ಮಜರಾಹೊಸಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆಗೆ ಕುಡಿಯುವ ನೀರಿನ ಘಟಕ, ಗಣಕಯಂತ್ರ ಪ್ರಯೋಗಾಲಯದ ಕಾಣಿಕೆ

 

ನಗರದ ಖಾಸಗಿ ಶಾಲೆಯ ಮಕ್ಕಳು ಹೇಗೆ ಎಲ್ಲಾ ರೀತಿಯ ಸೌಲಭ್ಯಗಳನ್ನು ಪಡೆಯುತ್ತಿದ್ದಾರೂ ಹಾಗೆಯೇ ನಮ್ಮ ಗ್ರಾಮೀಣ ಭಾಗದ ಮಕ್ಕಳಿಗೂ ಸಹ ಎಲ್ಲಾ ಸೌಲಭ್ಯಗಳು ದೊರೆಯಬೇಕು ಎಂಬುದನ್ನು ಗುರಿಯಾಗಿಟ್ಟುಕೊಂಡು ವಿಶೇಷವಾಗಿ ಸರ್ಕಾರಿ ಶಾಲೆಗಳನ್ನು ಅಭಿವೃದ್ಧಿಗೊಳಿಸಲು ಗೋಕಲ್ ದಾಸ್ ಎಕ್ಸ್ ಪೋರ್ಟ್ಸ್ ಸಂಸ್ಥೆ ಮುನ್ನಡೆದಿದೆ, ನಮ್ಮ ಕಂಪನಿಯು ನೀಡುತ್ತಿರುವ ಈ ಸೌಲಭ್ಯವನ್ನು ಸದುಪಯೋಗಪಡಿಸಿ ಕೊಳ್ಳಬೇಕೆಂದು ಗೋಕಲ್ ದಾಸ್ ಎಕ್ಸ್ ಪೋರ್ಟ್ಸ್ ಕಂಪನಿಯ ಉಪಾಧ್ಯಕ್ಷರಾದ ಜಿ. ಎ. ಶ್ರೀನಿವಾಸ್ ಮನವಿ ಮಾಡಿದರು.

ತಾಲ್ಲೂಕಿನ ಮಜರಾಹೊಸಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆಗೆ ಗಾರ್ಮೆಂಟ್ಸ್ ಜಗತ್ತಿನ ಪ್ರತಿಷ್ಠಿತ ಕಂಪನಿಗಳಲ್ಲೊಂದಾದ ಗೋಕಲ್ ದಾಸ್ ಎಕ್ಸ್ ಪೋರ್ಟ್ಸ್ ಚಾರಿಟಬಲ್ ಫೌಂಡೇಶನ್ ವತಿಯಿಂದ ಕುಡಿಯುವ ನೀರಿನ ( RO) ಘಟಕ ಮತ್ತು ಗಣಕಯಂತ್ರಗಳು ಹಾಗೂ ಪ್ರಯೋಗಾಲಯವನ್ನು ಕೊಡುಗೆಯಾಗಿ ನೀಡಿ ಅವರು ಮಾತನಾಡಿದರು.

ಶಾಲೆಯ ಮುಖ್ಯೋಪಾಧ್ಯಾಯರಾದ ಅಂಜಿನಪ್ಪ ಅವರು ಮಾತನಾಡಿ ಸದರಿ ಶಾಲೆಯಲ್ಲಿ ಸುಮಾರು 100 ಜನ ವಿದ್ಯಾರ್ಥಿಗಳು ಕಲಿಯುತ್ತಿದ್ದಾರೆ , ನಮ್ಮ ಶಾಲೆಯ ಮಕ್ಕಳಿಗೆ ಕುಡಿಯುವ ನೀರಿನ ಘಟಕ ಮತ್ತು ಗಣಕಯಂತ್ರ ಹಾಗೂ ಪ್ರಯೋಗಾಲಯವನ್ನು ಕೊಡುಗೆ ನೀಡಿರುವ ಗೋಕಲ್ ದಾಸ್ ಎಕ್ಸ್ ಪೋರ್ಟ್ಸ್ ಸಂಸ್ಥೆಗೆ ನಾನು ಆಭಾರಿಯಾಗಿದ್ದೇನೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಗೋಕುಲ್ ದಾಸ್ ನ ಪ್ರದಾನ ವ್ಯವಸ್ಥಾಪಕರು ಗಿರೀಶ್.ಆರ್, ಮಾನವ ಸಂಪನ್ಮೂಲ ವಿಭಾಗದ ವಿಶ್ವನಾಥ್ ಡಿ.ಎಸ್, ಮಹಾಂತೇಶ್ ಬಂಗಾರಿ ಪರಿಸರ ಆರೋಗ್ಯ ಮತ್ತು ಸುರಕ್ಷತೆಯ ಮ್ಯಾನೇಜರ್ , ಹಾಗು ಮಜರಾಹೊಸಹಳ್ಳಿ ಶಾಲೆಯ ಸಹಶಿಕ್ಷಕರು ಹಾಗೂ ಊರಿನ ಹಿರಿಯರು ಹಾಜರಿದ್ದರು.

Ramesh Babu

Journalist

Recent Posts

ಗೃಹಲಕ್ಷ್ಮಿ ಹಣ ಶೀಘ್ರ ಬಿಡುಗಡೆ- ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ತಡೆ ಮಸೂದೆಯ ಬಗ್ಗೆ ಬಿಜೆಪಿಗೆ ಮಾತ್ರ ಏಕೆ ಆತಂಕ? ದ್ವೇಷ ಭಾಷಣ ತಡೆ ಮಸೂದೆ ಕೆಲವರನ್ನು ಗುರಿಯಾಗಿಸಿಕೊಂಡು…

6 hours ago

ದಲಿತ ಯುವಕನ ಮದುವೆಯಾಗಿದ್ದಕ್ಕೆ ತಂದೆಯೇ 7 ತಿಂಗಳ ಗರ್ಭಿಣಿ ಮಗಳನ್ನು ಭೀಕರವಾಗಿ ಹತ್ಯೆ

ದಲಿತ ಯುವಕನ ಮದುವೆಯಾಗಿದ್ದಕ್ಕೆ ತಂದೆಯೇ 7 ತಿಂಗಳ ಗರ್ಭಿಣಿ ಮಗಳನ್ನು ಭೀಕರವಾಗಿ ಹತ್ಯೆ ಮಾಡಿದ ಘಟನೆ ಸಂಬಂಧ ಎಸ್​​ಪಿ ಗುಂಜನ್…

7 hours ago

ವಿಶ್ವದ ಅತಿಮುಖ್ಯ ನಗರ, ಭಾರತದ ಆಡಳಿತ ಶಕ್ತಿ ಕೇಂದ್ರ ದೆಹಲಿಯಲ್ಲಿ ವಾಯು ಮಾಲಿನ್ಯ….

ದೆಹಲಿ ವಾಯು ಮಾಲಿನ್ಯ...... ನಮ್ಮ ನಗರ ಯಾವಾಗ ?...... ಎಚ್ಚರಿಕೆಯ ಗಂಟೆ ನಿರಂತರವಾಗಿ ಹೊಡೆದುಕೊಳ್ಳುತ್ತಿರುವಾಗ ನಾವು ನಿದ್ದೆ ಮಾಡುವುದಾದರೂ ಹೇಗೆ…

12 hours ago

ಸಿದ್ದೇನಾಯಕನಹಳ್ಳಿಯಲ್ಲಿ ಬಾಬಾಸಾಹೇಬ್ ಡಾ.ಬಿ.ಆರ್ ಅಂಬೇಡ್ಕರ್ ಪುತ್ಥಳಿ ಅನಾವರಣ: ಸಚಿವ ಕೆ.ಎಚ್ ಮುನಿಯಪ್ಪ ಭಾಗಿ

ಡಾ. ಬಿ.ಆರ್ ಅಂಬೇಡ್ಕರ್ ಸ್ನೇಹದ ಬಳಗದವರಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ನಗರದ 5ನೇ ವಾರ್ಡ್ ಸಿದ್ದೇನಾಯಕನಹಳ್ಳಿಯಲ್ಲಿ ನಿರ್ಮಿಸಿರುವ ಬಾಬಾಸಾಹೇಬ್…

24 hours ago

ಬಾಶೆಟ್ಟಿಹಳ್ಳಿ ಪಪಂ ಚುನಾವಣೆ: ಶೇ.78ರಷ್ಟು ಮತದಾನ: ನಕಲಿ ಮತದಾನಕ್ಕೆ ಯತ್ನಿಸಿದ ವ್ಯಕ್ತಿಯನ್ನು ವಶಕ್ಕೆ ಪಡೆದ ಪೊಲೀಸರು: ಕುಡಿದು ಚುನಾವಣೆ ಕೆಲಸಕ್ಕೆ ಬಂದ ಶಿಕ್ಷಕ

ತಾಲೂಕಿನ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ಚುನಾವಣೆ ಭಾನುವಾರ ಸೂಸುತ್ರವಾಗಿ ಪೂರ್ಣಗೊಂಡಿದೆ. ರಾಜ್ಯ ಚುನಾವಣಾ ಆಯೋಗ, ಜಿಲ್ಲಾಡಳಿತ, ತಾಲೂಕು ಆಡಳಿತ, ಬಾಶೆಟ್ಟಿಹಳ್ಳಿ…

1 day ago

ಒಂಟಿ ಮನೆ ಸುತ್ತಾ ಅನುಮಾನಾಸ್ಪದವಾಗಿ ಓಡಾಡುತ್ತಿದ್ದ ಇಬ್ಬರು ವಿದೇಶಿ ಪ್ರಜೆಗಳು: ಗಾಬರಿಗೊಂಡ ಮಹಿಳೆ: ಗ್ರಾಮಸ್ಥರ ಕೈಗೆ ಸಿಕ್ಕ ಆಸಾಮಿಗಳು, ಸದ್ಯ ವಶಕ್ಕೆ ಪಡೆದ ಪೊಲೀಸರು

ಒಂಟಿ ಮನೆ ಬಳಿ ಅನುಮಾನಾಸ್ಪದವಾಗಿ ಓಡಾಡುತ್ತಿದ್ದ ಇಬ್ಬರು ವಿದೇಶಿ ಪ್ರಜೆಗಳನ್ನು ಊರಿನ ಗ್ರಾಮಸ್ಥರು ಹಿಡಿದು ಪೊಲೀಸರಿಗೆ ಒಪ್ಪಿಸಿರುವ ಘಟನೆ ಇಂದು…

1 day ago