ಗರ್ಭಿಣಿ ಹಾಗೂ ಮಕ್ಕಳ ಆರೋಗ್ಯದ ದೃಷ್ಟಿಯಿಂದ ಕಾಲಕಾಲಕ್ಕೆ ಲಸಿಕೆ ಪಡೆಯುವುದು ಅವಶ್ಯಕವಾಗಿದ್ದು ಗರ್ಭಿಣಿ, ಮಕ್ಕಳಿಗೆ ಲಸಿಕೆ ಹಾಕಿಸಲು ಪೋಷಕರಿಗೆ ಅರಿವು ಮೂಡಿಸಿ ಎಂದು ಅಪರ ಜಿಲ್ಲಾಧಿಕಾರಿ ಸೈಯಿದಾ ಅಯಿಷಾ ಅವರು ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಜಿಲ್ಲಾ ಮಟ್ಟದ ಲಸಿಕಾ ಕಾರ್ಯಪಡೆ ಸಭೆ ಹಾಗೂ ಜಿಲ್ಲಾ ಮಟ್ಟದ ತಾಯಿ ಹಾಗೂ ಶಿಶು ಮರಣ ಪರಿಶೀಲನಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಮಕ್ಕಳ ಹಾಗೂ ಗರ್ಭಿಣಿ ಬಾಣಂತಿಯರ ಆರೋಗ್ಯ ರಕ್ಷಣೆಗೆ ಮೊದಲ ಆದ್ಯತೆ ನೀಡಿ ಶಿಶು ಮತ್ತು ತಾಯಿ ಮರಣ ಆಗದಂತೆ ಜಾಗೃತಿ ವಹಿಸಬೇಕು. ಅಂಗನವಾಡಿ, ಆಶಾ ಕಾರ್ಯಕರ್ತೆಯರು ಗರ್ಭಿಣಿ, ಬಾಣಂತಿಯರ ಮನೆ ಮನೆಗೆ ಭೇಟಿ ನೀಡಿ ಲಸಿಕೆ ಬಗ್ಗೆ ಅರಿವು ಮೂಡಿಸಿ ಶಿಶು ಹಾರೈಕೆ ಮತ್ತು ಗರ್ಭಿಣಿ, ಬಾಣಂತಿಯರ ಹಾರೈಕೆಯಲ್ಲಿ ನಿರತರಾಗಿ ಎಂದರು.
ವಾತಾವರಣ ಬದಲಾವಣೆ ಸಂಧರ್ಭದಲ್ಲಿ ಡೆಂಗ್ಯೂ, ಮಲೇರಿಯಾ, ಚಿಕನ್ ಗುನ್ಯ ಪ್ರಕರಣಗಳು ಉಲ್ಬಣಗೊಳ್ಳುವ ಸಂಭವ ಇರುತ್ತದೆ
ಹಾಗಾಗಿ ಆರೋಗ್ಯಾಧಿಕಾರಿಗಳು ಜಾಗೃತರಾಗಿ ಸ್ಥಳೀಯ ಮಟ್ಟದಲ್ಲಿ ಜನ ನಿಬಿಡ ಪ್ರದೇಶಗಳಿಗೆ ಭೇಟಿ ನೀಡಿ ಸಾರ್ವಜನಿಕರಿಗೆ ಅರಿವು ಮೂಡಿಸಿ. ತೊಟ್ಟಿ, ಚರಂಡಿ ಹಾಗೂ ಇನ್ನಿತರ ಘನ ತ್ಯಾಜ್ಯಗಳಲ್ಲಿ ನೀರು ಶೇಖರಣೆ ಯಾಗಿ ಸೊಳ್ಳೆಗಳು ಉತ್ಪತ್ತಿಗೊಂಡು ರೋಗಗಳು ಕಂಡು ಬರುತ್ತಿವೆ ಅದಕ್ಕಾಗಿ ರೋಗಗಳ ಬಗ್ಗೆ ಅರಿವು ಮೂಡಿಸಿ ಎಂದರು.
ಸಭೆಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಜಿಲ್ಲಾ ಆರೋಗ್ಯಾಧಿಕಾರಿ ಡಾ.ಲಕ್ಕ ಕೃಷ್ಣ ರೆಡ್ಡಿ, ಜಿಲ್ಲಾ ಆರ್.ಸಿ.ಎಚ್ ಅಧಿಕಾರಿ ಡಾ.ಸೀಮಾ ರುದ್ರಪ್ಪ ಮಹಾಬಳೆ, ಕುಷ್ಠರೋಗ ನಿರ್ಮೂಲನಾ ಅಧಿಕಾರಿ ಡಾ.ನಾಗೇಶ್ ಸೇರಿದಂತೆ ಜಿಲ್ಲಾ ಮತ್ತು ತಾಲ್ಲೂಕು ಆರೋಗ್ಯ ಅಧಿಕಾರಿಗಳು, ವೈದ್ಯಾಧಿಕಾರಿಗಳು, ಸಿಬ್ಬಂದಿ ಉಪಸ್ಥಿತರಿದ್ದರು.
ಗ್ರಾಮೀಣರಿಗೆ ಸ್ಥಳೀಯವಾಗಿ ಉದ್ಯೋಗ ಒದಗಿಸುವ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಯೋಜನೆಯಡಿ (ವಿಬಿ…
ದೊಡ್ಡಬಳ್ಳಾಪುರ: ತಾಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಎನ್ಡಿಎ ಬೆಂಬಲಿತ ನಿರ್ದೇಶಕ ಟಿ.ಜಿ.…
ಅಂತೂ ಇಂತೂ, ಹಾಗೂ ಹೀಗೂ ಸ್ವಾತಂತ್ರ್ಯ ಪಡೆದ ನಂತರದ 79 ವರ್ಷಗಳನ್ನು ಪೂರೈಸಿದ್ದೇವೆ. ಬಹುತೇಕ ಒಂದು ಪೀಳಿಗೆ ಅಂತ್ಯವಾಗಿ ಮುಂದಿನ…
ಜಿಲ್ಲೆಯಲ್ಲಿ ಸಾರ್ವಜನಿಕ ವಿತರಣಾ ವ್ಯವಸ್ಥೆಯಲ್ಲಿ ವಿತರಿಸುವ ಮಕ್ಕಳಿಗೆ, ಮಹಿಳೆಯರಿಗೆ ದುರ್ಬಲರಿಗೆ, ಹಿರಿಯರಿಗೆ ಆಹಾರ ವಿತರಣೆಯಲ್ಲಿ ಯಾವುದೇ ರೀತಿಯ ಲೋಪದೋಷ ಕಂಡು…
ದೊಡ್ಡಬಳ್ಳಾಪುರ: ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘದ (ಎಂ.ಪಿ.ಆರ್.ಎ.ಸಿ.ಎಸ್.) ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಗಳಿಗೆ…
ಬೆಂಗಳೂರು: ಕಾವೇರಿ ನದಿ ನೀರಿನ ವಿಚಾರವಾಗಿ ಕರ್ನಾಟಕ ಬಂದ್ಗೆ ಕರೆ ನೀಡಿದ್ದ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಅವರನ್ನು ಪೊಲೀಸರು…