ಗರ್ಭಿಣಿ ಹಾಗೂ ಮಕ್ಕಳ ಆರೋಗ್ಯದ ದೃಷ್ಟಿಯಿಂದ ಕಾಲಕಾಲಕ್ಕೆ ಲಸಿಕೆ ಪಡೆಯುವುದು ಅವಶ್ಯಕವಾಗಿದ್ದು ಗರ್ಭಿಣಿ, ಮಕ್ಕಳಿಗೆ ಲಸಿಕೆ ಹಾಕಿಸಲು ಪೋಷಕರಿಗೆ ಅರಿವು ಮೂಡಿಸಿ ಎಂದು ಅಪರ ಜಿಲ್ಲಾಧಿಕಾರಿ ಸೈಯಿದಾ ಅಯಿಷಾ ಅವರು ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಜಿಲ್ಲಾ ಮಟ್ಟದ ಲಸಿಕಾ ಕಾರ್ಯಪಡೆ ಸಭೆ ಹಾಗೂ ಜಿಲ್ಲಾ ಮಟ್ಟದ ತಾಯಿ ಹಾಗೂ ಶಿಶು ಮರಣ ಪರಿಶೀಲನಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಮಕ್ಕಳ ಹಾಗೂ ಗರ್ಭಿಣಿ ಬಾಣಂತಿಯರ ಆರೋಗ್ಯ ರಕ್ಷಣೆಗೆ ಮೊದಲ ಆದ್ಯತೆ ನೀಡಿ ಶಿಶು ಮತ್ತು ತಾಯಿ ಮರಣ ಆಗದಂತೆ ಜಾಗೃತಿ ವಹಿಸಬೇಕು. ಅಂಗನವಾಡಿ, ಆಶಾ ಕಾರ್ಯಕರ್ತೆಯರು ಗರ್ಭಿಣಿ, ಬಾಣಂತಿಯರ ಮನೆ ಮನೆಗೆ ಭೇಟಿ ನೀಡಿ ಲಸಿಕೆ ಬಗ್ಗೆ ಅರಿವು ಮೂಡಿಸಿ ಶಿಶು ಹಾರೈಕೆ ಮತ್ತು ಗರ್ಭಿಣಿ, ಬಾಣಂತಿಯರ ಹಾರೈಕೆಯಲ್ಲಿ ನಿರತರಾಗಿ ಎಂದರು.
ವಾತಾವರಣ ಬದಲಾವಣೆ ಸಂಧರ್ಭದಲ್ಲಿ ಡೆಂಗ್ಯೂ, ಮಲೇರಿಯಾ, ಚಿಕನ್ ಗುನ್ಯ ಪ್ರಕರಣಗಳು ಉಲ್ಬಣಗೊಳ್ಳುವ ಸಂಭವ ಇರುತ್ತದೆ
ಹಾಗಾಗಿ ಆರೋಗ್ಯಾಧಿಕಾರಿಗಳು ಜಾಗೃತರಾಗಿ ಸ್ಥಳೀಯ ಮಟ್ಟದಲ್ಲಿ ಜನ ನಿಬಿಡ ಪ್ರದೇಶಗಳಿಗೆ ಭೇಟಿ ನೀಡಿ ಸಾರ್ವಜನಿಕರಿಗೆ ಅರಿವು ಮೂಡಿಸಿ. ತೊಟ್ಟಿ, ಚರಂಡಿ ಹಾಗೂ ಇನ್ನಿತರ ಘನ ತ್ಯಾಜ್ಯಗಳಲ್ಲಿ ನೀರು ಶೇಖರಣೆ ಯಾಗಿ ಸೊಳ್ಳೆಗಳು ಉತ್ಪತ್ತಿಗೊಂಡು ರೋಗಗಳು ಕಂಡು ಬರುತ್ತಿವೆ ಅದಕ್ಕಾಗಿ ರೋಗಗಳ ಬಗ್ಗೆ ಅರಿವು ಮೂಡಿಸಿ ಎಂದರು.
ಸಭೆಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಜಿಲ್ಲಾ ಆರೋಗ್ಯಾಧಿಕಾರಿ ಡಾ.ಲಕ್ಕ ಕೃಷ್ಣ ರೆಡ್ಡಿ, ಜಿಲ್ಲಾ ಆರ್.ಸಿ.ಎಚ್ ಅಧಿಕಾರಿ ಡಾ.ಸೀಮಾ ರುದ್ರಪ್ಪ ಮಹಾಬಳೆ, ಕುಷ್ಠರೋಗ ನಿರ್ಮೂಲನಾ ಅಧಿಕಾರಿ ಡಾ.ನಾಗೇಶ್ ಸೇರಿದಂತೆ ಜಿಲ್ಲಾ ಮತ್ತು ತಾಲ್ಲೂಕು ಆರೋಗ್ಯ ಅಧಿಕಾರಿಗಳು, ವೈದ್ಯಾಧಿಕಾರಿಗಳು, ಸಿಬ್ಬಂದಿ ಉಪಸ್ಥಿತರಿದ್ದರು.
ರಾಜ್ಯದ ಪ್ರವಾಸೋದ್ಯಮ ಮೂಲಸೌಕರ್ಯವನ್ನು ಜಾಗತಿಕ ಗುಣಮಟ್ಟಕ್ಕೆ ಏರಿಸುವ ಉದ್ದೇಶದಿಂದ, ಕರ್ನಾಟಕ ಪ್ರವಾಸೋದ್ಯಮ ಇಲಾಖೆ ವ್ಯಾಪ್ತಿಯಲ್ಲಿರುವ ಮಯೂರ ಹೋಟೆಲ್ಗಳು ಹಾಗೂ ಇತರೆ…
ದೊಡ್ಡಬಳ್ಳಾಪುರ: ಸಾಯಿರಾಂ ಡ್ರಿಪ್ ಇರಿಗೇಷನ್ ಹಾಗೂ ಕನ್ಸ್ಟ್ರಕ್ಷನ್ ಸಂಸ್ಥೆಯ ಮಾಲೀಕರಾದ ಬಿ. ಮಹೇಂದ್ರ ಬಾಬು ಅವರ 46ನೇ ವರ್ಷದ ಹುಟ್ಟುಹಬ್ಬವನ್ನು…
ದೊಡ್ಡಬಳ್ಳಾಪುರ: ಅಲ್ಯೂಮಿನಿಯಂ ವಿದ್ಯುತ್ ಕೇಬಲ್ ಕಳ್ಳತನ ಪ್ರಕರಣಗಳನ್ನು ಭೇದಿಸಿರುವ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು, ಅಂತರರಾಜ್ಯ ಕೇಬಲ್ ಕಳ್ಳರ ಜಾಲವನ್ನು…
ದೊಡ್ಡಬಳ್ಳಾಪುರ : ಹೊರದೇಶಗಳಲ್ಲಿ ಅಲ್ಲಿನ ನೆಲದ ಕಾನೂನಿಗೆ ಬದ್ಧವಾಗಿ ನೋಂದಣಿ ಮಾಡಿಸಿಕೊಂಡಿರುವ ಸಂಘ ಪರಿವಾರ, ಇಲ್ಲಿನ ನೆಲದ ಕಾನೂನಿಗೆ ವ್ಯತಿರಿಕ್ತವಾಗಿ…
ದೊಡ್ಡಬಳ್ಳಾಪುರ: ತೂಬಗೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಮಂಗಳವಾರ ನಡೆಯಬೇಕಿದ್ದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವು ಕೊನೆಯ ಕ್ಷಣದಲ್ಲಿ ಕಾಲೇಜು ವತಿಯಿಂದ…
ಮುಂಗಾರು ಆರಂಭವಾಗಿದ್ದರೂ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಆತಂಕಕಾರಿ ರೀತಿಯಲ್ಲಿ ಕುಸಿಯುತ್ತಿದೆ. ಸಾಮಾನ್ಯವಾಗಿ…