ಮಕ್ಕಳ ಸರ್ವತೋಮುಖ ಬೆಳವಣಿಗೆಗೆ ಶಾಲೆಗಳು ಶ್ರಮಿಸಬೇಕು- ಶಾಸಕ ಧೀರಜ್ ಮುನಿರಾಜ್

ಮಕ್ಕಳು ಮಾನಸಿಕ ಹಾಗೂ ದೈಹಿಕವಾಗಿ ಪರಿಪಕ್ವವಾಗಲು ಪಠ್ಯದ ಜೊತೆಗೆ ಮಾನವೀಯ ಮೌಲ್ಯಗಳು, ಕ್ರೀಡೆ, ಸಾಂಸ್ಕೃತಿಕ ಕಾರ್ಯಕ್ರಮ ಸೇರಿದಂತೆ ವಿವಿಧ ರೀತಿಯ ಪಠ್ಯೇತರ ಚಟುವಟಿಕೆ ಏರ್ಪಡಿಸಿ ಸರ್ವತೋಮುಖ ಬೆಳವಣಿಗೆಗೆ ಶಾಲೆಗಳು ಶ್ರಮಿಸಬೇಕು ಎಂದು ಶಾಸಕ ಧೀರಜ್ ಮುನಿರಾಜ್ ಹೇಳಿದರು.

ನಗರದ ಖಾಸಗಿ ಕಲ್ಯಾಣ ಮಂಟಪದಲ್ಲಿ ಶ್ರೀ ಗುಬ್ಬಿ ಚೆನ್ನಬಸವೇಶ್ವರ ಎಜುಕೇಷನ್ ಟ್ರಸ್ಟ್ ನ ನ್ಯಾಷನಲ್ ಪ್ರೈಡ್ ಶಾಲೆಯ ವಾರ್ಷಿಕೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಮಕ್ಕಳ ಭವಿಷ್ಯ ರೂಪಿಸುವಲ್ಲಿ  ಶಿಕ್ಷಕರು ಹಾಗೂ ಪಾಲಕರ ಪಾತ್ರ ಬಹಳ ನಿರ್ಣಯಕವಾಗಿದೆ. ಈ ನಿಟ್ಟಿನಲ್ಲಿ‌ ನ್ಯಾಷನಲ್ ಪ್ರೈಡ್ ಶಾಲೆಯು ಗುಣಮಟ್ಟದ ಶಿಕ್ಷಣ ನೀಡುತ್ತಿದ್ದು, ಆಡಳಿತ ಮಂಡಳಿ ಸಹ ಶಿಕ್ಷಣ ಸೇವೆ ಮುಂದುವರೆಸಿಕೊಂಡು ಶಾಲೆಯ ಜೊತೆಗೆ ಕಾಲೇಜು ಕೂಡ ಪ್ರಾರಂಭಿಸುವಂತಾಗಲಿ ಎಂದು ಆಶಿಸಿದರು.

ಶಾಲೆಯ ಕಾರ್ಯದರ್ಶಿ ಸಿ.ಎನ್. ಸತೀಶ್ ಮಾತನಾಡಿ, ನಮ್ಮ ಶಾಲೆಯಲ್ಲಿ ಸಮಯ ಪಾಲನೆಗೆ ಮೊದಲ ಆದ್ಯತೆ ನೀಡಲಾಗುತ್ತದೆ. ಅದೇರೀತಿ ಸರ್ವ ಧರ್ಮ ಸಮನ್ವಯತೆ ಶಾಲೆ ಇದಾಗಿದೆ. ಎಲ್ಲ ಧರ್ಮಿಯ ಮಕ್ಕಳಿಗೆ ಅವರವರ ಧರ್ಮದ ಪ್ರಾರ್ಥನೆ ಹೇಳಿಕೊಡಲಾಗುತ್ತದೆ ಹೇಳಿದರು.

ಸಂಭ್ರಮ ಕಾರ್ಯಕ್ರಮದಲ್ಲಿ ಮಕ್ಕಳು ತಮ್ಮ ಪ್ರತಿಭೆ ಹೊರಹಾಕಲು ಅವಕಾಶ ನೀಡಲಾಗಿದೆ. ಅದರಂತೆ ಮಕ್ಕಳ ಜೊತೆ ಪೋಷಕರು, ಶಿಕ್ಷಕರು ಸಹ ನೃತ್ಯ ಪ್ರದರ್ಶನ ಮಾಡಿ ಸಂತಸಪಟ್ಟಿದ್ದಾರೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಜಾನಪದ ಗೀತೆ, ವೀರಗಾಸೆ, ಜಾನಪದ ನೃತ್ಯ, ದೇಶಭಕ್ತಿ ನಾಟಕ, ಹಾರರ್ ನೃತ್ಯ, ಪುಟಾಣಿ ಮಕ್ಕಳ  ಇಂಡಿಯನ್ ಹಾಗೂ ವೆಸ್ಟೆರ್ನ್ ಕಲ್ಚರ್ ನೃತ್ಯಗಳು ನೋಡುಗರ ಕಣ್ಮನ ಸೆಳೆಯುವಂತಿತ್ತು.

ಕಾರ್ಯಕ್ರಮದಲ್ಲಿ ಶಾಲೆಯ ಅಧ್ಯಕ್ಷ ಸಿ. ನಾಗರಾಜು, ಕೇಂದ್ರ ರೇಷ್ಮೆ ಮಂಡಳಿಯ ಮಾಜಿ ಅಧ್ಯಕ್ಷ ಹನುಮಂತರಾಯಪ್ಪ, ತಾಲೂಕು ವಕೀಲರ ಸಂಘದ ಅಧ್ಯಕ್ಷ ರವಿ ಮಾವಿನಕುಂಟೆ, ಡಾ.ಅರ್ಜುನ್ ಸೇರಿದಂತೆ ಇತರರು ಉಪಸ್ಥಿತರಿದ್ದರು.

Ramesh Babu

Journalist

Recent Posts

ದೊಡ್ಡಬಳ್ಳಾಪುರದಲ್ಲಿ ಆ.18ರಂದು ವಿದ್ಯುತ್ ವ್ಯತ್ಯಯ

ದೊಡ್ಡಬಳ್ಳಾಪುರ: ನಗರದ 66/11 ಕೆವಿ ಡಿ.ಕ್ರಾಸ್ ವಿದ್ಯುತ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗಿರುವ ಹಿನ್ನೆಲೆಯಲ್ಲಿ ಆ.18ರಂದು ಬೆಳಿಗ್ಗೆ 10ರಿಂದ…

18 hours ago

ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷ, ಸದಸ್ಯರ ನೇಮಕ: ಯೋಜಿತ ನಗರಾಭಿವೃದ್ಧಿಗೆ ಆದ್ಯತೆ- ಸದಸ್ಯ ಎಸ್.ಡಿ. ಮುನಿರಾಜು

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಲಾಗಿದೆ. ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರನ್ನು ಅಧ್ಯಕ್ಷರಾಗಿ,…

23 hours ago

ಮಕ್ಕಳೇ ದೇಶದ ಆಸ್ತಿ, ಉತ್ತಮ ಶಿಕ್ಷಣದಿಂದ ಭವಿಷ್ಯ ನಿರ್ಮಾಣ- ಶಿವಕುಮಾರ್

ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…

2 days ago

ಬೆಂಗಳೂರು ಗ್ರಾಮಾಂತರದಲ್ಲಿ ಎರಡು ಪ್ರತ್ಯೇಕ ಅಪಘಾತ: ಇಬ್ಬರು ಸಾವು, ಹಲವರಿಗೆ ಗಾಯ

ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…

2 days ago

ಸ್ವಾತಂತ್ರ್ಯ ದಿನದಂದೇ ಹೆದ್ದಾರಿಯಲ್ಲಿ ಪುಂಡರ ಡೆಡ್ಲಿ ವ್ಹೀಲಿಂಗ್

ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…

2 days ago

ಸ್ವಾತಂತ್ರ್ಯ ದಿನಾಚರಣೆಯಲ್ಲಿ ಆರೋಗ್ಯ ಕಾಳಜಿ; ಹೀಲಿನ್ ಆಸ್ಪತ್ರೆಯಿಂದ ಉಚಿತ ತಪಾಸಣಾ ಶಿಬಿರ

80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ಆಡಳಿತ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು.…

2 days ago