ಗರ್ಭಿಣಿ ಹಾಗೂ ಮಕ್ಕಳ ಆರೋಗ್ಯದ ದೃಷ್ಟಿಯಿಂದ ಕಾಲಕಾಲಕ್ಕೆ ಲಸಿಕೆ ಪಡೆಯುವುದು ಅವಶ್ಯಕವಾಗಿದ್ದು ಗರ್ಭಿಣಿ, ಮಕ್ಕಳಿಗೆ ಲಸಿಕೆ ಹಾಕಿಸಲು ಪೋಷಕರಿಗೆ ಅರಿವು ಮೂಡಿಸಿ ಎಂದು ಅಪರ ಜಿಲ್ಲಾಧಿಕಾರಿ ಸೈಯಿದಾ ಅಯಿಷಾ ಅವರು ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಜಿಲ್ಲಾ ಮಟ್ಟದ ಲಸಿಕಾ ಕಾರ್ಯಪಡೆ ಸಭೆ ಹಾಗೂ ಜಿಲ್ಲಾ ಮಟ್ಟದ ತಾಯಿ ಹಾಗೂ ಶಿಶು ಮರಣ ಪರಿಶೀಲನಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಮಕ್ಕಳ ಹಾಗೂ ಗರ್ಭಿಣಿ ಬಾಣಂತಿಯರ ಆರೋಗ್ಯ ರಕ್ಷಣೆಗೆ ಮೊದಲ ಆದ್ಯತೆ ನೀಡಿ ಶಿಶು ಮತ್ತು ತಾಯಿ ಮರಣ ಆಗದಂತೆ ಜಾಗೃತಿ ವಹಿಸಬೇಕು. ಅಂಗನವಾಡಿ, ಆಶಾ ಕಾರ್ಯಕರ್ತೆಯರು ಗರ್ಭಿಣಿ, ಬಾಣಂತಿಯರ ಮನೆ ಮನೆಗೆ ಭೇಟಿ ನೀಡಿ ಲಸಿಕೆ ಬಗ್ಗೆ ಅರಿವು ಮೂಡಿಸಿ ಶಿಶು ಹಾರೈಕೆ ಮತ್ತು ಗರ್ಭಿಣಿ, ಬಾಣಂತಿಯರ ಹಾರೈಕೆಯಲ್ಲಿ ನಿರತರಾಗಿ ಎಂದರು.
ವಾತಾವರಣ ಬದಲಾವಣೆ ಸಂಧರ್ಭದಲ್ಲಿ ಡೆಂಗ್ಯೂ, ಮಲೇರಿಯಾ, ಚಿಕನ್ ಗುನ್ಯ ಪ್ರಕರಣಗಳು ಉಲ್ಬಣಗೊಳ್ಳುವ ಸಂಭವ ಇರುತ್ತದೆ
ಹಾಗಾಗಿ ಆರೋಗ್ಯಾಧಿಕಾರಿಗಳು ಜಾಗೃತರಾಗಿ ಸ್ಥಳೀಯ ಮಟ್ಟದಲ್ಲಿ ಜನ ನಿಬಿಡ ಪ್ರದೇಶಗಳಿಗೆ ಭೇಟಿ ನೀಡಿ ಸಾರ್ವಜನಿಕರಿಗೆ ಅರಿವು ಮೂಡಿಸಿ. ತೊಟ್ಟಿ, ಚರಂಡಿ ಹಾಗೂ ಇನ್ನಿತರ ಘನ ತ್ಯಾಜ್ಯಗಳಲ್ಲಿ ನೀರು ಶೇಖರಣೆ ಯಾಗಿ ಸೊಳ್ಳೆಗಳು ಉತ್ಪತ್ತಿಗೊಂಡು ರೋಗಗಳು ಕಂಡು ಬರುತ್ತಿವೆ ಅದಕ್ಕಾಗಿ ರೋಗಗಳ ಬಗ್ಗೆ ಅರಿವು ಮೂಡಿಸಿ ಎಂದರು.
ಸಭೆಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಜಿಲ್ಲಾ ಆರೋಗ್ಯಾಧಿಕಾರಿ ಡಾ.ಲಕ್ಕ ಕೃಷ್ಣ ರೆಡ್ಡಿ, ಜಿಲ್ಲಾ ಆರ್.ಸಿ.ಎಚ್ ಅಧಿಕಾರಿ ಡಾ.ಸೀಮಾ ರುದ್ರಪ್ಪ ಮಹಾಬಳೆ, ಕುಷ್ಠರೋಗ ನಿರ್ಮೂಲನಾ ಅಧಿಕಾರಿ ಡಾ.ನಾಗೇಶ್ ಸೇರಿದಂತೆ ಜಿಲ್ಲಾ ಮತ್ತು ತಾಲ್ಲೂಕು ಆರೋಗ್ಯ ಅಧಿಕಾರಿಗಳು, ವೈದ್ಯಾಧಿಕಾರಿಗಳು, ಸಿಬ್ಬಂದಿ ಉಪಸ್ಥಿತರಿದ್ದರು.
ರಾಜ್ಯ ರಾಜಧಾನಿ ಬೆಂಗಳೂರಿಗೆ ಪಕ್ಕದಲ್ಲೇ ಇರುವ ಜಿಲ್ಲೆ ಎಂದರೆ ಅದು ಬೆಂಗಳೂರು ಗ್ರಾಮಾಂತರ ಜಿಲ್ಲೆ. ಕೈಗಾರಿಕಾ ಬೆಳವಣಿಗೆ, ವೇಗವಾದ ನಗರೀಕರಣ,…
ಸನ್ಮಾನ್ಯ ಶ್ರೀ ಎಚ್. ಡಿ. ದೇವೇಗೌಡ,... 94, ನಾಟ್ ಔಟ್, ಶತಕಕ್ಕೆ 6 ಮಾತ್ರ ಬಾಕಿ, ಅವರು ಶತಕವನ್ನು ಪೂರೈಸಲಿ…
ದೊಡ್ಡಬಳ್ಳಾಪುರ: ದೇಶದಲ್ಲಿ ಇ-ಫಾರ್ಮಸಿ ಹಾಗೂ ಆನ್ಲೈನ್ ಮೂಲಕ ಔಷಧ ಮಾರಾಟವನ್ನು ವಿರೋಧಿಸಿ ಮೇ 20 ರಂದು ದೇಶವ್ಯಾಪಿ ಕರೆ ನೀಡಿರುವ…
ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಹೋಬಳಿಯ ಹಾಡೋನಹಳ್ಳಿ ವ್ಯವಸಾಯ ಸೇವಾ ಸಹಕಾರ ಸಂಘ(ವಿಎಸ್ಎಸ್ ಎನ್) ಚುನಾವಣೆ ನಡೆದಿದ್ದು, ವಿಎಸ್ಎಸ್ ಎನ್ ನ…
ವಿಡಿ ಸತೀಶನ್ ಅವರು ಕೇರಳದ ನೂತನ ಮುಖ್ಯಮಂತ್ರಿಯಾಗಿ ಸೋಮವಾರ ಪ್ರಮಾಣವಚನ ಸ್ವೀಕರಿಸಿದರು. ತಿರುವನಂತಪುರಂನ ಸೆಂಟ್ರಲ್ ಸ್ಟೇಡಿಯಂನಲ್ಲಿ ನಡೆದ ಪ್ರಮಾಣವಚನ ಸ್ವೀಕಾರ…
ದೊಡ್ಡಬಳ್ಳಾಪುರ: ಪೆಟ್ರೋಲ್, ಡೀಸೆಲ್ ಹಾಗೂ ಅಡುಗೆ ಅನಿಲದ ಬೆಲೆ ಏರಿಕೆ ಮತ್ತು ನೀಟ್ (NEET) ಪರೀಕ್ಷೆಯ ಅಕ್ರಮಗಳನ್ನು ಖಂಡಿಸಿ ಬೆಂಗಳೂರು…