ತಲೆಯನ್ನು ಮಚ್ಚಿನಿಂದ ಕೊಚ್ಚಿ ವ್ಯಕ್ತಿಯನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಬುಳ್ಳಹಳ್ಳಿ ಗೇಟ್ ಬಳಿ ನಡೆದಿದೆ .
ಸುಮಾರು 40 ವರ್ಷದ ವ್ಯಕ್ತಿಯನ್ನು ಕೊಲೆ ಮಾಡಿ ಇಲ್ಲಿನ ನಿರ್ಜನ ಪ್ರದೇಶದಲ್ಲಿ ಹಂತಕರು ಮೃತದೇಹ ಎಸೆದು ಹೋಗಿದ್ದಾರೆ . ಇನ್ನು ತಲೆಯನ್ನು ಮಚ್ಚಿನಿಂದ ಕೊಚ್ಚಿದ್ದು , ಬೆರಳುಗಳನ್ನು ಸಹ ಕತ್ತರಿಸಲಿಸಲಾಗಿದೆ.
ಬೇರೆಡೆ ಕೊಲೆ ಮಾಡಿ ಮೃತದೇಹವನ್ನು ಬೆತ್ತಲೆಗೊಳಿಸಿ ನಗರದ ಹೊರವಲಯದಲ್ಲಿ ಎಸೆದು ಹೋಗಿರುವ ಶಂಕೆ. ಪೊಲೀಸರಿಗೆ ಯಾವುದೇ ಕೊಲೆ ಸಾಕ್ಷಿಗಳು ಸಿಗದಂತೆ ಆರೋಪಿಗಳು ಪ್ಲಾನ್ ಮಾಡಿ ಹತ್ಯೆಗೈದಿದ್ದಾರೆ.
ಇಂದು ಬೆಳಗ್ಗೆ ತೋಟಕ್ಕೆ ತೆರಳಲು ಹೊರಟ ರೈತರು ಮೃತದೇಹ ನೋಡಿ ವಿಜಯಪುರ ಪೊಲೀಸರಿಗೆ ವಿಷಯ ಮುಟ್ಟಿಸಿದ್ದಾರೆ .
ಸ್ಥಳಕ್ಕೆ ವಿಜಯಪುರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮುಖ ಮತ್ತು ಕೈಗಳ ಮೇಲೆ ಕತ್ತಿ ಅಥವಾ ಮಚ್ಚಿನಿಂದ ಕೊಚ್ಚಲಾಗಿದೆ.
ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘ (ಎಂ.ಪಿ.ಆರ್.ಎ.ಸಿ.ಎಸ್.)ದ 2026–2031ನೇ ಅವಧಿಯ ಆಡಳಿತ ಮಂಡಳಿ…
ದೊಡ್ಡಬಳ್ಳಾಪುರ: ಆಷಾಢ ಮಾಸದಲ್ಲಿ ಗಾಳಿಪಟ ಹಾರಿಸುವುದು ನಮ್ಮ ಭಾಗದ ಸಾಂಪ್ರದಾಯಿಕ ಆಚರಣೆಯಾಗಿದ್ದು, ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ…
ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕರ್ನಾಟಕ ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆ ಭಾನುವಾರ ಯಾವುದೇ ಅಡಚಣೆ ಅಥವಾ…
ಇತ್ತೀಚೆಗೆ ಹೊಸದಾಗಿ ವಿಧಾನಪರಿಷತ್ ಸದಸ್ಯರಾಗಿ ಆಯ್ಕೆಯಾದ, ಡಾಕ್ಟರ್ ರಾಮ್ ಮನೋಹರ್ ಲೋಹಿಯಾ ವೇದಿಕೆಯ ಸಂಸ್ಥಾಪಕ ಅಧ್ಯಕ್ಷರಾದ ಶ್ರೀ ಮಳವಳ್ಳಿ ಶಿವಣ್ಣ…
ದೊಡ್ಡಬಳ್ಳಾಪುರ: ನೆಲಮಂಗಲದಿಂದ ದೊಡ್ಡಬಳ್ಳಾಪುರದತ್ತ ಬರುತ್ತಿದ್ದ ಗೂಡ್ಸ್ ವಾಹನವು ಅರಳುಮಲ್ಲಿಗೆ ಗ್ರಾಮದ ಬಳಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…
ಮದ್ಯಪಾನ, ಡ್ರಗ್ಸ್ ನಂತಹ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ ಎಂದು ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕ…