ಮಜರಾಹೊಸಹಳ್ಳಿ ಗ್ರಾ.ಪಂ. ಬಿಜೆಪಿ ತೆಕ್ಕೆಗೆ: ನೂತನ ಅಧ್ಯಕ್ಷರಾಗಿ ವಿಜಯಕುಮಾರ್, ಉಪಾಧ್ಯಕ್ಷರಾಗಿ ಲಕ್ಷ್ಮಮ್ಮ ಆಯ್ಕೆ: ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರಿಗೆ ಮುಖಭಂಗ: ಮೇಲುಗೈ ಸಾಧಿಸಿದ ಬಿಜೆಪಿ

ಕಳೆದ ಎರಡೂವರೆ ವರ್ಷಗಳಿಂದ ಕಾಂಗ್ರೆಸ್ ಆಡಳಿತದ ತೆಕ್ಕೆಯಲ್ಲಿದ್ದ ಮಜರಾಹೊಸಹಳ್ಳಿ ಗ್ರಾಮ ಪಂಚಾಯತಿ ಈ ಬಾರಿ ರಾಜಕೀಯ ಬದಲಾವಣೆಗಳಿಂದ ಬಿಜೆಪಿ ಆಡಳಿತ ಚುಕ್ಕಾಣಿ ಹಿಡಿದಿದೆ. ಒಟ್ಟು 18 ಸದಸ್ಯ ಬಲವನ್ನು ಹೊಂದಿರುವ ಮಜರಾಹೊಸಹಳ್ಳಿ ಗ್ರಾ.ಪಂಗೆ ಶುಕ್ರವಾರ ಎರಡನೇ ಅವಧಿಗೆ ಅಧ್ಯಕ್ಷ, ಉಪಾಧ್ಯಕ್ಷ ಚುನಾವಣೆ ನಡೆಯಿತು. ಅಧ್ಯಕ್ಷ ಸ್ಥಾನಕ್ಕೆ ವೀರಾಪುರ ವಾರ್ಡ್ ನ ವಿಜಯಕುಮಾರ್ ಮತ್ತು ಗಿರೀಶ್ ನಾಮಪತ್ರ ಸಲ್ಲಿಸಿದ್ದರು. 11 ಮತಗಳನ್ನು ಪಡೆದ ಬಿಜೆಪಿ ಬೆಂಬಲಿತ ಸದಸ್ಯ ವಿಜಯಕುಮಾರ್ ಗೆ ವಿಜಯಲಕ್ಷ್ಮಿ ಒಲಿದಳು. ೦2 ಮತ ಪಡೆದ ಗಿರೀಶ್ ಸೋಲುಂಡರು.

ಉಪಾಧ್ಯಕ್ಷರಾಗಿ ಜಿಂಕೆಬಚ್ಚಹಳ್ಳಿ ವಾರ್ಡ್ ನ ಲಕ್ಷ್ಮಮ್ಮ ಗೆಲುವು ಸಾಧಿಸಿದರು. ನೂತನ ಅಧ್ಯಕ್ಷ, ಉಪಾಧ್ಯಕ್ಷರನ್ನು ಶಾಸಕ ಧೀರಜ್ ಮುನಿರಾಜು, ಕೆಎಂಎಫ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್, ಹಿರಿಯ ಮುಖಂಡ ತಿ.ರಂಗರಾಜು, ತಾಲ್ಲೂಕು ಬಿಜೆಪಿ ಅಧ್ಯಕ್ಷ ನಾಗೇಶ್ ಅಭಿನಂದಿಸಿದರು.

ಬಳಿಕ ಮಾತನಾಡಿದ ಕೆಎಂಎಫ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್ ಈ ಭಾಗದಲ್ಲಿ ಬಿಜೆಪಿ, ಕಾಂಗ್ರೆಸ್, ದಳದ ಮೂವರು ಸಮಾನಮನಸ್ಕರಾಗಿ ಕೆಲಸ ಮಾಡುತ್ತೇವೆ. ಕಳೆದ ಎರಡು ಬಾರಿ ಅವಿರೋಧ ಆಯ್ಕೆ ಮಾಡಲಾಗಿತ್ತು. ಈ ಬಾರಿಯೂ ಅವಿರೋಧ ಆಯ್ಕೆ ಆಗುವ ಸಂಭವವಿತ್ತು. ಕೆಲವರ ವೈಯಕ್ತಿಕ ದುರುದ್ದೇಶದಿಂದ ಚುನಾವಣೆಯಲ್ಲಿ ನಾಮಪತ್ರ ಸಲ್ಲಿಸಿದ್ದರು. ರಾಜಕೀಯದಲ್ಲಿ ಸಮಯ ಸಾಧಕರು ಇರುತ್ತಾರೆ. ಈ ಭಾಗದಲ್ಲಿ ಯಾವುದೇ ಪಕ್ಷ, ಜಾತಿ ಮುಖ್ಯವಲ್ಲ. ಹಿರಿಯ ಮುಖಂಡರಾದ ರಂಗರಾಜು ಅವರ ಮಾರ್ಗದರ್ಶನದಲ್ಲಿ ಉತ್ತಮ ಆಡಳಿತ ನಡೆಯುತ್ತಿದೆ. ಶಾಸಕ ಧೀರಜ್ ಮುನಿರಾಜು ಪರವಾಗಿ ನಾವಿದ್ದೀವಿ, ಯಾವುದೇ ಅಕ್ರಮ, ಭ್ರಷ್ಟಾಚಾರಗಳಿಗೆ ಅವಕಾಶ ಇಲ್ಲದಂತೆ ಇಲ್ಲಿನ ಸದಸ್ಯರು ಪ್ರಾಮಾಣಿಕವಾಗಿ ಕೆಲಸ ಮಾಡಲಿ. ಬಿಜೆಪಿ ಬೆಂಬಲಿತ ಅಧ್ಯಕ್ಷ, ಉಪಾಧ್ಯಕ್ಷರಿಗೆ ಮತ ಹಾಕಿದ ಸದಸ್ಯರಿಗೆ ಧನ್ಯವಾದಗಳು ಎಂದರು.

ಹಿರಿಯ ಮುಖಂಡ ತಿ.ರಂಗರಾಜು ಮಾತನಾಡಿ, ರಾಜಕೀಯದಲ್ಲಿ ಅದಲು ಬದಲು ಆಗುತ್ತಿರುತ್ತದೆ. ಬದಲಾವಣೆ ಆಗುವುದು ಸಹಜ. ಮಾಜಿ ಶಾಸಕ ವೆಂಕಟರಮಣಯ್ಯರ ದುರಹಂಕಾರ ಮತ್ತು ದುರಾಡಳಿತದಿಂದ ಕಾಂಗ್ರೆಸ್ ಪಕ್ಷ ನೆಲಕಚ್ಚುವಂತೆ ಮಾಡಿ ಹೋಗಿದ್ದಾರೆ. ನೂತನ ಅಧ್ಯಕ್ಷ, ಉಪಾಧ್ಯಕ್ಷರು ಧ್ವನಿ ಇಲ್ಲದವರ ಪರವಾಗಿ ಕೆಲಸ ಮಾಡಲಿ. ಹಿಂದಿನಿಂದಲೂ ಮಜರಾಹೊಸಹಳ್ಳಿ ಗ್ರಾ.ಪಂ ಬಡವರ ಪರವಾಗಿ ನಿಂತಿದೆ. ಸಾಮಾಜಿಕವಾಗಿ, ಆರ್ಥಿಕವಾಗಿ, ಹಿಂದುಳಿದವರ ಪರವಾಗಿ ಪಕ್ಷಾತೀತವಾಗಿ ಕೆಲಸ ಮಾಡುವಂತೆ ಕಿವಿಮಾತು ಹೇಳಿದರು.

ನೂತನ ಅಧ್ಯಕ್ಷ ವಿಜಯಕುಮಾರ್ ಮಾತನಾಡಿ, ಹಿರಿಯ ಮುಖಂಡರಾದ ರಂಗರಾಜು, ಶಾಸಕ ಧೀರಜ್ ಮುನಿರಾಜು ಬಿ.ಸಿ.ಆನಂದ್ ಕುಮಾರ್ ಅವರ ಸಹಕಾರದಿಂದ ಅಧ್ಯಕ್ಷನಾಗಿ ಆಯ್ಕೆಯಾಗಿದ್ದೇ‌ನೆ. ಗ್ರಾಮ.ಪಂಚಾಯತಿಯ ಎಲ್ಲಾ ಸದಸ್ಯರೊಂದಿಗೆ ಪಕ್ಷಾತೀತವಾಗಿ ಕೆಲಸ ಮಾಡುತ್ತೇನೆ. ಮೂಲಭೂತ ಸೌಕರ್ಯಗಳು ಹಾಗೂ ಈ ಭಾಗದ ಕೆರೆಗಳ ಕಲುಷಿತ ವಿರುದ್ಧ ಹೋರಾಟ ಮಾಡಲಾಗುವುದು ಎಂದರು.

ಈ ವೇಳೆ ಮುಖಂಡರಾದ ಬಿ.ಟಿ.ಶ್ರೀನಿವಾಸ್ ಮೂರ್ತಿ, ಆದಿತ್ಯ ನಾಗೇಶ್, ಅಂಬರೀಶ್, ಪಿಳ್ಳೇಗೌಡ, ಲಕ್ಷ್ಮಿ ನಾರಾಯಣ, ಹೊಸಹುಡ್ಯ ಆನಂದ್ ಕುಮಾರ್ ಸೇರಿದಂತೆ ಇತರರು ಉಪಸ್ಥಿತರಿದ್ದರು.

Ramesh Babu

Journalist

Recent Posts

ಆಧಾರ್ ಸಮಸ್ಯೆಗೆ ಸಿಲುಕಿದ 16 ಸಾವಿರ ವಿದ್ಯಾರ್ಥಿಗಳು! ಸೌಲಭ್ಯಗಳಿಂದ ವಂಚಿತರಾಗುವ ಆತಂಕ; ವಲಸೆ ಕಾರ್ಮಿಕರ ಮಕ್ಕಳಿಗೇ ಹೆಚ್ಚು ಸಂಕಷ್ಟ

ಬೆಂಗಳೂರು ಗ್ರಾಮಾಂತರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಸಾವಿರಾರು ವಿದ್ಯಾರ್ಥಿಗಳ ಶಿಕ್ಷಣಕ್ಕೆ ಆಧಾರ್ ಕಾರ್ಡ್ ದೊಡ್ಡ…

3 hours ago

ತೂಬಗೆರೆ ಎಂ.ಪಿ.ಆರ್.ಎ.ಸಿ.ಎಸ್. ಚುನಾವಣೆ: ಬಿಜೆಪಿ–ಜೆಡಿಎಸ್ ಮೈತ್ರಿಗೆ ಸ್ಪಷ್ಟ ಬಹುಮತ

ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘ (ಎಂ.ಪಿ.ಆರ್.ಎ.ಸಿ.ಎಸ್.)ದ 2026–2031ನೇ ಅವಧಿಯ ಆಡಳಿತ ಮಂಡಳಿ…

12 hours ago

ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ ಆಗಿದೆ- ಪ್ರೊ. ಹಿ.ಚಿ. ಬೋರಲಿಂಗಯ್ಯ

ದೊಡ್ಡಬಳ್ಳಾಪುರ: ಆಷಾಢ ಮಾಸದಲ್ಲಿ ಗಾಳಿಪಟ ಹಾರಿಸುವುದು ನಮ್ಮ ಭಾಗದ ಸಾಂಪ್ರದಾಯಿಕ ಆಚರಣೆಯಾಗಿದ್ದು, ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ…

18 hours ago

ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಪರೀಕ್ಷೆ ಸುಸೂತ್ರ; ದೊಡ್ಡಬಳ್ಳಾಪುರದ 7 ಕೇಂದ್ರಗಳಲ್ಲಿ ಯಶಸ್ವಿ ಆಯೋಜನೆ

ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕರ್ನಾಟಕ ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆ ಭಾನುವಾರ ಯಾವುದೇ ಅಡಚಣೆ ಅಥವಾ…

20 hours ago

ಈ ಬಾರಿಯ ದಸರಾ ಉದ್ಘಾಟನೆ ಯಾರು ಮಾಡಿದರೆ ಉತ್ತಮ…..

ಇತ್ತೀಚೆಗೆ ಹೊಸದಾಗಿ ವಿಧಾನಪರಿಷತ್ ಸದಸ್ಯರಾಗಿ ಆಯ್ಕೆಯಾದ, ಡಾಕ್ಟರ್ ರಾಮ್ ಮನೋಹರ್ ಲೋಹಿಯಾ ವೇದಿಕೆಯ ಸಂಸ್ಥಾಪಕ ಅಧ್ಯಕ್ಷರಾದ ಶ್ರೀ ಮಳವಳ್ಳಿ ಶಿವಣ್ಣ…

2 days ago

ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಗೂಡ್ಸ್ ವಾಹನ: ತಪ್ಪಿದ ಭಾರೀ ಅನಾಹುತ

ದೊಡ್ಡಬಳ್ಳಾಪುರ: ನೆಲಮಂಗಲದಿಂದ ದೊಡ್ಡಬಳ್ಳಾಪುರದತ್ತ ಬರುತ್ತಿದ್ದ ಗೂಡ್ಸ್ ವಾಹನವು ಅರಳುಮಲ್ಲಿಗೆ ಗ್ರಾಮದ ಬಳಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…

3 days ago