ಮಜರಾಹೊಸಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆಗೆ ಕುಡಿಯುವ ನೀರಿನ ಘಟಕ, ಗಣಕಯಂತ್ರ ಪ್ರಯೋಗಾಲಯದ ಕಾಣಿಕೆ

 

ನಗರದ ಖಾಸಗಿ ಶಾಲೆಯ ಮಕ್ಕಳು ಹೇಗೆ ಎಲ್ಲಾ ರೀತಿಯ ಸೌಲಭ್ಯಗಳನ್ನು ಪಡೆಯುತ್ತಿದ್ದಾರೂ ಹಾಗೆಯೇ ನಮ್ಮ ಗ್ರಾಮೀಣ ಭಾಗದ ಮಕ್ಕಳಿಗೂ ಸಹ ಎಲ್ಲಾ ಸೌಲಭ್ಯಗಳು ದೊರೆಯಬೇಕು ಎಂಬುದನ್ನು ಗುರಿಯಾಗಿಟ್ಟುಕೊಂಡು ವಿಶೇಷವಾಗಿ ಸರ್ಕಾರಿ ಶಾಲೆಗಳನ್ನು ಅಭಿವೃದ್ಧಿಗೊಳಿಸಲು ಗೋಕಲ್ ದಾಸ್ ಎಕ್ಸ್ ಪೋರ್ಟ್ಸ್ ಸಂಸ್ಥೆ ಮುನ್ನಡೆದಿದೆ, ನಮ್ಮ ಕಂಪನಿಯು ನೀಡುತ್ತಿರುವ ಈ ಸೌಲಭ್ಯವನ್ನು ಸದುಪಯೋಗಪಡಿಸಿ ಕೊಳ್ಳಬೇಕೆಂದು ಗೋಕಲ್ ದಾಸ್ ಎಕ್ಸ್ ಪೋರ್ಟ್ಸ್ ಕಂಪನಿಯ ಉಪಾಧ್ಯಕ್ಷರಾದ ಜಿ. ಎ. ಶ್ರೀನಿವಾಸ್ ಮನವಿ ಮಾಡಿದರು.

ತಾಲ್ಲೂಕಿನ ಮಜರಾಹೊಸಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆಗೆ ಗಾರ್ಮೆಂಟ್ಸ್ ಜಗತ್ತಿನ ಪ್ರತಿಷ್ಠಿತ ಕಂಪನಿಗಳಲ್ಲೊಂದಾದ ಗೋಕಲ್ ದಾಸ್ ಎಕ್ಸ್ ಪೋರ್ಟ್ಸ್ ಚಾರಿಟಬಲ್ ಫೌಂಡೇಶನ್ ವತಿಯಿಂದ ಕುಡಿಯುವ ನೀರಿನ ( RO) ಘಟಕ ಮತ್ತು ಗಣಕಯಂತ್ರಗಳು ಹಾಗೂ ಪ್ರಯೋಗಾಲಯವನ್ನು ಕೊಡುಗೆಯಾಗಿ ನೀಡಿ ಅವರು ಮಾತನಾಡಿದರು.

ಶಾಲೆಯ ಮುಖ್ಯೋಪಾಧ್ಯಾಯರಾದ ಅಂಜಿನಪ್ಪ ಅವರು ಮಾತನಾಡಿ ಸದರಿ ಶಾಲೆಯಲ್ಲಿ ಸುಮಾರು 100 ಜನ ವಿದ್ಯಾರ್ಥಿಗಳು ಕಲಿಯುತ್ತಿದ್ದಾರೆ , ನಮ್ಮ ಶಾಲೆಯ ಮಕ್ಕಳಿಗೆ ಕುಡಿಯುವ ನೀರಿನ ಘಟಕ ಮತ್ತು ಗಣಕಯಂತ್ರ ಹಾಗೂ ಪ್ರಯೋಗಾಲಯವನ್ನು ಕೊಡುಗೆ ನೀಡಿರುವ ಗೋಕಲ್ ದಾಸ್ ಎಕ್ಸ್ ಪೋರ್ಟ್ಸ್ ಸಂಸ್ಥೆಗೆ ನಾನು ಆಭಾರಿಯಾಗಿದ್ದೇನೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಗೋಕುಲ್ ದಾಸ್ ನ ಪ್ರದಾನ ವ್ಯವಸ್ಥಾಪಕರು ಗಿರೀಶ್.ಆರ್, ಮಾನವ ಸಂಪನ್ಮೂಲ ವಿಭಾಗದ ವಿಶ್ವನಾಥ್ ಡಿ.ಎಸ್, ಮಹಾಂತೇಶ್ ಬಂಗಾರಿ ಪರಿಸರ ಆರೋಗ್ಯ ಮತ್ತು ಸುರಕ್ಷತೆಯ ಮ್ಯಾನೇಜರ್ , ಹಾಗು ಮಜರಾಹೊಸಹಳ್ಳಿ ಶಾಲೆಯ ಸಹಶಿಕ್ಷಕರು ಹಾಗೂ ಊರಿನ ಹಿರಿಯರು ಹಾಜರಿದ್ದರು.

Ramesh Babu

Journalist

Recent Posts

ರಾಜ್ಯದ ಸಿಎಂ ಆಗಿ ಡಿ.ಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರ: ವೀರ ಗಂಗಾಧರ ಅಜ್ಜನ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕಾರ

ರಾಜ್ಯದ ಸಿಎಂ ಆಗಿ ಡಿ.ಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರಿಸಿದ್ದಾರೆ. ಸಂವಿಧಾನದ ಪುಸ್ತಕ ಹಿಡಿದು, ವೀರ ಗಂಗಾಧರನ ಅಜ್ಜನ ಹೆಸರಿನಲ್ಲಿ…

50 minutes ago

ರಾಜ್ಯದ 25ನೇ ಸಿಎಂ ಆಗಿ ಡಿ.ಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರ: ವೀರ ಗಂಗಾಧರ ಅಜ್ಜನ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕಾರ

ರಾಜ್ಯದ 25 ಸಿಎಂ ಆಗಿ ಡಿ.ಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರಿಸಿದ್ದಾರೆ. ವೀರ ಗಂಗಾಧರನ ಅಜ್ಜನ ಹೆಸರಿನಲ್ಲಿ ಪ್ರಮಾಣ ವಚನ…

56 minutes ago

ಅಧಿಕಾರಕ್ಕೇರುವ ಮುನ್ನವೇ ಟ್ರಬಲ್ ಶೂಟರ್ ಚಾಣಾಕ್ಷ ನಡೆ: ದೇವೇಗೌಡ-ಯಡಿಯೂರಪ್ಪ ಆಶೀರ್ವಾದ ಪಡೆದ ಡಿಕೆಶಿ

ಬೆಂಗಳೂರು: ರಾಜ್ಯದ ನೂತನ ಮುಖ್ಯಮಂತ್ರಿ ಆಗಿ ಅಧಿಕಾರ ಸ್ವೀಕರಿಸಲು ಸಜ್ಜಾಗಿರುವ ಡಿ.ಕೆ. ಶಿವಕುಮಾರ್ ಅವರು ಪ್ರಮಾಣ ವಚನಕ್ಕೂ ಮುನ್ನವೇ ತಮ್ಮ…

3 hours ago

ಡಿ.ಕೆ.ಶಿವಕುಮಾರ್ ಪದಗ್ರಹಣ: ಡಿಕೆಶಿ ಜೊತೆ ಓರ್ವ ಡಿಸಿಎಂ ಸೇರಿ 12 ಮಂದಿ ಸಚಿವರಾಗಿ ಪ್ರಮಾಣ ವಚನ….

ಇಂದು ಸಂಜೆ 4:05ಕ್ಕೆ ಲೋಕಭವನದ ಗಾಜಿನ ಮನೆಯಲ್ಲಿ ನಡೆಯಲಿರುವ ಸಮಾರಂಭದಲ್ಲಿ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ್ ಅವರು ಪ್ರಮಾಣ ವಚನ…

4 hours ago

ಬಿಜೆಪಿಗೆ ಅಧಿಕಾರ ಸಿಕ್ಕಾಗ ಒಬಿಸಿ, ದಲಿತರ ರಾಜಕೀಯ ಪ್ರಾತಿನಿಧ್ಯ ಏಕೆ ನೆನಪಾಗಲಿಲ್ಲ?- ಪ್ರಿಯಾಂಕ್ ಖರ್ಗೆ ಪ್ರಶ್ನೆ

ಬಿಜೆಪಿ ನಾಯಕರಿಗೆ ಈಗ ಏಕಾಏಕಿ ದಲಿತ ಮತ್ತು ಹಿಂದುಳಿದ ಸಮುದಾಯಗಳ ರಾಜಕೀಯ ಪ್ರಾತಿನಿಧ್ಯದ ಬಗ್ಗೆ ಕಾಳಜಿ ಬಂದುಬಿಟ್ಟಿದೆ. ಕಾಲ, ಸಂದರ್ಭ…

4 hours ago

ಡಾ.ಜಿ.ಪರಮೇಶ್ವರ್ ಗೆ ಉಪಮುಖ್ಯಮಂತ್ರಿ ಸ್ಥಾನ.?: ಕಾಂಗ್ರೆಸ್ ಕಾರ್ಯಕಾರಿ ಸಮಿತಿ (CWC) ಸದಸ್ಯ ಸಿದ್ದರಾಮಯ್ಯ ಸುಳಿವು

ಇಂದು ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೂ ಮುನ್ನ, ನಿಯೋಜಿತ ಸಿಎಂ ಡಿ.ಕೆ.ಶಿವಕುಮಾರ್ ಅವರು ಕಾಂಗ್ರೆಸ್ ಕಾರ್ಯಕಾರಿ ಸಮಿತಿ (CWC) ಸದಸ್ಯ…

4 hours ago