ಉತ್ತರ ಪ್ರದೇಶದ ಇಟಾಹ್ ಎಂಬಲ್ಲಿ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇಲ್ಲಿ ಮಗಳ ಪ್ರೇಮ ಪ್ರಕರಣಕ್ಕೆ ಮನನೊಂದ ತಾಯಿಯೊಬ್ಬಳು ಮಗಳನ್ನು ಕೊಲ್ಲಲು ವ್ಯಕ್ತಿಯೊಬ್ಬನನ್ನು ನೇಮಿಸಿದ್ದಾಳೆ. ಆದರೆ, ಆ ಹಂತಕ ಮಗಳ ಬದಲು ತಾಯಿಯನ್ನೇ ಕೊಂದಿದ್ದಾನೆ.
ಇಲ್ಲಿ ಟ್ವಿಸ್ಟ್ ಏನೆಂದರೆ ಮಗಳು ಪ್ರೀತಿಸಿದವನಿಗೆ ಮಗಳನ್ನು ಕೊಲ್ಲಲು ತಾಯಿ ಸುಪಾರಿ ಕೊಟ್ಟಿದ್ದಾಳೆ. ಹೀಗಾಗಿ ಮಗಳ ಬದಲು ತಾಯಿಯನ್ನೇ ಕೊಂದಿದ್ದಾನೆ… ಮೃತಳ ಮಗಳು ಮತ್ತು ಆಕೆಯ ಪ್ರೇಮಿ ಕಮ್ ಕಿಲ್ಲರ್ ಸದ್ಯ ಪೊಲೀಸರ ವಶದಲ್ಲಿದ್ದಾರೆ.
ಕಳೆದ ಭಾನುವಾರ, ಇಟಾಹ್ನ ರಾಗಿ ಹೊಲದಲ್ಲಿ ಮಹಿಳೆಯ ಶವ ಪತ್ತೆಯಾಗಿತ್ತು. ಮಹಿಳೆಗೆ 42 ವರ್ಷ ವಯಸ್ಸಾಗಿತ್ತು. ಕೊಲೆಯಾದ ಎರಡನೇ ದಿನ ಮಹಿಳೆಯನ್ನು ರಮಾಕಾಂತ್ ಅವರ ಪತ್ನಿ ಅಲ್ಕಾ ಎಂದು ಗುರುತಿಸಲಾಗಿದೆ.
ಕಥೆ ಸಿನಿಮಾದಂತೆ ಕಂಡರೂ ವಾಸ್ತವ. ಕೆಲವು ತಿಂಗಳ ಹಿಂದೆ, ನಯಾಗಾಂವ್ ಪೊಲೀಸ್ ಠಾಣೆಯ ಅಲ್ಲಾಪುರ್ ನಿವಾಸಿ ಅಲ್ಕಾ ಅವರ ಅಪ್ರಾಪ್ತ ಮಗಳು ಅದೇ ಗ್ರಾಮದ ಅಖಿಲೇಶ್ ಜೊತೆ ಓಡಿಹೋಗಿದ್ದಳು. ಪೊಲೀಸರು ಆಕೆಯನ್ನು ವಶಪಡಿಸಿಕೊಂಡು ಆಕೆಯ ಮನೆಯವರಿಗೆ ಒಪ್ಪಿಸಿ ಆರೋಪಿಯನ್ನು ಜೈಲಿಗೆ ಕಳುಹಿಸಿದ್ದಾರೆ. ಅಲ್ಕಾ ತನ್ನ ಮಗಳನ್ನು ಅಕಾರಾಬಾದ್ ಸಿಕಂದರಪುರ ಖಾಸ್ ಪೊಲೀಸ್ ಠಾಣೆಯ ಕೈಮ್ಗಂಜ್ ಜಿಲ್ಲೆಯ ಫರೂಕಾಬಾದ್ನಲ್ಲಿರುವ ತನ್ನ ತಾಯಿಯ ಮನೆಗೆ ಕಳುಹಿಸಿದಳು. ಈ ಸ್ಥಳದ ನಿವಾಸಿ ಸುಭಾಷ್ ಎಂಬಾತನಿಗೆ ಅಲ್ಕಾ ಪರಿಚಯವಾಗಿತ್ತು ಎಂದು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ರಾಜ್ಕುಮಾರ್ ಸಿಂಗ್ ಹೇಳಿದ್ದಾರೆ.
ನಂತರ, ಸುಭಾಷ್ ಅಲ್ಕಾ ಅವರ ಮಗಳೊಂದಿಗೆ ಸಂಬಂಧವನ್ನು ಬೆಳೆಸಿದ್ದಾನೆ. ಒಂದು ದಿನ, ಅವರು ಫೋನ್ನಲ್ಲಿ ಮಾತನಾಡುವುದನ್ನು ನೋಡಿ, ಹುಡುಗಿಯ ತಾಯಿಯ ಚಿಕ್ಕಪ್ಪ ಅಲ್ಕಾಗೆ ಮಾಹಿತಿ ನೀಡಿದರು ಮತ್ತು ಅವಳನ್ನು ಕರೆದುಕೊಂಡು ಹೋಗುವಂತೆ ಹೇಳಿದರು. ಆದರೆ, ಆ ಹುಡುಗಿಗೆ ಸುಭಾಷ್ ಜೊತೆ ಸಂಬಂಧವಿದೆ ಎಂಬುದು ಅಲ್ಲಿಯವರೆಗೆ ಯಾರಿಗೂ ತಿಳಿದಿರಲಿಲ್ಲ.
ಸುಭಾಷ್ ಈಗಾಗಲೇ ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ವಾಸ ಅನುಭವಿಸಿದ್ದಾನೆ. ತಾಯಿ ಅಲ್ಕಾ ಅಕ್ಟೋಬರ್ 27 ರಂದು ಸುಭಾಷ್ಗೆ ಕರೆ ಮಾಡಿ ಮಗಳನ್ನು ಕೊಲ್ಲಲು 50,000 ರೂ. ಕೊಡುತ್ತಾಳೆ. ಈ ವಿಚಾರ ಮಗಳಿಗೆ ತಿಳಿಯುತ್ತದೆ. ಆಗ ತನ್ನ ತಾಯಿಯನ್ನು ಕೊಂದರೆ ನಿನ್ನನ್ನು ಮದುವೆಯಾಗುತ್ತೇನೆಂದು ಸುಭಾಷ್ ಚಂದ್ರನಿಗೆ ಭರವಸೆ ನೀಡುತ್ತಾಳೆ. ಆದರೆ, ಮಗಳ ಬದಲಿಗೆ ಸುಫಾರಿಕೊಟ್ಟ ತಾಯಿಯನ್ನೇ ಹಂತಕ ಕೊಲ್ಲುತ್ತಾನೆ. ಸದ್ಯ ಕೊಲೆ ಆರೋಪಿ ಪೊಲೀಸರ ವಶದಲ್ಲಿದ್ದಾನೆ….
ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…
ನಾಗಮಂಗಲ: ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಕನ್ಯಾಘಟ್ಟ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಮಹಾಗಣಪತಿ ದೇವಸ್ಥಾನದ ಲೋಕಾರ್ಪಣೆ ಸಮಾರಂಭದಲ್ಲಿ ಮಾತನಾಡಿದ ಜಲಸಂಪನ್ಮೂಲ…
ದೇವನಹಳ್ಳಿ: ಮನೆ ಮಾಲೀಕರು ಮನೆಯಲ್ಲಿದ್ದ ಸಂದರ್ಭದಲ್ಲೇ ಕಳ್ಳತನ ನಡೆಸಿ ಪರಾರಿಯಾಗಿದ್ದ ಆರೋಪಿಯನ್ನು ವಿಜಯಪುರ ಪೊಲೀಸರು ಕಳ್ಳತನ ನಡೆದ 24 ಗಂಟೆಯೊಳಗೆ…
ದೊಡ್ಡಬಳ್ಳಾಪುರ: ತಾಲೂಕಿನ ಸೋಮಶೆಟ್ಟಿಹಳ್ಳಿ ಗ್ರಾಮದಲ್ಲಿ ತಡರಾತ್ರಿ ಕೋಳಿಫಾರ್ಮ್ಗೆ ಚಿರತೆ ದಾಳಿ ನಡೆಸಿರುವ ಶಂಕೆ ವ್ಯಕ್ತವಾಗಿದ್ದು, 950ಕ್ಕೂ ಅಧಿಕ ಕೋಳಿಮರಿಗಳು…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ನೂತನ ಸದಸ್ಯರಾಗಿ ಆಯ್ಕೆಯಾಗಿರುವ ಎಸ್.ಡಿ. ಮುನಿರಾಜು ಅವರನ್ನು ತೂಬಗೆರೆ ಯುವ ಕಾಂಗ್ರೆಸ್ ಸಮಿತಿ ವತಿಯಿಂದ…
ದೇವನಹಳ್ಳಿ: ವಿಯೆಟ್ನಾಂನ ಹಾನೊಯ್ ನಗರದಿಂದ ಬೆಂಗಳೂರಿಗೆ ವಿಮಾನದ ಮೂಲಕ ಹೈಡ್ರೋಫೋನಿಕ್ ಗಾಂಜಾ ಕಳ್ಳಸಾಗಣೆ ಮಾಡುತ್ತಿದ್ದ ಆರೋಪಿಯನ್ನು ದೇವನಹಳ್ಳಿ ಕೆಂಪೇಗೌಡ ಅಂತರರಾಷ್ಟ್ರೀಯ…