ಕಳೆದ ಎರಡೂವರೆ ವರ್ಷಗಳಿಂದ ಕಾಂಗ್ರೆಸ್ ಆಡಳಿತದ ತೆಕ್ಕೆಯಲ್ಲಿದ್ದ ಮಜರಾಹೊಸಹಳ್ಳಿ ಗ್ರಾಮ ಪಂಚಾಯತಿ ಈ ಬಾರಿ ರಾಜಕೀಯ ಬದಲಾವಣೆಗಳಿಂದ ಬಿಜೆಪಿ ಆಡಳಿತ ಚುಕ್ಕಾಣಿ ಹಿಡಿದಿದೆ. ಒಟ್ಟು 18 ಸದಸ್ಯ ಬಲವನ್ನು ಹೊಂದಿರುವ ಮಜರಾಹೊಸಹಳ್ಳಿ ಗ್ರಾ.ಪಂಗೆ ಶುಕ್ರವಾರ ಎರಡನೇ ಅವಧಿಗೆ ಅಧ್ಯಕ್ಷ, ಉಪಾಧ್ಯಕ್ಷ ಚುನಾವಣೆ ನಡೆಯಿತು. ಅಧ್ಯಕ್ಷ ಸ್ಥಾನಕ್ಕೆ ವೀರಾಪುರ ವಾರ್ಡ್ ನ ವಿಜಯಕುಮಾರ್ ಮತ್ತು ಗಿರೀಶ್ ನಾಮಪತ್ರ ಸಲ್ಲಿಸಿದ್ದರು. 11 ಮತಗಳನ್ನು ಪಡೆದ ಬಿಜೆಪಿ ಬೆಂಬಲಿತ ಸದಸ್ಯ ವಿಜಯಕುಮಾರ್ ಗೆ ವಿಜಯಲಕ್ಷ್ಮಿ ಒಲಿದಳು. ೦2 ಮತ ಪಡೆದ ಗಿರೀಶ್ ಸೋಲುಂಡರು.
ಉಪಾಧ್ಯಕ್ಷರಾಗಿ ಜಿಂಕೆಬಚ್ಚಹಳ್ಳಿ ವಾರ್ಡ್ ನ ಲಕ್ಷ್ಮಮ್ಮ ಗೆಲುವು ಸಾಧಿಸಿದರು. ನೂತನ ಅಧ್ಯಕ್ಷ, ಉಪಾಧ್ಯಕ್ಷರನ್ನು ಶಾಸಕ ಧೀರಜ್ ಮುನಿರಾಜು, ಕೆಎಂಎಫ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್, ಹಿರಿಯ ಮುಖಂಡ ತಿ.ರಂಗರಾಜು, ತಾಲ್ಲೂಕು ಬಿಜೆಪಿ ಅಧ್ಯಕ್ಷ ನಾಗೇಶ್ ಅಭಿನಂದಿಸಿದರು.
ಬಳಿಕ ಮಾತನಾಡಿದ ಕೆಎಂಎಫ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್ ಈ ಭಾಗದಲ್ಲಿ ಬಿಜೆಪಿ, ಕಾಂಗ್ರೆಸ್, ದಳದ ಮೂವರು ಸಮಾನಮನಸ್ಕರಾಗಿ ಕೆಲಸ ಮಾಡುತ್ತೇವೆ. ಕಳೆದ ಎರಡು ಬಾರಿ ಅವಿರೋಧ ಆಯ್ಕೆ ಮಾಡಲಾಗಿತ್ತು. ಈ ಬಾರಿಯೂ ಅವಿರೋಧ ಆಯ್ಕೆ ಆಗುವ ಸಂಭವವಿತ್ತು. ಕೆಲವರ ವೈಯಕ್ತಿಕ ದುರುದ್ದೇಶದಿಂದ ಚುನಾವಣೆಯಲ್ಲಿ ನಾಮಪತ್ರ ಸಲ್ಲಿಸಿದ್ದರು. ರಾಜಕೀಯದಲ್ಲಿ ಸಮಯ ಸಾಧಕರು ಇರುತ್ತಾರೆ. ಈ ಭಾಗದಲ್ಲಿ ಯಾವುದೇ ಪಕ್ಷ, ಜಾತಿ ಮುಖ್ಯವಲ್ಲ. ಹಿರಿಯ ಮುಖಂಡರಾದ ರಂಗರಾಜು ಅವರ ಮಾರ್ಗದರ್ಶನದಲ್ಲಿ ಉತ್ತಮ ಆಡಳಿತ ನಡೆಯುತ್ತಿದೆ. ಶಾಸಕ ಧೀರಜ್ ಮುನಿರಾಜು ಪರವಾಗಿ ನಾವಿದ್ದೀವಿ, ಯಾವುದೇ ಅಕ್ರಮ, ಭ್ರಷ್ಟಾಚಾರಗಳಿಗೆ ಅವಕಾಶ ಇಲ್ಲದಂತೆ ಇಲ್ಲಿನ ಸದಸ್ಯರು ಪ್ರಾಮಾಣಿಕವಾಗಿ ಕೆಲಸ ಮಾಡಲಿ. ಬಿಜೆಪಿ ಬೆಂಬಲಿತ ಅಧ್ಯಕ್ಷ, ಉಪಾಧ್ಯಕ್ಷರಿಗೆ ಮತ ಹಾಕಿದ ಸದಸ್ಯರಿಗೆ ಧನ್ಯವಾದಗಳು ಎಂದರು.
ನೂತನ ಅಧ್ಯಕ್ಷ ವಿಜಯಕುಮಾರ್ ಮಾತನಾಡಿ, ಹಿರಿಯ ಮುಖಂಡರಾದ ರಂಗರಾಜು, ಶಾಸಕ ಧೀರಜ್ ಮುನಿರಾಜು ಬಿ.ಸಿ.ಆನಂದ್ ಕುಮಾರ್ ಅವರ ಸಹಕಾರದಿಂದ ಅಧ್ಯಕ್ಷನಾಗಿ ಆಯ್ಕೆಯಾಗಿದ್ದೇನೆ. ಗ್ರಾಮ.ಪಂಚಾಯತಿಯ ಎಲ್ಲಾ ಸದಸ್ಯರೊಂದಿಗೆ ಪಕ್ಷಾತೀತವಾಗಿ ಕೆಲಸ ಮಾಡುತ್ತೇನೆ. ಮೂಲಭೂತ ಸೌಕರ್ಯಗಳು ಹಾಗೂ ಈ ಭಾಗದ ಕೆರೆಗಳ ಕಲುಷಿತ ವಿರುದ್ಧ ಹೋರಾಟ ಮಾಡಲಾಗುವುದು ಎಂದರು.
ಈ ವೇಳೆ ಮುಖಂಡರಾದ ಬಿ.ಟಿ.ಶ್ರೀನಿವಾಸ್ ಮೂರ್ತಿ, ಆದಿತ್ಯ ನಾಗೇಶ್, ಅಂಬರೀಶ್, ಪಿಳ್ಳೇಗೌಡ, ಲಕ್ಷ್ಮಿ ನಾರಾಯಣ, ಹೊಸಹುಡ್ಯ ಆನಂದ್ ಕುಮಾರ್ ಸೇರಿದಂತೆ ಇತರರು ಉಪಸ್ಥಿತರಿದ್ದರು.
ಚಿಕ್ಕಬಳ್ಳಾಪುರ- ಬೈಕ್ ನಲ್ಲಿ ಬಂದ ಇಬ್ಬರು ಯುವಕರು ಕ್ಷಣ ಮಾತ್ರದಲ್ಲಿ ಕಣ್ಣಿಗೆ ಕಾರದಪುಡಿ ಹಾಕಿ ಒಂದಲ್ಲ ಎರಡಲ್ಲ ಬರೋಬ್ಬರಿ ಏಳೂವರೆ…
ಸುಶಿಕ್ಷಿತ, ಪ್ರಜ್ಞಾವಂತ ಯುವಶಕ್ತಿಯಿಂದ ನಮ್ಮ ದೇಶದ ಪ್ರಗತಿ ಸಾಧ್ಯವಾಗಲಿದೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಅಭಿಪ್ರಾಯಪಟ್ಟಿದ್ದಾರೆ. ಇಂಡಿಯನ್ ಅಕಾಡೆಮಿ ಆಫ್…
ದೇವನಹಳ್ಳಿ: ರಾಷ್ಟ್ರೀಯ ಹೆದ್ದಾರಿ 44ರಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ದ್ವಿಚಕ್ರ ವಾಹನ ಸವಾರ ಮೃತಪಟ್ಟಿರುವ ಘಟನೆ ಮೇ.12ರ ರಾತ್ರಿ…
ದೊಡ್ಡಬಳ್ಳಾಪುರ: ತಾಲ್ಲೂಕಿನ ಸಾಸಲು–ಆರೂಢಿ ಭಾಗದ ಜನರ ಪ್ರಮುಖ ಸಂಪರ್ಕ ರಸ್ತೆಯಾಗಿರುವ ಗುಂಡಮಗೆರೆ–ಹೊಸಹಳ್ಳಿ ರಸ್ತೆಗೆ ಕೊನೆಗೂ ಡಾಂಬರೀಕರಣ ಕಾಮಗಾರಿ ಆರಂಭವಾಗಿದ್ದು, ಗ್ರಾಮಸ್ಥರಲ್ಲಿ…
ದೊಡ್ಡಬಳ್ಳಾಪುರ: ಸರ್ಕಾರ ಆಶ್ರಯ ಯೋಜನೆ ಮೂಲಕ ಗುಡಿಸಲು ಮುಕ್ತ ರಾಜ್ಯ ನಿರ್ಮಾಣದ ಘೋಷಣೆ ಮಾಡುತ್ತಿದ್ದರೂ, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ…
ಅನಕ್ಷರಸ್ಥರ ಬುದ್ದಿವಂತಿಕೆ ಪ್ರಶ್ನಿಸುವವರು ಅಕ್ಷರಸ್ಥರ ಮಾನವೀಯತೆಯನ್ನು ಪ್ರಶ್ನಿಸಬೇಕಲ್ಲವೇ........ ......ಒಂದು ಟ್ವೀಟ್... ಅಕ್ಷರ ಕಲಿಕೆ ಒಂದು ನೈಪುಣ್ಯ ಅಥವಾ ಸುಲಭವಾಗಿ ಮಾಹಿತಿ…