ಮಜರಾಹೊಸಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆಗೆ ಕುಡಿಯುವ ನೀರಿನ ಘಟಕ, ಗಣಕಯಂತ್ರ ಪ್ರಯೋಗಾಲಯದ ಕಾಣಿಕೆ

 

ನಗರದ ಖಾಸಗಿ ಶಾಲೆಯ ಮಕ್ಕಳು ಹೇಗೆ ಎಲ್ಲಾ ರೀತಿಯ ಸೌಲಭ್ಯಗಳನ್ನು ಪಡೆಯುತ್ತಿದ್ದಾರೂ ಹಾಗೆಯೇ ನಮ್ಮ ಗ್ರಾಮೀಣ ಭಾಗದ ಮಕ್ಕಳಿಗೂ ಸಹ ಎಲ್ಲಾ ಸೌಲಭ್ಯಗಳು ದೊರೆಯಬೇಕು ಎಂಬುದನ್ನು ಗುರಿಯಾಗಿಟ್ಟುಕೊಂಡು ವಿಶೇಷವಾಗಿ ಸರ್ಕಾರಿ ಶಾಲೆಗಳನ್ನು ಅಭಿವೃದ್ಧಿಗೊಳಿಸಲು ಗೋಕಲ್ ದಾಸ್ ಎಕ್ಸ್ ಪೋರ್ಟ್ಸ್ ಸಂಸ್ಥೆ ಮುನ್ನಡೆದಿದೆ, ನಮ್ಮ ಕಂಪನಿಯು ನೀಡುತ್ತಿರುವ ಈ ಸೌಲಭ್ಯವನ್ನು ಸದುಪಯೋಗಪಡಿಸಿ ಕೊಳ್ಳಬೇಕೆಂದು ಗೋಕಲ್ ದಾಸ್ ಎಕ್ಸ್ ಪೋರ್ಟ್ಸ್ ಕಂಪನಿಯ ಉಪಾಧ್ಯಕ್ಷರಾದ ಜಿ. ಎ. ಶ್ರೀನಿವಾಸ್ ಮನವಿ ಮಾಡಿದರು.

ತಾಲ್ಲೂಕಿನ ಮಜರಾಹೊಸಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆಗೆ ಗಾರ್ಮೆಂಟ್ಸ್ ಜಗತ್ತಿನ ಪ್ರತಿಷ್ಠಿತ ಕಂಪನಿಗಳಲ್ಲೊಂದಾದ ಗೋಕಲ್ ದಾಸ್ ಎಕ್ಸ್ ಪೋರ್ಟ್ಸ್ ಚಾರಿಟಬಲ್ ಫೌಂಡೇಶನ್ ವತಿಯಿಂದ ಕುಡಿಯುವ ನೀರಿನ ( RO) ಘಟಕ ಮತ್ತು ಗಣಕಯಂತ್ರಗಳು ಹಾಗೂ ಪ್ರಯೋಗಾಲಯವನ್ನು ಕೊಡುಗೆಯಾಗಿ ನೀಡಿ ಅವರು ಮಾತನಾಡಿದರು.

ಶಾಲೆಯ ಮುಖ್ಯೋಪಾಧ್ಯಾಯರಾದ ಅಂಜಿನಪ್ಪ ಅವರು ಮಾತನಾಡಿ ಸದರಿ ಶಾಲೆಯಲ್ಲಿ ಸುಮಾರು 100 ಜನ ವಿದ್ಯಾರ್ಥಿಗಳು ಕಲಿಯುತ್ತಿದ್ದಾರೆ , ನಮ್ಮ ಶಾಲೆಯ ಮಕ್ಕಳಿಗೆ ಕುಡಿಯುವ ನೀರಿನ ಘಟಕ ಮತ್ತು ಗಣಕಯಂತ್ರ ಹಾಗೂ ಪ್ರಯೋಗಾಲಯವನ್ನು ಕೊಡುಗೆ ನೀಡಿರುವ ಗೋಕಲ್ ದಾಸ್ ಎಕ್ಸ್ ಪೋರ್ಟ್ಸ್ ಸಂಸ್ಥೆಗೆ ನಾನು ಆಭಾರಿಯಾಗಿದ್ದೇನೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಗೋಕುಲ್ ದಾಸ್ ನ ಪ್ರದಾನ ವ್ಯವಸ್ಥಾಪಕರು ಗಿರೀಶ್.ಆರ್, ಮಾನವ ಸಂಪನ್ಮೂಲ ವಿಭಾಗದ ವಿಶ್ವನಾಥ್ ಡಿ.ಎಸ್, ಮಹಾಂತೇಶ್ ಬಂಗಾರಿ ಪರಿಸರ ಆರೋಗ್ಯ ಮತ್ತು ಸುರಕ್ಷತೆಯ ಮ್ಯಾನೇಜರ್ , ಹಾಗು ಮಜರಾಹೊಸಹಳ್ಳಿ ಶಾಲೆಯ ಸಹಶಿಕ್ಷಕರು ಹಾಗೂ ಊರಿನ ಹಿರಿಯರು ಹಾಜರಿದ್ದರು.

Ramesh Babu

Journalist

Recent Posts

ಕ್ರೀಡಾ ಪ್ರತಿಭೆಗಳ ಅನಾವರಣಕ್ಕೆ ನ್ಯಾಷನಲ್ ಪ್ರೈಡ್ ಶಾಲೆಯಲ್ಲಿ ಹೊಸ ವೇದಿಕೆ ಒಂದೇ ಆವರಣದಲ್ಲಿ ಬಾಕ್ಸಿಂಗ್, ಕುಸ್ತಿ, ಜೂಡೋ, ಕಬ್ಬಡಿ, ಬ್ಯಾಡ್ಮಿಂಟನ್, ಸ್ಕೇಟಿಂಗ್ ಸೌಲಭ್ಯ

ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…

58 minutes ago

ಶಾಲೆ ಬಿಟ್ಟ ಮಕ್ಕಳ ಪತ್ತೆಗೆ ಅಭಿಯಾನ: ವಲಸೆ ಕಾರ್ಮಿಕರ ಮಕ್ಕಳನ್ನು ಶಾಲೆಗೆ ಕರೆತರಲು ಕ್ರಮ

  ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…

6 hours ago

ಪಾಕಿಸ್ತಾನಿ ಗ್ಯಾಂಗ್‌ ಜೊತೆ ಸಂಪರ್ಕ ಆರೋಪ: ದೊಡ್ಡಬಳ್ಳಾಪುರದಲ್ಲಿ ವ್ಯಕ್ತಿ ಬಂಧನ

ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್‌ಸ್ಟರ್‌ಗಳೊಂದಿಗೆ ಇನ್‌ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…

1 day ago

ದೊಡ್ಡಬಳ್ಳಾಪುರದಲ್ಲಿ ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ

ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…

2 days ago

ಘಾಟಿ ಕ್ಷೇತ್ರದಲ್ಲಿ ವರಮಹಾಲಕ್ಷ್ಮಿ ಸಂಭ್ರಮ; ಮಹಿಳೆಯರಿಗೆ ಬಳೆ, ಅರಶಿನ–ಕುಂಕುಮ ವಿತರಣೆ

ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ…

2 days ago

ವರಮಹಾಲಕ್ಷ್ಮಿ ಹಬ್ಬ…..

ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…

2 days ago