ಮಗನಿಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಕೊಲೆ ಮಾಡಿದ ತಂದೆ

ಮಗನ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಕೊಲೆ ಮಾಡಿದ ತಂದೆ. ದೊಡ್ಡಬಳ್ಳಾಪುರ ತಾಲೂಕಿನ ವಾಣಿಗರಹಳ್ಳಿ ಗ್ರಾಮದಲ್ಲಿ ಜೂನ್ 29ರ ಸಂಜೆ ಸುಮಾರು 7ಗಂಟೆ ಸಮಯದಲ್ಲಿ ಘಟನೆ ನಡೆದಿದೆ.

ತಂದೆ ಜಯರಾಮಯ್ಯ (58) ಮಗ ಆದರ್ಶ್ (30) ನನ್ನು ಪೆಟ್ರೋಲ್ ಹಾಕಿ ಕೊಂದಿದ್ದಾನೆ. ದಿನನಿತ್ಯ ಕುಡಿದು ಮನೆಯಲ್ಲಿ ಗಲಾಟೆ ಮಾಡುತ್ತಿದ್ದ ಮಗನನ್ನು ತಂದೆ ಕೊಲೆ ಮಾಡಲಾಗಿದೆ ಎನ್ನಲಾಗಿದೆ.

ಮಗ ಆದರ್ಶ್ ಗೆ ದುಡಿಮೆ ಮಾಡಲು ಆಟೋ , ಕಾರು ಸಹ ತಂದೆ ಖರೀದಿ ಮಾಡಿ ಕೊಡಲಾಗಿತ್ತು. ಆದರೆ ಕುಡಿತದ ಚಟಕ್ಕೆ ಒಳಗಾಗಿದ್ದ ಮಗ ಆದರ್ಶ್ ಎಲ್ಲವನ್ನು ಹಾಳು ಮಾಡಿದ್ದ, ಜೊತೆಗೆ ಕುಡಿತದ ಚಟ ಬಿಡಲು ಪರಿವರ್ತನಾ ಕೇಂದ್ರಕ್ಕೂ ಸಹ ಸೇರಿದ್ದರು. ಆದರೂ ಕುಡಿತ ಬಿಡದ ಮಗ ಆದರ್ಶ್ ಇತ್ತೀಚೆಗೆ ತಾಯಿಗೂ ಸಹ ಮಾರಣಾಂತಿಕವಾಗಿ ಹಲ್ಲೆ ಮಾಡಿದ್ದ ಎನ್ನಲಾಗಿದೆ.

ಮಗನ ರೋಧನೆ ತಾಳಲಾರದೇ ರೋಸಿ ಹೋಗಿದ್ದ ತಂದೆ ಪೆಟ್ರೋಲ್ ಹಾಕಿ ಬೆಂಕಿ ಹಚ್ಚಿ ಕೊಲೆ ಮಾಡಲಾಗಿದೆ ಎನ್ನಲಾಗಿದೆ. ಇನ್ನೂ ಪಕ್ಕದಲ್ಲಿ ಇದ್ದ ಬಾರ್ ಬಳಿ ತಂದೆ ಮಗನಿಗೆ ಥಳಿಸಿದ್ದಾನೆ ನಂತರ ಕೈ ಕಾಲು ಕಟ್ಟಿ ತೋಟಕ್ಕೆ ಎಳೆದೊಯ್ದಿದ್ದಾನೆ. ನಂತರ ತೋಟದ ಬಳಿ ಕೈ ಕಾಲು ಕಟ್ಟಿ ಹಲಸಿನ ಮರಕ್ಕೆ ಕಟ್ಟಿಹಾಕಿ ಪೆಟ್ರೋಲ್ ಸುರಿದು ಬೆಂಕಿ ಇಟ್ಟಿದ್ದಾನೆ. ಈ ಬಗ್ಗೆ ದೊಡ್ಡಬೆಳವಂಗಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Ramesh Babu

Journalist

Recent Posts

ನಾಡಕಚೇರಿ ಸರ್ವರ್ ಪದೇ ಪದೇ ಡೌನ್: ರಾಜ್ಯಾದ್ಯಂತ ಜನರಿಗೆ ಸಂಕಷ್ಟ – ತುರ್ತು ಪರಿಹಾರಕ್ಕೆ ಸರ್ಕಾರ ಮುಂದಾಗಬೇಕಿದೆ

ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…

6 hours ago

ಮಧುರನಹೊಸಹಳ್ಳಿಯಲ್ಲಿ ವಿಜೃಂಭಣೆಯಿಂದ ಆಷಾಡ ಏಕಾದಶಿ ಆಚರಣೆ

ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…

7 hours ago

ಬಾಶೆಟ್ಟಿಹಳ್ಳಿ ಯೂ-ಟರ್ನ್‌ನಲ್ಲಿ ಕೆಟ್ಟು ನಿಂತ ಟ್ರಕ್: ಯಲಹಂಕ–ಹಿಂದೂಪುರ ಹೆದ್ದಾರಿಯಲ್ಲಿ ಭಾರೀ ಟ್ರಾಫಿಕ್ ಜಾಮ್

ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…

22 hours ago

ಹೆದ್ದಾರಿ ಸ್ಕೈವಾಕ್‌ಗಳ ಕನಸು ಇನ್ನೂ ಅಪೂರ್ಣ…: ದಾಬಸ್‌ಪೇಟೆ–ಹೊಸಕೋಟೆ ಹೆದ್ದಾರಿಯಲ್ಲಿ ಆಮೆಗತಿಯ ಕಾಮಗಾರಿ: ಜೀವ ಕೈಯಲ್ಲಿ ಹಿಡಿದು ರಸ್ತೆ ದಾಟುವ ಜನರು

ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್‌ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…

1 day ago

ಬೆಂಗಳೂರು ಗ್ರಾಮಾಂತರದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಬಿರುಸು: 15,721 ಮೃತರ ಹೆಸರು ಪತ್ತೆ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (ಎಸ್ಐಆರ್) ಪ್ರಕ್ರಿಯೆ ಬಿರುಸಿನಿಂದ ಸಾಗುತ್ತಿದ್ದು, ಜಿಲ್ಲೆಯಾದ್ಯಂತ ಒಟ್ಟು 15,721 ಮೃತರ…

2 days ago

ದೇವಾಲಯಗಳ ಹುಂಡಿ ಭದ್ರತೆಗೆ ಸಿಸಿಟಿವಿ ಕಣ್ಗಾವಲು- ಜಿಲ್ಲಾಧಿಕಾರಿ ಡಾ. ಕೆ.ಎನ್ ಅನುರಾಧ

ಧಾರ್ಮಿಕ ದತ್ತಿ ಇಲಾಖೆ ವ್ಯಾಪ್ತಿಗೆ ಒಳಪಡುವ ಪ್ರವರ್ಗ ಎ ಮತ್ತು ಬಿ ದೇವಾಲಯಗಳ ಹುಂಡಿ ಭದ್ರತೆ ಸೇರಿದಂತೆ ಎಣಿಕೆ ಕಾರ್ಯ,…

2 days ago