ದೊಡ್ಡಬಳ್ಳಾಪುರ ತಾಲೂಕಿನ ಹಾದ್ರೀಪುರ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಮಕ್ಕಳ ಹಕ್ಕುಗಳ ಸಂರಕ್ಷಣೆ ಕುರಿತು ಗ್ರಾಮ ಸಭೆಯನ್ನು ಆಯೋಜಿಸಲಾಗಿತ್ತು.
ಗ್ರಾಮ ಸಭೆಯಲ್ಲಿ ಗ್ರಾಮ ಪಂಚಾಯ್ತಿ ಅಧ್ಯಕ್ಷ ಎಚ್.ಜಿ.ಸತೀಶ್ ಕುಮಾರ್, ಸದಸ್ಯರಾದ ದೇವರಾಜ್, ಶಿಲ್ಪ.ಜಿ, ಪಿಡಿಒ ಎಸ್. ನಂದಿನಿ, ಕಾರ್ಯದರ್ಶಿ ಮರಿಸಿದ್ದಮ್ಮ, ಗ್ರಾಮ ಪಂಚಾಯ್ತಿ ಸಿಬ್ಬಂದಿ, ಎಸ್.ಡಿ.ಎಂ.ಸಿ ಅಧ್ಯಕ್ಷ ಹನುಮಂತರಾಜು, ಶಾಲೆಯ ಮುಖ್ಯಶಿಕ್ಷಕ ಎ.ಪಿ.ವಿರೂಪಾಕ್ಷಯ್ಯ, ಶಾಲಾ ಮಕ್ಕಳು ಭಾಗಿಯಾಗಿದ್ದರು.
ರಾಷ್ಟ್ರಗೀತೆ, ಭಗವದ್ಗೀತೆ, ಸಂವಿಧಾನ ಪ್ರಸ್ತಾವನೆ ಓದುವ ಮೂಲಕ ಕಾರ್ಯಕ್ರಮ ಪ್ರಾರಂಭಿಸಲಾಯಿತು.
ಶಾಲಾ ಮಕ್ಕಳೇ ಅಧ್ಯಕ್ಷ, ಉಪಾಧ್ಯಕ್ಷರಾಗಿ ಗ್ರಾಮಸಭೆಯನ್ನು ನಡೆಸಿಕೊಟ್ಟರು.
ಈ ವೇಳೆ ಮಕ್ಕಳ ಹಕ್ಕುಗಳಾದ ಬದುಕುಳಿಯುವ ಹಕ್ಕು, ರಕ್ಷಣೆಯ ಹಕ್ಕು, ಭಾಗವಹಿಸುವ ಹಕ್ಕು, ಅಭಿವೃದ್ಧಿ ಹೊಂದುವ ಹಕ್ಕುಗಳ ಬಗ್ಗೆ ಸಂಪನ್ಮೂಲ ವ್ಯಕ್ತಿ ಬೈಲಾಂಜಿನಮೂರ್ತಿ ಸಂಕ್ಷಿಪ್ತವಾಗಿ ಮಕ್ಕಳಿಗೆ ತಿಳಿಸಿಕೊಟ್ಟರು.
ಮಕ್ಕಳು ಶಾಲಾ ಆಟದ ಮೈದಾನ ಮಾಡಿಕೊಡುವಂತೆ ಗ್ರಾಮಸಭೆಯಲ್ಲಿ ಅರ್ಜಿ ಮೂಲಕ ಮನವಿ ಮಾಡಿದರು. ಮಕ್ಕಳ ಮನವಿಯನ್ನು ಸ್ವೀಕರಿಸಿದ ಗ್ರಾಮ ಪಂಚಾಯ್ತಿ ಅಧ್ಯಕ್ಷ ಹಾಗೂ ಪಿಡಿಒ ಶೀಘ್ರವಾಗಿ ಮಾಡಿಕೊಡುವ ಭರವಸೆ ನೀಡಿದರು.
ಕಾರ್ಯಕ್ರಮ ಕುರಿತು ಮಾತನಾಡಿದ ಪಿಡಿಒ ಎಸ್. ನಂದಿನಿ, ಪೋಷಕರು ಮಕ್ಕಳ ಬಗ್ಗೆ ಕಾಳಜಿ ವಹಿಸಬೇಕು. ಕಷ್ಟಪಟ್ಟು, ಹೊಟ್ಟೆ ಬಟ್ಟೆ ಕಟ್ಟಿ ಓದಿಸುವ ತಂದೆ-ತಾಯಿಗಳಿಗೆ ಮಕ್ಕಳು ಚೆನ್ನಾಗಿ ಓದಿ ಒಳ್ಳೆ ಹೆಸರು ತರಬೇಕು ಎಂದರು. ಇದೇ ವೇಳೆ ಮೂಲಭೂತ ಹಕ್ಕುಗಳ ಬಗ್ಗೆ ತಿಸಿಸಿದರು.
ಚಿಕ್ಕನಾಯಕನಹಳ್ಳಿ: ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಅಶ್ವಿಜ ಬಿ.ವಿ. ಅವರು ತಾಲ್ಲೂಕಿಗೆ ದಿಢೀರ್ ಭೇಟಿ ನೀಡಿ ವಿವಿಧ ಅಭಿವೃದ್ಧಿ…
ಬೆಂಗಳೂರು: ಆರೋಪಿಯ ಹುಡುಕಾಟಕ್ಕೆ ತೆರಳುತ್ತಿದ್ದ ಬೆಂಗಳೂರು ಸೈಬರ್ ಕ್ರೈಂ ತಂಡ ಪ್ರಯಾಣಿಸುತ್ತಿದ್ದ ಬಸ್ ಮಧ್ಯಪ್ರದೇಶದಲ್ಲಿ ಭೀಕರ ಅಪಘಾತಕ್ಕೀಡಾಗಿ, ಪೊಲೀಸ್ ಇನ್ಸ್ಪೆಕ್ಟರ್…
ಮದರ್ ತೆರೇಸಾ - ಆಗಸ್ಟ್ 26, 1910..... ರಸ್ತೆ ಬದಿಯ ಹರಕಲು ಬಟ್ಟೆಯ ಭಿಕ್ಷುಕರನ್ನು ನೋಡಲೇ ಅಸಹ್ಯಪಡುವ ಪರಿಸ್ಥಿತಿ ಇರುವಾಗ…
ಚಿಕ್ಕನಾಯಕನಹಳ್ಳಿ: ರೈತರಿಗೆ ಅನುಕೂಲವಾಗಬೇಕೆಂಬ ಉದ್ದೇಶದಿಂದ ಜುಲೈ.1 ರಿಂದ ವಿಕಸಿತ ಭಾರತ್ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ)…
ಬೆಂಗಳೂರು ಗ್ರಾಮಾಂತರ: ಮುಂಗಾರು ಮಳೆ ಕೊರತೆಯಿಂದ ರಾಜ್ಯದ 101 ತಾಲೂಕುಗಳನ್ನು ಬರಪೀಡಿತ ಎಂದು ಸರ್ಕಾರ ಘೋಷಿಸಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯ…