ದೊಡ್ಡಬಳ್ಳಾಪುರ ತಾಲೂಕಿನ ಹಾದ್ರೀಪುರ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಮಕ್ಕಳ ಹಕ್ಕುಗಳ ಸಂರಕ್ಷಣೆ ಕುರಿತು ಗ್ರಾಮ ಸಭೆಯನ್ನು ಆಯೋಜಿಸಲಾಗಿತ್ತು.
ಗ್ರಾಮ ಸಭೆಯಲ್ಲಿ ಗ್ರಾಮ ಪಂಚಾಯ್ತಿ ಅಧ್ಯಕ್ಷ ಎಚ್.ಜಿ.ಸತೀಶ್ ಕುಮಾರ್, ಸದಸ್ಯರಾದ ದೇವರಾಜ್, ಶಿಲ್ಪ.ಜಿ, ಪಿಡಿಒ ಎಸ್. ನಂದಿನಿ, ಕಾರ್ಯದರ್ಶಿ ಮರಿಸಿದ್ದಮ್ಮ, ಗ್ರಾಮ ಪಂಚಾಯ್ತಿ ಸಿಬ್ಬಂದಿ, ಎಸ್.ಡಿ.ಎಂ.ಸಿ ಅಧ್ಯಕ್ಷ ಹನುಮಂತರಾಜು, ಶಾಲೆಯ ಮುಖ್ಯಶಿಕ್ಷಕ ಎ.ಪಿ.ವಿರೂಪಾಕ್ಷಯ್ಯ, ಶಾಲಾ ಮಕ್ಕಳು ಭಾಗಿಯಾಗಿದ್ದರು.
ರಾಷ್ಟ್ರಗೀತೆ, ಭಗವದ್ಗೀತೆ, ಸಂವಿಧಾನ ಪ್ರಸ್ತಾವನೆ ಓದುವ ಮೂಲಕ ಕಾರ್ಯಕ್ರಮ ಪ್ರಾರಂಭಿಸಲಾಯಿತು.
ಶಾಲಾ ಮಕ್ಕಳೇ ಅಧ್ಯಕ್ಷ, ಉಪಾಧ್ಯಕ್ಷರಾಗಿ ಗ್ರಾಮಸಭೆಯನ್ನು ನಡೆಸಿಕೊಟ್ಟರು.
ಈ ವೇಳೆ ಮಕ್ಕಳ ಹಕ್ಕುಗಳಾದ ಬದುಕುಳಿಯುವ ಹಕ್ಕು, ರಕ್ಷಣೆಯ ಹಕ್ಕು, ಭಾಗವಹಿಸುವ ಹಕ್ಕು, ಅಭಿವೃದ್ಧಿ ಹೊಂದುವ ಹಕ್ಕುಗಳ ಬಗ್ಗೆ ಸಂಪನ್ಮೂಲ ವ್ಯಕ್ತಿ ಬೈಲಾಂಜಿನಮೂರ್ತಿ ಸಂಕ್ಷಿಪ್ತವಾಗಿ ಮಕ್ಕಳಿಗೆ ತಿಳಿಸಿಕೊಟ್ಟರು.
ಮಕ್ಕಳು ಶಾಲಾ ಆಟದ ಮೈದಾನ ಮಾಡಿಕೊಡುವಂತೆ ಗ್ರಾಮಸಭೆಯಲ್ಲಿ ಅರ್ಜಿ ಮೂಲಕ ಮನವಿ ಮಾಡಿದರು. ಮಕ್ಕಳ ಮನವಿಯನ್ನು ಸ್ವೀಕರಿಸಿದ ಗ್ರಾಮ ಪಂಚಾಯ್ತಿ ಅಧ್ಯಕ್ಷ ಹಾಗೂ ಪಿಡಿಒ ಶೀಘ್ರವಾಗಿ ಮಾಡಿಕೊಡುವ ಭರವಸೆ ನೀಡಿದರು.
ಕಾರ್ಯಕ್ರಮ ಕುರಿತು ಮಾತನಾಡಿದ ಪಿಡಿಒ ಎಸ್. ನಂದಿನಿ, ಪೋಷಕರು ಮಕ್ಕಳ ಬಗ್ಗೆ ಕಾಳಜಿ ವಹಿಸಬೇಕು. ಕಷ್ಟಪಟ್ಟು, ಹೊಟ್ಟೆ ಬಟ್ಟೆ ಕಟ್ಟಿ ಓದಿಸುವ ತಂದೆ-ತಾಯಿಗಳಿಗೆ ಮಕ್ಕಳು ಚೆನ್ನಾಗಿ ಓದಿ ಒಳ್ಳೆ ಹೆಸರು ತರಬೇಕು ಎಂದರು. ಇದೇ ವೇಳೆ ಮೂಲಭೂತ ಹಕ್ಕುಗಳ ಬಗ್ಗೆ ತಿಸಿಸಿದರು.
ಪ್ರವಾಸ ಕಥನಗಳ ಬಗ್ಗೆ ಬಹಳ ಹಿಂದಿನಿಂದಲೂ ಸಾಕಷ್ಟು ಲೇಖನಗಳನ್ನು ಓದುತ್ತಲೇ ಇರುತ್ತೇನೆ. ಅದು ಪ್ರವಾಸೋದ್ಯಮಕ್ಕಾಗಿಯಲ್ಲ. ಏಕೆಂದರೆ ಪ್ರವಾಸ ವ್ಯಾಪಾರಿಗಳಿಗೆ ಒಂದು…
ಜಿಲ್ಲೆಯಲ್ಲಿ ಕಳೆದ ಎರಡು ತಿಂಗಳಲ್ಲಿ ವಾಡಿಕೆ ಮಳೆಗಿಂತ ಶೇಕಡ 33 ರಷ್ಟು ಮಳೆ ಕೊರತೆಯಾಗಿದ್ದು ಮುಂದಿನ ದಿನಗಳಲ್ಲಿ ಜನ-ಜಾನುವಾರುಗಳಿಗೆ ಕುಡಿಯುವ…
ದೊಡ್ಡಬಳ್ಳಾಪುರ: ಸಮರ್ಪಕ ಮಳೆಯ ಕೊರತೆಯಿಂದ ಬರ ಪರಿಸ್ಥಿತಿ ಎದುರಿಸುತ್ತಿರುವ ದೊಡ್ಡಬಳ್ಳಾಪುರ ಕ್ಷೇತ್ರದ ರೈತರಿಗೆ ನೆರವಾಗುವ ಉದ್ದೇಶದಿಂದ, ಕ್ಷೇತ್ರದ ಪ್ರಮುಖ ಬೆಳೆಯಾದ…
ಗೌರಿಬಿದನೂರು: ಕೋಳಿ ವಿಚಾರವಾಗಿ ಆರಂಭವಾದ ನೆರೆಹೊರೆಯವರ ನಡುವಿನ ಜಗಳ ಗಂಭೀರ ಸ್ವರೂಪ ಪಡೆದು, ಸಾರ್ವಜನಿಕ ಆಸ್ಪತ್ರೆಯೊಳಗೂ ಗಲಾಟೆ ನಡೆದ ಘಟನೆ…
ಕನ್ನಡದ ಖ್ಯಾತ, ಪ್ರತಿಭಾವಂತ ಚಲನಚಿತ್ರ ನಟ, ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಶ್ರೀ ಅನಂತನಾಗ್ ಅವರು ಇತ್ತೀಚೆಗೆ ಕಾರ್ಯಕ್ರಮವೊಂದರಲ್ಲಿ ಮಾತನಾಡುತ್ತಾ ದೆಹಲಿಯ…
ಬೆಂಗಳೂರಿನ ಹೆಬ್ಬಾಳ ಬಳಿಯ ಕೆಂಪಾಪುರ ಗ್ರಾಮದ ವೃದ್ಧ ದಂಪತಿ ಆತ್ಮಹತ್ಯೆಗೆ ಯತ್ನಿಸಿ ಪತಿ ಶಿವಪ್ಪ(76) ಸಾವನ್ನಪ್ಪಿರುವ ಘಟನೆ ದೊಡ್ಡಬಳ್ಳಾಪುರ ತಾಲ್ಲೂಕಿನ…