ಮಜರಾಹೊಸಹಳ್ಳಿ ಗ್ರಾ.ಪಂ. ಬಿಜೆಪಿ ತೆಕ್ಕೆಗೆ: ನೂತನ ಅಧ್ಯಕ್ಷರಾಗಿ ವಿಜಯಕುಮಾರ್, ಉಪಾಧ್ಯಕ್ಷರಾಗಿ ಲಕ್ಷ್ಮಮ್ಮ ಆಯ್ಕೆ: ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರಿಗೆ ಮುಖಭಂಗ: ಮೇಲುಗೈ ಸಾಧಿಸಿದ ಬಿಜೆಪಿ

ಕಳೆದ ಎರಡೂವರೆ ವರ್ಷಗಳಿಂದ ಕಾಂಗ್ರೆಸ್ ಆಡಳಿತದ ತೆಕ್ಕೆಯಲ್ಲಿದ್ದ ಮಜರಾಹೊಸಹಳ್ಳಿ ಗ್ರಾಮ ಪಂಚಾಯತಿ ಈ ಬಾರಿ ರಾಜಕೀಯ ಬದಲಾವಣೆಗಳಿಂದ ಬಿಜೆಪಿ ಆಡಳಿತ ಚುಕ್ಕಾಣಿ ಹಿಡಿದಿದೆ. ಒಟ್ಟು 18 ಸದಸ್ಯ ಬಲವನ್ನು ಹೊಂದಿರುವ ಮಜರಾಹೊಸಹಳ್ಳಿ ಗ್ರಾ.ಪಂಗೆ ಶುಕ್ರವಾರ ಎರಡನೇ ಅವಧಿಗೆ ಅಧ್ಯಕ್ಷ, ಉಪಾಧ್ಯಕ್ಷ ಚುನಾವಣೆ ನಡೆಯಿತು. ಅಧ್ಯಕ್ಷ ಸ್ಥಾನಕ್ಕೆ ವೀರಾಪುರ ವಾರ್ಡ್ ನ ವಿಜಯಕುಮಾರ್ ಮತ್ತು ಗಿರೀಶ್ ನಾಮಪತ್ರ ಸಲ್ಲಿಸಿದ್ದರು. 11 ಮತಗಳನ್ನು ಪಡೆದ ಬಿಜೆಪಿ ಬೆಂಬಲಿತ ಸದಸ್ಯ ವಿಜಯಕುಮಾರ್ ಗೆ ವಿಜಯಲಕ್ಷ್ಮಿ ಒಲಿದಳು. ೦2 ಮತ ಪಡೆದ ಗಿರೀಶ್ ಸೋಲುಂಡರು.

ಉಪಾಧ್ಯಕ್ಷರಾಗಿ ಜಿಂಕೆಬಚ್ಚಹಳ್ಳಿ ವಾರ್ಡ್ ನ ಲಕ್ಷ್ಮಮ್ಮ ಗೆಲುವು ಸಾಧಿಸಿದರು. ನೂತನ ಅಧ್ಯಕ್ಷ, ಉಪಾಧ್ಯಕ್ಷರನ್ನು ಶಾಸಕ ಧೀರಜ್ ಮುನಿರಾಜು, ಕೆಎಂಎಫ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್, ಹಿರಿಯ ಮುಖಂಡ ತಿ.ರಂಗರಾಜು, ತಾಲ್ಲೂಕು ಬಿಜೆಪಿ ಅಧ್ಯಕ್ಷ ನಾಗೇಶ್ ಅಭಿನಂದಿಸಿದರು.

ಬಳಿಕ ಮಾತನಾಡಿದ ಕೆಎಂಎಫ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್ ಈ ಭಾಗದಲ್ಲಿ ಬಿಜೆಪಿ, ಕಾಂಗ್ರೆಸ್, ದಳದ ಮೂವರು ಸಮಾನಮನಸ್ಕರಾಗಿ ಕೆಲಸ ಮಾಡುತ್ತೇವೆ. ಕಳೆದ ಎರಡು ಬಾರಿ ಅವಿರೋಧ ಆಯ್ಕೆ ಮಾಡಲಾಗಿತ್ತು. ಈ ಬಾರಿಯೂ ಅವಿರೋಧ ಆಯ್ಕೆ ಆಗುವ ಸಂಭವವಿತ್ತು. ಕೆಲವರ ವೈಯಕ್ತಿಕ ದುರುದ್ದೇಶದಿಂದ ಚುನಾವಣೆಯಲ್ಲಿ ನಾಮಪತ್ರ ಸಲ್ಲಿಸಿದ್ದರು. ರಾಜಕೀಯದಲ್ಲಿ ಸಮಯ ಸಾಧಕರು ಇರುತ್ತಾರೆ. ಈ ಭಾಗದಲ್ಲಿ ಯಾವುದೇ ಪಕ್ಷ, ಜಾತಿ ಮುಖ್ಯವಲ್ಲ. ಹಿರಿಯ ಮುಖಂಡರಾದ ರಂಗರಾಜು ಅವರ ಮಾರ್ಗದರ್ಶನದಲ್ಲಿ ಉತ್ತಮ ಆಡಳಿತ ನಡೆಯುತ್ತಿದೆ. ಶಾಸಕ ಧೀರಜ್ ಮುನಿರಾಜು ಪರವಾಗಿ ನಾವಿದ್ದೀವಿ, ಯಾವುದೇ ಅಕ್ರಮ, ಭ್ರಷ್ಟಾಚಾರಗಳಿಗೆ ಅವಕಾಶ ಇಲ್ಲದಂತೆ ಇಲ್ಲಿನ ಸದಸ್ಯರು ಪ್ರಾಮಾಣಿಕವಾಗಿ ಕೆಲಸ ಮಾಡಲಿ. ಬಿಜೆಪಿ ಬೆಂಬಲಿತ ಅಧ್ಯಕ್ಷ, ಉಪಾಧ್ಯಕ್ಷರಿಗೆ ಮತ ಹಾಕಿದ ಸದಸ್ಯರಿಗೆ ಧನ್ಯವಾದಗಳು ಎಂದರು.

ಹಿರಿಯ ಮುಖಂಡ ತಿ.ರಂಗರಾಜು ಮಾತನಾಡಿ, ರಾಜಕೀಯದಲ್ಲಿ ಅದಲು ಬದಲು ಆಗುತ್ತಿರುತ್ತದೆ. ಬದಲಾವಣೆ ಆಗುವುದು ಸಹಜ. ಮಾಜಿ ಶಾಸಕ ವೆಂಕಟರಮಣಯ್ಯರ ದುರಹಂಕಾರ ಮತ್ತು ದುರಾಡಳಿತದಿಂದ ಕಾಂಗ್ರೆಸ್ ಪಕ್ಷ ನೆಲಕಚ್ಚುವಂತೆ ಮಾಡಿ ಹೋಗಿದ್ದಾರೆ. ನೂತನ ಅಧ್ಯಕ್ಷ, ಉಪಾಧ್ಯಕ್ಷರು ಧ್ವನಿ ಇಲ್ಲದವರ ಪರವಾಗಿ ಕೆಲಸ ಮಾಡಲಿ. ಹಿಂದಿನಿಂದಲೂ ಮಜರಾಹೊಸಹಳ್ಳಿ ಗ್ರಾ.ಪಂ ಬಡವರ ಪರವಾಗಿ ನಿಂತಿದೆ. ಸಾಮಾಜಿಕವಾಗಿ, ಆರ್ಥಿಕವಾಗಿ, ಹಿಂದುಳಿದವರ ಪರವಾಗಿ ಪಕ್ಷಾತೀತವಾಗಿ ಕೆಲಸ ಮಾಡುವಂತೆ ಕಿವಿಮಾತು ಹೇಳಿದರು.

ನೂತನ ಅಧ್ಯಕ್ಷ ವಿಜಯಕುಮಾರ್ ಮಾತನಾಡಿ, ಹಿರಿಯ ಮುಖಂಡರಾದ ರಂಗರಾಜು, ಶಾಸಕ ಧೀರಜ್ ಮುನಿರಾಜು ಬಿ.ಸಿ.ಆನಂದ್ ಕುಮಾರ್ ಅವರ ಸಹಕಾರದಿಂದ ಅಧ್ಯಕ್ಷನಾಗಿ ಆಯ್ಕೆಯಾಗಿದ್ದೇ‌ನೆ. ಗ್ರಾಮ.ಪಂಚಾಯತಿಯ ಎಲ್ಲಾ ಸದಸ್ಯರೊಂದಿಗೆ ಪಕ್ಷಾತೀತವಾಗಿ ಕೆಲಸ ಮಾಡುತ್ತೇನೆ. ಮೂಲಭೂತ ಸೌಕರ್ಯಗಳು ಹಾಗೂ ಈ ಭಾಗದ ಕೆರೆಗಳ ಕಲುಷಿತ ವಿರುದ್ಧ ಹೋರಾಟ ಮಾಡಲಾಗುವುದು ಎಂದರು.

ಈ ವೇಳೆ ಮುಖಂಡರಾದ ಬಿ.ಟಿ.ಶ್ರೀನಿವಾಸ್ ಮೂರ್ತಿ, ಆದಿತ್ಯ ನಾಗೇಶ್, ಅಂಬರೀಶ್, ಪಿಳ್ಳೇಗೌಡ, ಲಕ್ಷ್ಮಿ ನಾರಾಯಣ, ಹೊಸಹುಡ್ಯ ಆನಂದ್ ಕುಮಾರ್ ಸೇರಿದಂತೆ ಇತರರು ಉಪಸ್ಥಿತರಿದ್ದರು.

Ramesh Babu

Journalist

Recent Posts

ಹಳಿ ತಪ್ಪಿದಂತಿರುವ ಭಾರತದ ವಿದೇಶಾಂಗ ನೀತಿ……..

ಭಾರತದ ವಿದೇಶಾಂಗ ನೀತಿ ವ್ಯಾವಹಾರಿಕವೇ ?ಮೌಲ್ಯಯುತವೇ ? ಸೈದ್ದಾಂತಿಕವೇ ? ಅವಕಾಶವಾದಿತನವೇ ? ವ್ಯಕ್ತಿಗತವೇ ? ಸಾಂದರ್ಭಿಕ ತೀರ್ಮಾನಗಳೇ ?…

6 hours ago

ಅರಸೇಶ್ವರಿ ದೇವಿಯ ಜಾಗ ಖಾಸಗಿ ವ್ಯಕ್ತಿಗೆ ಖಾತೆ:ಸರ್ಕಾರಿ ಜಮೀನು ಒತ್ತುವರಿ ತೆರವು ಸೇರಿದಂತೆ ಇತರೆ ಬೇಡಿಕೆ ಈಡೇರಿಕೆಗಾಗಿ ಒತ್ತಾಯಿಸಿ ಪ್ರತಿಭಟ‌ನೆ

ತಾಲ್ಲೂಕಿನ ಕಾಡತಿಪ್ಪೂರು ಗ್ರಾಮದಲ್ಲಿನ ಇತಿಹಾಸ ಪ್ರಸಿದ್ಧ ಅರಸೇಶ್ವರಿ ದೇಗುಲದ ಇನಾಮ್ತಿ ಜಮೀನನ್ನು ಕಂದಾಯ ಇಲಾಖೆ ಅಧಿಕಾರಿಗಳು ಖಾಸಗಿ ವ್ಯಕ್ತಿಗಳ ಜೊತೆ…

7 hours ago

ಕೇಬಲ್ ಕಾರ್ಖಾನೆಗೆ ಬೆಂಕಿ: ಧಗಧಗ ಉರಿಯುತ್ತಿರುವ ಕಾರ್ಖಾನೆ

ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿರುವ ಕೇಬಲ್ ಕಾರ್ಖಾನೆಗೆ ಬೆಂಕಿ ತಗುಲಿದ್ದು, ಧಗಧಗನೆ ಕಾರ್ಖಾನೆ ಉರಿಯುತ್ತಿದೆ. ಈ ಘಟನೆ ಇಂದು ಸಂಜೆ ಸುಮಾರು…

18 hours ago

ಮೆಳೇಕೋಟೆ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಕಳ್ಳತನ: ರಾಮ ಲಕ್ಷ್ಮಣರಿಗೆ ಅಳವಡಿಸಿದ್ದ ಬೆಳ್ಳಿ ಕಿರೀಟ ಕದ್ದೊಯ್ದ ಐನಾತಿಗಳು

ಮುಜರಾಯಿ ಇಲಾಖೆಗೆ ಒಳಪಡುವ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ರಾಮ ಲಕ್ಷ್ಮಣರಿಗೆ ಅಳವಡಿಸಿದ್ದ ಬೆಳ್ಳಿ ಕಿರೀಟವನ್ನು ಕಳ್ಳರು ಕದ್ದೊಯ್ದಿರುವ ಘಟನೆ ಕಳೆದ…

22 hours ago

ಮಾರಮ್ಮ ದೇವಿಯ ಮೂರು ಚಿನ್ನದ ತಾಳಿ, ನಾಲ್ಕು ಗುಂಡುಗಳನ್ನ ಕದ್ದ ಖದೀಮರು

ದೊಡ್ಡಬಳ್ಳಾಪುರ ತಾಲೂಕಿನ ಕಲ್ಲುದೇವನಹಳ್ಳಿ ಮಾರಮ್ಮ ದೇವಿ ದೇವಸ್ಥಾನದಲ್ಲಿ ಕಳೆದ ರಾತ್ರಿ ಕಳ್ಳತನ‌ ನಡೆದಿದೆ.. ಕಲ್ಲುದೇವನಹಳ್ಳಿ ಗ್ರಾಮದ ಮಧ್ಯ ಭಾಗದಲ್ಲಿರುವ ಮಾರಮ್ಮ…

23 hours ago