ಮಜರಾಹೊಸಹಳ್ಳಿ ಗ್ರಾ.ಪಂ. ಬಿಜೆಪಿ ತೆಕ್ಕೆಗೆ: ನೂತನ ಅಧ್ಯಕ್ಷರಾಗಿ ವಿಜಯಕುಮಾರ್, ಉಪಾಧ್ಯಕ್ಷರಾಗಿ ಲಕ್ಷ್ಮಮ್ಮ ಆಯ್ಕೆ: ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರಿಗೆ ಮುಖಭಂಗ: ಮೇಲುಗೈ ಸಾಧಿಸಿದ ಬಿಜೆಪಿ

ಕಳೆದ ಎರಡೂವರೆ ವರ್ಷಗಳಿಂದ ಕಾಂಗ್ರೆಸ್ ಆಡಳಿತದ ತೆಕ್ಕೆಯಲ್ಲಿದ್ದ ಮಜರಾಹೊಸಹಳ್ಳಿ ಗ್ರಾಮ ಪಂಚಾಯತಿ ಈ ಬಾರಿ ರಾಜಕೀಯ ಬದಲಾವಣೆಗಳಿಂದ ಬಿಜೆಪಿ ಆಡಳಿತ ಚುಕ್ಕಾಣಿ ಹಿಡಿದಿದೆ. ಒಟ್ಟು 18 ಸದಸ್ಯ ಬಲವನ್ನು ಹೊಂದಿರುವ ಮಜರಾಹೊಸಹಳ್ಳಿ ಗ್ರಾ.ಪಂಗೆ ಶುಕ್ರವಾರ ಎರಡನೇ ಅವಧಿಗೆ ಅಧ್ಯಕ್ಷ, ಉಪಾಧ್ಯಕ್ಷ ಚುನಾವಣೆ ನಡೆಯಿತು. ಅಧ್ಯಕ್ಷ ಸ್ಥಾನಕ್ಕೆ ವೀರಾಪುರ ವಾರ್ಡ್ ನ ವಿಜಯಕುಮಾರ್ ಮತ್ತು ಗಿರೀಶ್ ನಾಮಪತ್ರ ಸಲ್ಲಿಸಿದ್ದರು. 11 ಮತಗಳನ್ನು ಪಡೆದ ಬಿಜೆಪಿ ಬೆಂಬಲಿತ ಸದಸ್ಯ ವಿಜಯಕುಮಾರ್ ಗೆ ವಿಜಯಲಕ್ಷ್ಮಿ ಒಲಿದಳು. ೦2 ಮತ ಪಡೆದ ಗಿರೀಶ್ ಸೋಲುಂಡರು.

ಉಪಾಧ್ಯಕ್ಷರಾಗಿ ಜಿಂಕೆಬಚ್ಚಹಳ್ಳಿ ವಾರ್ಡ್ ನ ಲಕ್ಷ್ಮಮ್ಮ ಗೆಲುವು ಸಾಧಿಸಿದರು. ನೂತನ ಅಧ್ಯಕ್ಷ, ಉಪಾಧ್ಯಕ್ಷರನ್ನು ಶಾಸಕ ಧೀರಜ್ ಮುನಿರಾಜು, ಕೆಎಂಎಫ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್, ಹಿರಿಯ ಮುಖಂಡ ತಿ.ರಂಗರಾಜು, ತಾಲ್ಲೂಕು ಬಿಜೆಪಿ ಅಧ್ಯಕ್ಷ ನಾಗೇಶ್ ಅಭಿನಂದಿಸಿದರು.

ಬಳಿಕ ಮಾತನಾಡಿದ ಕೆಎಂಎಫ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್ ಈ ಭಾಗದಲ್ಲಿ ಬಿಜೆಪಿ, ಕಾಂಗ್ರೆಸ್, ದಳದ ಮೂವರು ಸಮಾನಮನಸ್ಕರಾಗಿ ಕೆಲಸ ಮಾಡುತ್ತೇವೆ. ಕಳೆದ ಎರಡು ಬಾರಿ ಅವಿರೋಧ ಆಯ್ಕೆ ಮಾಡಲಾಗಿತ್ತು. ಈ ಬಾರಿಯೂ ಅವಿರೋಧ ಆಯ್ಕೆ ಆಗುವ ಸಂಭವವಿತ್ತು. ಕೆಲವರ ವೈಯಕ್ತಿಕ ದುರುದ್ದೇಶದಿಂದ ಚುನಾವಣೆಯಲ್ಲಿ ನಾಮಪತ್ರ ಸಲ್ಲಿಸಿದ್ದರು. ರಾಜಕೀಯದಲ್ಲಿ ಸಮಯ ಸಾಧಕರು ಇರುತ್ತಾರೆ. ಈ ಭಾಗದಲ್ಲಿ ಯಾವುದೇ ಪಕ್ಷ, ಜಾತಿ ಮುಖ್ಯವಲ್ಲ. ಹಿರಿಯ ಮುಖಂಡರಾದ ರಂಗರಾಜು ಅವರ ಮಾರ್ಗದರ್ಶನದಲ್ಲಿ ಉತ್ತಮ ಆಡಳಿತ ನಡೆಯುತ್ತಿದೆ. ಶಾಸಕ ಧೀರಜ್ ಮುನಿರಾಜು ಪರವಾಗಿ ನಾವಿದ್ದೀವಿ, ಯಾವುದೇ ಅಕ್ರಮ, ಭ್ರಷ್ಟಾಚಾರಗಳಿಗೆ ಅವಕಾಶ ಇಲ್ಲದಂತೆ ಇಲ್ಲಿನ ಸದಸ್ಯರು ಪ್ರಾಮಾಣಿಕವಾಗಿ ಕೆಲಸ ಮಾಡಲಿ. ಬಿಜೆಪಿ ಬೆಂಬಲಿತ ಅಧ್ಯಕ್ಷ, ಉಪಾಧ್ಯಕ್ಷರಿಗೆ ಮತ ಹಾಕಿದ ಸದಸ್ಯರಿಗೆ ಧನ್ಯವಾದಗಳು ಎಂದರು.

ಹಿರಿಯ ಮುಖಂಡ ತಿ.ರಂಗರಾಜು ಮಾತನಾಡಿ, ರಾಜಕೀಯದಲ್ಲಿ ಅದಲು ಬದಲು ಆಗುತ್ತಿರುತ್ತದೆ. ಬದಲಾವಣೆ ಆಗುವುದು ಸಹಜ. ಮಾಜಿ ಶಾಸಕ ವೆಂಕಟರಮಣಯ್ಯರ ದುರಹಂಕಾರ ಮತ್ತು ದುರಾಡಳಿತದಿಂದ ಕಾಂಗ್ರೆಸ್ ಪಕ್ಷ ನೆಲಕಚ್ಚುವಂತೆ ಮಾಡಿ ಹೋಗಿದ್ದಾರೆ. ನೂತನ ಅಧ್ಯಕ್ಷ, ಉಪಾಧ್ಯಕ್ಷರು ಧ್ವನಿ ಇಲ್ಲದವರ ಪರವಾಗಿ ಕೆಲಸ ಮಾಡಲಿ. ಹಿಂದಿನಿಂದಲೂ ಮಜರಾಹೊಸಹಳ್ಳಿ ಗ್ರಾ.ಪಂ ಬಡವರ ಪರವಾಗಿ ನಿಂತಿದೆ. ಸಾಮಾಜಿಕವಾಗಿ, ಆರ್ಥಿಕವಾಗಿ, ಹಿಂದುಳಿದವರ ಪರವಾಗಿ ಪಕ್ಷಾತೀತವಾಗಿ ಕೆಲಸ ಮಾಡುವಂತೆ ಕಿವಿಮಾತು ಹೇಳಿದರು.

ನೂತನ ಅಧ್ಯಕ್ಷ ವಿಜಯಕುಮಾರ್ ಮಾತನಾಡಿ, ಹಿರಿಯ ಮುಖಂಡರಾದ ರಂಗರಾಜು, ಶಾಸಕ ಧೀರಜ್ ಮುನಿರಾಜು ಬಿ.ಸಿ.ಆನಂದ್ ಕುಮಾರ್ ಅವರ ಸಹಕಾರದಿಂದ ಅಧ್ಯಕ್ಷನಾಗಿ ಆಯ್ಕೆಯಾಗಿದ್ದೇ‌ನೆ. ಗ್ರಾಮ.ಪಂಚಾಯತಿಯ ಎಲ್ಲಾ ಸದಸ್ಯರೊಂದಿಗೆ ಪಕ್ಷಾತೀತವಾಗಿ ಕೆಲಸ ಮಾಡುತ್ತೇನೆ. ಮೂಲಭೂತ ಸೌಕರ್ಯಗಳು ಹಾಗೂ ಈ ಭಾಗದ ಕೆರೆಗಳ ಕಲುಷಿತ ವಿರುದ್ಧ ಹೋರಾಟ ಮಾಡಲಾಗುವುದು ಎಂದರು.

ಈ ವೇಳೆ ಮುಖಂಡರಾದ ಬಿ.ಟಿ.ಶ್ರೀನಿವಾಸ್ ಮೂರ್ತಿ, ಆದಿತ್ಯ ನಾಗೇಶ್, ಅಂಬರೀಶ್, ಪಿಳ್ಳೇಗೌಡ, ಲಕ್ಷ್ಮಿ ನಾರಾಯಣ, ಹೊಸಹುಡ್ಯ ಆನಂದ್ ಕುಮಾರ್ ಸೇರಿದಂತೆ ಇತರರು ಉಪಸ್ಥಿತರಿದ್ದರು.

Ramesh Babu

Journalist

Recent Posts

ಶಾಲೆ ಬಿಟ್ಟ ಮಕ್ಕಳ ಪತ್ತೆಗೆ ಅಭಿಯಾನ: ವಲಸೆ ಕಾರ್ಮಿಕರ ಮಕ್ಕಳನ್ನು ಶಾಲೆಗೆ ಕರೆತರಲು ಕ್ರಮ

  ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…

5 hours ago

ಪಾಕಿಸ್ತಾನಿ ಗ್ಯಾಂಗ್‌ ಜೊತೆ ಸಂಪರ್ಕ ಆರೋಪ: ದೊಡ್ಡಬಳ್ಳಾಪುರದಲ್ಲಿ ವ್ಯಕ್ತಿ ಬಂಧನ

ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್‌ಸ್ಟರ್‌ಗಳೊಂದಿಗೆ ಇನ್‌ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…

24 hours ago

ದೊಡ್ಡಬಳ್ಳಾಪುರದಲ್ಲಿ ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ

ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…

2 days ago

ಘಾಟಿ ಕ್ಷೇತ್ರದಲ್ಲಿ ವರಮಹಾಲಕ್ಷ್ಮಿ ಸಂಭ್ರಮ; ಮಹಿಳೆಯರಿಗೆ ಬಳೆ, ಅರಶಿನ–ಕುಂಕುಮ ವಿತರಣೆ

ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ…

2 days ago

ವರಮಹಾಲಕ್ಷ್ಮಿ ಹಬ್ಬ…..

ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…

2 days ago

ಸುಮಾರು 500 ಕೋಟಿ ಮೌಲ್ಯದ ಜಮೀನು ಖಾತೆ ಬದಲಾವಣೆ ಆರೋಪ: ದೊಡ್ಡಬಳ್ಳಾಪುರ ಉಪವಿಭಾಗದ ಹಿಂದಿನ ಎಸಿ ದುರ್ಗಾಶ್ರೀ ಹಾಗೂ ಕಚೇರಿ ಸಿಬ್ಬಂದಿ ವಿರುದ್ದ ಲೋಕಾಯುಕ್ತ ಸ್ವಯಂಪ್ರೇರಿತ ಪ್ರಕರಣ ದಾಖಲು

ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…

3 days ago