ತಾಲೂಕಿನ ಮಜರಾಹೊಸಹಳ್ಳಿ ಗ್ರಾಮ ಪಂಚಾಯಿತಿ 17 ಸದಸ್ಯರ ಬಲ ಹೊಂದಿದ್ದು, ಸರ್ವ ಸದಸ್ಯರ ಒಮ್ಮತದಿಂದ ಅವಿರೋಧವಾಗಿ ಮಾರಪ್ಪನವರನ್ನು ಪ್ರಭಾರ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಗಿದೆ.
ಪ್ರಭಾರ ಅಧ್ಯಕ್ಷರಿಗೆ ಸದಸ್ಯರು ಮತ್ತು ಸ್ಥಳೀಯ ಮುಖಂಡರು ಮಾಲಾರ್ಪಣೆ ಮಾಡಿ ಸಿಹಿ ಹಂಚುವ ಮೂಲಕ ಅಭಿನಂದಿಸಿದರು.
ಮಾಧ್ಯಮದವರೊಂದಿಗೆ ಪ್ರಭಾರ ಅಧ್ಯಕ್ಷ ಮಾರಪ್ಪ ಮಾತನಾಡಿ, ನಮ್ಮ ಪಂಚಾಯತಿಯ ಸರ್ವ ಸದಸ್ಯರು ಯಾವುದೇ ಪಕ್ಷ ಬೇಧವಿಲ್ಲದೆ ಅವಿರೋಧವಾಗಿ ನನ್ನನ್ನು ಪ್ರಭಾರ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಿದ್ದಾರೆ. ಅವರೆಲ್ಲರಿಗೂ ಅಭಿನಂದನೆಗಳನ್ನು ಸಲ್ಲಿಸುತ್ತೇನೆ. ನನಗೆ ವಹಿಸಿರುವ ಜವಾಬ್ಧಾರಿಯನ್ನು ಯಾವುದೇ ಪಕ್ಷಬೇಧ ಮಾಡದೆ ಪಂಚಾಯತಿಯ ಸರ್ವತೋಮುಖ ಅಭಿವೃದ್ಧಿಗೆ ನಿಷ್ಠೆಯಿಂದ ಶ್ರಮಿಸುತ್ತೇನೆ ಎಂದರು.
ಈ ಹಿಂದೆ ನಾನು ಗ್ರಾಮ ಪಂಚಾಯತಿ ಸದಸ್ಯನಾಗಿ, ಉಪಾಧ್ಯಕ್ಷನಾಗಿ ಕರ್ತವ್ಯ ನಿರ್ವಹಿಸಿದ್ದು, ಹಳೆಯ ಅನುಭವಗಳು ಅಧ್ಯಕ್ಷನಾಗಿ ಕರ್ತವ್ಯ ನಿರ್ವಹಿಸಲು ಮತ್ತಷ್ಟು ಶಕ್ತಿ ತುಂಬಲಿವೆ. ನಮ್ಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸಾಕಷ್ಟು ಕಾರ್ಖಾನೆಗಳಿದ್ದು , ಸ್ಥಳೀಯ ಕಾರ್ಖಾನೆಗಳಿಂದ ನಮಗೆ ಲಾಭಕ್ಕಿಂತ ನಷ್ಟವೇ ಹೆಚ್ಚು. ಪ್ರಮುಖವಾಗಿ ಪರಿಸರ ಮಾಲಿನ್ಯ, ಜಲ ಮೂಲಗಳ ಮಾಲಿನ್ಯ ನಿರಂತರವಾಗಿ ಕಾಡುತ್ತಿರುವ ಸಮಸ್ಯೆಯಾಗಿದೆ. ಈ ಕುರಿತು ಗ್ರಾಮ ಮಟ್ಟದಿಂದ ರಾಜ್ಯಮಟ್ಟದವರೆಗೂ ನಾವು ನಿರಂತರ ಹೋರಾಟ ನಡೆಸುತ್ತಿದ್ದೇವೆ. ಸದ್ಯದ ಪರಿಸ್ಥಿತಿಯಲ್ಲಿ ನಮ್ಮ ದೊಡ್ಡತುಮಕೂರು ಪಂಚಾಯಿತಿ ಹಾಗೂ ಮಜರಾಹೊಸಹಳ್ಳಿ ವ್ಯಾಪ್ತಿಯ ಗ್ರಾಮಗಳಿಗೆ ಅರಳುಮಲ್ಲಿಗೆ ಪಂಚಾಯಿತಿ ವ್ಯಾಪ್ತಿಯಿಂದ ಶುದ್ಧ ಕುಡಿಯುವ ನೀರು ಪೂರೈಕೆ ಮಾಡುವ ಕಾಮಗಾರಿ ಚಾಲ್ತಿಯಲ್ಲಿದ್ದು, ಸ್ಥಳೀಯ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸುವುದೇ ಮೊದಲ ಆದ್ಯತೆಯಾಗಿದೆ ಎಂದರು.
ಪ್ರಭಾರ ಅಧ್ಯಕ್ಷರಿಗೆ ಸ್ಥಳೀಯ ಮುಖಂಡರಾದ ತಿ.ರಂಗರಾಜು, ಬಮೂಲ್ ನಿರ್ದೇಶಕ ಬಿ ಸಿ ಆನಂದ್ ಕುಮಾರ್, ಸ್ಥಳೀಯ ಮುಖಂಡ ಬಿ ಎಚ್ ಕೆಂಪಣ್ಣ, ಕಾಂಗ್ರೆಸ್ ಮುಖಂಡ ಆದಿತ್ಯ ನಾಗೇಶ್, ಮುಖಂಡ ಸಂದೇಶ್ ಸೇರಿದಂತೆ ಹಲವು ಗಣ್ಯರು ಶುಭಕೋರಿದ್ದಾರೆ.
ದೊಡ್ಡಬಳ್ಳಾಪುರ : ಉದ್ಯಮಿಗಳು ಮತ್ತು ಸಮಾಜ ಸೇವಕರಾದ ಗಂಟಿಗಾನಹಳ್ಳಿ ಸಂದೀಪ್ ರವರ ಹುಟ್ಟುಹಬ್ಬವನ್ನು ಸರ್ಕಾರಿ ಶಾಲಾ ಮಕ್ಕಳಿಗೆ ನೋಟ್ಬುಕ್, ಸಿಹಿ,…
ದೊಡ್ಡಬಳ್ಳಾಪುರ: ನಗರದ ರೈಲ್ವೆ ನಿಲ್ದಾಣದ ಸಮೀಪದ ಆಂಜನೇಯ ದೇವಾಲಯದ ಪಕ್ಕದಲ್ಲಿ ಹೂತುಹಾಕಲಾಗಿದ್ದ ನವಜಾತ ಶಿಶುವಿನ ಮೃತದೇಹ ಶುಕ್ರವಾರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ…
ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಶಾಸಕ ಯಶ್ಪಾಲ್…
ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೃಷಿ ಚಟುವಟಿಕೆಗಳು ಈ ಬಾರಿ ತೀವ್ರ ಹಿನ್ನಡೆ ಅನುಭವಿಸಿವೆ. ಸಾಮಾನ್ಯಕ್ಕಿಂತ…
ಸ್ಪರ್ಧೆ ಇರಲಿ, ಆದರೆ ಬದುಕೇ ಸ್ಪರ್ಧೆಯಾಗುವುದು ಬೇಡ..... ಎಲ್ಲಿ ಜೀವನ ನಡೆವುದೋ ಅದೇ ನನ್ನೂರು, ಯಾರು ಸ್ನೇಹದಿ ಬರುವರೋ ಅವರೇ…
ರಾಜಾನುಕುಂಟೆ: ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯ ರಾಜಾನುಕುಂಟೆ ಸಮೀಪ ಶುಕ್ರವಾರ ಮುಂಜಾನೆ ವೇಗವಾಗಿ ಬಂದ ವಾಹನವೊಂದು ಜಿಂಕೆಗೆ ಡಿಕ್ಕಿ ಹೊಡೆದ ಪರಿಣಾಮ…