ಮಜರಾಹೊಸಹಳ್ಳಿ ಗ್ರಾ.ಪಂ ಪ್ರಭಾರ ಅಧ್ಯಕ್ಷರಾಗಿ ಮಾರಪ್ಪ ಅಧಿಕಾರ ಸ್ವೀಕಾರ

ತಾಲೂಕಿನ ಮಜರಾಹೊಸಹಳ್ಳಿ ಗ್ರಾಮ ಪಂಚಾಯಿತಿ 17 ಸದಸ್ಯರ ಬಲ ಹೊಂದಿದ್ದು, ಸರ್ವ ಸದಸ್ಯರ ಒಮ್ಮತದಿಂದ ಅವಿರೋಧವಾಗಿ ಮಾರಪ್ಪನವರನ್ನು ಪ್ರಭಾರ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಗಿದೆ.

ಪ್ರಭಾರ ಅಧ್ಯಕ್ಷರಿಗೆ ಸದಸ್ಯರು ಮತ್ತು ಸ್ಥಳೀಯ ಮುಖಂಡರು ಮಾಲಾರ್ಪಣೆ ಮಾಡಿ ಸಿಹಿ ಹಂಚುವ ಮೂಲಕ ಅಭಿನಂದಿಸಿದರು.

ಮಾಧ್ಯಮದವರೊಂದಿಗೆ ಪ್ರಭಾರ ಅಧ್ಯಕ್ಷ ಮಾರಪ್ಪ ಮಾತನಾಡಿ, ನಮ್ಮ ಪಂಚಾಯತಿಯ ಸರ್ವ ಸದಸ್ಯರು ಯಾವುದೇ ಪಕ್ಷ ಬೇಧವಿಲ್ಲದೆ ಅವಿರೋಧವಾಗಿ ನನ್ನನ್ನು ಪ್ರಭಾರ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಿದ್ದಾರೆ‌. ಅವರೆಲ್ಲರಿಗೂ ಅಭಿನಂದನೆಗಳನ್ನು ಸಲ್ಲಿಸುತ್ತೇನೆ. ನನಗೆ ವಹಿಸಿರುವ ಜವಾಬ್ಧಾರಿಯನ್ನು ಯಾವುದೇ ಪಕ್ಷಬೇಧ ಮಾಡದೆ ಪಂಚಾಯತಿಯ ಸರ್ವತೋಮುಖ ಅಭಿವೃದ್ಧಿಗೆ ನಿಷ್ಠೆಯಿಂದ ಶ್ರಮಿಸುತ್ತೇನೆ ಎಂದರು.

ಈ ಹಿಂದೆ ನಾನು ಗ್ರಾಮ ಪಂಚಾಯತಿ ಸದಸ್ಯನಾಗಿ, ಉಪಾಧ್ಯಕ್ಷನಾಗಿ ಕರ್ತವ್ಯ ನಿರ್ವಹಿಸಿದ್ದು, ಹಳೆಯ ಅನುಭವಗಳು ಅಧ್ಯಕ್ಷನಾಗಿ ಕರ್ತವ್ಯ ನಿರ್ವಹಿಸಲು ಮತ್ತಷ್ಟು ಶಕ್ತಿ ತುಂಬಲಿವೆ. ನಮ್ಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸಾಕಷ್ಟು ಕಾರ್ಖಾನೆಗಳಿದ್ದು , ಸ್ಥಳೀಯ ಕಾರ್ಖಾನೆಗಳಿಂದ ನಮಗೆ ಲಾಭಕ್ಕಿಂತ ನಷ್ಟವೇ ಹೆಚ್ಚು. ಪ್ರಮುಖವಾಗಿ ಪರಿಸರ ಮಾಲಿನ್ಯ, ಜಲ ಮೂಲಗಳ ಮಾಲಿನ್ಯ ನಿರಂತರವಾಗಿ ಕಾಡುತ್ತಿರುವ ಸಮಸ್ಯೆಯಾಗಿದೆ. ಈ ಕುರಿತು ಗ್ರಾಮ ಮಟ್ಟದಿಂದ ರಾಜ್ಯಮಟ್ಟದವರೆಗೂ ನಾವು ನಿರಂತರ ಹೋರಾಟ ನಡೆಸುತ್ತಿದ್ದೇವೆ. ಸದ್ಯದ ಪರಿಸ್ಥಿತಿಯಲ್ಲಿ ನಮ್ಮ ದೊಡ್ಡತುಮಕೂರು ಪಂಚಾಯಿತಿ ಹಾಗೂ ಮಜರಾಹೊಸಹಳ್ಳಿ ವ್ಯಾಪ್ತಿಯ ಗ್ರಾಮಗಳಿಗೆ ಅರಳುಮಲ್ಲಿಗೆ ಪಂಚಾಯಿತಿ ವ್ಯಾಪ್ತಿಯಿಂದ ಶುದ್ಧ ಕುಡಿಯುವ ನೀರು ಪೂರೈಕೆ ಮಾಡುವ ಕಾಮಗಾರಿ ಚಾಲ್ತಿಯಲ್ಲಿದ್ದು, ಸ್ಥಳೀಯ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸುವುದೇ ಮೊದಲ ಆದ್ಯತೆಯಾಗಿದೆ ಎಂದರು.

ಪ್ರಭಾರ ಅಧ್ಯಕ್ಷರಿಗೆ ಸ್ಥಳೀಯ ಮುಖಂಡರಾದ ತಿ.ರಂಗರಾಜು, ಬಮೂಲ್ ನಿರ್ದೇಶಕ ಬಿ ಸಿ ಆನಂದ್ ಕುಮಾರ್, ಸ್ಥಳೀಯ ಮುಖಂಡ ಬಿ ಎಚ್ ಕೆಂಪಣ್ಣ, ಕಾಂಗ್ರೆಸ್ ಮುಖಂಡ ಆದಿತ್ಯ ನಾಗೇಶ್, ಮುಖಂಡ ಸಂದೇಶ್ ಸೇರಿದಂತೆ ಹಲವು ಗಣ್ಯರು ಶುಭಕೋರಿದ್ದಾರೆ.

Ramesh Babu

Journalist

Recent Posts

ಆಕ್ಸಿಡೆಂಟ್ ಸ್ಪಾಟ್ ಆದ ಮೆಣಸಿ ಗೇಟ್: ಜೆಸಿಬಿ ಮತ್ತು ಕಾರಿನ ನಡುವೆ ಅಪಘಾತ: ಹಲವರಿಗೆ ಗಾಯ: ಆಸ್ಪತ್ರೆಗೆ ದಾಖಲು

ಜೆಸಿಬಿ ಮತ್ತು ಕಾರಿನ ನಡುವೆ ಅಪಘಾತ ಸಂಭವಿಸಿದ್ದು, ಕಾರಿನಲ್ಲಿದ್ದ ಹಲವರಿಗೆ ಗಾಯಗಳಾಗಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಮೆಣಸಿ ಗೇಟ್ ಬಳಿ…

2 hours ago

ದೊಡ್ಡಬಳ್ಳಾಪುರ ಉಪವಿಭಾಗದಲ್ಲಿ ಸಂಚಾರ ಸುರಕ್ಷತಾ ಸಪ್ತಾಹ: ಬೈಕ್ ಸವಾರರಿಗೆ ಹೆಲ್ಮೆಟ್ ಧರಿಸುವ ಬಗ್ಗೆ ಜಾಗೃತಿ

ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೊಲೀಸ್ ವತಿಯಿಂದ ದೊಡ್ಡಬಳ್ಳಾಪುರ ಉಪವಿಭಾಗದಲ್ಲಿ ಸಂಚಾರ ಸುರಕ್ಷತಾ ಸಪ್ತಾಹ-2025ರ ಅಡಿಯಲ್ಲಿ ವಾಹನ (ಬೈಕ್) ಸವಾರರಿಗೆ ಹೆಲ್ಮೆಟ್…

11 hours ago

ಚಾಲಕನ ನಿಯಂತ್ರಣ ತಪ್ಪಿ ಹಳ್ಳಕ್ಕೆ ಉರುಳಿಬಿದ್ದ ಗೂಡ್ಸ್ ಆಟೋ: ಚಾಲಕನಿಗೆ ಗಾಯ

ಚಾಲಕನ ನಿಯಂತ್ರಣ ತಪ್ಪಿ ಗೂಡ್ಸ್ ಆಟೋ ಹಳ್ಳಕ್ಕೆ ಉರುಳಿಬಿದ್ದಿರುವ ಘಟನೆ ದೊಡ್ಡಬೆಳವಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಹೊನ್ನಾವರ ಗೇಟ್ ಸಮೀಪ…

13 hours ago

ಸೃಷ್ಟಿಯ ಸಹಜತೆ ಮತ್ತು ವಿಸ್ಮಯ…..,

ಸೃಷ್ಟಿಯ ಸಹಜತೆ ಮತ್ತು ವಿಸ್ಮಯ....., ಅಲೆಗ್ಸಾಂಡರ್ ದಿ ಗ್ರೇಟ್ ‌ವಿಶ್ವ ಗೆಲ್ಲುವ ಕನಸಿನ ಚಕ್ರವರ್ತಿ ರೋಗಕ್ಕೆ ಬಲಿಯಾದ.... ಶಾಂತಿ ದೂತ,…

15 hours ago

ಒಂದು ವರ್ಷದೊಳಗೆ ಎತ್ತಿನಹೊಳೆ ನೀರು- ಸಚಿವ ಕೆ.ಎಚ್ ಮುನಿಯಪ್ಪ

ಎತ್ತಿನಹೊಳೆ ಯೋಜನೆ ಕಾಮಗಾರಿಯು ತ್ವರಿತಗತಿಯಲ್ಲಿ ಸಾಗುತ್ತಿದ್ದು ಒಂದು ವರ್ಷದಲ್ಲಿ ಜಿಲ್ಲೆಗೆ ನೀರು ಹರಿಯುವ ವಿಶ್ವಾಸವಿದೆ ಎಂದು ಆಹಾರ ನಾಗರಿಕ ಸರಬರಾಜು…

1 day ago

ಡಿ.15ರಂದು ಕಾಣೆಯಾಗಿದ್ದ 15 ವರ್ಷದ ಬಾಲಕ ಇಂದು ಶವವಾಗಿ ಪತ್ತೆ

ಡಿ.15 ರಂದು ಕಾಣೆಯಾಗಿದ್ದ ಪ್ರಥಮ ಪಿಯುಸಿ ವಿದ್ಯಾರ್ಥಿ ಇಂದು ಶವವಾಗಿ ಪತ್ತೆಯಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ…

1 day ago