ಮಜರಾಹೊಸಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆಗೆ ಕುಡಿಯುವ ನೀರಿನ ಘಟಕ, ಗಣಕಯಂತ್ರ ಪ್ರಯೋಗಾಲಯದ ಕಾಣಿಕೆ

 

ನಗರದ ಖಾಸಗಿ ಶಾಲೆಯ ಮಕ್ಕಳು ಹೇಗೆ ಎಲ್ಲಾ ರೀತಿಯ ಸೌಲಭ್ಯಗಳನ್ನು ಪಡೆಯುತ್ತಿದ್ದಾರೂ ಹಾಗೆಯೇ ನಮ್ಮ ಗ್ರಾಮೀಣ ಭಾಗದ ಮಕ್ಕಳಿಗೂ ಸಹ ಎಲ್ಲಾ ಸೌಲಭ್ಯಗಳು ದೊರೆಯಬೇಕು ಎಂಬುದನ್ನು ಗುರಿಯಾಗಿಟ್ಟುಕೊಂಡು ವಿಶೇಷವಾಗಿ ಸರ್ಕಾರಿ ಶಾಲೆಗಳನ್ನು ಅಭಿವೃದ್ಧಿಗೊಳಿಸಲು ಗೋಕಲ್ ದಾಸ್ ಎಕ್ಸ್ ಪೋರ್ಟ್ಸ್ ಸಂಸ್ಥೆ ಮುನ್ನಡೆದಿದೆ, ನಮ್ಮ ಕಂಪನಿಯು ನೀಡುತ್ತಿರುವ ಈ ಸೌಲಭ್ಯವನ್ನು ಸದುಪಯೋಗಪಡಿಸಿ ಕೊಳ್ಳಬೇಕೆಂದು ಗೋಕಲ್ ದಾಸ್ ಎಕ್ಸ್ ಪೋರ್ಟ್ಸ್ ಕಂಪನಿಯ ಉಪಾಧ್ಯಕ್ಷರಾದ ಜಿ. ಎ. ಶ್ರೀನಿವಾಸ್ ಮನವಿ ಮಾಡಿದರು.

ತಾಲ್ಲೂಕಿನ ಮಜರಾಹೊಸಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆಗೆ ಗಾರ್ಮೆಂಟ್ಸ್ ಜಗತ್ತಿನ ಪ್ರತಿಷ್ಠಿತ ಕಂಪನಿಗಳಲ್ಲೊಂದಾದ ಗೋಕಲ್ ದಾಸ್ ಎಕ್ಸ್ ಪೋರ್ಟ್ಸ್ ಚಾರಿಟಬಲ್ ಫೌಂಡೇಶನ್ ವತಿಯಿಂದ ಕುಡಿಯುವ ನೀರಿನ ( RO) ಘಟಕ ಮತ್ತು ಗಣಕಯಂತ್ರಗಳು ಹಾಗೂ ಪ್ರಯೋಗಾಲಯವನ್ನು ಕೊಡುಗೆಯಾಗಿ ನೀಡಿ ಅವರು ಮಾತನಾಡಿದರು.

ಶಾಲೆಯ ಮುಖ್ಯೋಪಾಧ್ಯಾಯರಾದ ಅಂಜಿನಪ್ಪ ಅವರು ಮಾತನಾಡಿ ಸದರಿ ಶಾಲೆಯಲ್ಲಿ ಸುಮಾರು 100 ಜನ ವಿದ್ಯಾರ್ಥಿಗಳು ಕಲಿಯುತ್ತಿದ್ದಾರೆ , ನಮ್ಮ ಶಾಲೆಯ ಮಕ್ಕಳಿಗೆ ಕುಡಿಯುವ ನೀರಿನ ಘಟಕ ಮತ್ತು ಗಣಕಯಂತ್ರ ಹಾಗೂ ಪ್ರಯೋಗಾಲಯವನ್ನು ಕೊಡುಗೆ ನೀಡಿರುವ ಗೋಕಲ್ ದಾಸ್ ಎಕ್ಸ್ ಪೋರ್ಟ್ಸ್ ಸಂಸ್ಥೆಗೆ ನಾನು ಆಭಾರಿಯಾಗಿದ್ದೇನೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಗೋಕುಲ್ ದಾಸ್ ನ ಪ್ರದಾನ ವ್ಯವಸ್ಥಾಪಕರು ಗಿರೀಶ್.ಆರ್, ಮಾನವ ಸಂಪನ್ಮೂಲ ವಿಭಾಗದ ವಿಶ್ವನಾಥ್ ಡಿ.ಎಸ್, ಮಹಾಂತೇಶ್ ಬಂಗಾರಿ ಪರಿಸರ ಆರೋಗ್ಯ ಮತ್ತು ಸುರಕ್ಷತೆಯ ಮ್ಯಾನೇಜರ್ , ಹಾಗು ಮಜರಾಹೊಸಹಳ್ಳಿ ಶಾಲೆಯ ಸಹಶಿಕ್ಷಕರು ಹಾಗೂ ಊರಿನ ಹಿರಿಯರು ಹಾಜರಿದ್ದರು.

Ramesh Babu

Journalist

Recent Posts

ಜನರನ್ನು ತಾಲೂಕು ಕಚೇರಿಗೆ ಅಲೆದಾಟ ತಪ್ಪಿಸಿ ಸ್ಥಳದಲ್ಲೇ ಸಮಸ್ಯೆ ಪರಿಹರಿಸಿ- ಶಾಸಕ ಕೊತ್ತೂರು ಮಂಜುನಾಥ್

ಕೋಲಾರ: ಸಾರ್ವಜನಿಕರು ತಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ತಾಲೂಕು ಕಚೇರಿಗೆ ಅಲೆದಾಡುವುದನ್ನು ತಪ್ಪಿಸಿ, ಸ್ಥಳದಲ್ಲಿಯೇ ಸೇವೆ ಒದಗಿಸುವ ನಿಟ್ಟಿನಲ್ಲಿ ಪ್ರಜಾ ಸೇವಾ…

5 hours ago

ಭಾರತಕ್ಕೆ ಕ್ಸಿ ಜಿನ್‌ಪಿಂಗ್ ಭೇಟಿ: ಮೋದಿ–ಕ್ಸಿ ದ್ವಿಪಕ್ಷೀಯ ಮಾತುಕತೆ ಇಂದು

ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರು ಎರಡು ದಿನಗಳ ಭಾರತ ಭೇಟಿಗಾಗಿ ಶನಿವಾರ ಮಧ್ಯಾಹ್ನ ರಾಷ್ಟ್ರ ರಾಜಧಾನಿ ನವದೆಹಲಿಗೆ…

9 hours ago

ಮಧುರೆ ದೇವಾಲಯದ ಬಳಿ ಮೇಲ್ಸೇತುವೆ ಅವ್ಯವಸ್ಥೆ: ಮೇಲಕ್ಕೆ ಚಾಚಿರುವ ಕಂಬಿಗಳಿಂದ ವಾಹನ ಸವಾರರಿಗೆ ತೊಂದರೆ

ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಮಧುರೆ ದೇವಾಲಯದ ಸಮೀಪ ಹೊಸದಾಗಿ ನಿರ್ಮಿಸಿರುವ ಮೇಲ್ಸೇತುವೆ ವಾಹನ ಸವಾರರಿಗೆ ತೀವ್ರ ತೊಂದರೆ ಉಂಟುಮಾಡುತ್ತಿದೆ.…

16 hours ago

ನಾಯಿ ಕಡಿತದ ಆತಂಕಕ್ಕೆ ಲಸಿಕೆಯ ಕವಚ: ರೇಬೀಸ್ ನಿಯಂತ್ರಣಕ್ಕೆ 32 ಸಾವಿರ ಲಸಿಕೆ

ಬೆಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಹಾಗೂ ರೇಬೀಸ್ ಸೋಂಕಿನ ಆತಂಕಕ್ಕೆ ಕಡಿವಾಣ ಹಾಕಲು ಪಶುಪಾಲನಾ ಇಲಾಖೆ ಬೃಹತ್…

17 hours ago

2028ರ ಚುನಾವಣೆಗೆ ಜಾಲತಾಣವೇ ಅಸ್ತ್ರ- ಸಿಎಂಆರ್ ಶ್ರೀನಾಥ್

ಕೋಲಾರ: 2028ರಲ್ಲಿ ರಾಜ್ಯದಲ್ಲಿ ಎನ್‌ಡಿಎ ಸರ್ಕಾರ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಖಚಿತ. ಸಾಮಾಜಿಕ ಜಾಲತಾಣ ಈಗ ಪರಿಣಾಮಕಾರಿಯಾಗಿದೆ. ಅದನ್ನು…

1 day ago

ಗಣೇಶ ವಿಸರ್ಜನೆ ವೇಳೆ ಮುಂಜಾಗ್ರತೆ ವಹಿಸಲು ರೈತ ಸಂಘ ಒತ್ತಾಯ: ಕೃಷಿ ಹೊಂಡ, ಕೆರೆ-ಕುಂಟೆಗಳಲ್ಲಿ ವಿಸರ್ಜನೆಗೆ ಕಡಿವಾಣ ಹಾಕಿ: ಜಿಲ್ಲಾಧಿಕಾರಿಗೆ ಮನವಿ

ಕೋಲಾರ : ಗಣೇಶ ಮೂರ್ತಿ ವಿಸರ್ಜನೆ ಸಂದರ್ಭದಲ್ಲಿ ಯಾವುದೇ ರೀತಿಯ ಅನಾಹುತ, ಅಹಿತಕರ ಘಟನೆಗಳು ಸಂಭವಿಸದಂತೆ ಗ್ರಾಮೀಣ ಪ್ರದೇಶಗಳಲ್ಲಿ ಕರಪತ್ರಗಳ…

1 day ago