ಮಕ್ಕಳ ಸರ್ವತೋಮುಖ ಬೆಳವಣಿಗೆಗೆ ಶಾಲೆಗಳು ಶ್ರಮಿಸಬೇಕು- ಶಾಸಕ ಧೀರಜ್ ಮುನಿರಾಜ್

ಮಕ್ಕಳು ಮಾನಸಿಕ ಹಾಗೂ ದೈಹಿಕವಾಗಿ ಪರಿಪಕ್ವವಾಗಲು ಪಠ್ಯದ ಜೊತೆಗೆ ಮಾನವೀಯ ಮೌಲ್ಯಗಳು, ಕ್ರೀಡೆ, ಸಾಂಸ್ಕೃತಿಕ ಕಾರ್ಯಕ್ರಮ ಸೇರಿದಂತೆ ವಿವಿಧ ರೀತಿಯ ಪಠ್ಯೇತರ ಚಟುವಟಿಕೆ ಏರ್ಪಡಿಸಿ ಸರ್ವತೋಮುಖ ಬೆಳವಣಿಗೆಗೆ ಶಾಲೆಗಳು ಶ್ರಮಿಸಬೇಕು ಎಂದು ಶಾಸಕ ಧೀರಜ್ ಮುನಿರಾಜ್ ಹೇಳಿದರು.

ನಗರದ ಖಾಸಗಿ ಕಲ್ಯಾಣ ಮಂಟಪದಲ್ಲಿ ಶ್ರೀ ಗುಬ್ಬಿ ಚೆನ್ನಬಸವೇಶ್ವರ ಎಜುಕೇಷನ್ ಟ್ರಸ್ಟ್ ನ ನ್ಯಾಷನಲ್ ಪ್ರೈಡ್ ಶಾಲೆಯ ವಾರ್ಷಿಕೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಮಕ್ಕಳ ಭವಿಷ್ಯ ರೂಪಿಸುವಲ್ಲಿ  ಶಿಕ್ಷಕರು ಹಾಗೂ ಪಾಲಕರ ಪಾತ್ರ ಬಹಳ ನಿರ್ಣಯಕವಾಗಿದೆ. ಈ ನಿಟ್ಟಿನಲ್ಲಿ‌ ನ್ಯಾಷನಲ್ ಪ್ರೈಡ್ ಶಾಲೆಯು ಗುಣಮಟ್ಟದ ಶಿಕ್ಷಣ ನೀಡುತ್ತಿದ್ದು, ಆಡಳಿತ ಮಂಡಳಿ ಸಹ ಶಿಕ್ಷಣ ಸೇವೆ ಮುಂದುವರೆಸಿಕೊಂಡು ಶಾಲೆಯ ಜೊತೆಗೆ ಕಾಲೇಜು ಕೂಡ ಪ್ರಾರಂಭಿಸುವಂತಾಗಲಿ ಎಂದು ಆಶಿಸಿದರು.

ಶಾಲೆಯ ಕಾರ್ಯದರ್ಶಿ ಸಿ.ಎನ್. ಸತೀಶ್ ಮಾತನಾಡಿ, ನಮ್ಮ ಶಾಲೆಯಲ್ಲಿ ಸಮಯ ಪಾಲನೆಗೆ ಮೊದಲ ಆದ್ಯತೆ ನೀಡಲಾಗುತ್ತದೆ. ಅದೇರೀತಿ ಸರ್ವ ಧರ್ಮ ಸಮನ್ವಯತೆ ಶಾಲೆ ಇದಾಗಿದೆ. ಎಲ್ಲ ಧರ್ಮಿಯ ಮಕ್ಕಳಿಗೆ ಅವರವರ ಧರ್ಮದ ಪ್ರಾರ್ಥನೆ ಹೇಳಿಕೊಡಲಾಗುತ್ತದೆ ಹೇಳಿದರು.

ಸಂಭ್ರಮ ಕಾರ್ಯಕ್ರಮದಲ್ಲಿ ಮಕ್ಕಳು ತಮ್ಮ ಪ್ರತಿಭೆ ಹೊರಹಾಕಲು ಅವಕಾಶ ನೀಡಲಾಗಿದೆ. ಅದರಂತೆ ಮಕ್ಕಳ ಜೊತೆ ಪೋಷಕರು, ಶಿಕ್ಷಕರು ಸಹ ನೃತ್ಯ ಪ್ರದರ್ಶನ ಮಾಡಿ ಸಂತಸಪಟ್ಟಿದ್ದಾರೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಜಾನಪದ ಗೀತೆ, ವೀರಗಾಸೆ, ಜಾನಪದ ನೃತ್ಯ, ದೇಶಭಕ್ತಿ ನಾಟಕ, ಹಾರರ್ ನೃತ್ಯ, ಪುಟಾಣಿ ಮಕ್ಕಳ  ಇಂಡಿಯನ್ ಹಾಗೂ ವೆಸ್ಟೆರ್ನ್ ಕಲ್ಚರ್ ನೃತ್ಯಗಳು ನೋಡುಗರ ಕಣ್ಮನ ಸೆಳೆಯುವಂತಿತ್ತು.

ಕಾರ್ಯಕ್ರಮದಲ್ಲಿ ಶಾಲೆಯ ಅಧ್ಯಕ್ಷ ಸಿ. ನಾಗರಾಜು, ಕೇಂದ್ರ ರೇಷ್ಮೆ ಮಂಡಳಿಯ ಮಾಜಿ ಅಧ್ಯಕ್ಷ ಹನುಮಂತರಾಯಪ್ಪ, ತಾಲೂಕು ವಕೀಲರ ಸಂಘದ ಅಧ್ಯಕ್ಷ ರವಿ ಮಾವಿನಕುಂಟೆ, ಡಾ.ಅರ್ಜುನ್ ಸೇರಿದಂತೆ ಇತರರು ಉಪಸ್ಥಿತರಿದ್ದರು.

Ramesh Babu

Journalist

Recent Posts

ಬಡಪಾಯಿ ಟೀ ಅಂಗಡಿ ಹುಡುಗನ ಮೇಲೆ ಪೊಲೀಸ್ ಇನ್ಸ್ ಪೆಕ್ಟರ್ ದರ್ಪ ಆರೋಪ

ಟೀ ಅಂಗಡಿ ಹುಡುಗನ ಮೇಲೆ ಪೊಲೀಸ್ ಇನ್ಸ್ ಪೆಕ್ಟರ್ ದರ್ಪ ಮೆರೆದಿರುವ ಘಟನೆ ದೇವನಹಳ್ಳಿಯ ಕನ್ನಮಂಗಲ ಗ್ರಾಮದಲ್ಲಿ ಹಾದುಹೋಗುವ ರಾಷ್ಟ್ರೀಯ…

1 hour ago

Facharbeit Schreiben_ Ein Leitfaden für Schüler und Studenten(2)

Das Schreiben einer Facharbeit ist ein wichtiger Bestandteil des akademischen Lebens und erfordert sowohl Planung…

2 hours ago

Ideal Online Slot Machine Online Casinos: A Comprehensive Guide

Welcome to our thorough overview on the very best online slots online casinos. If you're…

6 hours ago

ಪರಿಶಿಷ್ಟ ಜಾತಿಯ ಎಲ್ಲಾ ಸಮುದಾಯಗಳಿಗೂ ನ್ಯಾಯ ಒದಗಿಸುವ ನಿರ್ಧಾರ- ಸಿಎಂ ಸಿದ್ದರಾಮಯ್ಯ

ಪರಿಶಿಷ್ಟ ಜಾತಿಯ ಎಲ್ಲಾ ಸಮುದಾಯಗಳಿಗೂ ನ್ಯಾಯ ಒದಗಿಸುವ ನಿಟ್ಟಿನಲ್ಲಿ ಸಚಿವ ಸಂಪುಟ ಸಭೆ ಐತಿಹಾಸಿಕ ನಿರ್ಧಾರವನ್ನು ತೆಗೆದುಕೊಂಡಿದೆ. ಎಡ, ಬಲ…

8 hours ago

How To Choose The Best Real Money Casino Sites And Utilize Them

There are many benefits to playing at real money casino sites. Whether you are looking…

16 hours ago

ವಿಧಾನಸೌಧದಲ್ಲಿ ಐತಿಹಾಸಿಕ ತೀರ್ಮಾನ: ಒಳಮೀಸಲಾತಿ ಜಾರಿಗೆ ಸಚಿವ ಸಂಪುಟ ಒಪ್ಪಿಗೆ- ಸಚಿವ ಕೆ.ಎಚ್ ಮುನಿಯಪ್ಪ

ವಿಧಾನಸೌಧದಲ್ಲಿ ಇಂದು ನಡೆದ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಜಾರಿಗೆ ಸಂಬಂಧಿಸಿದ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ…

18 hours ago