ಮಜರಾಹೊಸಹಳ್ಳಿ ಗ್ರಾ.ಪಂ. ಬಿಜೆಪಿ ತೆಕ್ಕೆಗೆ: ನೂತನ ಅಧ್ಯಕ್ಷರಾಗಿ ವಿಜಯಕುಮಾರ್, ಉಪಾಧ್ಯಕ್ಷರಾಗಿ ಲಕ್ಷ್ಮಮ್ಮ ಆಯ್ಕೆ: ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರಿಗೆ ಮುಖಭಂಗ: ಮೇಲುಗೈ ಸಾಧಿಸಿದ ಬಿಜೆಪಿ

ಕಳೆದ ಎರಡೂವರೆ ವರ್ಷಗಳಿಂದ ಕಾಂಗ್ರೆಸ್ ಆಡಳಿತದ ತೆಕ್ಕೆಯಲ್ಲಿದ್ದ ಮಜರಾಹೊಸಹಳ್ಳಿ ಗ್ರಾಮ ಪಂಚಾಯತಿ ಈ ಬಾರಿ ರಾಜಕೀಯ ಬದಲಾವಣೆಗಳಿಂದ ಬಿಜೆಪಿ ಆಡಳಿತ ಚುಕ್ಕಾಣಿ ಹಿಡಿದಿದೆ. ಒಟ್ಟು 18 ಸದಸ್ಯ ಬಲವನ್ನು ಹೊಂದಿರುವ ಮಜರಾಹೊಸಹಳ್ಳಿ ಗ್ರಾ.ಪಂಗೆ ಶುಕ್ರವಾರ ಎರಡನೇ ಅವಧಿಗೆ ಅಧ್ಯಕ್ಷ, ಉಪಾಧ್ಯಕ್ಷ ಚುನಾವಣೆ ನಡೆಯಿತು. ಅಧ್ಯಕ್ಷ ಸ್ಥಾನಕ್ಕೆ ವೀರಾಪುರ ವಾರ್ಡ್ ನ ವಿಜಯಕುಮಾರ್ ಮತ್ತು ಗಿರೀಶ್ ನಾಮಪತ್ರ ಸಲ್ಲಿಸಿದ್ದರು. 11 ಮತಗಳನ್ನು ಪಡೆದ ಬಿಜೆಪಿ ಬೆಂಬಲಿತ ಸದಸ್ಯ ವಿಜಯಕುಮಾರ್ ಗೆ ವಿಜಯಲಕ್ಷ್ಮಿ ಒಲಿದಳು. ೦2 ಮತ ಪಡೆದ ಗಿರೀಶ್ ಸೋಲುಂಡರು.

ಉಪಾಧ್ಯಕ್ಷರಾಗಿ ಜಿಂಕೆಬಚ್ಚಹಳ್ಳಿ ವಾರ್ಡ್ ನ ಲಕ್ಷ್ಮಮ್ಮ ಗೆಲುವು ಸಾಧಿಸಿದರು. ನೂತನ ಅಧ್ಯಕ್ಷ, ಉಪಾಧ್ಯಕ್ಷರನ್ನು ಶಾಸಕ ಧೀರಜ್ ಮುನಿರಾಜು, ಕೆಎಂಎಫ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್, ಹಿರಿಯ ಮುಖಂಡ ತಿ.ರಂಗರಾಜು, ತಾಲ್ಲೂಕು ಬಿಜೆಪಿ ಅಧ್ಯಕ್ಷ ನಾಗೇಶ್ ಅಭಿನಂದಿಸಿದರು.

ಬಳಿಕ ಮಾತನಾಡಿದ ಕೆಎಂಎಫ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್ ಈ ಭಾಗದಲ್ಲಿ ಬಿಜೆಪಿ, ಕಾಂಗ್ರೆಸ್, ದಳದ ಮೂವರು ಸಮಾನಮನಸ್ಕರಾಗಿ ಕೆಲಸ ಮಾಡುತ್ತೇವೆ. ಕಳೆದ ಎರಡು ಬಾರಿ ಅವಿರೋಧ ಆಯ್ಕೆ ಮಾಡಲಾಗಿತ್ತು. ಈ ಬಾರಿಯೂ ಅವಿರೋಧ ಆಯ್ಕೆ ಆಗುವ ಸಂಭವವಿತ್ತು. ಕೆಲವರ ವೈಯಕ್ತಿಕ ದುರುದ್ದೇಶದಿಂದ ಚುನಾವಣೆಯಲ್ಲಿ ನಾಮಪತ್ರ ಸಲ್ಲಿಸಿದ್ದರು. ರಾಜಕೀಯದಲ್ಲಿ ಸಮಯ ಸಾಧಕರು ಇರುತ್ತಾರೆ. ಈ ಭಾಗದಲ್ಲಿ ಯಾವುದೇ ಪಕ್ಷ, ಜಾತಿ ಮುಖ್ಯವಲ್ಲ. ಹಿರಿಯ ಮುಖಂಡರಾದ ರಂಗರಾಜು ಅವರ ಮಾರ್ಗದರ್ಶನದಲ್ಲಿ ಉತ್ತಮ ಆಡಳಿತ ನಡೆಯುತ್ತಿದೆ. ಶಾಸಕ ಧೀರಜ್ ಮುನಿರಾಜು ಪರವಾಗಿ ನಾವಿದ್ದೀವಿ, ಯಾವುದೇ ಅಕ್ರಮ, ಭ್ರಷ್ಟಾಚಾರಗಳಿಗೆ ಅವಕಾಶ ಇಲ್ಲದಂತೆ ಇಲ್ಲಿನ ಸದಸ್ಯರು ಪ್ರಾಮಾಣಿಕವಾಗಿ ಕೆಲಸ ಮಾಡಲಿ. ಬಿಜೆಪಿ ಬೆಂಬಲಿತ ಅಧ್ಯಕ್ಷ, ಉಪಾಧ್ಯಕ್ಷರಿಗೆ ಮತ ಹಾಕಿದ ಸದಸ್ಯರಿಗೆ ಧನ್ಯವಾದಗಳು ಎಂದರು.

ಹಿರಿಯ ಮುಖಂಡ ತಿ.ರಂಗರಾಜು ಮಾತನಾಡಿ, ರಾಜಕೀಯದಲ್ಲಿ ಅದಲು ಬದಲು ಆಗುತ್ತಿರುತ್ತದೆ. ಬದಲಾವಣೆ ಆಗುವುದು ಸಹಜ. ಮಾಜಿ ಶಾಸಕ ವೆಂಕಟರಮಣಯ್ಯರ ದುರಹಂಕಾರ ಮತ್ತು ದುರಾಡಳಿತದಿಂದ ಕಾಂಗ್ರೆಸ್ ಪಕ್ಷ ನೆಲಕಚ್ಚುವಂತೆ ಮಾಡಿ ಹೋಗಿದ್ದಾರೆ. ನೂತನ ಅಧ್ಯಕ್ಷ, ಉಪಾಧ್ಯಕ್ಷರು ಧ್ವನಿ ಇಲ್ಲದವರ ಪರವಾಗಿ ಕೆಲಸ ಮಾಡಲಿ. ಹಿಂದಿನಿಂದಲೂ ಮಜರಾಹೊಸಹಳ್ಳಿ ಗ್ರಾ.ಪಂ ಬಡವರ ಪರವಾಗಿ ನಿಂತಿದೆ. ಸಾಮಾಜಿಕವಾಗಿ, ಆರ್ಥಿಕವಾಗಿ, ಹಿಂದುಳಿದವರ ಪರವಾಗಿ ಪಕ್ಷಾತೀತವಾಗಿ ಕೆಲಸ ಮಾಡುವಂತೆ ಕಿವಿಮಾತು ಹೇಳಿದರು.

ನೂತನ ಅಧ್ಯಕ್ಷ ವಿಜಯಕುಮಾರ್ ಮಾತನಾಡಿ, ಹಿರಿಯ ಮುಖಂಡರಾದ ರಂಗರಾಜು, ಶಾಸಕ ಧೀರಜ್ ಮುನಿರಾಜು ಬಿ.ಸಿ.ಆನಂದ್ ಕುಮಾರ್ ಅವರ ಸಹಕಾರದಿಂದ ಅಧ್ಯಕ್ಷನಾಗಿ ಆಯ್ಕೆಯಾಗಿದ್ದೇ‌ನೆ. ಗ್ರಾಮ.ಪಂಚಾಯತಿಯ ಎಲ್ಲಾ ಸದಸ್ಯರೊಂದಿಗೆ ಪಕ್ಷಾತೀತವಾಗಿ ಕೆಲಸ ಮಾಡುತ್ತೇನೆ. ಮೂಲಭೂತ ಸೌಕರ್ಯಗಳು ಹಾಗೂ ಈ ಭಾಗದ ಕೆರೆಗಳ ಕಲುಷಿತ ವಿರುದ್ಧ ಹೋರಾಟ ಮಾಡಲಾಗುವುದು ಎಂದರು.

ಈ ವೇಳೆ ಮುಖಂಡರಾದ ಬಿ.ಟಿ.ಶ್ರೀನಿವಾಸ್ ಮೂರ್ತಿ, ಆದಿತ್ಯ ನಾಗೇಶ್, ಅಂಬರೀಶ್, ಪಿಳ್ಳೇಗೌಡ, ಲಕ್ಷ್ಮಿ ನಾರಾಯಣ, ಹೊಸಹುಡ್ಯ ಆನಂದ್ ಕುಮಾರ್ ಸೇರಿದಂತೆ ಇತರರು ಉಪಸ್ಥಿತರಿದ್ದರು.

Ramesh Babu

Journalist

Recent Posts

ವೀಲಿಂಗ್ ಪುಂಡನ ಬೈಕ್ ಡಿಕ್ಕಿ: ಗೃಹ ರಕ್ಷಕ ದಳ ಸಿಬ್ಬಂದಿ ಗಂಭೀರ ಗಾಯ

ದೊಡ್ಡಬಳ್ಳಾಪುರ: ಮೋಟಾರ್ ವಾಹನಗಳ ತಪಾಸಣೆ ವೇಳೆ ವೀಲಿಂಗ್ ಮಾಡುತ್ತಿದ್ದ ಬೈಕ್ ಸವಾರನೊಬ್ಬ ಗೃಹ ರಕ್ಷಕ ದಳದ ಸಿಬ್ಬಂದಿಗೆ ಡಿಕ್ಕಿ ಹೊಡೆದು…

13 hours ago

ಡಿಸಿ ಭವನದಲ್ಲಿ ಜಿಲ್ಲಾಧಿಕಾರಿಗಳಿಂದ ರಿಯಾಲಿಟಿ ಚೆಕ್: ಅಧಿಕಾರಿಗಳು ಫುಲ್ ಶಾಕ್: ಸಮಯಕ್ಕೆ ಬಾರದ ಅಧಿಕಾರಿಗಳಿಗೆ ಡಿಸಿ ಕ್ಲಾಸ್

ಬೆಂಗಳೂರು ಗ್ರಾಮಾಂತರ: ಸೋಮವಾರ ಬೆಳಗ್ಗೆ ಎಂದಿನಂತೆ ಅಧಿಕಾರಿಗಳು ಮತ್ತು ಸಿಬ್ಬಂದಿ ಕಚೇರಿಗಳಿಗೆ ಆಗಮಿಸುತ್ತಿದ್ದ ವೇಳೆ, ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ.…

18 hours ago

ನೆಲಮಂಗಲ–ದೊಡ್ಡಬಳ್ಳಾಪುರ ರಸ್ತೆಯಲ್ಲಿ ವಾಹನ ದಟ್ಟಣೆ ಹೆಚ್ಚಳ: ಫ್ಲೈಓವರ್, ರಸ್ತೆ ವಿಸ್ತರಣೆ, ಬಸ್ ನಿಲ್ದಾಣ ನಿರ್ಮಾಣಕ್ಕೆ ಆಗ್ರಹ

ದೊಡ್ಡಬಳ್ಳಾಪುರ: ದಾಬಸ್ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿಯ ಹುಲಿಕುಂಟೆ ಟೋಲ್‌ಪ್ಲಾಜಾದಲ್ಲಿ ಶುಲ್ಕ ಪಾವತಿಸುವುದನ್ನು ತಪ್ಪಿಸಲು ವಾಹನಗಳು ಹೆಚ್ಚಿನ ಪ್ರಮಾಣದಲ್ಲಿ ನೆಲಮಂಗಲ–ದೊಡ್ಡಬಳ್ಳಾಪುರ ರಸ್ತೆಯನ್ನು ಪರ್ಯಾಯ…

22 hours ago

ಹಳ್ಳಿಗಳಿಂದ ಅಪಾರ್ಟ್‌ಮೆಂಟ್ ವರೆಗೆ ಸಾಗುತ್ತಿರುವ ಆಧುನಿಕ ನಾಗರಿಕ ಸಮಾಜ……

ನಾವೂ ಒಂದು ಪಾತ್ರವಾಗುತ್ತಾ..... ಹಳ್ಳಿಗಳಿಂದ ಅಪಾರ್ಟ್‌ಮೆಂಟ್ ವರೆಗೆ ಸಾಗುತ್ತಿರುವ ಆಧುನಿಕ ನಾಗರಿಕ ಸಮಾಜ......... ಕೆಲ ವರುಷಗಳ ಹಿಂದೆ ಹುಲ್ಲಿನ ಗುಡಿಸಲು,…

1 day ago

ಉಪೇಂದ್ರ ಮತ್ತು ಪ್ರಜಾಕೀಯ……..

ಬದಲಾವಣೆ ಬಯಸುವ, ಪರ್ಯಾಯ ರಾಜಕೀಯ ಶಕ್ತಿಗಾಗಿ ಹಾತೊರೆಯುತ್ತಿರುವ ಕೆಲವು ಯುವಕರು ಆಸಕ್ತಿಯಿಂದ - ಆಶಾಭಾವನೆಯಿಂದ - ಕುತೂಹಲದಿಂದ ಕಣ್ಣರಳಿಸಿ ನೋಡುತ್ತಿರುವ…

2 days ago

ಗಾನಕೋಗಿಲೆ ಎಸ್. ಜಾನಕಿ ನಿಧನ

ಮೈಸೂರು: ಖ್ಯಾತ ಹಿನ್ನೆಲೆ ಗಾಯಕಿ, ಗಾನಕೋಗಿಲೆ ಎಸ್. ಜಾನಕಿ ಅವರು ಶನಿವಾರ ಮೈಸೂರಿನ ಅಪೋಲೋ ಆಸ್ಪತ್ರೆಯಲ್ಲಿ ವಯೋಸಹಜ ಅನಾರೋಗ್ಯದಿಂದ ನಿಧನರಾದರು.…

2 days ago