವಯಿಸುತ್ತದೆಯೇ..... ರಾಷ್ಟ್ರೀಯತೆ ಎಂಬ ಪರಿಕಲ್ಪನೆಯ ಸುತ್ತಾ....... ರಾಷ್ಟ್ರ…

19 hours ago

ಕೋರ್ಟ್ ರಸ್ತೆಯಲ್ಲಿ ಭೀಕರ ಅಪಘಾತ: ಇಬ್ಬರು ಸಾವು

ಟ್ರ್ಯಾಕ್ಟರ್ ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ ಓರ್ವ ಬೈಕ್ ಸಾವನ್ನಪ್ಪಿದರೆ, ಮತ್ತೋರ್ವ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿರುವ ಘಟನೆ…

2 days ago

ಕೆಯುಡಬ್ಲ್ಯೂಜೆ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

ಎಸ್ಎಸ್ಎಲ್ ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಶೇ.90ಕ್ಕೂ ಹೆಚ್ಚು ಅಂಕಗಳಿಸಿದ ಪತ್ರಕರ್ತರ ಮಕ್ಕಳ ಪ್ರತಿಭಾ ಪುರಸ್ಕಾರಕ್ಕಾಗಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ…

2 days ago

ಎಸ್ಸೆಸ್ಸೆಲ್ಸಿ ಪರೀಕ್ಷೆ-01 ಫಲಿತಾಂಶ ಪ್ರಕಟ: ಲಿಟ್ಲ್ ಮಾಸ್ಟರ್ ಪಬ್ಲಿಕ್ ಶಾಲೆ ವಿದ್ಯಾರ್ಥಿನಿಗೆ 625ಕ್ಕೆ 622 ಅಂಕ: ನಮ್ಮ ತಪಸ್ಸಿಗೆ ಸಿಕ್ಕ ಯಶಸ್ಸು- ಶಾಲಾ ಸಂಸ್ಥಾಪಕ ಶ್ರೀನಿವಾಸ್ ಮೂರ್ತಿ

2025-26ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆ-1 ರ ಫಲಿತಾಂಶ ಪ್ರಕಟಗೊಂಡಿದ್ದು, ದೊಡ್ಡಬಳ್ಳಾಪುರ ತಾಲೂಕಿನ ಕಂಟನಕುಂಟೆ ಗ್ರಾಮದ ಲಿಟ್ಲ್ ಮಾಸ್ಟರ್ ಪಬ್ಲಿಕ್ ಶಾಲೆಯು…

2 days ago