ಮಜರಾಹೊಸಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆಗೆ ಕುಡಿಯುವ ನೀರಿನ ಘಟಕ, ಗಣಕಯಂತ್ರ ಪ್ರಯೋಗಾಲಯದ ಕಾಣಿಕೆ

 

ನಗರದ ಖಾಸಗಿ ಶಾಲೆಯ ಮಕ್ಕಳು ಹೇಗೆ ಎಲ್ಲಾ ರೀತಿಯ ಸೌಲಭ್ಯಗಳನ್ನು ಪಡೆಯುತ್ತಿದ್ದಾರೂ ಹಾಗೆಯೇ ನಮ್ಮ ಗ್ರಾಮೀಣ ಭಾಗದ ಮಕ್ಕಳಿಗೂ ಸಹ ಎಲ್ಲಾ ಸೌಲಭ್ಯಗಳು ದೊರೆಯಬೇಕು ಎಂಬುದನ್ನು ಗುರಿಯಾಗಿಟ್ಟುಕೊಂಡು ವಿಶೇಷವಾಗಿ ಸರ್ಕಾರಿ ಶಾಲೆಗಳನ್ನು ಅಭಿವೃದ್ಧಿಗೊಳಿಸಲು ಗೋಕಲ್ ದಾಸ್ ಎಕ್ಸ್ ಪೋರ್ಟ್ಸ್ ಸಂಸ್ಥೆ ಮುನ್ನಡೆದಿದೆ, ನಮ್ಮ ಕಂಪನಿಯು ನೀಡುತ್ತಿರುವ ಈ ಸೌಲಭ್ಯವನ್ನು ಸದುಪಯೋಗಪಡಿಸಿ ಕೊಳ್ಳಬೇಕೆಂದು ಗೋಕಲ್ ದಾಸ್ ಎಕ್ಸ್ ಪೋರ್ಟ್ಸ್ ಕಂಪನಿಯ ಉಪಾಧ್ಯಕ್ಷರಾದ ಜಿ. ಎ. ಶ್ರೀನಿವಾಸ್ ಮನವಿ ಮಾಡಿದರು.

ತಾಲ್ಲೂಕಿನ ಮಜರಾಹೊಸಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆಗೆ ಗಾರ್ಮೆಂಟ್ಸ್ ಜಗತ್ತಿನ ಪ್ರತಿಷ್ಠಿತ ಕಂಪನಿಗಳಲ್ಲೊಂದಾದ ಗೋಕಲ್ ದಾಸ್ ಎಕ್ಸ್ ಪೋರ್ಟ್ಸ್ ಚಾರಿಟಬಲ್ ಫೌಂಡೇಶನ್ ವತಿಯಿಂದ ಕುಡಿಯುವ ನೀರಿನ ( RO) ಘಟಕ ಮತ್ತು ಗಣಕಯಂತ್ರಗಳು ಹಾಗೂ ಪ್ರಯೋಗಾಲಯವನ್ನು ಕೊಡುಗೆಯಾಗಿ ನೀಡಿ ಅವರು ಮಾತನಾಡಿದರು.

ಶಾಲೆಯ ಮುಖ್ಯೋಪಾಧ್ಯಾಯರಾದ ಅಂಜಿನಪ್ಪ ಅವರು ಮಾತನಾಡಿ ಸದರಿ ಶಾಲೆಯಲ್ಲಿ ಸುಮಾರು 100 ಜನ ವಿದ್ಯಾರ್ಥಿಗಳು ಕಲಿಯುತ್ತಿದ್ದಾರೆ , ನಮ್ಮ ಶಾಲೆಯ ಮಕ್ಕಳಿಗೆ ಕುಡಿಯುವ ನೀರಿನ ಘಟಕ ಮತ್ತು ಗಣಕಯಂತ್ರ ಹಾಗೂ ಪ್ರಯೋಗಾಲಯವನ್ನು ಕೊಡುಗೆ ನೀಡಿರುವ ಗೋಕಲ್ ದಾಸ್ ಎಕ್ಸ್ ಪೋರ್ಟ್ಸ್ ಸಂಸ್ಥೆಗೆ ನಾನು ಆಭಾರಿಯಾಗಿದ್ದೇನೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಗೋಕುಲ್ ದಾಸ್ ನ ಪ್ರದಾನ ವ್ಯವಸ್ಥಾಪಕರು ಗಿರೀಶ್.ಆರ್, ಮಾನವ ಸಂಪನ್ಮೂಲ ವಿಭಾಗದ ವಿಶ್ವನಾಥ್ ಡಿ.ಎಸ್, ಮಹಾಂತೇಶ್ ಬಂಗಾರಿ ಪರಿಸರ ಆರೋಗ್ಯ ಮತ್ತು ಸುರಕ್ಷತೆಯ ಮ್ಯಾನೇಜರ್ , ಹಾಗು ಮಜರಾಹೊಸಹಳ್ಳಿ ಶಾಲೆಯ ಸಹಶಿಕ್ಷಕರು ಹಾಗೂ ಊರಿನ ಹಿರಿಯರು ಹಾಜರಿದ್ದರು.

Ramesh Babu

Journalist

Recent Posts

ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡರಿಗೆ ಕೈತಪ್ಪಿದ ಮಂತ್ರಿಗಿರಿ; ಎರಡನೇ ಪಟ್ಟಿಯಲ್ಲಿ 20 ಮಂದಿಗೆ ಅವಕಾಶ

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಪಟ್ಟಿಯಲ್ಲಿ ಸಚಿವ ಸ್ಥಾನ ಪಡೆಯುವ ನಿರೀಕ್ಷೆಯಲ್ಲಿದ್ದ ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ…

3 hours ago

ಆಧಾರ್ ಸಮಸ್ಯೆಗೆ ಸಿಲುಕಿದ 16 ಸಾವಿರ ವಿದ್ಯಾರ್ಥಿಗಳು! ಸೌಲಭ್ಯಗಳಿಂದ ವಂಚಿತರಾಗುವ ಆತಂಕ; ವಲಸೆ ಕಾರ್ಮಿಕರ ಮಕ್ಕಳಿಗೇ ಹೆಚ್ಚು ಸಂಕಷ್ಟ

ಬೆಂಗಳೂರು ಗ್ರಾಮಾಂತರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಸಾವಿರಾರು ವಿದ್ಯಾರ್ಥಿಗಳ ಶಿಕ್ಷಣಕ್ಕೆ ಆಧಾರ್ ಕಾರ್ಡ್ ದೊಡ್ಡ…

7 hours ago

ತೂಬಗೆರೆ ಎಂ.ಪಿ.ಆರ್.ಎ.ಸಿ.ಎಸ್. ಚುನಾವಣೆ: ಬಿಜೆಪಿ–ಜೆಡಿಎಸ್ ಮೈತ್ರಿಗೆ ಸ್ಪಷ್ಟ ಬಹುಮತ

ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘ (ಎಂ.ಪಿ.ಆರ್.ಎ.ಸಿ.ಎಸ್.)ದ 2026–2031ನೇ ಅವಧಿಯ ಆಡಳಿತ ಮಂಡಳಿ…

16 hours ago

ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ ಆಗಿದೆ- ಪ್ರೊ. ಹಿ.ಚಿ. ಬೋರಲಿಂಗಯ್ಯ

ದೊಡ್ಡಬಳ್ಳಾಪುರ: ಆಷಾಢ ಮಾಸದಲ್ಲಿ ಗಾಳಿಪಟ ಹಾರಿಸುವುದು ನಮ್ಮ ಭಾಗದ ಸಾಂಪ್ರದಾಯಿಕ ಆಚರಣೆಯಾಗಿದ್ದು, ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ…

22 hours ago

ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಪರೀಕ್ಷೆ ಸುಸೂತ್ರ; ದೊಡ್ಡಬಳ್ಳಾಪುರದ 7 ಕೇಂದ್ರಗಳಲ್ಲಿ ಯಶಸ್ವಿ ಆಯೋಜನೆ

ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕರ್ನಾಟಕ ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆ ಭಾನುವಾರ ಯಾವುದೇ ಅಡಚಣೆ ಅಥವಾ…

24 hours ago

ಈ ಬಾರಿಯ ದಸರಾ ಉದ್ಘಾಟನೆ ಯಾರು ಮಾಡಿದರೆ ಉತ್ತಮ…..

ಇತ್ತೀಚೆಗೆ ಹೊಸದಾಗಿ ವಿಧಾನಪರಿಷತ್ ಸದಸ್ಯರಾಗಿ ಆಯ್ಕೆಯಾದ, ಡಾಕ್ಟರ್ ರಾಮ್ ಮನೋಹರ್ ಲೋಹಿಯಾ ವೇದಿಕೆಯ ಸಂಸ್ಥಾಪಕ ಅಧ್ಯಕ್ಷರಾದ ಶ್ರೀ ಮಳವಳ್ಳಿ ಶಿವಣ್ಣ…

2 days ago