ಮಜರಾಹೊಸಹಳ್ಳಿ ಗ್ರಾ.ಪಂ ಪ್ರಭಾರ ಅಧ್ಯಕ್ಷರಾಗಿ ಮಾರಪ್ಪ ಅಧಿಕಾರ ಸ್ವೀಕಾರ

ತಾಲೂಕಿನ ಮಜರಾಹೊಸಹಳ್ಳಿ ಗ್ರಾಮ ಪಂಚಾಯಿತಿ 17 ಸದಸ್ಯರ ಬಲ ಹೊಂದಿದ್ದು, ಸರ್ವ ಸದಸ್ಯರ ಒಮ್ಮತದಿಂದ ಅವಿರೋಧವಾಗಿ ಮಾರಪ್ಪನವರನ್ನು ಪ್ರಭಾರ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಗಿದೆ.

ಪ್ರಭಾರ ಅಧ್ಯಕ್ಷರಿಗೆ ಸದಸ್ಯರು ಮತ್ತು ಸ್ಥಳೀಯ ಮುಖಂಡರು ಮಾಲಾರ್ಪಣೆ ಮಾಡಿ ಸಿಹಿ ಹಂಚುವ ಮೂಲಕ ಅಭಿನಂದಿಸಿದರು.

ಮಾಧ್ಯಮದವರೊಂದಿಗೆ ಪ್ರಭಾರ ಅಧ್ಯಕ್ಷ ಮಾರಪ್ಪ ಮಾತನಾಡಿ, ನಮ್ಮ ಪಂಚಾಯತಿಯ ಸರ್ವ ಸದಸ್ಯರು ಯಾವುದೇ ಪಕ್ಷ ಬೇಧವಿಲ್ಲದೆ ಅವಿರೋಧವಾಗಿ ನನ್ನನ್ನು ಪ್ರಭಾರ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಿದ್ದಾರೆ‌. ಅವರೆಲ್ಲರಿಗೂ ಅಭಿನಂದನೆಗಳನ್ನು ಸಲ್ಲಿಸುತ್ತೇನೆ. ನನಗೆ ವಹಿಸಿರುವ ಜವಾಬ್ಧಾರಿಯನ್ನು ಯಾವುದೇ ಪಕ್ಷಬೇಧ ಮಾಡದೆ ಪಂಚಾಯತಿಯ ಸರ್ವತೋಮುಖ ಅಭಿವೃದ್ಧಿಗೆ ನಿಷ್ಠೆಯಿಂದ ಶ್ರಮಿಸುತ್ತೇನೆ ಎಂದರು.

ಈ ಹಿಂದೆ ನಾನು ಗ್ರಾಮ ಪಂಚಾಯತಿ ಸದಸ್ಯನಾಗಿ, ಉಪಾಧ್ಯಕ್ಷನಾಗಿ ಕರ್ತವ್ಯ ನಿರ್ವಹಿಸಿದ್ದು, ಹಳೆಯ ಅನುಭವಗಳು ಅಧ್ಯಕ್ಷನಾಗಿ ಕರ್ತವ್ಯ ನಿರ್ವಹಿಸಲು ಮತ್ತಷ್ಟು ಶಕ್ತಿ ತುಂಬಲಿವೆ. ನಮ್ಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸಾಕಷ್ಟು ಕಾರ್ಖಾನೆಗಳಿದ್ದು , ಸ್ಥಳೀಯ ಕಾರ್ಖಾನೆಗಳಿಂದ ನಮಗೆ ಲಾಭಕ್ಕಿಂತ ನಷ್ಟವೇ ಹೆಚ್ಚು. ಪ್ರಮುಖವಾಗಿ ಪರಿಸರ ಮಾಲಿನ್ಯ, ಜಲ ಮೂಲಗಳ ಮಾಲಿನ್ಯ ನಿರಂತರವಾಗಿ ಕಾಡುತ್ತಿರುವ ಸಮಸ್ಯೆಯಾಗಿದೆ. ಈ ಕುರಿತು ಗ್ರಾಮ ಮಟ್ಟದಿಂದ ರಾಜ್ಯಮಟ್ಟದವರೆಗೂ ನಾವು ನಿರಂತರ ಹೋರಾಟ ನಡೆಸುತ್ತಿದ್ದೇವೆ. ಸದ್ಯದ ಪರಿಸ್ಥಿತಿಯಲ್ಲಿ ನಮ್ಮ ದೊಡ್ಡತುಮಕೂರು ಪಂಚಾಯಿತಿ ಹಾಗೂ ಮಜರಾಹೊಸಹಳ್ಳಿ ವ್ಯಾಪ್ತಿಯ ಗ್ರಾಮಗಳಿಗೆ ಅರಳುಮಲ್ಲಿಗೆ ಪಂಚಾಯಿತಿ ವ್ಯಾಪ್ತಿಯಿಂದ ಶುದ್ಧ ಕುಡಿಯುವ ನೀರು ಪೂರೈಕೆ ಮಾಡುವ ಕಾಮಗಾರಿ ಚಾಲ್ತಿಯಲ್ಲಿದ್ದು, ಸ್ಥಳೀಯ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸುವುದೇ ಮೊದಲ ಆದ್ಯತೆಯಾಗಿದೆ ಎಂದರು.

ಪ್ರಭಾರ ಅಧ್ಯಕ್ಷರಿಗೆ ಸ್ಥಳೀಯ ಮುಖಂಡರಾದ ತಿ.ರಂಗರಾಜು, ಬಮೂಲ್ ನಿರ್ದೇಶಕ ಬಿ ಸಿ ಆನಂದ್ ಕುಮಾರ್, ಸ್ಥಳೀಯ ಮುಖಂಡ ಬಿ ಎಚ್ ಕೆಂಪಣ್ಣ, ಕಾಂಗ್ರೆಸ್ ಮುಖಂಡ ಆದಿತ್ಯ ನಾಗೇಶ್, ಮುಖಂಡ ಸಂದೇಶ್ ಸೇರಿದಂತೆ ಹಲವು ಗಣ್ಯರು ಶುಭಕೋರಿದ್ದಾರೆ.

Ramesh Babu

Journalist

Recent Posts

ಕಾರ್ಮಿಕ ವರ್ಗದ ವೈದ್ಯಕೀಯ ಸೇವೆಗೆ ಇಎಸ್ಐಸಿ ಆಸ್ಪತ್ರೆ ವರದಾನ- ಕೇಂದ್ರ ಸಚಿವ ಮನ್ಸುಖ್ ಮಾಂಡವೀಯ

ಶ್ರಮಿಕ ವರ್ಗದವರು ಹಾಗೂ ಅವರ ಅವಲಂಬಿತರಿಗೆ ಉಚಿತ ವೈದ್ಯಕೀಯ ಸೇವೆಗಳನ್ನು ಒದಗಿಸುವಲ್ಲಿ ಇಎಸ್ಐಸಿ ಆಸ್ಪತ್ರೆಯು ವರದಾನವಾಗಲಿದೆ. ಎಲ್ಲಾ ಕಾರ್ಮಿಕರು ವೈದ್ಯಕೀಯ…

7 hours ago

ಕೊನಘಟ್ಟ ಪ್ರೀಮಿಯರ್ ಲೀಗ್(ಕೆಪಿಎಲ್ ಸೀಸನ್-1): ‘ಎ’ ತಂಡವನ್ನು ಮಣಿಸಿ ಕೊನಘಟ್ಟ ಪ್ರೀಮಿಯರ್ ಲೀಗ್ ಟ್ರೋಫಿ ಪಡೆದ ಕೊನಘಟ್ಟ ‘ಬಿ’ ತಂಡ: ಗಣ್ಯರಿಂದ ಅಭಿನಂದನೆ, ಪ್ರೋತ್ಸಾಹ

. ಕೊನಘಟ್ಟ ಪ್ರೀಮಿಯರ್ ಲೀಗ್(ಕೆಪಿಎಲ್ ಸೀಸನ್-1) ನ್ನು ಕೊನಘಟ್ಟ ಗ್ರಾಮದಲ್ಲಿ ಆಯೋಜನೆ ಮಾಡಲಾಗಿತ್ತು. ಅಂತಿಮ ಹಣಾಹಣಿಯಲ್ಲಿ 'ಎ' ತಂಡವನ್ನು ಮಣಿಸಿ…

7 hours ago

ಕಾರಿನಲ್ಲಿ ಬೆಂಕಿ: ಮಹಿಳೆ ಅನುಮಾನಾಸ್ಪದ ಸಾವು ಪ್ರಕರಣ: ಮಹಿಳೆಯ ಜೊತೆ ಕಾರಿನಲ್ಲಿದ್ದ ವ್ಯಕ್ತಿ ಕೂಡ ರೈಲಿಗೆ ಸಿಲುಕಿ ಸಾವು

ದೊಡ್ಡಬಳ್ಳಾಪುರ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಅನುಮಾನಾಸ್ಪದ ರೀತಿಯಲ್ಲಿ ಕಾರಿನಲ್ಲೇ ಮಹಿಳೆ ಸುಟ್ಟುಭಸ್ಮವಾಗಿರುವ ಘಟನೆ ಮೇ.2ರ ಮಧ್ಯಾಹ್ನ ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ…

11 hours ago

ಬಾಯ್ತೆರೆದ ಮ್ಯಾನ್ ಹೋಲ್: ರಸ್ತೆಯಲ್ಲಿ ಮಲಮಿಶ್ರಿತ ಕೊಳಚೆ ನೀರು: ಕ್ಯಾರೆ ಎನ್ನದ ನಗರಸಭೆ ಅಧಿಕಾರಿಗಳು

ದೊಡ್ಡಬಳ್ಳಾಪುರ ನಗರದ ಕೊಂಗಾಡಿಯಪ್ಪ ಮುಖ್ಯರಸ್ತೆ ತ್ಯಾಗರಾಜ ನಗರ ಆನೆಬಯಲು ಡೌನಿನ ರಸ್ತೆಯಲ್ಲಿ ಕಳೆದ 15 ದಿನಗಳಿಂದ ಒಳಚರಂಡಿಯ ಮ್ಯಾನ್ ಹೋಲ್…

16 hours ago

ಶೈಕ್ಷಣಿಕ ಹಾದಿ……..

ಶಿಕ್ಷಣ ಕ್ಷೇತ್ರದ ಬಗ್ಗೆ ಪರೀಕ್ಷೆಗಳ ಫಲಿತಾಂಶಗಳು ಪ್ರಕಟವಾಗುತ್ತಿರುವ ಈ ಸಂದರ್ಭದಲ್ಲಿ....... ಶಿಕ್ಷಣ... ಜ್ಞಾನಾರ್ಜನೆಗಾಗಿಯೇ, ಉದ್ಯೋಗಕ್ಕಾಗಿಯೇ, ಬದುಕಿಗಾಗಿಯೇ, ಸಾಧನೆಗಾಗಿಯೇ, ಪೋಷಕರ ಒತ್ತಾಯಕ್ಕಾಗಿಯೇ,…

20 hours ago

ಕಾರಿನಲ್ಲಿ ಬೆಂಕಿ: ಅನುಮಾನಾಸ್ಪದ ರೀತಿಯಲ್ಲಿ ಕಾರಿನಲ್ಲೇ ಮಹಿಳೆ ಸುಟ್ಟುಭಸ್ಮ: ಹಲವು ಅನುಮಾನ

ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಅನುಮಾನಾಸ್ಪದ ರೀತಿಯಲ್ಲಿ ಕಾರಿನಲ್ಲೇ ಮಹಿಳೆ ಸುಟ್ಟುಭಸ್ಮವಾಗಿರುವ ಘಟನೆ ಇಂದು ಮಧ್ಯಾಹ್ನ ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ…

1 day ago