ಮಕ್ಕಳ ಸರ್ವತೋಮುಖ ಬೆಳವಣಿಗೆಗೆ ಶಾಲೆಗಳು ಶ್ರಮಿಸಬೇಕು- ಶಾಸಕ ಧೀರಜ್ ಮುನಿರಾಜ್

ಮಕ್ಕಳು ಮಾನಸಿಕ ಹಾಗೂ ದೈಹಿಕವಾಗಿ ಪರಿಪಕ್ವವಾಗಲು ಪಠ್ಯದ ಜೊತೆಗೆ ಮಾನವೀಯ ಮೌಲ್ಯಗಳು, ಕ್ರೀಡೆ, ಸಾಂಸ್ಕೃತಿಕ ಕಾರ್ಯಕ್ರಮ ಸೇರಿದಂತೆ ವಿವಿಧ ರೀತಿಯ ಪಠ್ಯೇತರ ಚಟುವಟಿಕೆ ಏರ್ಪಡಿಸಿ ಸರ್ವತೋಮುಖ ಬೆಳವಣಿಗೆಗೆ ಶಾಲೆಗಳು ಶ್ರಮಿಸಬೇಕು ಎಂದು ಶಾಸಕ ಧೀರಜ್ ಮುನಿರಾಜ್ ಹೇಳಿದರು.

ನಗರದ ಖಾಸಗಿ ಕಲ್ಯಾಣ ಮಂಟಪದಲ್ಲಿ ಶ್ರೀ ಗುಬ್ಬಿ ಚೆನ್ನಬಸವೇಶ್ವರ ಎಜುಕೇಷನ್ ಟ್ರಸ್ಟ್ ನ ನ್ಯಾಷನಲ್ ಪ್ರೈಡ್ ಶಾಲೆಯ ವಾರ್ಷಿಕೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಮಕ್ಕಳ ಭವಿಷ್ಯ ರೂಪಿಸುವಲ್ಲಿ  ಶಿಕ್ಷಕರು ಹಾಗೂ ಪಾಲಕರ ಪಾತ್ರ ಬಹಳ ನಿರ್ಣಯಕವಾಗಿದೆ. ಈ ನಿಟ್ಟಿನಲ್ಲಿ‌ ನ್ಯಾಷನಲ್ ಪ್ರೈಡ್ ಶಾಲೆಯು ಗುಣಮಟ್ಟದ ಶಿಕ್ಷಣ ನೀಡುತ್ತಿದ್ದು, ಆಡಳಿತ ಮಂಡಳಿ ಸಹ ಶಿಕ್ಷಣ ಸೇವೆ ಮುಂದುವರೆಸಿಕೊಂಡು ಶಾಲೆಯ ಜೊತೆಗೆ ಕಾಲೇಜು ಕೂಡ ಪ್ರಾರಂಭಿಸುವಂತಾಗಲಿ ಎಂದು ಆಶಿಸಿದರು.

ಶಾಲೆಯ ಕಾರ್ಯದರ್ಶಿ ಸಿ.ಎನ್. ಸತೀಶ್ ಮಾತನಾಡಿ, ನಮ್ಮ ಶಾಲೆಯಲ್ಲಿ ಸಮಯ ಪಾಲನೆಗೆ ಮೊದಲ ಆದ್ಯತೆ ನೀಡಲಾಗುತ್ತದೆ. ಅದೇರೀತಿ ಸರ್ವ ಧರ್ಮ ಸಮನ್ವಯತೆ ಶಾಲೆ ಇದಾಗಿದೆ. ಎಲ್ಲ ಧರ್ಮಿಯ ಮಕ್ಕಳಿಗೆ ಅವರವರ ಧರ್ಮದ ಪ್ರಾರ್ಥನೆ ಹೇಳಿಕೊಡಲಾಗುತ್ತದೆ ಹೇಳಿದರು.

ಸಂಭ್ರಮ ಕಾರ್ಯಕ್ರಮದಲ್ಲಿ ಮಕ್ಕಳು ತಮ್ಮ ಪ್ರತಿಭೆ ಹೊರಹಾಕಲು ಅವಕಾಶ ನೀಡಲಾಗಿದೆ. ಅದರಂತೆ ಮಕ್ಕಳ ಜೊತೆ ಪೋಷಕರು, ಶಿಕ್ಷಕರು ಸಹ ನೃತ್ಯ ಪ್ರದರ್ಶನ ಮಾಡಿ ಸಂತಸಪಟ್ಟಿದ್ದಾರೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಜಾನಪದ ಗೀತೆ, ವೀರಗಾಸೆ, ಜಾನಪದ ನೃತ್ಯ, ದೇಶಭಕ್ತಿ ನಾಟಕ, ಹಾರರ್ ನೃತ್ಯ, ಪುಟಾಣಿ ಮಕ್ಕಳ  ಇಂಡಿಯನ್ ಹಾಗೂ ವೆಸ್ಟೆರ್ನ್ ಕಲ್ಚರ್ ನೃತ್ಯಗಳು ನೋಡುಗರ ಕಣ್ಮನ ಸೆಳೆಯುವಂತಿತ್ತು.

ಕಾರ್ಯಕ್ರಮದಲ್ಲಿ ಶಾಲೆಯ ಅಧ್ಯಕ್ಷ ಸಿ. ನಾಗರಾಜು, ಕೇಂದ್ರ ರೇಷ್ಮೆ ಮಂಡಳಿಯ ಮಾಜಿ ಅಧ್ಯಕ್ಷ ಹನುಮಂತರಾಯಪ್ಪ, ತಾಲೂಕು ವಕೀಲರ ಸಂಘದ ಅಧ್ಯಕ್ಷ ರವಿ ಮಾವಿನಕುಂಟೆ, ಡಾ.ಅರ್ಜುನ್ ಸೇರಿದಂತೆ ಇತರರು ಉಪಸ್ಥಿತರಿದ್ದರು.

Ramesh Babu

Journalist

Recent Posts

ಪ್ರಧಾನಿ ನರೇಂದ್ರ ಮೋದಿಯನ್ನ ಭೇಟಿಯಾದ ಸಿಎಂ ಸಿದ್ದರಾಮಯ್ಯ:ಬಹುದಿನಗಳಿಂದ ಬಾಕಿಯಿರುವ ಬೇಡಿಕೆಗಳನ್ನು ಈಡೇರಿಸುವಂತೆ ಮನವಿ: ಬೇಡಿಕೆ ಯಾವುದು….?

ದೆಹಲಿಯಲ್ಲಿ ಇಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ರಾಜ್ಯಕ್ಕೆ ಸಂಬಂಧಿಸಿದಂತೆ ಬಹುದಿನಗಳಿಂದ ಬಾಕಿಯಿರುವ ಬೇಡಿಕೆಗಳನ್ನು ಈಡೇರಿಸುವಂತೆ ಮನವಿ ಪತ್ರವನ್ನು…

11 hours ago

ಕಡೇ ಕಾರ್ತೀಕ ಸೋಮವಾರ: ಮೀನಾಕ್ಷಿ ಸಮೇತ ಸ್ವಯಂ ಭುವನೇಶ್ವರ ದೇವಾಲಯದಲ್ಲಿ ಲಕ್ಷ ದೀಪೋತ್ಸವ

ದೂಡ್ಡಬಳ್ಳಾಪುರದ ಮೀನಾಕ್ಷಿ ಸಮೇತ ಸ್ವಯಂ ಭುವನೇಶ್ವರ ಸ್ವಾಮಿಯವರ ದೇವಾಲಯದಲ್ಲಿ ಕಡೇ ಕಾರ್ತೀಕ ಸೋಮವಾರ ಪ್ರಯುಕ್ತ ಈ ದಿನ ಬೆಳಿಗ್ಗೆ ಗಣಪತಿ…

13 hours ago

ನಾಳೆ (ನ.18) ತಾಲೂಕಿನ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ವಿದ್ಯುತ್ ಅಡಚಣೆಯಾಗುವ ಪ್ರದೇಶಗಳ ಪಟ್ಟಿ ಇಲ್ಲಿದೆ ನೋಡಿ….

ದೊಡ್ಡಬಳ್ಳಾಪುರ: ನಾಳೆ (ನ.18) ನಗರದ ಹೊರವಲಯದಲ್ಲಿರುವ 66/11ಕಿವಿ ಡಿ.ಕ್ರಾಸ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣೆ ಕಾರ್ಯವನ್ನು ಹಮ್ಮಿಕೊಳ್ಳಲಾಗಿರುವುದರಿಂದ ತಾಲೂಕಿನ ಹಲವೆಡೆ ವಿದ್ಯುತ್‌…

14 hours ago

18 ದೇವಸ್ಥಾನಗಳಿಗೆ ಕನ್ನ ಹಾಕಿದ್ದ ಖದೀಮರ ಬಂಧನ: ಲಕ್ಷಾಂತರ ಮೌಲ್ಯದ ಬಂಗಾರದ ತಾಳಿ ಬೊಟ್ಟುಗಳು, ಗುಂಡುಗಳು ವಶ

  18 ದೇವಸ್ಥಾನಗಳಲ್ಲಿ ಕಳ್ಳತನ ಮಾಡಿದ್ದ ಮೂವರು ಆರೋಪಿಗಳನ್ನು‌ ಬಂಗಾರಪೇಟೆ ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ ರೂ.1,50,000/-ಮೌಲ್ಯದ ಬಂಗಾರದ ತಾಳಿ ಬೊಟ್ಟುಗಳು,…

20 hours ago

ಮುಂದೆ ಸಾಗುತ್ತಿದ್ದ ಲಾರಿ ಚಾಲಕನ ನಿರ್ಲಕ್ಷ್ಯಕ್ಕೆ ಎಂಬಿಎ ವಿದ್ಯಾರ್ಥಿ ಸಾವು

ದೊಡ್ಡಬಳ್ಳಾಪುರ: ಮುಂದೆ ಸಾಗುತ್ತಿದ್ದ ಲಾರಿ ಚಾಲಕನ ನಿರ್ಲಕ್ಷ್ಯದಿಂದ ಹಿಂಬದಿಯಲ್ಲಿ ಬರುತ್ತಿದ್ದ ಕಾರು ಭೀಕರ ಅಪಘಾತಕ್ಕೆ ಒಳಗಾಗಿ ಎಂಬಿಎ ವಿದ್ಯಾರ್ಥಿ ಸಾವನಪ್ಪಿರುವ…

20 hours ago

ಮೊಬೈಲ್ ನೋಡುತ್ತಾ ಕುಳಿತಿದ್ದ 21 ವರ್ಷದ ಯುವಕನಿಗೆ ಚಾಕು ಇರಿತ: ಚಾಕು ಇರಿತ ವಿಡಿಯೋ ಸಿಸಿಟಿವಿಯಲ್ಲಿ ಸೆರೆ

ತನ್ನ ಪಾಡಿಗೆ ತಾನು ಮೊಬೈಲ್ ನೋಡುತ್ತಾ ಕುಳಿತಿದ್ದ ಯುವಕನಿಗೆ ಚಾಕು ಇರಿದಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ, ದೇವನಹಳ್ಳಿ ತಾಲ್ಲೂಕಿನ…

23 hours ago