ಮಕ್ಕಳ ಹಕ್ಕುಗಳ ಸಂರಕ್ಷಣೆ ಕುರಿತು ಗ್ರಾಮ ಸಭೆ

ದೊಡ್ಡಬಳ್ಳಾಪುರ ತಾಲೂಕಿನ ಹಾದ್ರೀಪುರ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಮಕ್ಕಳ ಹಕ್ಕುಗಳ ಸಂರಕ್ಷಣೆ ಕುರಿತು ಗ್ರಾಮ ಸಭೆಯನ್ನು ಆಯೋಜಿಸಲಾಗಿತ್ತು.

ಗ್ರಾಮ ಸಭೆಯಲ್ಲಿ ಗ್ರಾಮ ಪಂಚಾಯ್ತಿ ಅಧ್ಯಕ್ಷ ಎಚ್.ಜಿ.ಸತೀಶ್ ಕುಮಾರ್, ಸದಸ್ಯರಾದ ದೇವರಾಜ್, ಶಿಲ್ಪ.ಜಿ, ಪಿಡಿಒ ಎಸ್. ನಂದಿನಿ, ಕಾರ್ಯದರ್ಶಿ ಮರಿಸಿದ್ದಮ್ಮ, ಗ್ರಾಮ ಪಂಚಾಯ್ತಿ ಸಿಬ್ಬಂದಿ, ಎಸ್.ಡಿ.ಎಂ.ಸಿ ಅಧ್ಯಕ್ಷ ಹನುಮಂತರಾಜು, ಶಾಲೆಯ ಮುಖ್ಯಶಿಕ್ಷಕ ಎ.ಪಿ.ವಿರೂಪಾಕ್ಷಯ್ಯ, ಶಾಲಾ ಮಕ್ಕಳು ಭಾಗಿಯಾಗಿದ್ದರು.

ರಾಷ್ಟ್ರಗೀತೆ, ಭಗವದ್ಗೀತೆ, ಸಂವಿಧಾನ ಪ್ರಸ್ತಾವನೆ ಓದುವ ಮೂಲಕ ಕಾರ್ಯಕ್ರಮ ಪ್ರಾರಂಭಿಸಲಾಯಿತು.

ಶಾಲಾ ಮಕ್ಕಳೇ ಅಧ್ಯಕ್ಷ, ಉಪಾಧ್ಯಕ್ಷರಾಗಿ ಗ್ರಾಮಸಭೆಯನ್ನು ನಡೆಸಿಕೊಟ್ಟರು.

ಈ ವೇಳೆ ಮಕ್ಕಳ ಹಕ್ಕುಗಳಾದ ಬದುಕುಳಿಯುವ ಹಕ್ಕು, ರಕ್ಷಣೆಯ ಹಕ್ಕು, ಭಾಗವಹಿಸುವ ಹಕ್ಕು, ಅಭಿವೃದ್ಧಿ ಹೊಂದುವ ಹಕ್ಕುಗಳ ಬಗ್ಗೆ ಸಂಪನ್ಮೂಲ ವ್ಯಕ್ತಿ ಬೈಲಾಂಜಿನಮೂರ್ತಿ ಸಂಕ್ಷಿಪ್ತವಾಗಿ ಮಕ್ಕಳಿಗೆ ತಿಳಿಸಿಕೊಟ್ಟರು.

ಮಕ್ಕಳು ಶಾಲಾ ಆಟದ ಮೈದಾನ ಮಾಡಿಕೊಡುವಂತೆ ಗ್ರಾಮಸಭೆಯಲ್ಲಿ ಅರ್ಜಿ ಮೂಲಕ ಮನವಿ ಮಾಡಿದರು. ಮಕ್ಕಳ ಮನವಿಯನ್ನು ಸ್ವೀಕರಿಸಿದ ಗ್ರಾಮ ಪಂಚಾಯ್ತಿ ಅಧ್ಯಕ್ಷ ಹಾಗೂ ಪಿಡಿಒ ಶೀಘ್ರವಾಗಿ ಮಾಡಿಕೊಡುವ ಭರವಸೆ ನೀಡಿದರು.

ಕಾರ್ಯಕ್ರಮ ಕುರಿತು ಮಾತನಾಡಿದ ಪಿಡಿಒ ಎಸ್. ನಂದಿನಿ, ಪೋಷಕರು ಮಕ್ಕಳ ಬಗ್ಗೆ ಕಾಳಜಿ ವಹಿಸಬೇಕು. ಕಷ್ಟಪಟ್ಟು, ಹೊಟ್ಟೆ ಬಟ್ಟೆ ಕಟ್ಟಿ ಓದಿಸುವ ತಂದೆ-ತಾಯಿಗಳಿಗೆ ಮಕ್ಕಳು ಚೆನ್ನಾಗಿ ಓದಿ ಒಳ್ಳೆ ಹೆಸರು ತರಬೇಕು ಎಂದರು. ಇದೇ ವೇಳೆ ಮೂಲಭೂತ ಹಕ್ಕುಗಳ ಬಗ್ಗೆ ತಿಸಿಸಿದರು.

Ramesh Babu

Journalist

Recent Posts

ದೊಡ್ಡಬಳ್ಳಾಪುರ ಯೋಗಾ ಪ್ರತಿಭೆ, ಅಕಾಡೆಮಿ ಬಾಲ ಗೌರವ ಪ್ರಶಸ್ತಿ ಪುರಸ್ಕೃತೆ ಜಾಹ್ನವಿ ಎಂ.ಆರ್ ಗೆ ಸನ್ಮಾನ

ಕರ್ನಾಟಕ ಸ್ಟೇಟ್ ಅಮೆಚೂರು ಯೋಗ ಸ್ಪೋರ್ಟ್ಸ್ ಅಸೋಸಿಯೇಷನ್ ವತಿಯಿಂದ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರದಲ್ಲಿ ಜೂ.6, 7ರಂದು ನಡೆದ ರಾಜ್ಯಮಟ್ಟದ…

6 hours ago

ತಡರಾತ್ರಿ ರೌಡಿ ಶೀಟರ್‌ ಬರ್ಬರ ಹತ್ಯೆ: ಸೂಲಿಬೆಲೆಯಲ್ಲಿ ಭೀಕರ ಘಟನೆ

ಹೊಸಕೋಟೆ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲ್ಲೂಕಿನ ಸೂಲಿಬೆಲೆ ಗ್ರಾಮದಲ್ಲಿ ತಡರಾತ್ರಿ ರೌಡಿ ಶೀಟರ್‌ನನ್ನು ದುಷ್ಕರ್ಮಿಗಳು ನಡುರಸ್ತೆಯಲ್ಲೇ ಬರ್ಬರವಾಗಿ ಹತ್ಯೆ…

16 hours ago

ಕಾಕ್ರೋಚ್ ಜನತಾ ಪಾರ್ಟಿ……

ಕಾಕ್ರೋಚ್ ಜನತಾ ಪಾರ್ಟಿ...... ಸಾಮಾಜಿಕ ಜಾಲತಾಣದ ಹೊಸ ರಾಜಕೀಯ ಚಳುವಳಿ ಎಂದು ಕಳೆದ ಐದಾರು ವಾರಗಳಿಂದ ಇಡೀ ದೇಶದಾದ್ಯಂತ ಬಹುದೊಡ್ಡ…

19 hours ago

ಬಿಸವನಹಳ್ಳಿಯಲ್ಲಿ ಅದ್ವಿತಾ ಜನ್ಮದಿನ ಅರ್ಥಪೂರ್ಣ ಆಚರಣೆ

ಗಣೇಶ್ ಕುಮಾರ್ ಮತ್ತು ಪೂರ್ಣಿಮಾ ಅವರ ಪೋಷಕತ್ವದಲ್ಲಿ, ಕೇಶವ ಮತ್ತು ಸುಷ್ಮಾ ದಂಪತಿಯ ಪುತ್ರಿ ಅದ್ವಿತಾ ಅವರ ಜನ್ಮದಿನವನ್ನು ಬಿಸವನಹಳ್ಳಿ…

2 days ago

ಕಾರಿಗೆ ಅಡ್ಡ ಬಂದ ನಾಯಿ: ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ

ದೊಡ್ಡಬಳ್ಳಾಪುರ: ಹಿಂದೂಪುರ–ಯಲಹಂಕ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರಿಗೆ ದಿಢೀರನೆ ನಾಯಿ ಅಡ್ಡ ಬಂದ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ…

2 days ago

ಅನುಭವ, ಹಿರಿತನಕ್ಕೆ ತಕ್ಕಂತೆ ಸಚಿವ ಸ್ಥಾನ ನೀಡಿ- ಮನು.ಆರ್.ವಿ ಒತ್ತಾಯ

ಕೆ.ಎಚ್ ಮುನಿಯಪ್ಪನವರು ಏಳು ಬಾರಿ ಲೋಕಸಭಾ ಸದಸ್ಯರಾಗಿ, ಎರಡು ಬಾರಿ ಕೇಂದ್ರ ಸಚಿವರಾಗಿ, ಅಪಾರ ಅನುಭವ ಹಾಗೂ ಅವರ ಹಿರಿತನಕ್ಕೆ…

2 days ago